Homeಮುಖಪುಟಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

- Advertisement -
- Advertisement -

ಕೇದಾರನಾಥಕ್ಕೆ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕೆಂದು ಬಿಜೆಪಿ ಶಾಸಕಿ ಆಶಾ ನೌಟಿಯಾಲ್ ಕರೆ ನೀಡುವ ಮೂಲಕ ದೇಶದ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಕೋಮು ಸಾಮರಸ್ಯಕ್ಕೆ ವಿರುದ್ಧವಾದ ಹೇಳಿಕೆ ನೀಡಿದ್ದಾರೆ. “ಕೆಲವು ಚಟುವಟಿಕೆಗಳು ಹಿಂದೂ ಭಕ್ತರನ್ನು ಕೆರಳಿಸುತ್ತಿವೆ, ಚಾರ್ ಧಾಮ್ ಯಾತ್ರೆಯ ನಾಲ್ಕು ಸ್ಥಳಗಳಿಂದ ಹಿಂದೂಯೇತರರನ್ನು ನಿಷೇಧಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ನಾನು ಸ್ಥಳೀಯರೊಂದಿಗೆ ಸಭೆ ನಡೆಸಿದೆ, ಹಿಂದೂಯೇತರರು ಅಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅವರು ನನಗೆ ತಿಳಿಸಿದರು. ಪ್ರಪಂಚದಾದ್ಯಂತದ ಜನರು ಬಾಬಾ ಕೇದಾರವನ್ನು ಪೂಜಿಸಲು ಹೋಗುತ್ತಾರೆ. ಆದ್ದರಿಂದ, ಆ ಹಿಂದೂಯೇತರರು ಅಲ್ಲಿಗೆ ಹೋಗುವುದನ್ನು ನಿಷೇಧಿಸಬೇಕು. ಸ್ಥಳೀಯ ಉದ್ಯಮಿಗಳು ಸಹ ಅಂತಹ ವಿಷಯಗಳನ್ನು ನಿರುತ್ಸಾಹಗೊಳಿಸಬೇಕೆಂದು ಒತ್ತಾಯಿಸಿದರು” ಎಂದು ನೌಟಿಯಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ಶಾಸಕಿಯಾಗಿರುವುದರಿಂದ, ಈ ವಿಷಯದ ಕುರಿತು ಧ್ವನಿ ಎತ್ತುವ ಜವಾಬ್ದಾರಿ ನನ್ನ ಮೇಲಿದೆ. ಯಾತ್ರಿಕರು ತಾವು ಬರುವ ಅದೇ ನಂಬಿಕೆಯೊಂದಿಗೆ ಚಾರ್ ಧಾಮ್‌ನಿಂದ ಹಿಂತಿರುಗಬೇಕು” ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಶಿವನಿಗೆ ಅರ್ಪಿತವಾದ ಪವಿತ್ರ ಜ್ಯೋತಿರ್ಲಿಂಗವೆಂದು ಪರಿಗಣಿಸಲಾದ ಕೇದಾರನಾಥವು ಚಾರ್ ಧಾಮ್ ಸರ್ಕ್ಯೂಟ್‌ನಲ್ಲಿ ಪ್ರಮುಖ ಸ್ಥಳವಾಗಿದೆ. ಇದರಲ್ಲಿ ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ಕೂಡ ಸೇರಿವೆ. ವಾರ್ಷಿಕ ತೀರ್ಥಯಾತ್ರೆ ಏಪ್ರಿಲ್ 30 ರಂದು ಪ್ರಾರಂಭವಾಗಲಿದ್ದು, ಕೇದಾರನಾಥದ ಬಾಗಿಲು ಮೇ 2 ರಂದು ತೆರೆಯಲಿದೆ.

