Homeಮುಖಪುಟಮದ್ರಸಾ ಕಾಯ್ದೆ ರದ್ದತಿಗೆ ಮುಂದಾದ ಉತ್ತರಾಖಂಡ ಸರ್ಕಾರ: ಅಲ್ಪಸಂಖ್ಯಾತ ಶಿಕ್ಷಣ ಮಸೂದೆಗೆ ಅನುಮೋದನೆ

ಮದ್ರಸಾ ಕಾಯ್ದೆ ರದ್ದತಿಗೆ ಮುಂದಾದ ಉತ್ತರಾಖಂಡ ಸರ್ಕಾರ: ಅಲ್ಪಸಂಖ್ಯಾತ ಶಿಕ್ಷಣ ಮಸೂದೆಗೆ ಅನುಮೋದನೆ

- Advertisement -
- Advertisement -

ಉತ್ತರಾಖಂಡ ಸಚಿವ ಸಂಪುಟವು ಅಲ್ಪಸಂಖ್ಯಾತ ಶಿಕ್ಷಣ ಮಸೂದೆ -2025ಕ್ಕೆ ಅನುಮೋದನೆ ನೀಡಿದೆ. ಈ ಮಸೂದೆಯು ರಾಜ್ಯದಲ್ಲಿ ಸಿಖ್, ಜೈನ, ಬೌದ್ಧ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ನಡೆಸುವ ಶಿಕ್ಷಣ ಸಂಸ್ಥೆಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಉದ್ದೇಶ ಹೊಂದಿದೆ.

ಪ್ರಸ್ತುತ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಸ್ಥಾನಮಾನ ಮುಸ್ಲಿಂ ಸಮುದಾಯದ ಸಂಸ್ಥೆಗಳಿಗೆ ಮಾತ್ರ ನೀಡಲಾಗಿದೆ. ಆಗಸ್ಟ್ 19 ರಿಂದ ಪ್ರಾರಂಭವಾಗುವ ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲು ಸರ್ಕಾರದ ಸಿದ್ದತೆ ನಡೆಸಿದೆ.

ಮಸೂದೆ ಅಂಗೀಕಾರಗೊಂಡು ಕಾಯ್ದೆಯಾಗಿ ಜಾರಿಗೆ ಬಂದರೆ, ಉತ್ತರಾಖಂಡ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ, 2016 ಮತ್ತು ಉತ್ತರಾಖಂಡ ಸರ್ಕಾರೇತರ ಅರೇಬಿಕ್ ಮತ್ತು ಪರ್ಷಿಯನ್ ಮದರಸಾ ಗುರುತಿಸುವಿಕೆ ನಿಯಮಗಳು, 2019 ಅನ್ನು ಜುಲೈ 1, 2026 ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ.

ಹೊಸ ಕಾಯ್ದೆ ಜಾರಿಗೆ ಬಂದರೆ ಮಾನ್ಯತೆ ಪಡೆದ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಗುರುಮುಖಿ ಮತ್ತು ಪಾಲಿ ಭಾಷೆಗಳ ಅಧ್ಯಯನವೂ ಸೇರಿಕೊಳ್ಳಲಿದೆ.

ಈ ಮಸೂದೆಯು ಪ್ರಾಧಿಕಾರ ರಚನೆಗೆ ಅವಕಾಶ ನೀಡುತ್ತದೆ. ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳು ಸ್ಥಾಪಿಸುವ ಶಿಕ್ಷಣ ಸಂಸ್ಥೆಗಳು ಅದರಿಂದ ಮಾನ್ಯತೆ ಪಡೆಯುವುದು ಕಡ್ಡಾಯಗೊಳಿಸುತ್ತದೆ.

ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮತ್ತು ಅವರ ಶೈಕ್ಷಣಿಕ ಅಭಿವೃದ್ಧಿ ಸಾಧ್ಯವಾಗುವಂತೆ ಈ ಸಂಸ್ಥೆಗಳಲ್ಲಿ ಶೈಕ್ಷಣಿಕ ಶ್ರೇಷ್ಠತೆಯನ್ನು ಸುಗಮಗೊಳಿಸಲು ಮತ್ತು ಉತ್ತೇಜಿಸಲು ಈ ಪ್ರಾಧಿಕಾರವು ಕೆಲಸ ಮಾಡುತ್ತದೆ ಎಂದು ಸರ್ಕಾರ ಹೇಳಿದ್ದಾಗಿ ವರದಿಯಾಗಿದೆ.

ಅರ್ಜಿದಾರರು ಕೆಲವು ಷರತ್ತುಗಳನ್ನು ಪೂರೈಸಿದಾಗ ಮಾತ್ರ ಪ್ರಾಧಿಕಾರವು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗೆ ಮಾನ್ಯತೆ ನೀಡುತ್ತದೆ.

