Homeಮುಖಪುಟ‘ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

‘ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ, ನಾನು ಕೂಡ ಸರ್ಕಾರದ ಭಾಗ, ಆದರೂ ಹೀಗಾಯಿತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ಬಿಜೆಪಿ ನಾಯಕ ಗುರ್ತಾಜ್ ಸಿಂಗ್ ಭುಲ್ಲರ್ ಅವರ ಪತ್ನಿಯನ್ನು ಉತ್ತರ ಪ್ರದೇಶದ ಪೊಲೀಸ್ ತಂಡವು ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಂದು ಹಾಕಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಗುರ್ತಾಜ್‌ ಸಿಂಗ್ ಶನಿವಾರ ಆಗ್ರಹಿದ್ದಾರೆ.

ತನ್ನ ಪತ್ನಿಯನ್ನು ಕೊಂದ ಪೊಲೀಸ್ ಅಧಿಕಾರಿಗಳು ಪಾನಮತ್ತರಾಗಿದ್ದು, ಸಮವಸ್ತ್ರ ಧರಿಸಿರಲಿಲ್ಲ ಹಾಗೂ ಯಾವುದೇ ಸರ್ಚ್ ವಾರೆಂಟ್ ಹೊಂದಿರಲಿಲ್ಲ ಎಂದು ಗುರ್ತಾಜ್ ಸಿಂಗ್‌ ಆರೋಪಿಸಿದ್ದಾರೆ. ಪೊಲೀಸರ ವಾಹನದಲ್ಲಿ ನೋಂದಣಿ ಫಲಕಗಳಿಲ್ಲ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರನ್ನು ನಮ್ಮ ನಿವಾಸದಲ್ಲಿ ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಪೊಲೀಸ್ ತಂಡವು ಅಪಪ್ರಚಾರ ಮಾಡುತ್ತಿದೆ ಎಂದು ಭುಲ್ಲಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

‘‘ಪೊಲೀಸ್ ತಂಡ ಮತ್ತು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಬೇಕಾಗಿದ್ದ ವ್ಯಕ್ತಿ ಜಾಫರ್ ನಡುವಿನ ಗುಂಡಿನ ಚಕಮಕಿಯಲ್ಲಿ ಬಿಜೆಪಿ ಮುಖಂಡ ಗುರ್ತಾಜ್ ಸಿಂಗ್ ಅವರ ಪತ್ನಿ ಸಾವನ್ನಪ್ಪಿದ್ದಾರೆ” ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ.

ತನ್ನ ಪತ್ನಿಯ ಹತ್ಯೆಯನ್ನು ಸಮರ್ಥಿಸಲು ಯುಪಿ ಪೊಲೀಸರು ಕತೆ ಕಟ್ಟಲು ಪ್ರಯತ್ನಿಸುತ್ತಿದ್ದಾರೆ ಎಂದು ಗುರ್ತಾಜ್‌ ಸಿಂಗ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಜಾಫರ್‌ನಗರ ಗಲಭೆ: ಬಿಜೆಪಿ ಶಾಸಕ ಸೇರಿದಂತೆ 12 ಮಂದಿಗೆ ಜೈಲು ಶಿಕ್ಷೆ

ಯುಪಿ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿಲ್ಲ ಮತ್ತು ಸಮವಸ್ತ್ರದಲ್ಲಿ ಇರಲಿಲ್ಲ ಎಂದು ಕುಮಾನ್‌ನ ಡಿಐಜಿ ನೀಲೇಶ್ ಆನಂದ್ ಭರ್ನೆ ಈ ಹಿಂದೆ ಹೇಳಿಕೆ ನೀಡಿದ್ದರು. ಇದಲ್ಲದೆ ಯುಪಿ ಪೊಲೀಸರು ಹೇಳಿಕೊಂಡಂತೆ ಕ್ರಾಸ್ ಫೈರಿಂಗ್‌ನ ಯಾವುದೇ ಸೂಚನೆಯಿಲ್ಲ ಎಂದು ಸ್ಥಳವನ್ನು ತನಿಖೆ ಮಾಡಿದ ವಿಧಿವಿಜ್ಞಾನ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

ತನ್ನ ಪತ್ನಿಯ ನ್ಯಾಯಕ್ಕಾಗಿ ಮನವಿ ಮಾಡಿರುವ ಗುರ್ತಾಜ್‌ ಸಿಂಗ್‌, “ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ. ನನ್ನ ತಪ್ಪಾಗಿದ್ದರೆ ನನ್ನನ್ನು ಶಿಕ್ಷಿಸಬೇಕು ಆದರೆ ನ್ಯಾಯಯುತ ತನಿಖೆ ನಡೆಯಬೇಕು” ಎಂದು ಹೇಳಿದ್ದಾರೆ.

