Homeಮುಖಪುಟಮದ್ರಸಾ ಕಾಯ್ದೆ ರದ್ದತಿಗೆ ಮುಂದಾದ ಉತ್ತರಾಖಂಡ ಸರ್ಕಾರ: ಅಲ್ಪಸಂಖ್ಯಾತ ಶಿಕ್ಷಣ ಮಸೂದೆಗೆ ಅನುಮೋದನೆ

ಮದ್ರಸಾ ಕಾಯ್ದೆ ರದ್ದತಿಗೆ ಮುಂದಾದ ಉತ್ತರಾಖಂಡ ಸರ್ಕಾರ: ಅಲ್ಪಸಂಖ್ಯಾತ ಶಿಕ್ಷಣ ಮಸೂದೆಗೆ ಅನುಮೋದನೆ

- Advertisement -
- Advertisement -

ಉತ್ತರಾಖಂಡ ಸಚಿವ ಸಂಪುಟವು ಅಲ್ಪಸಂಖ್ಯಾತ ಶಿಕ್ಷಣ ಮಸೂದೆ -2025ಕ್ಕೆ ಅನುಮೋದನೆ ನೀಡಿದೆ. ಈ ಮಸೂದೆಯು ರಾಜ್ಯದಲ್ಲಿ ಸಿಖ್, ಜೈನ, ಬೌದ್ಧ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ನಡೆಸುವ ಶಿಕ್ಷಣ ಸಂಸ್ಥೆಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಉದ್ದೇಶ ಹೊಂದಿದೆ.

ಪ್ರಸ್ತುತ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಸ್ಥಾನಮಾನ ಮುಸ್ಲಿಂ ಸಮುದಾಯದ ಸಂಸ್ಥೆಗಳಿಗೆ ಮಾತ್ರ ನೀಡಲಾಗಿದೆ. ಆಗಸ್ಟ್ 19 ರಿಂದ ಪ್ರಾರಂಭವಾಗುವ ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲು ಸರ್ಕಾರದ ಸಿದ್ದತೆ ನಡೆಸಿದೆ.

ಮಸೂದೆ ಅಂಗೀಕಾರಗೊಂಡು ಕಾಯ್ದೆಯಾಗಿ ಜಾರಿಗೆ ಬಂದರೆ, ಉತ್ತರಾಖಂಡ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ, 2016 ಮತ್ತು ಉತ್ತರಾಖಂಡ ಸರ್ಕಾರೇತರ ಅರೇಬಿಕ್ ಮತ್ತು ಪರ್ಷಿಯನ್ ಮದರಸಾ ಗುರುತಿಸುವಿಕೆ ನಿಯಮಗಳು, 2019 ಅನ್ನು ಜುಲೈ 1, 2026 ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ.

ಹೊಸ ಕಾಯ್ದೆ ಜಾರಿಗೆ ಬಂದರೆ ಮಾನ್ಯತೆ ಪಡೆದ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಗುರುಮುಖಿ ಮತ್ತು ಪಾಲಿ ಭಾಷೆಗಳ ಅಧ್ಯಯನವೂ ಸೇರಿಕೊಳ್ಳಲಿದೆ.

ಈ ಮಸೂದೆಯು ಪ್ರಾಧಿಕಾರ ರಚನೆಗೆ ಅವಕಾಶ ನೀಡುತ್ತದೆ. ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳು ಸ್ಥಾಪಿಸುವ ಶಿಕ್ಷಣ ಸಂಸ್ಥೆಗಳು ಅದರಿಂದ ಮಾನ್ಯತೆ ಪಡೆಯುವುದು ಕಡ್ಡಾಯಗೊಳಿಸುತ್ತದೆ.

ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮತ್ತು ಅವರ ಶೈಕ್ಷಣಿಕ ಅಭಿವೃದ್ಧಿ ಸಾಧ್ಯವಾಗುವಂತೆ ಈ ಸಂಸ್ಥೆಗಳಲ್ಲಿ ಶೈಕ್ಷಣಿಕ ಶ್ರೇಷ್ಠತೆಯನ್ನು ಸುಗಮಗೊಳಿಸಲು ಮತ್ತು ಉತ್ತೇಜಿಸಲು ಈ ಪ್ರಾಧಿಕಾರವು ಕೆಲಸ ಮಾಡುತ್ತದೆ ಎಂದು ಸರ್ಕಾರ ಹೇಳಿದ್ದಾಗಿ ವರದಿಯಾಗಿದೆ.

ಅರ್ಜಿದಾರರು ಕೆಲವು ಷರತ್ತುಗಳನ್ನು ಪೂರೈಸಿದಾಗ ಮಾತ್ರ ಪ್ರಾಧಿಕಾರವು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗೆ ಮಾನ್ಯತೆ ನೀಡುತ್ತದೆ.

