Homeಮುಖಪುಟಉತ್ತರಾಖಂಡ: ಪ್ರಶ್ನೆ ಪತ್ರಿಕೆ ಸೋರಿಕೆ 'ನಕಲ್ ಜಿಹಾದ್' ಎಂದ ಸಿಎಂ ಧಾಮಿ

ಉತ್ತರಾಖಂಡ: ಪ್ರಶ್ನೆ ಪತ್ರಿಕೆ ಸೋರಿಕೆ ‘ನಕಲ್ ಜಿಹಾದ್’ ಎಂದ ಸಿಎಂ ಧಾಮಿ

- Advertisement -
- Advertisement -

ಉತ್ತರಾಖಂಡದಲ್ಲಿ ಸರ್ಕಾರ ಉದ್ಯೋಗ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ಬುಧವಾರ (ಸೆ.24) ಬೃಹತ್ ಪ್ರತಿಭಟನೆ ನಡೆದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಪ್ರಶ್ನೆ ಪತ್ರಿಕೆ ಸೋರಿಕೆ ಒಂದು ‘ನಕಲ್ ಜಿಹಾದ್’ ಅಥವಾ ‘ವಂಚನೆ ಜಿಹಾದ್’ ಕೃತ್ಯ ಎಂದು ಹೇಳಿದ್ದಾರೆ.

‘ಉತ್ತರಾಖಂಡ ಅಧೀನ ಸೇವಾ ಆಯ್ಕೆ ಆಯೋಗ’ದ ಪರೀಕ್ಷೆಯು ಭಾನುವಾರ (ಸೆ.21) ನಡೆದಿದೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಮೂರು ಪುಟಗಳು ಆನ್‌ಲೈನ್‌ನಲ್ಲಿ ಹರಿದಾಡಿವೆ ಎಂದು ವರದಿಯಾಗಿದೆ. ಆ ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳು ಕೇಳಿಬಂದಿವೆ.

ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ನೂರಾರು ಮಂದಿ ಭಾನುವಾರದಿಂದಲೇ ಡೆಹ್ರಾಡೂನ್‌ನ ಪರೇಡ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲಿಗೆ ರಾಜ್ಯದ ಎಲ್ಲಾ ಭಾಗಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸುವಂತೆ ‘ಉತ್ತರಾಖಂಡ್ ಬೆರೋಝ್‌ಗರ್ ಸಂಘಟನ್’ ಮತ್ತು ಇತರ ಗುಂಪುಗಳು ಜನರಿಗೆ ಕರೆ ನೀಡಿದ್ದವು.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಲಿದ್ ಮಲಿಕ್ ಮತ್ತು ಆತನ ಸಹೋದರಿ ಸಬಿಯಾ ಎಂಬ ಇಬ್ಬರು ವ್ಯಕ್ತಿಗಳನ್ನು ಮಂಗಳವಾರ (ಸೆ.23) ಪೊಲೀಸರು ಬಂಧಿಸಿದ್ದಾರೆ. ಹರಿದ್ವಾರದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಮಲಿಕ್, ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಸಹೋದರಿ ಸಬಿಯಾ ಜೊತೆ ಹಂಚಿಕೊಂಡಿದ್ದ. ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯಲು ಸಬಿಯಾ ಅದನ್ನು ಮಲಿಕ್‌ನ ಸ್ನೇಹಿತ ಸುಮನ್‌ಗೆ ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.

“ಪ್ರಾಧ್ಯಾಪಕ ಸುಮನ್ ಅವರು ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಿದ್ದರು. ಆದರೆ, ಅದನ್ನು ಸಬಿಯಾಗೆ ವಾಪಸ್ ಕಳುಹಿಸಿರಲಿಲ್ಲ. ಬದಲಾಗಿ, ಸ್ಥಳೀಯ ರಾಜಕಾರಣಿ ಬಾಬಿ ಪನ್ವಾರ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಪನ್ವಾರ್ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ” ಎಂದು ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ಹೇಳಿದ್ದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಮಲಿಕ್ ಮತ್ತು ಸಬಿಯಾ ಮಾತ್ರ ಕಾರಣರಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆ ನಡೆದ ಕಾಲೇಜಿನ ಪ್ರಾಂಶುಪಾಲ ಧರ್ಮೇಂದ್ರ ಚೌಹಾನ್ ಆಡಳಿತಾರೂಢ ಬಿಜೆಪಿಯ ಹರಿದ್ವಾರ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದಾರೆ ಎಂದು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಚೌಹಾನ್ ಪ್ರಕಾರ, ಪರೀಕ್ಷೆಯ ಸಮಯದಲ್ಲಿ ಬಳಸಲಾದ 18 ಕೊಠಡಿಗಳಲ್ಲಿ ಕೇವಲ 15 ಕೊಠಡಿಗಳಲ್ಲಿ ಮಾತ್ರ ಮೊಬೈಲ್ ಸಿಗ್ನಲ್‌ಗಳನ್ನು ತಡೆಯಲು ಜಾಮರ್‌ಗಳನ್ನು ಅಳವಡಿಸಲಾಗಿತ್ತು. ಖಾಲಿದ್ ಜಾಮರ್ ಇಲ್ಲದ ಕೊಠಡಿಯಲ್ಲಿ ಇದ್ದರು.

