Homeಮುಖಪುಟಮದ್ರಸಾ ಕಾಯ್ದೆ ರದ್ದತಿಗೆ ಮುಂದಾದ ಉತ್ತರಾಖಂಡ ಸರ್ಕಾರ: ಅಲ್ಪಸಂಖ್ಯಾತ ಶಿಕ್ಷಣ ಮಸೂದೆಗೆ ಅನುಮೋದನೆ

ಮದ್ರಸಾ ಕಾಯ್ದೆ ರದ್ದತಿಗೆ ಮುಂದಾದ ಉತ್ತರಾಖಂಡ ಸರ್ಕಾರ: ಅಲ್ಪಸಂಖ್ಯಾತ ಶಿಕ್ಷಣ ಮಸೂದೆಗೆ ಅನುಮೋದನೆ

- Advertisement -
- Advertisement -

ಉತ್ತರಾಖಂಡ ಸಚಿವ ಸಂಪುಟವು ಅಲ್ಪಸಂಖ್ಯಾತ ಶಿಕ್ಷಣ ಮಸೂದೆ -2025ಕ್ಕೆ ಅನುಮೋದನೆ ನೀಡಿದೆ. ಈ ಮಸೂದೆಯು ರಾಜ್ಯದಲ್ಲಿ ಸಿಖ್, ಜೈನ, ಬೌದ್ಧ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ನಡೆಸುವ ಶಿಕ್ಷಣ ಸಂಸ್ಥೆಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಉದ್ದೇಶ ಹೊಂದಿದೆ.

ಪ್ರಸ್ತುತ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಸ್ಥಾನಮಾನ ಮುಸ್ಲಿಂ ಸಮುದಾಯದ ಸಂಸ್ಥೆಗಳಿಗೆ ಮಾತ್ರ ನೀಡಲಾಗಿದೆ. ಆಗಸ್ಟ್ 19 ರಿಂದ ಪ್ರಾರಂಭವಾಗುವ ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲು ಸರ್ಕಾರದ ಸಿದ್ದತೆ ನಡೆಸಿದೆ.

ಮಸೂದೆ ಅಂಗೀಕಾರಗೊಂಡು ಕಾಯ್ದೆಯಾಗಿ ಜಾರಿಗೆ ಬಂದರೆ, ಉತ್ತರಾಖಂಡ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ, 2016 ಮತ್ತು ಉತ್ತರಾಖಂಡ ಸರ್ಕಾರೇತರ ಅರೇಬಿಕ್ ಮತ್ತು ಪರ್ಷಿಯನ್ ಮದರಸಾ ಗುರುತಿಸುವಿಕೆ ನಿಯಮಗಳು, 2019 ಅನ್ನು ಜುಲೈ 1, 2026 ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ.

ಹೊಸ ಕಾಯ್ದೆ ಜಾರಿಗೆ ಬಂದರೆ ಮಾನ್ಯತೆ ಪಡೆದ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಗುರುಮುಖಿ ಮತ್ತು ಪಾಲಿ ಭಾಷೆಗಳ ಅಧ್ಯಯನವೂ ಸೇರಿಕೊಳ್ಳಲಿದೆ.

ಈ ಮಸೂದೆಯು ಪ್ರಾಧಿಕಾರ ರಚನೆಗೆ ಅವಕಾಶ ನೀಡುತ್ತದೆ. ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳು ಸ್ಥಾಪಿಸುವ ಶಿಕ್ಷಣ ಸಂಸ್ಥೆಗಳು ಅದರಿಂದ ಮಾನ್ಯತೆ ಪಡೆಯುವುದು ಕಡ್ಡಾಯಗೊಳಿಸುತ್ತದೆ.

ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮತ್ತು ಅವರ ಶೈಕ್ಷಣಿಕ ಅಭಿವೃದ್ಧಿ ಸಾಧ್ಯವಾಗುವಂತೆ ಈ ಸಂಸ್ಥೆಗಳಲ್ಲಿ ಶೈಕ್ಷಣಿಕ ಶ್ರೇಷ್ಠತೆಯನ್ನು ಸುಗಮಗೊಳಿಸಲು ಮತ್ತು ಉತ್ತೇಜಿಸಲು ಈ ಪ್ರಾಧಿಕಾರವು ಕೆಲಸ ಮಾಡುತ್ತದೆ ಎಂದು ಸರ್ಕಾರ ಹೇಳಿದ್ದಾಗಿ ವರದಿಯಾಗಿದೆ.

ಅರ್ಜಿದಾರರು ಕೆಲವು ಷರತ್ತುಗಳನ್ನು ಪೂರೈಸಿದಾಗ ಮಾತ್ರ ಪ್ರಾಧಿಕಾರವು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗೆ ಮಾನ್ಯತೆ ನೀಡುತ್ತದೆ.

