Homeಮುಖಪುಟಮದ್ರಸಾ ಕಾಯ್ದೆ ರದ್ದತಿಗೆ ಮುಂದಾದ ಉತ್ತರಾಖಂಡ ಸರ್ಕಾರ: ಅಲ್ಪಸಂಖ್ಯಾತ ಶಿಕ್ಷಣ ಮಸೂದೆಗೆ ಅನುಮೋದನೆ

ಮದ್ರಸಾ ಕಾಯ್ದೆ ರದ್ದತಿಗೆ ಮುಂದಾದ ಉತ್ತರಾಖಂಡ ಸರ್ಕಾರ: ಅಲ್ಪಸಂಖ್ಯಾತ ಶಿಕ್ಷಣ ಮಸೂದೆಗೆ ಅನುಮೋದನೆ

- Advertisement -
- Advertisement -

ಉತ್ತರಾಖಂಡ ಸಚಿವ ಸಂಪುಟವು ಅಲ್ಪಸಂಖ್ಯಾತ ಶಿಕ್ಷಣ ಮಸೂದೆ -2025ಕ್ಕೆ ಅನುಮೋದನೆ ನೀಡಿದೆ. ಈ ಮಸೂದೆಯು ರಾಜ್ಯದಲ್ಲಿ ಸಿಖ್, ಜೈನ, ಬೌದ್ಧ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ನಡೆಸುವ ಶಿಕ್ಷಣ ಸಂಸ್ಥೆಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಉದ್ದೇಶ ಹೊಂದಿದೆ.

ಪ್ರಸ್ತುತ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ಸ್ಥಾನಮಾನ ಮುಸ್ಲಿಂ ಸಮುದಾಯದ ಸಂಸ್ಥೆಗಳಿಗೆ ಮಾತ್ರ ನೀಡಲಾಗಿದೆ. ಆಗಸ್ಟ್ 19 ರಿಂದ ಪ್ರಾರಂಭವಾಗುವ ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲು ಸರ್ಕಾರದ ಸಿದ್ದತೆ ನಡೆಸಿದೆ.

ಮಸೂದೆ ಅಂಗೀಕಾರಗೊಂಡು ಕಾಯ್ದೆಯಾಗಿ ಜಾರಿಗೆ ಬಂದರೆ, ಉತ್ತರಾಖಂಡ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ, 2016 ಮತ್ತು ಉತ್ತರಾಖಂಡ ಸರ್ಕಾರೇತರ ಅರೇಬಿಕ್ ಮತ್ತು ಪರ್ಷಿಯನ್ ಮದರಸಾ ಗುರುತಿಸುವಿಕೆ ನಿಯಮಗಳು, 2019 ಅನ್ನು ಜುಲೈ 1, 2026 ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ.

ಹೊಸ ಕಾಯ್ದೆ ಜಾರಿಗೆ ಬಂದರೆ ಮಾನ್ಯತೆ ಪಡೆದ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಗುರುಮುಖಿ ಮತ್ತು ಪಾಲಿ ಭಾಷೆಗಳ ಅಧ್ಯಯನವೂ ಸೇರಿಕೊಳ್ಳಲಿದೆ.

ಈ ಮಸೂದೆಯು ಪ್ರಾಧಿಕಾರ ರಚನೆಗೆ ಅವಕಾಶ ನೀಡುತ್ತದೆ. ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳು ಸ್ಥಾಪಿಸುವ ಶಿಕ್ಷಣ ಸಂಸ್ಥೆಗಳು ಅದರಿಂದ ಮಾನ್ಯತೆ ಪಡೆಯುವುದು ಕಡ್ಡಾಯಗೊಳಿಸುತ್ತದೆ.

ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮತ್ತು ಅವರ ಶೈಕ್ಷಣಿಕ ಅಭಿವೃದ್ಧಿ ಸಾಧ್ಯವಾಗುವಂತೆ ಈ ಸಂಸ್ಥೆಗಳಲ್ಲಿ ಶೈಕ್ಷಣಿಕ ಶ್ರೇಷ್ಠತೆಯನ್ನು ಸುಗಮಗೊಳಿಸಲು ಮತ್ತು ಉತ್ತೇಜಿಸಲು ಈ ಪ್ರಾಧಿಕಾರವು ಕೆಲಸ ಮಾಡುತ್ತದೆ ಎಂದು ಸರ್ಕಾರ ಹೇಳಿದ್ದಾಗಿ ವರದಿಯಾಗಿದೆ.

ಅರ್ಜಿದಾರರು ಕೆಲವು ಷರತ್ತುಗಳನ್ನು ಪೂರೈಸಿದಾಗ ಮಾತ್ರ ಪ್ರಾಧಿಕಾರವು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗೆ ಮಾನ್ಯತೆ ನೀಡುತ್ತದೆ.