ಯಾವುದೇ ಷರತ್ತು ಉಲ್ಲಂಘಿಸಿದರೆ ಅಥವಾ ಶುಲ್ಕಗಳು, ದೇಣಿಗೆಗಳು, ಅನುದಾನಗಳು ಅಥವಾ ಯಾವುದೇ ಇತರ ಹಣಕಾಸಿನ ಮೂಲಗಳಿಂದ ಪಡೆದ ಹಣವನ್ನು ದುರುಪಯೋಗಪಡಿಸಿಕೊಂಡರೆ, ಆ ಸಂಸ್ಥೆಯ ಮಾನ್ಯತೆಯನ್ನು ಸಹ ರದ್ದುಗೊಳಿಸಬಹುದು ಎಂದು ಸರ್ಕಾರ ತಿಳಿಸಿದೆ.

ಉತ್ತರಾಖಂಡ ಶಾಲಾ ಶಿಕ್ಷಣ ಮಂಡಳಿಯು ನಿಗದಿಪಡಿಸಿದ ಮಾನದಂಡಗಳ ಪ್ರಕಾರ ಈ ಸಂಸ್ಥೆಗಳಲ್ಲಿ ಶಿಕ್ಷಣವನ್ನು ನೀಡಲಾಗುತ್ತದೆ ಮತ್ತು ವಿದ್ಯಾರ್ಥಿಗಳ ಮೌಲ್ಯಮಾಪನವು ನ್ಯಾಯಯುತ ಮತ್ತು ಪಾರದರ್ಶಕವಾಗಿದೆ ಎಂದು ಪ್ರಾಧಿಕಾರವು ಖಚಿತಪಡಿಸುತ್ತದೆ.

ಒಮ್ಮೆ ಕಾಯ್ದೆ ಜಾರಿಗೆ ಬಂದರೆ, ಇದು ದೇಶದಲ್ಲಿಯೇ ಮೊದಲನೆಯ ಕಾಯ್ದೆಯಾಗಲಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಸ್ಥಾಪಿಸಿರುವ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡುವ ಪಾರದರ್ಶಕ ಪ್ರಕ್ರಿಯೆಯನ್ನು ಸ್ಥಾಪಿಸುವ ಜೊತೆಗೆ, ಶಿಕ್ಷಣದಲ್ಲಿ ಗುಣಮಟ್ಟ ಮತ್ತು ಶ್ರೇಷ್ಠತೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಇದು ಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಚಿವ ಸಂಪುಟದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಬಿಜೆಪಿಯನ್ನು ಸಂಕುಚಿತ ಮನಸ್ಸಿನವರು ಎಂದು ಕರೆದಿದ್ದು, ‘ಮದ್ರಸ’ ದಂತಹ ಉರ್ದು ಪದಗಳ ಬಗ್ಗೆ ಅವರಿಗೆ ಏಕೆ ಹಿಂಜರಿಕೆ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯವರು ಸಂಕುಚಿತ ಮನಸ್ಸಿನವರು. ಮದ್ರಸಾ ಎಂಬುದು ಉರ್ದು ಪದ, ಉರ್ದು ಗಂಗಾ-ಜಮುನಿ ಸಂಸ್ಕೃತಿಯ ಉತ್ಪನ್ನವಾಗಿದೆ” ಎಂದು ರಾವತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಮದ್ರಸಾಗಳು ದೇಶದ ಸ್ವಾತಂತ್ರ್ಯ ಹೋರಾಟದೊಂದಿಗೆ ತಮ್ಮದೇ ಆದ ಇತಿಹಾಸವನ್ನು ಹೊಂದಿವೆ. ಉರ್ದು ಪದದ ಬಗ್ಗೆ ನಿಮಗಿರುವ ಸಮಸ್ಯೆ ಏನು?” ಹರೀಶ್ ರಾವತ್ ಬೆಜೆಪಿಯನ್ನು ಪ್ರಶ್ನಿಸಿದ್ದಾರೆ.

ಮದ್ರಸಾಗಳು ಇಲ್ಲದಂತೆ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆಯೇ? ಎಂದು ಕೇಳಿದಾಗ, “ಅದೇ ಅವರ ಉದ್ದೇಶ. ಆದರೆ, ಅವರು ಅದನ್ನು ಮಾಡಲು ಸಾಧ್ಯವಿಲ್ಲ” ಎಂದು ಹರೀಶ್ ರಾವತ್ ಹೇಳಿದ್ದಾರೆ.

ಉತ್ತರಾಖಂಡ ಮದ್ರಸಾ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಜ್ಮಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, “ಇದು ಮುಂಬರುವ ದಿನಗಳಲ್ಲಿ ಎಲ್ಲಾ ಸಮುದಾಯಗಳಿಗೆ, ವಿಶೇಷವಾಗಿ ಮುಸ್ಲಿಮರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಗುಣಮಟ್ಟದ ಶಿಕ್ಷಣ ಸಿಗಲಿದೆ” ಎಂದಿದ್ದಾರೆ.

“ಈ ಕ್ರಮವು ಧಾರ್ಮಿಕ ಶಿಕ್ಷಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅದು ಮೊದಲಿನಂತೆಯೇ ಮುಂದುವರಿಯುತ್ತದೆ” ಎಂದು ಶಮೂನ್ ಖಾಜ್ಮಿ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ ಮಂಡಿಸಲು ಮುಂದಾದ ಪ್ರತಿಪಕ್ಷಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...