ಯಾವುದೇ ಷರತ್ತು ಉಲ್ಲಂಘಿಸಿದರೆ ಅಥವಾ ಶುಲ್ಕಗಳು, ದೇಣಿಗೆಗಳು, ಅನುದಾನಗಳು ಅಥವಾ ಯಾವುದೇ ಇತರ ಹಣಕಾಸಿನ ಮೂಲಗಳಿಂದ ಪಡೆದ ಹಣವನ್ನು ದುರುಪಯೋಗಪಡಿಸಿಕೊಂಡರೆ, ಆ ಸಂಸ್ಥೆಯ ಮಾನ್ಯತೆಯನ್ನು ಸಹ ರದ್ದುಗೊಳಿಸಬಹುದು ಎಂದು ಸರ್ಕಾರ ತಿಳಿಸಿದೆ.

ಉತ್ತರಾಖಂಡ ಶಾಲಾ ಶಿಕ್ಷಣ ಮಂಡಳಿಯು ನಿಗದಿಪಡಿಸಿದ ಮಾನದಂಡಗಳ ಪ್ರಕಾರ ಈ ಸಂಸ್ಥೆಗಳಲ್ಲಿ ಶಿಕ್ಷಣವನ್ನು ನೀಡಲಾಗುತ್ತದೆ ಮತ್ತು ವಿದ್ಯಾರ್ಥಿಗಳ ಮೌಲ್ಯಮಾಪನವು ನ್ಯಾಯಯುತ ಮತ್ತು ಪಾರದರ್ಶಕವಾಗಿದೆ ಎಂದು ಪ್ರಾಧಿಕಾರವು ಖಚಿತಪಡಿಸುತ್ತದೆ.

ಒಮ್ಮೆ ಕಾಯ್ದೆ ಜಾರಿಗೆ ಬಂದರೆ, ಇದು ದೇಶದಲ್ಲಿಯೇ ಮೊದಲನೆಯ ಕಾಯ್ದೆಯಾಗಲಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಸ್ಥಾಪಿಸಿರುವ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡುವ ಪಾರದರ್ಶಕ ಪ್ರಕ್ರಿಯೆಯನ್ನು ಸ್ಥಾಪಿಸುವ ಜೊತೆಗೆ, ಶಿಕ್ಷಣದಲ್ಲಿ ಗುಣಮಟ್ಟ ಮತ್ತು ಶ್ರೇಷ್ಠತೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಇದು ಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಚಿವ ಸಂಪುಟದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಬಿಜೆಪಿಯನ್ನು ಸಂಕುಚಿತ ಮನಸ್ಸಿನವರು ಎಂದು ಕರೆದಿದ್ದು, ‘ಮದ್ರಸ’ ದಂತಹ ಉರ್ದು ಪದಗಳ ಬಗ್ಗೆ ಅವರಿಗೆ ಏಕೆ ಹಿಂಜರಿಕೆ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯವರು ಸಂಕುಚಿತ ಮನಸ್ಸಿನವರು. ಮದ್ರಸಾ ಎಂಬುದು ಉರ್ದು ಪದ, ಉರ್ದು ಗಂಗಾ-ಜಮುನಿ ಸಂಸ್ಕೃತಿಯ ಉತ್ಪನ್ನವಾಗಿದೆ” ಎಂದು ರಾವತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಮದ್ರಸಾಗಳು ದೇಶದ ಸ್ವಾತಂತ್ರ್ಯ ಹೋರಾಟದೊಂದಿಗೆ ತಮ್ಮದೇ ಆದ ಇತಿಹಾಸವನ್ನು ಹೊಂದಿವೆ. ಉರ್ದು ಪದದ ಬಗ್ಗೆ ನಿಮಗಿರುವ ಸಮಸ್ಯೆ ಏನು?” ಹರೀಶ್ ರಾವತ್ ಬೆಜೆಪಿಯನ್ನು ಪ್ರಶ್ನಿಸಿದ್ದಾರೆ.

ಮದ್ರಸಾಗಳು ಇಲ್ಲದಂತೆ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆಯೇ? ಎಂದು ಕೇಳಿದಾಗ, “ಅದೇ ಅವರ ಉದ್ದೇಶ. ಆದರೆ, ಅವರು ಅದನ್ನು ಮಾಡಲು ಸಾಧ್ಯವಿಲ್ಲ” ಎಂದು ಹರೀಶ್ ರಾವತ್ ಹೇಳಿದ್ದಾರೆ.

ಉತ್ತರಾಖಂಡ ಮದ್ರಸಾ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಜ್ಮಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, “ಇದು ಮುಂಬರುವ ದಿನಗಳಲ್ಲಿ ಎಲ್ಲಾ ಸಮುದಾಯಗಳಿಗೆ, ವಿಶೇಷವಾಗಿ ಮುಸ್ಲಿಮರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಗುಣಮಟ್ಟದ ಶಿಕ್ಷಣ ಸಿಗಲಿದೆ” ಎಂದಿದ್ದಾರೆ.

“ಈ ಕ್ರಮವು ಧಾರ್ಮಿಕ ಶಿಕ್ಷಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅದು ಮೊದಲಿನಂತೆಯೇ ಮುಂದುವರಿಯುತ್ತದೆ” ಎಂದು ಶಮೂನ್ ಖಾಜ್ಮಿ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ ಮಂಡಿಸಲು ಮುಂದಾದ ಪ್ರತಿಪಕ್ಷಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...