Homeಮುಖಪುಟ‘ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

‘ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ, ನಾನು ಕೂಡ ಸರ್ಕಾರದ ಭಾಗ, ಆದರೂ ಹೀಗಾಯಿತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ಬಿಜೆಪಿ ನಾಯಕ ಗುರ್ತಾಜ್ ಸಿಂಗ್ ಭುಲ್ಲರ್ ಅವರ ಪತ್ನಿಯನ್ನು ಉತ್ತರ ಪ್ರದೇಶದ ಪೊಲೀಸ್ ತಂಡವು ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಂದು ಹಾಕಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಗುರ್ತಾಜ್‌ ಸಿಂಗ್ ಶನಿವಾರ ಆಗ್ರಹಿದ್ದಾರೆ.

ತನ್ನ ಪತ್ನಿಯನ್ನು ಕೊಂದ ಪೊಲೀಸ್ ಅಧಿಕಾರಿಗಳು ಪಾನಮತ್ತರಾಗಿದ್ದು, ಸಮವಸ್ತ್ರ ಧರಿಸಿರಲಿಲ್ಲ ಹಾಗೂ ಯಾವುದೇ ಸರ್ಚ್ ವಾರೆಂಟ್ ಹೊಂದಿರಲಿಲ್ಲ ಎಂದು ಗುರ್ತಾಜ್ ಸಿಂಗ್‌ ಆರೋಪಿಸಿದ್ದಾರೆ. ಪೊಲೀಸರ ವಾಹನದಲ್ಲಿ ನೋಂದಣಿ ಫಲಕಗಳಿಲ್ಲ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರನ್ನು ನಮ್ಮ ನಿವಾಸದಲ್ಲಿ ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಪೊಲೀಸ್ ತಂಡವು ಅಪಪ್ರಚಾರ ಮಾಡುತ್ತಿದೆ ಎಂದು ಭುಲ್ಲಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

‘‘ಪೊಲೀಸ್ ತಂಡ ಮತ್ತು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಬೇಕಾಗಿದ್ದ ವ್ಯಕ್ತಿ ಜಾಫರ್ ನಡುವಿನ ಗುಂಡಿನ ಚಕಮಕಿಯಲ್ಲಿ ಬಿಜೆಪಿ ಮುಖಂಡ ಗುರ್ತಾಜ್ ಸಿಂಗ್ ಅವರ ಪತ್ನಿ ಸಾವನ್ನಪ್ಪಿದ್ದಾರೆ” ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ.

ತನ್ನ ಪತ್ನಿಯ ಹತ್ಯೆಯನ್ನು ಸಮರ್ಥಿಸಲು ಯುಪಿ ಪೊಲೀಸರು ಕತೆ ಕಟ್ಟಲು ಪ್ರಯತ್ನಿಸುತ್ತಿದ್ದಾರೆ ಎಂದು ಗುರ್ತಾಜ್‌ ಸಿಂಗ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಜಾಫರ್‌ನಗರ ಗಲಭೆ: ಬಿಜೆಪಿ ಶಾಸಕ ಸೇರಿದಂತೆ 12 ಮಂದಿಗೆ ಜೈಲು ಶಿಕ್ಷೆ

ಯುಪಿ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿಲ್ಲ ಮತ್ತು ಸಮವಸ್ತ್ರದಲ್ಲಿ ಇರಲಿಲ್ಲ ಎಂದು ಕುಮಾನ್‌ನ ಡಿಐಜಿ ನೀಲೇಶ್ ಆನಂದ್ ಭರ್ನೆ ಈ ಹಿಂದೆ ಹೇಳಿಕೆ ನೀಡಿದ್ದರು. ಇದಲ್ಲದೆ ಯುಪಿ ಪೊಲೀಸರು ಹೇಳಿಕೊಂಡಂತೆ ಕ್ರಾಸ್ ಫೈರಿಂಗ್‌ನ ಯಾವುದೇ ಸೂಚನೆಯಿಲ್ಲ ಎಂದು ಸ್ಥಳವನ್ನು ತನಿಖೆ ಮಾಡಿದ ವಿಧಿವಿಜ್ಞಾನ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

ತನ್ನ ಪತ್ನಿಯ ನ್ಯಾಯಕ್ಕಾಗಿ ಮನವಿ ಮಾಡಿರುವ ಗುರ್ತಾಜ್‌ ಸಿಂಗ್‌, “ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ. ನನ್ನ ತಪ್ಪಾಗಿದ್ದರೆ ನನ್ನನ್ನು ಶಿಕ್ಷಿಸಬೇಕು ಆದರೆ ನ್ಯಾಯಯುತ ತನಿಖೆ ನಡೆಯಬೇಕು” ಎಂದು ಹೇಳಿದ್ದಾರೆ.

