Homeಮುಖಪುಟಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

- Advertisement -
- Advertisement -

ಕೇದಾರನಾಥಕ್ಕೆ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕೆಂದು ಬಿಜೆಪಿ ಶಾಸಕಿ ಆಶಾ ನೌಟಿಯಾಲ್ ಕರೆ ನೀಡುವ ಮೂಲಕ ದೇಶದ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಕೋಮು ಸಾಮರಸ್ಯಕ್ಕೆ ವಿರುದ್ಧವಾದ ಹೇಳಿಕೆ ನೀಡಿದ್ದಾರೆ. “ಕೆಲವು ಚಟುವಟಿಕೆಗಳು ಹಿಂದೂ ಭಕ್ತರನ್ನು ಕೆರಳಿಸುತ್ತಿವೆ, ಚಾರ್ ಧಾಮ್ ಯಾತ್ರೆಯ ನಾಲ್ಕು ಸ್ಥಳಗಳಿಂದ ಹಿಂದೂಯೇತರರನ್ನು ನಿಷೇಧಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ನಾನು ಸ್ಥಳೀಯರೊಂದಿಗೆ ಸಭೆ ನಡೆಸಿದೆ, ಹಿಂದೂಯೇತರರು ಅಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅವರು ನನಗೆ ತಿಳಿಸಿದರು. ಪ್ರಪಂಚದಾದ್ಯಂತದ ಜನರು ಬಾಬಾ ಕೇದಾರವನ್ನು ಪೂಜಿಸಲು ಹೋಗುತ್ತಾರೆ. ಆದ್ದರಿಂದ, ಆ ಹಿಂದೂಯೇತರರು ಅಲ್ಲಿಗೆ ಹೋಗುವುದನ್ನು ನಿಷೇಧಿಸಬೇಕು. ಸ್ಥಳೀಯ ಉದ್ಯಮಿಗಳು ಸಹ ಅಂತಹ ವಿಷಯಗಳನ್ನು ನಿರುತ್ಸಾಹಗೊಳಿಸಬೇಕೆಂದು ಒತ್ತಾಯಿಸಿದರು” ಎಂದು ನೌಟಿಯಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ಶಾಸಕಿಯಾಗಿರುವುದರಿಂದ, ಈ ವಿಷಯದ ಕುರಿತು ಧ್ವನಿ ಎತ್ತುವ ಜವಾಬ್ದಾರಿ ನನ್ನ ಮೇಲಿದೆ. ಯಾತ್ರಿಕರು ತಾವು ಬರುವ ಅದೇ ನಂಬಿಕೆಯೊಂದಿಗೆ ಚಾರ್ ಧಾಮ್‌ನಿಂದ ಹಿಂತಿರುಗಬೇಕು” ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಶಿವನಿಗೆ ಅರ್ಪಿತವಾದ ಪವಿತ್ರ ಜ್ಯೋತಿರ್ಲಿಂಗವೆಂದು ಪರಿಗಣಿಸಲಾದ ಕೇದಾರನಾಥವು ಚಾರ್ ಧಾಮ್ ಸರ್ಕ್ಯೂಟ್‌ನಲ್ಲಿ ಪ್ರಮುಖ ಸ್ಥಳವಾಗಿದೆ. ಇದರಲ್ಲಿ ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ಕೂಡ ಸೇರಿವೆ. ವಾರ್ಷಿಕ ತೀರ್ಥಯಾತ್ರೆ ಏಪ್ರಿಲ್ 30 ರಂದು ಪ್ರಾರಂಭವಾಗಲಿದ್ದು, ಕೇದಾರನಾಥದ ಬಾಗಿಲು ಮೇ 2 ರಂದು ತೆರೆಯಲಿದೆ.