ಯಾವುದೇ ಷರತ್ತು ಉಲ್ಲಂಘಿಸಿದರೆ ಅಥವಾ ಶುಲ್ಕಗಳು, ದೇಣಿಗೆಗಳು, ಅನುದಾನಗಳು ಅಥವಾ ಯಾವುದೇ ಇತರ ಹಣಕಾಸಿನ ಮೂಲಗಳಿಂದ ಪಡೆದ ಹಣವನ್ನು ದುರುಪಯೋಗಪಡಿಸಿಕೊಂಡರೆ, ಆ ಸಂಸ್ಥೆಯ ಮಾನ್ಯತೆಯನ್ನು ಸಹ ರದ್ದುಗೊಳಿಸಬಹುದು ಎಂದು ಸರ್ಕಾರ ತಿಳಿಸಿದೆ.

ಉತ್ತರಾಖಂಡ ಶಾಲಾ ಶಿಕ್ಷಣ ಮಂಡಳಿಯು ನಿಗದಿಪಡಿಸಿದ ಮಾನದಂಡಗಳ ಪ್ರಕಾರ ಈ ಸಂಸ್ಥೆಗಳಲ್ಲಿ ಶಿಕ್ಷಣವನ್ನು ನೀಡಲಾಗುತ್ತದೆ ಮತ್ತು ವಿದ್ಯಾರ್ಥಿಗಳ ಮೌಲ್ಯಮಾಪನವು ನ್ಯಾಯಯುತ ಮತ್ತು ಪಾರದರ್ಶಕವಾಗಿದೆ ಎಂದು ಪ್ರಾಧಿಕಾರವು ಖಚಿತಪಡಿಸುತ್ತದೆ.

ಒಮ್ಮೆ ಕಾಯ್ದೆ ಜಾರಿಗೆ ಬಂದರೆ, ಇದು ದೇಶದಲ್ಲಿಯೇ ಮೊದಲನೆಯ ಕಾಯ್ದೆಯಾಗಲಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಸ್ಥಾಪಿಸಿರುವ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡುವ ಪಾರದರ್ಶಕ ಪ್ರಕ್ರಿಯೆಯನ್ನು ಸ್ಥಾಪಿಸುವ ಜೊತೆಗೆ, ಶಿಕ್ಷಣದಲ್ಲಿ ಗುಣಮಟ್ಟ ಮತ್ತು ಶ್ರೇಷ್ಠತೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಇದು ಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಚಿವ ಸಂಪುಟದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಬಿಜೆಪಿಯನ್ನು ಸಂಕುಚಿತ ಮನಸ್ಸಿನವರು ಎಂದು ಕರೆದಿದ್ದು, ‘ಮದ್ರಸ’ ದಂತಹ ಉರ್ದು ಪದಗಳ ಬಗ್ಗೆ ಅವರಿಗೆ ಏಕೆ ಹಿಂಜರಿಕೆ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯವರು ಸಂಕುಚಿತ ಮನಸ್ಸಿನವರು. ಮದ್ರಸಾ ಎಂಬುದು ಉರ್ದು ಪದ, ಉರ್ದು ಗಂಗಾ-ಜಮುನಿ ಸಂಸ್ಕೃತಿಯ ಉತ್ಪನ್ನವಾಗಿದೆ” ಎಂದು ರಾವತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಮದ್ರಸಾಗಳು ದೇಶದ ಸ್ವಾತಂತ್ರ್ಯ ಹೋರಾಟದೊಂದಿಗೆ ತಮ್ಮದೇ ಆದ ಇತಿಹಾಸವನ್ನು ಹೊಂದಿವೆ. ಉರ್ದು ಪದದ ಬಗ್ಗೆ ನಿಮಗಿರುವ ಸಮಸ್ಯೆ ಏನು?” ಹರೀಶ್ ರಾವತ್ ಬೆಜೆಪಿಯನ್ನು ಪ್ರಶ್ನಿಸಿದ್ದಾರೆ.

ಮದ್ರಸಾಗಳು ಇಲ್ಲದಂತೆ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆಯೇ? ಎಂದು ಕೇಳಿದಾಗ, “ಅದೇ ಅವರ ಉದ್ದೇಶ. ಆದರೆ, ಅವರು ಅದನ್ನು ಮಾಡಲು ಸಾಧ್ಯವಿಲ್ಲ” ಎಂದು ಹರೀಶ್ ರಾವತ್ ಹೇಳಿದ್ದಾರೆ.

ಉತ್ತರಾಖಂಡ ಮದ್ರಸಾ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಜ್ಮಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, “ಇದು ಮುಂಬರುವ ದಿನಗಳಲ್ಲಿ ಎಲ್ಲಾ ಸಮುದಾಯಗಳಿಗೆ, ವಿಶೇಷವಾಗಿ ಮುಸ್ಲಿಮರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಗುಣಮಟ್ಟದ ಶಿಕ್ಷಣ ಸಿಗಲಿದೆ” ಎಂದಿದ್ದಾರೆ.

“ಈ ಕ್ರಮವು ಧಾರ್ಮಿಕ ಶಿಕ್ಷಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅದು ಮೊದಲಿನಂತೆಯೇ ಮುಂದುವರಿಯುತ್ತದೆ” ಎಂದು ಶಮೂನ್ ಖಾಜ್ಮಿ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ ಮಂಡಿಸಲು ಮುಂದಾದ ಪ್ರತಿಪಕ್ಷಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...