ಯಾವುದೇ ಷರತ್ತು ಉಲ್ಲಂಘಿಸಿದರೆ ಅಥವಾ ಶುಲ್ಕಗಳು, ದೇಣಿಗೆಗಳು, ಅನುದಾನಗಳು ಅಥವಾ ಯಾವುದೇ ಇತರ ಹಣಕಾಸಿನ ಮೂಲಗಳಿಂದ ಪಡೆದ ಹಣವನ್ನು ದುರುಪಯೋಗಪಡಿಸಿಕೊಂಡರೆ, ಆ ಸಂಸ್ಥೆಯ ಮಾನ್ಯತೆಯನ್ನು ಸಹ ರದ್ದುಗೊಳಿಸಬಹುದು ಎಂದು ಸರ್ಕಾರ ತಿಳಿಸಿದೆ.

ಉತ್ತರಾಖಂಡ ಶಾಲಾ ಶಿಕ್ಷಣ ಮಂಡಳಿಯು ನಿಗದಿಪಡಿಸಿದ ಮಾನದಂಡಗಳ ಪ್ರಕಾರ ಈ ಸಂಸ್ಥೆಗಳಲ್ಲಿ ಶಿಕ್ಷಣವನ್ನು ನೀಡಲಾಗುತ್ತದೆ ಮತ್ತು ವಿದ್ಯಾರ್ಥಿಗಳ ಮೌಲ್ಯಮಾಪನವು ನ್ಯಾಯಯುತ ಮತ್ತು ಪಾರದರ್ಶಕವಾಗಿದೆ ಎಂದು ಪ್ರಾಧಿಕಾರವು ಖಚಿತಪಡಿಸುತ್ತದೆ.

ಒಮ್ಮೆ ಕಾಯ್ದೆ ಜಾರಿಗೆ ಬಂದರೆ, ಇದು ದೇಶದಲ್ಲಿಯೇ ಮೊದಲನೆಯ ಕಾಯ್ದೆಯಾಗಲಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಸ್ಥಾಪಿಸಿರುವ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡುವ ಪಾರದರ್ಶಕ ಪ್ರಕ್ರಿಯೆಯನ್ನು ಸ್ಥಾಪಿಸುವ ಜೊತೆಗೆ, ಶಿಕ್ಷಣದಲ್ಲಿ ಗುಣಮಟ್ಟ ಮತ್ತು ಶ್ರೇಷ್ಠತೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಇದು ಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಚಿವ ಸಂಪುಟದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಬಿಜೆಪಿಯನ್ನು ಸಂಕುಚಿತ ಮನಸ್ಸಿನವರು ಎಂದು ಕರೆದಿದ್ದು, ‘ಮದ್ರಸ’ ದಂತಹ ಉರ್ದು ಪದಗಳ ಬಗ್ಗೆ ಅವರಿಗೆ ಏಕೆ ಹಿಂಜರಿಕೆ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯವರು ಸಂಕುಚಿತ ಮನಸ್ಸಿನವರು. ಮದ್ರಸಾ ಎಂಬುದು ಉರ್ದು ಪದ, ಉರ್ದು ಗಂಗಾ-ಜಮುನಿ ಸಂಸ್ಕೃತಿಯ ಉತ್ಪನ್ನವಾಗಿದೆ” ಎಂದು ರಾವತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಮದ್ರಸಾಗಳು ದೇಶದ ಸ್ವಾತಂತ್ರ್ಯ ಹೋರಾಟದೊಂದಿಗೆ ತಮ್ಮದೇ ಆದ ಇತಿಹಾಸವನ್ನು ಹೊಂದಿವೆ. ಉರ್ದು ಪದದ ಬಗ್ಗೆ ನಿಮಗಿರುವ ಸಮಸ್ಯೆ ಏನು?” ಹರೀಶ್ ರಾವತ್ ಬೆಜೆಪಿಯನ್ನು ಪ್ರಶ್ನಿಸಿದ್ದಾರೆ.

ಮದ್ರಸಾಗಳು ಇಲ್ಲದಂತೆ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆಯೇ? ಎಂದು ಕೇಳಿದಾಗ, “ಅದೇ ಅವರ ಉದ್ದೇಶ. ಆದರೆ, ಅವರು ಅದನ್ನು ಮಾಡಲು ಸಾಧ್ಯವಿಲ್ಲ” ಎಂದು ಹರೀಶ್ ರಾವತ್ ಹೇಳಿದ್ದಾರೆ.

ಉತ್ತರಾಖಂಡ ಮದ್ರಸಾ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಜ್ಮಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, “ಇದು ಮುಂಬರುವ ದಿನಗಳಲ್ಲಿ ಎಲ್ಲಾ ಸಮುದಾಯಗಳಿಗೆ, ವಿಶೇಷವಾಗಿ ಮುಸ್ಲಿಮರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಗುಣಮಟ್ಟದ ಶಿಕ್ಷಣ ಸಿಗಲಿದೆ” ಎಂದಿದ್ದಾರೆ.

“ಈ ಕ್ರಮವು ಧಾರ್ಮಿಕ ಶಿಕ್ಷಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅದು ಮೊದಲಿನಂತೆಯೇ ಮುಂದುವರಿಯುತ್ತದೆ” ಎಂದು ಶಮೂನ್ ಖಾಜ್ಮಿ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ ಮಂಡಿಸಲು ಮುಂದಾದ ಪ್ರತಿಪಕ್ಷಗಳು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...