ಬಿಜೆಪಿ ಶಾಸಕಿ ಆಶಾ ನೌಟಿಯಾಲ್

ಆದರೆ, ನೌತಿಯಾಲ್ ಅವರ ಹೇಳಿಕೆಗಳಿಗೆ ವಿರೋಧ ಪಕ್ಷದ ನಾಯಕರಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಸೂರ್ಯಕಾಂತ್ ಧಸ್ಮಣ ಅವರು, “ಮಹಾ ಕುಂಭ, ಹೋಳಿ, ಜುಮ್ಮೆ ಕಿ ನಮಾಜ್ ಅಥವಾ ಚಾರ್ ಧಾಮ್ ಯಾತ್ರೆಯಾಗಿರಲಿ, ಬಿಜೆಪಿ ಪದೇಪದೆ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ಸಾಮರಸ್ಯವನ್ನು ಹಾಳುಮಾಡುತ್ತಿದೆ. ಇದು ಅವರ ರಾಷ್ಟ್ರೀಯ ಕಾರ್ಯಸೂಚಿಯಾಗಿದೆ. ಇಂತಹ ಹೇಳಿಕೆಗಳು ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶವನ್ನು ಹೊಂದಿವೆ” ಎಂದು ಅವರು ವಾದಿಸಿದರು.

ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಕೂಡ ಬಿಜೆಪಿಯ ವಿಧಾನವನ್ನು ಟೀಕಿಸುತ್ತಾ, “ಬಿಜೆಪಿ ನಾಯಕರು ಸಂವೇದನಾಶೀಲ ಹೇಳಿಕೆಗಳನ್ನು ನೀಡುವುದು ಅಭ್ಯಾಸವಾಗಿದೆ. ಉತ್ತರಾಖಂಡ್ ಒಂದು ದೇವಭೂಮಿ, ಆದ್ದರಿಂದ ನೀವು ಎಷ್ಟು ದಿನ ಎಲ್ಲವನ್ನೂ ಧರ್ಮಕ್ಕೆ ಜೋಡಿಸುತ್ತೀರಿ? ಅವರು ಜನರಿಗೆ ಹೇಳಲು ಬೇರೆ ಏನೂ ಇಲ್ಲದ ಕಾರಣ ಹೀಗೆಲ್ಲಾ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಈ ಮಧ್ಯೆ, ಬಿಜೆಪಿ ಉತ್ತರಾಖಂಡ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್ ಚೌಹಾಣ್ ಅವರು ನೌಟಿಯಾಲ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಹಿಂದೂ ಭಾವನೆಗಳನ್ನು ಪ್ರತಿಬಿಂಬಿಸುವುದರಿಂದ ಪಕ್ಷವು ಅವರ ಹೇಳಿಕೆಗಳಿಗೆ ಬದ್ಧವಾಗಿದೆ ಎಂದು ಹೇಳಿದರು. “ಈ ನಾಲ್ಕು ತೀರ್ಥಯಾತ್ರೆಗಳು ಸನಾತನ ಧರ್ಮದಲ್ಲಿ ಮುಖ್ಯವಾಗಿವೆ, ಪ್ರತಿ ವರ್ಷ ಲಕ್ಷಾಂತರ ಜನರು ಈ ತೀರ್ಥಯಾತ್ರೆಯನ್ನು ಕೈಗೊಳ್ಳುತ್ತಾರೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೇವಾಲಯದ ಬಳಿ ಮಾಂಸ ಮತ್ತು ಮದ್ಯ ಮಾರಾಟದ ಬಗ್ಗೆ ಸ್ಥಳೀಯ ವ್ಯಾಪಾರ ಮಾಲೀಕರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅವರು ಆರೋಪಿಸಿದರು. “ಈ ಪವಿತ್ರ ಧಾಮದಲ್ಲಿ ಅಂತಹ ವ್ಯವಹಾರಗಳನ್ನು ನಡೆಸುವುದು ತಪ್ಪು. ಇತರ ವ್ಯವಹಾರಗಳ ಸೋಗಿನಲ್ಲಿ ಕಾರ್ಯನಿರ್ವಹಿಸುವ ಮದ್ಯದ ಅಂಗಡಿಗಳು ಸಹ ಇವೆ” ಎಂದು ಅವರು ಹೇಳಿದರು.

‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...