Homeಮುಖಪುಟಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

- Advertisement -
- Advertisement -

ಉತ್ತರಖಂಡ ರಾಜ್ಯದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಅಲ್ಲದೆ ಆತನ ಒಡೆತನದ ರೆಸಾರ್ಟ್ ಮೇಲೆ ಪೊಲೀಸರು ಬುಲ್ಡೋಜರ್ ದಾಳಿ ನಡೆಸಲು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಆದೇಶಿಸಿದ್ದಾರೆ.

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದಳು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ. ಆದರೆ 5 ದಿನದ ನಂತರ ಪುಲ್ಕಿತ್ ಆರ್ಯ ಇಬ್ಬರು ಸಿಬ್ಬಂದಿಯೊಡನೆ ಸೇರಿ ಆಕೆಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಂತ್ರಸ್ತ ಯುವತಿಯ ಕುಟುಂಬವು ಮೊದಲಿನಿಂದಲೂ ಪುಲ್ಕಿತ್ ಆರ್ಯನ ಮೇಲೆ ಸಂಶಯ ವ್ಯಕ್ತಪಡಿಸಿತ್ತು. ಏಕೆಂದರೆ ಆತ ಆರಂಭದಲ್ಲಿ ದೂರು ನೀಡಲು ನಿರಾಕರಿಸಿದ್ದ ಎಂದು ಹೇಳಲಾಗಿದೆ. ಮೃತ ದೇಹವನ್ನು ಪಕ್ಕದ ಕಾಲುವೆಯಿಂದ ವಶಪಡಿಸಿಕೊಳ್ಳಲಾಗಿದ್ದು, ಆಕೆಯ ಸಂಬಂಧಿಕರನ್ನು ಗುರುತು ಪತ್ತೆ ಹಚ್ಚಲು ಕರೆಯಲಾಗಿದೆ.

ಈ ನಡವೆ ಆರೋಪಿಯು ಹಿರಿಯ ಬಿಜೆಪಿ, ಆರ್‌ಎಸ್‌ಎಸ್‌ ಮುಖಂಡನ ಮಗನಾದ್ದರಿಂದ ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ವೈರಲ್ ಆದ ನಂತರ ಪೊಲೀಸರು ಮುಖ್ಯ ಆರೋಪಿ ಪುಲ್ಕಿತ್ ಮತ್ತು ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಆ ಯುವತಿಯ ಕೊಲೆಯ ಹಿಂದಿನ ಕಾರಣಗಳ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಆ ರೆಸಾರ್ಟ್‌ನಲ್ಲಿ ಹುಡುಗಿಯನ್ನು ವೇಶ್ಯಾವಾಟಿಕೆಗೆ ದೂಡಲಾಗುತ್ತಿದೆ. ಅದಕ್ಕೆ ಸಂತ್ರಸ್ತ ಯುವತಿಯನ್ನು ಬಲವಂತಪಡಿಸಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದಿದ್ದು, ಪೊಲೀಸರು ಈ ಕುರಿತು ಮಾಹಿತಿ ನೀಡಿಲ್ಲ.

“ಪೊಲೀಸರು ತನಿಖೆಯಲ್ಲಿ ಲೋಪವೆಸಗುತ್ತಿದ್ದಾರೆ. ಸೆಪ್ಟಂಬರ್ 18ರಂದು ಯುವತಿ ಕಾಣೆಯಾಗಿದ್ದರು ಸಹ ಸೆಪ್ಟಂಬರ್ 21 ರಂದು ಎಫ್‌ಐಆರ್ ದಾಖಲಿಸಿದ್ದು ಏಕೆ? ಎಲ್ಲಿಯವರೆಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡರು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ?” ಎಂದು ಕಾಂಗ್ರೆಸ್ ವಕ್ತಾರ ಗರಿಮ ಮೆಹ್ರ ದುಸಾನಿ ಪ್ರಶ್ನಿಸಿದ್ದಾರೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಮಾತನಾಡಿ, “ರೆಸಾರ್ಟ್ ಇರುವ ಜಾಗ ರಿಷಿಕೇಶ್ ಪಟ್ಟಣದಿಂದ 10 ಕಿ.ಮೀ ದೂರವಿದ್ದು ಅಲ್ಲಿ ಸಾಮಾನ್ಯ ಪೊಲೀಸರನ್ನು ನಿಯೋಜಿಸಿರಲಿಲ್ಲ. ನಮ್ಮಲ್ಲಿ ಕಂದಾಯ ಅಧಿಕಾರಿಗಳು ಎಫ್‌ಐಆರ್ ದಾಖಲಿಸುವ ಪದ್ದತಿ ಇದೆ. ಅದರಂತೆ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯನ ದೂರಿನ ಅನ್ವಯ ಕಾಣೆಯಾಗಿದ್ದಾರೆ ಎಂಬ ದೂರು ದಾಖಲಿಸಿಕೊಂಡಿದ್ದರು. ಆದರೆ ಜಿಲ್ಲಾ ನ್ಯಾಯಾಧೀಶರು ಪ್ರಕರಣವನ್ನು ನಮಗೆ ವರ್ಗಾಯಿಸಿದ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದೇವೆ. ದೂರುದಾರನೇ ಆರೋಪಿಯಾಗಿ ಬದಲಾಗಿದ್ದಾನೆ” ಎಂದು ತಿಳಿಸಿದ್ದಾರೆ.

ಬಂಧನದ ವೇಳೆ ಪುಲ್ಕಿತ್ ಆರ್ಯನ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ ಎಂದು ವರದಿಯಾಗಿದೆ.

ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾ ಎಂಬುವವರನ್ನು ಸಹ ಬಂಧಿಸಿದ್ದೇವೆ. ಆರಂಭದಲ್ಲಿ ಅವರು ಪೊಲೀಸರನ್ನು ದಿಕ್ಕು ತಪ್ಪಿಸಲು ಯತ್ನಿಸಿದರು. ಆದರೆ ಧೀರ್ಘ ವಿಚಾರಣೆಯ ಸಂದರ್ಭದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ತರಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ತಿಳಿಸಿದ್ದಾರೆ. “ಇದು ಬಹಳ ಹೀನ ಕೃತ್ಯವಾಗಿದ್ದು, ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸಿಎಂರವರ ಆದೇಶದ ಮೇರೆಗೆ ಸ್ಥಳೀಯ ಆಡಳಿತಾಧಿಕಾರಿಗಳು ರೆಸಾರ್ಟ್ ಅನ್ನು ಬುಲ್ಡೋಜರ್‌ನಿಂದ ನೆಲಸಮಗೊಳಿಸಲು ಮುಂದಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಅಲ್ಲದೆ ರಾಜ್ಯದ ಎಲ್ಲಾ ರೆಸಾರ್ಟ್‌ಗಳ ಮೇಲೆ ತನಿಖೆ ನಡೆಸಬೇಕೆಂದು ಆದೇಶಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅದಾನಿ ಸಹೋದರ ವಿನೋದ್ ಶಾಂತಿಲಾಲ್ ಅದಾನಿ ಶ್ರೀಮಂತ ಅನಿವಾಸಿ ಭಾರತೀಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...