ತನ್ನ ದುಃಖವನ್ನು ವ್ಯಕ್ತಪಡಿಸಿದ ಅವರು, “ನಾನು ಕೂಡಾ ಸರ್ಕಾರದ ಸಾರ್ವಜನಿಕ ಪ್ರತಿನಿಧಿ, ಆದರೂ ನನಗೆ ಇದೆಲ್ಲವೂ ಆಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಬಿಜೆಪಿ ಮುಖಂಡನ ದೌರ್ಜನ್ಯದಿಂದ ಮಗು ಕಳೆದುಕೊಂಡ ತಾಯಿಗೆ ಮಗು ಮರಳಿಸುವಿರೇ?- ಕಾಂಗ್ರೆಸ್

ಏನಿದು ಪ್ರಕರಣ

ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಕಾಶಿಪುರ ಸಮೀಪದ ಭರತ್‌ಪುರ ಗ್ರಾಮದಲ್ಲಿ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಗಣಿಗಾರಿಕೆ ಮಾಫಿಯಾದ ಸದಸ್ಯನೆಂದು ಹೇಳಲಾದ ಜಾಫರ್‌ನನ್ನು ಹುಡುಕಲು ಪೊಲೀಸರು ಪಕ್ಕದ ಮೊರಾದಾಬಾದ್ ಜಿಲ್ಲೆಯಿಂದ ಬಂದಿದ್ದರು.

ಸುಳಿವಿನ ಮೇರೆಗೆ ಮೊರಾದಾಬಾದ್‌ನ ಠಾಕುರ್ದ್ವಾರ ಪೊಲೀಸ್ ಠಾಣೆಯ ತಂಡವು ಜಾಫರ್‌ನನ್ನು ಹುಡುಕಾಡುತ್ತಾ ಬಿಜೆಪಿ ನಾಯಕ, ಜಸ್ಪುರ್ ಹಿರಿಯ ಬ್ಲಾಕ್ ಪ್ರಮುಖ್ ಗುರ್ತಾಜ್ ಸಿಂಗ್‌ ಭುಲ್ಲರ್ ಅವರ ಮನೆ ಮೇಲೆ ದಾಳಿ ಮಾಡಲು ಭತರ್‌ಪುರ ತಲುಪಿತ್ತು.

ಪೊಲೀಸರು ಗುರ್ತಾಜ್‌ ಸಿಂಗ್‌ ಭುಲ್ಲರ್ ಮನೆಗೆ ಬಂದಾಗ ಅಲ್ಲಿ ವಾಗ್ವಾದ ನಡೆದಿದೆ. ಎರಡೂ ಕಡೆಯವರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಗುರ್ತಾಜ್‌ ಸಿಂಗ್‌ ಅವರ ಪತ್ನಿ ಗುರುಪ್ರೀತ್ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ದಾಳಿಯ ಬಗ್ಗೆ ಯುಪಿ ಪೊಲೀಸ್ ತಂಡವು ತಮ್ಮ ಉತ್ತರಾಖಂಡ ಪೊಲೀಸರಿಗೆ ಮುಂಚಿತವಾಗಿ ತಿಳಿಸಲಿಲ್ಲ ಎಂದು ಉಧಮ್ ಸಿಂಗ್ ನಗರ ಎಸ್ಎಸ್ಪಿ ಮಂಜುನಾಥ್ ಟಿಸಿ ಹೇಳಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕಾಶಿಪುರ ಶಾಸಕ ತ್ರಿಲೋಕ್ ಸಿಂಗ್ ಚೀಮಾ, ಗದರ್‌ಪುರ ಶಾಸಕ ಅರವಿಂದ್ ಪಾಂಡೆ ಮತ್ತು ಮಾಜಿ ಸಂಸದ ಬಲರಾಜ್ ಪಾಸಿ ಪ್ರತಿಭಟನಾಕಾರರೊಂದಿಗೆ ಸೇರಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...