ಬಿಜೆಪಿ ಶಾಸಕಿ ಆಶಾ ನೌಟಿಯಾಲ್

ಆದರೆ, ನೌತಿಯಾಲ್ ಅವರ ಹೇಳಿಕೆಗಳಿಗೆ ವಿರೋಧ ಪಕ್ಷದ ನಾಯಕರಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಸೂರ್ಯಕಾಂತ್ ಧಸ್ಮಣ ಅವರು, “ಮಹಾ ಕುಂಭ, ಹೋಳಿ, ಜುಮ್ಮೆ ಕಿ ನಮಾಜ್ ಅಥವಾ ಚಾರ್ ಧಾಮ್ ಯಾತ್ರೆಯಾಗಿರಲಿ, ಬಿಜೆಪಿ ಪದೇಪದೆ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ಸಾಮರಸ್ಯವನ್ನು ಹಾಳುಮಾಡುತ್ತಿದೆ. ಇದು ಅವರ ರಾಷ್ಟ್ರೀಯ ಕಾರ್ಯಸೂಚಿಯಾಗಿದೆ. ಇಂತಹ ಹೇಳಿಕೆಗಳು ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶವನ್ನು ಹೊಂದಿವೆ” ಎಂದು ಅವರು ವಾದಿಸಿದರು.

ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಕೂಡ ಬಿಜೆಪಿಯ ವಿಧಾನವನ್ನು ಟೀಕಿಸುತ್ತಾ, “ಬಿಜೆಪಿ ನಾಯಕರು ಸಂವೇದನಾಶೀಲ ಹೇಳಿಕೆಗಳನ್ನು ನೀಡುವುದು ಅಭ್ಯಾಸವಾಗಿದೆ. ಉತ್ತರಾಖಂಡ್ ಒಂದು ದೇವಭೂಮಿ, ಆದ್ದರಿಂದ ನೀವು ಎಷ್ಟು ದಿನ ಎಲ್ಲವನ್ನೂ ಧರ್ಮಕ್ಕೆ ಜೋಡಿಸುತ್ತೀರಿ? ಅವರು ಜನರಿಗೆ ಹೇಳಲು ಬೇರೆ ಏನೂ ಇಲ್ಲದ ಕಾರಣ ಹೀಗೆಲ್ಲಾ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಈ ಮಧ್ಯೆ, ಬಿಜೆಪಿ ಉತ್ತರಾಖಂಡ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್ ಚೌಹಾಣ್ ಅವರು ನೌಟಿಯಾಲ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಹಿಂದೂ ಭಾವನೆಗಳನ್ನು ಪ್ರತಿಬಿಂಬಿಸುವುದರಿಂದ ಪಕ್ಷವು ಅವರ ಹೇಳಿಕೆಗಳಿಗೆ ಬದ್ಧವಾಗಿದೆ ಎಂದು ಹೇಳಿದರು. “ಈ ನಾಲ್ಕು ತೀರ್ಥಯಾತ್ರೆಗಳು ಸನಾತನ ಧರ್ಮದಲ್ಲಿ ಮುಖ್ಯವಾಗಿವೆ, ಪ್ರತಿ ವರ್ಷ ಲಕ್ಷಾಂತರ ಜನರು ಈ ತೀರ್ಥಯಾತ್ರೆಯನ್ನು ಕೈಗೊಳ್ಳುತ್ತಾರೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೇವಾಲಯದ ಬಳಿ ಮಾಂಸ ಮತ್ತು ಮದ್ಯ ಮಾರಾಟದ ಬಗ್ಗೆ ಸ್ಥಳೀಯ ವ್ಯಾಪಾರ ಮಾಲೀಕರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅವರು ಆರೋಪಿಸಿದರು. “ಈ ಪವಿತ್ರ ಧಾಮದಲ್ಲಿ ಅಂತಹ ವ್ಯವಹಾರಗಳನ್ನು ನಡೆಸುವುದು ತಪ್ಪು. ಇತರ ವ್ಯವಹಾರಗಳ ಸೋಗಿನಲ್ಲಿ ಕಾರ್ಯನಿರ್ವಹಿಸುವ ಮದ್ಯದ ಅಂಗಡಿಗಳು ಸಹ ಇವೆ” ಎಂದು ಅವರು ಹೇಳಿದರು.

‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...