Homeಮುಖಪುಟಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

- Advertisement -
- Advertisement -

ಕೇದಾರನಾಥಕ್ಕೆ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕೆಂದು ಬಿಜೆಪಿ ಶಾಸಕಿ ಆಶಾ ನೌಟಿಯಾಲ್ ಕರೆ ನೀಡುವ ಮೂಲಕ ದೇಶದ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಕೋಮು ಸಾಮರಸ್ಯಕ್ಕೆ ವಿರುದ್ಧವಾದ ಹೇಳಿಕೆ ನೀಡಿದ್ದಾರೆ. “ಕೆಲವು ಚಟುವಟಿಕೆಗಳು ಹಿಂದೂ ಭಕ್ತರನ್ನು ಕೆರಳಿಸುತ್ತಿವೆ, ಚಾರ್ ಧಾಮ್ ಯಾತ್ರೆಯ ನಾಲ್ಕು ಸ್ಥಳಗಳಿಂದ ಹಿಂದೂಯೇತರರನ್ನು ನಿಷೇಧಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ನಾನು ಸ್ಥಳೀಯರೊಂದಿಗೆ ಸಭೆ ನಡೆಸಿದೆ, ಹಿಂದೂಯೇತರರು ಅಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅವರು ನನಗೆ ತಿಳಿಸಿದರು. ಪ್ರಪಂಚದಾದ್ಯಂತದ ಜನರು ಬಾಬಾ ಕೇದಾರವನ್ನು ಪೂಜಿಸಲು ಹೋಗುತ್ತಾರೆ. ಆದ್ದರಿಂದ, ಆ ಹಿಂದೂಯೇತರರು ಅಲ್ಲಿಗೆ ಹೋಗುವುದನ್ನು ನಿಷೇಧಿಸಬೇಕು. ಸ್ಥಳೀಯ ಉದ್ಯಮಿಗಳು ಸಹ ಅಂತಹ ವಿಷಯಗಳನ್ನು ನಿರುತ್ಸಾಹಗೊಳಿಸಬೇಕೆಂದು ಒತ್ತಾಯಿಸಿದರು” ಎಂದು ನೌಟಿಯಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ಶಾಸಕಿಯಾಗಿರುವುದರಿಂದ, ಈ ವಿಷಯದ ಕುರಿತು ಧ್ವನಿ ಎತ್ತುವ ಜವಾಬ್ದಾರಿ ನನ್ನ ಮೇಲಿದೆ. ಯಾತ್ರಿಕರು ತಾವು ಬರುವ ಅದೇ ನಂಬಿಕೆಯೊಂದಿಗೆ ಚಾರ್ ಧಾಮ್‌ನಿಂದ ಹಿಂತಿರುಗಬೇಕು” ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಶಿವನಿಗೆ ಅರ್ಪಿತವಾದ ಪವಿತ್ರ ಜ್ಯೋತಿರ್ಲಿಂಗವೆಂದು ಪರಿಗಣಿಸಲಾದ ಕೇದಾರನಾಥವು ಚಾರ್ ಧಾಮ್ ಸರ್ಕ್ಯೂಟ್‌ನಲ್ಲಿ ಪ್ರಮುಖ ಸ್ಥಳವಾಗಿದೆ. ಇದರಲ್ಲಿ ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ಕೂಡ ಸೇರಿವೆ. ವಾರ್ಷಿಕ ತೀರ್ಥಯಾತ್ರೆ ಏಪ್ರಿಲ್ 30 ರಂದು ಪ್ರಾರಂಭವಾಗಲಿದ್ದು, ಕೇದಾರನಾಥದ ಬಾಗಿಲು ಮೇ 2 ರಂದು ತೆರೆಯಲಿದೆ.