ತನ್ನ ದುಃಖವನ್ನು ವ್ಯಕ್ತಪಡಿಸಿದ ಅವರು, “ನಾನು ಕೂಡಾ ಸರ್ಕಾರದ ಸಾರ್ವಜನಿಕ ಪ್ರತಿನಿಧಿ, ಆದರೂ ನನಗೆ ಇದೆಲ್ಲವೂ ಆಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಬಿಜೆಪಿ ಮುಖಂಡನ ದೌರ್ಜನ್ಯದಿಂದ ಮಗು ಕಳೆದುಕೊಂಡ ತಾಯಿಗೆ ಮಗು ಮರಳಿಸುವಿರೇ?- ಕಾಂಗ್ರೆಸ್

ಏನಿದು ಪ್ರಕರಣ

ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಕಾಶಿಪುರ ಸಮೀಪದ ಭರತ್‌ಪುರ ಗ್ರಾಮದಲ್ಲಿ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಗಣಿಗಾರಿಕೆ ಮಾಫಿಯಾದ ಸದಸ್ಯನೆಂದು ಹೇಳಲಾದ ಜಾಫರ್‌ನನ್ನು ಹುಡುಕಲು ಪೊಲೀಸರು ಪಕ್ಕದ ಮೊರಾದಾಬಾದ್ ಜಿಲ್ಲೆಯಿಂದ ಬಂದಿದ್ದರು.

ಸುಳಿವಿನ ಮೇರೆಗೆ ಮೊರಾದಾಬಾದ್‌ನ ಠಾಕುರ್ದ್ವಾರ ಪೊಲೀಸ್ ಠಾಣೆಯ ತಂಡವು ಜಾಫರ್‌ನನ್ನು ಹುಡುಕಾಡುತ್ತಾ ಬಿಜೆಪಿ ನಾಯಕ, ಜಸ್ಪುರ್ ಹಿರಿಯ ಬ್ಲಾಕ್ ಪ್ರಮುಖ್ ಗುರ್ತಾಜ್ ಸಿಂಗ್‌ ಭುಲ್ಲರ್ ಅವರ ಮನೆ ಮೇಲೆ ದಾಳಿ ಮಾಡಲು ಭತರ್‌ಪುರ ತಲುಪಿತ್ತು.

ಪೊಲೀಸರು ಗುರ್ತಾಜ್‌ ಸಿಂಗ್‌ ಭುಲ್ಲರ್ ಮನೆಗೆ ಬಂದಾಗ ಅಲ್ಲಿ ವಾಗ್ವಾದ ನಡೆದಿದೆ. ಎರಡೂ ಕಡೆಯವರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಗುರ್ತಾಜ್‌ ಸಿಂಗ್‌ ಅವರ ಪತ್ನಿ ಗುರುಪ್ರೀತ್ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಸೌರವ್ ಗಂಗೂಲಿ ಬಿಜೆಪಿ ಸೇರದ ಕಾರಣಕ್ಕೆ ಬಿಸಿಸಿಐನಿಂದ ಹೊರಕ್ಕೆ: TMC ಆರೋಪ

ದಾಳಿಯ ಬಗ್ಗೆ ಯುಪಿ ಪೊಲೀಸ್ ತಂಡವು ತಮ್ಮ ಉತ್ತರಾಖಂಡ ಪೊಲೀಸರಿಗೆ ಮುಂಚಿತವಾಗಿ ತಿಳಿಸಲಿಲ್ಲ ಎಂದು ಉಧಮ್ ಸಿಂಗ್ ನಗರ ಎಸ್ಎಸ್ಪಿ ಮಂಜುನಾಥ್ ಟಿಸಿ ಹೇಳಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕಾಶಿಪುರ ಶಾಸಕ ತ್ರಿಲೋಕ್ ಸಿಂಗ್ ಚೀಮಾ, ಗದರ್‌ಪುರ ಶಾಸಕ ಅರವಿಂದ್ ಪಾಂಡೆ ಮತ್ತು ಮಾಜಿ ಸಂಸದ ಬಲರಾಜ್ ಪಾಸಿ ಪ್ರತಿಭಟನಾಕಾರರೊಂದಿಗೆ ಸೇರಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...