ಧರ್ಮೇಂದ್ರ ಚೌಹಾನ್ ಹೇಳಿಕೆಯ ಪ್ರಕಾರ, ಉತ್ತರಾಖಂಡ ನೇಮಕಾತಿ ಆಯೋಗವು ಪರೀಕ್ಷೆಯ ಸಮಯದಲ್ಲಿ ಕೊಠಡಿಗಳ ಒಳಗಿನ ಸಿಸಿಟಿವಿ ಕ್ಯಾಮರಾಗಳನ್ನು ಆಫ್ ಮಾಡಲು ಸೂಚಿಸಿತ್ತು ಮತ್ತು ಕೇವಲ ಕಾಲೇಜಿನ ಮುಖ್ಯದ್ವಾರ ಹಾಗೂ ನಿಯಂತ್ರಣ ಕೊಠಡಿಯಲ್ಲಿ ಮಾತ್ರ ಕ್ಯಾಮರಾಗಳನ್ನು ಇರಿಸಲಾಗಿತ್ತು. ಇದರಿಂದ ಪರೀಕ್ಷಾ ಕೊಠಡಿಗಳ ಒಳಗಿನ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿರಲಿಲ್ಲ.

ಬುಧವಾರ ಬಿಜೆಪಿಯ ಹೊಸ ಕಾರ್ಯಕರ್ತರೊಂದಿಗೆ ಮಾತನಾಡಿದ ಸಿಎಂ ಧಾಮಿ, “ಕೆಲವು ವ್ಯಕ್ತಿಗಳು ಒಗ್ಗಟ್ಟಾಗಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಷಡ್ಯಂತ್ರ ರೂಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕೋಚಿಂಗ್ ಮತ್ತು ವಂಚನೆ ಮಾಫಿಯಾದಲ್ಲಿ ತೊಡಗಿರುವ ಗುಂಪುಗಳು ಒಟ್ಟಾಗಿ ರಾಜ್ಯದಲ್ಲಿ ‘ನಕಲ್ ಜಿಹಾದ್’ ನಡೆಸುತ್ತಿವೆ. ಈ ಕೃತ್ಯಗಳ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮಾಫಿಯಾಗಳು ಮತ್ತು ತಪ್ಪಿತಸ್ಥರನ್ನು ಸಂಪೂರ್ಣವಾಗಿ ನಾಶಮಾಡುವವರೆಗೆ ತಾವು ವಿಶ್ರಮಿಸುವುದಿಲ್ಲ ಎಂದು ಧಾಮಿ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಸೂರ್ಯಕಾಂತ್ ಧಸಾಮಾ ಅವರು ಸಿಎಂ ಧಾಮಿ ಹೇಳಿಕೆಯನ್ನು ಖಂಡಿಸಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಬಿಜೆಪಿ ಕೋಮುವಾದವನ್ನು ಒಂದು ಸುಲಭ ಮಾರ್ಗವಾಗಿ ಬಳಸುತ್ತಿದೆ ಎಂದಿದ್ದಾರೆ.

ಪರೀಕ್ಷೆಗೆ ಒಂದು ದಿನ ಮೊದಲು ವಂಚಕ ಎನ್ನಲಾದ ಹಕಮ್ ಸಿಂಗ್‌ನನ್ನು ಬೇರೊಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವಾರು ಹೆಸರುಗಳು ಬಹಿರಂಗವಾಗಿವೆ. ಆದರೆ, ಸಿಎಂ ಧಾಮಿ ಇಬ್ಬರು ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಉಲ್ಲೇಖಿಸಿ ಪ್ರಕರಣವನ್ನು ‘ಜಿಹಾದ್’ ಎಂದು ಕರೆದಿದ್ದಾರೆ ಎಂದು ಧಸಾಮಾ ಕಿಡಿಕಾರಿದ್ದಾರೆ.

ಪರೀಕ್ಷೆಯಲ್ಲಿ ಪಾಸ್ ಮಾಡಿಸುವ ಭರವಸೆ ನೀಡಿ ಆರು ಅಭ್ಯರ್ಥಿಗಳಿಂದ 12 ಲಕ್ಷದಿಂದ 15 ಲಕ್ಷ ರೂಪಾಯಿಗಳವರೆಗೆ ಹಣ ವಸೂಲಿ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಪೊಲೀಸರು ಹಕಮ್ ಸಿಂಗ್ ಮತ್ತು ಪಂಕಜ್ ಗೌರ್‌ ಎಂಬವರನ್ನು ಬಂಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

‘ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ’: ಚುನಾವಣಾ ಆಯೋಗದ ಹೊಸ ‘ಇ-ಸೈನ್’ ವೈಶಿಷ್ಟ್ಯ’ಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...