ಬಿಜೆಪಿ ಶಾಸಕಿ ಆಶಾ ನೌಟಿಯಾಲ್

ಆದರೆ, ನೌತಿಯಾಲ್ ಅವರ ಹೇಳಿಕೆಗಳಿಗೆ ವಿರೋಧ ಪಕ್ಷದ ನಾಯಕರಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಸೂರ್ಯಕಾಂತ್ ಧಸ್ಮಣ ಅವರು, “ಮಹಾ ಕುಂಭ, ಹೋಳಿ, ಜುಮ್ಮೆ ಕಿ ನಮಾಜ್ ಅಥವಾ ಚಾರ್ ಧಾಮ್ ಯಾತ್ರೆಯಾಗಿರಲಿ, ಬಿಜೆಪಿ ಪದೇಪದೆ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ಸಾಮರಸ್ಯವನ್ನು ಹಾಳುಮಾಡುತ್ತಿದೆ. ಇದು ಅವರ ರಾಷ್ಟ್ರೀಯ ಕಾರ್ಯಸೂಚಿಯಾಗಿದೆ. ಇಂತಹ ಹೇಳಿಕೆಗಳು ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶವನ್ನು ಹೊಂದಿವೆ” ಎಂದು ಅವರು ವಾದಿಸಿದರು.

ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಕೂಡ ಬಿಜೆಪಿಯ ವಿಧಾನವನ್ನು ಟೀಕಿಸುತ್ತಾ, “ಬಿಜೆಪಿ ನಾಯಕರು ಸಂವೇದನಾಶೀಲ ಹೇಳಿಕೆಗಳನ್ನು ನೀಡುವುದು ಅಭ್ಯಾಸವಾಗಿದೆ. ಉತ್ತರಾಖಂಡ್ ಒಂದು ದೇವಭೂಮಿ, ಆದ್ದರಿಂದ ನೀವು ಎಷ್ಟು ದಿನ ಎಲ್ಲವನ್ನೂ ಧರ್ಮಕ್ಕೆ ಜೋಡಿಸುತ್ತೀರಿ? ಅವರು ಜನರಿಗೆ ಹೇಳಲು ಬೇರೆ ಏನೂ ಇಲ್ಲದ ಕಾರಣ ಹೀಗೆಲ್ಲಾ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಈ ಮಧ್ಯೆ, ಬಿಜೆಪಿ ಉತ್ತರಾಖಂಡ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್ ಚೌಹಾಣ್ ಅವರು ನೌಟಿಯಾಲ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಹಿಂದೂ ಭಾವನೆಗಳನ್ನು ಪ್ರತಿಬಿಂಬಿಸುವುದರಿಂದ ಪಕ್ಷವು ಅವರ ಹೇಳಿಕೆಗಳಿಗೆ ಬದ್ಧವಾಗಿದೆ ಎಂದು ಹೇಳಿದರು. “ಈ ನಾಲ್ಕು ತೀರ್ಥಯಾತ್ರೆಗಳು ಸನಾತನ ಧರ್ಮದಲ್ಲಿ ಮುಖ್ಯವಾಗಿವೆ, ಪ್ರತಿ ವರ್ಷ ಲಕ್ಷಾಂತರ ಜನರು ಈ ತೀರ್ಥಯಾತ್ರೆಯನ್ನು ಕೈಗೊಳ್ಳುತ್ತಾರೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೇವಾಲಯದ ಬಳಿ ಮಾಂಸ ಮತ್ತು ಮದ್ಯ ಮಾರಾಟದ ಬಗ್ಗೆ ಸ್ಥಳೀಯ ವ್ಯಾಪಾರ ಮಾಲೀಕರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅವರು ಆರೋಪಿಸಿದರು. “ಈ ಪವಿತ್ರ ಧಾಮದಲ್ಲಿ ಅಂತಹ ವ್ಯವಹಾರಗಳನ್ನು ನಡೆಸುವುದು ತಪ್ಪು. ಇತರ ವ್ಯವಹಾರಗಳ ಸೋಗಿನಲ್ಲಿ ಕಾರ್ಯನಿರ್ವಹಿಸುವ ಮದ್ಯದ ಅಂಗಡಿಗಳು ಸಹ ಇವೆ” ಎಂದು ಅವರು ಹೇಳಿದರು.

‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...