Homeಮುಖಪುಟಉತ್ತರಾಖಂಡ: ಪ್ರಶ್ನೆ ಪತ್ರಿಕೆ ಸೋರಿಕೆ 'ನಕಲ್ ಜಿಹಾದ್' ಎಂದ ಸಿಎಂ ಧಾಮಿ

ಉತ್ತರಾಖಂಡ: ಪ್ರಶ್ನೆ ಪತ್ರಿಕೆ ಸೋರಿಕೆ ‘ನಕಲ್ ಜಿಹಾದ್’ ಎಂದ ಸಿಎಂ ಧಾಮಿ

- Advertisement -
- Advertisement -

ಉತ್ತರಾಖಂಡದಲ್ಲಿ ಸರ್ಕಾರ ಉದ್ಯೋಗ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ಬುಧವಾರ (ಸೆ.24) ಬೃಹತ್ ಪ್ರತಿಭಟನೆ ನಡೆದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಪ್ರಶ್ನೆ ಪತ್ರಿಕೆ ಸೋರಿಕೆ ಒಂದು ‘ನಕಲ್ ಜಿಹಾದ್’ ಅಥವಾ ‘ವಂಚನೆ ಜಿಹಾದ್’ ಕೃತ್ಯ ಎಂದು ಹೇಳಿದ್ದಾರೆ.

‘ಉತ್ತರಾಖಂಡ ಅಧೀನ ಸೇವಾ ಆಯ್ಕೆ ಆಯೋಗ’ದ ಪರೀಕ್ಷೆಯು ಭಾನುವಾರ (ಸೆ.21) ನಡೆದಿದೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಮೂರು ಪುಟಗಳು ಆನ್‌ಲೈನ್‌ನಲ್ಲಿ ಹರಿದಾಡಿವೆ ಎಂದು ವರದಿಯಾಗಿದೆ. ಆ ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳು ಕೇಳಿಬಂದಿವೆ.

ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ನೂರಾರು ಮಂದಿ ಭಾನುವಾರದಿಂದಲೇ ಡೆಹ್ರಾಡೂನ್‌ನ ಪರೇಡ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲಿಗೆ ರಾಜ್ಯದ ಎಲ್ಲಾ ಭಾಗಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸುವಂತೆ ‘ಉತ್ತರಾಖಂಡ್ ಬೆರೋಝ್‌ಗರ್ ಸಂಘಟನ್’ ಮತ್ತು ಇತರ ಗುಂಪುಗಳು ಜನರಿಗೆ ಕರೆ ನೀಡಿದ್ದವು.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಲಿದ್ ಮಲಿಕ್ ಮತ್ತು ಆತನ ಸಹೋದರಿ ಸಬಿಯಾ ಎಂಬ ಇಬ್ಬರು ವ್ಯಕ್ತಿಗಳನ್ನು ಮಂಗಳವಾರ (ಸೆ.23) ಪೊಲೀಸರು ಬಂಧಿಸಿದ್ದಾರೆ. ಹರಿದ್ವಾರದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಮಲಿಕ್, ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಸಹೋದರಿ ಸಬಿಯಾ ಜೊತೆ ಹಂಚಿಕೊಂಡಿದ್ದ. ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯಲು ಸಬಿಯಾ ಅದನ್ನು ಮಲಿಕ್‌ನ ಸ್ನೇಹಿತ ಸುಮನ್‌ಗೆ ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.

“ಪ್ರಾಧ್ಯಾಪಕ ಸುಮನ್ ಅವರು ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಿದ್ದರು. ಆದರೆ, ಅದನ್ನು ಸಬಿಯಾಗೆ ವಾಪಸ್ ಕಳುಹಿಸಿರಲಿಲ್ಲ. ಬದಲಾಗಿ, ಸ್ಥಳೀಯ ರಾಜಕಾರಣಿ ಬಾಬಿ ಪನ್ವಾರ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಪನ್ವಾರ್ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ” ಎಂದು ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ಹೇಳಿದ್ದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಮಲಿಕ್ ಮತ್ತು ಸಬಿಯಾ ಮಾತ್ರ ಕಾರಣರಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆ ನಡೆದ ಕಾಲೇಜಿನ ಪ್ರಾಂಶುಪಾಲ ಧರ್ಮೇಂದ್ರ ಚೌಹಾನ್ ಆಡಳಿತಾರೂಢ ಬಿಜೆಪಿಯ ಹರಿದ್ವಾರ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದಾರೆ ಎಂದು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಚೌಹಾನ್ ಪ್ರಕಾರ, ಪರೀಕ್ಷೆಯ ಸಮಯದಲ್ಲಿ ಬಳಸಲಾದ 18 ಕೊಠಡಿಗಳಲ್ಲಿ ಕೇವಲ 15 ಕೊಠಡಿಗಳಲ್ಲಿ ಮಾತ್ರ ಮೊಬೈಲ್ ಸಿಗ್ನಲ್‌ಗಳನ್ನು ತಡೆಯಲು ಜಾಮರ್‌ಗಳನ್ನು ಅಳವಡಿಸಲಾಗಿತ್ತು. ಖಾಲಿದ್ ಜಾಮರ್ ಇಲ್ಲದ ಕೊಠಡಿಯಲ್ಲಿ ಇದ್ದರು.

ಧರ್ಮೇಂದ್ರ ಚೌಹಾನ್ ಹೇಳಿಕೆಯ ಪ್ರಕಾರ, ಉತ್ತರಾಖಂಡ ನೇಮಕಾತಿ ಆಯೋಗವು ಪರೀಕ್ಷೆಯ ಸಮಯದಲ್ಲಿ ಕೊಠಡಿಗಳ ಒಳಗಿನ ಸಿಸಿಟಿವಿ ಕ್ಯಾಮರಾಗಳನ್ನು ಆಫ್ ಮಾಡಲು ಸೂಚಿಸಿತ್ತು ಮತ್ತು ಕೇವಲ ಕಾಲೇಜಿನ ಮುಖ್ಯದ್ವಾರ ಹಾಗೂ ನಿಯಂತ್ರಣ ಕೊಠಡಿಯಲ್ಲಿ ಮಾತ್ರ ಕ್ಯಾಮರಾಗಳನ್ನು ಇರಿಸಲಾಗಿತ್ತು. ಇದರಿಂದ ಪರೀಕ್ಷಾ ಕೊಠಡಿಗಳ ಒಳಗಿನ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿರಲಿಲ್ಲ.

ಬುಧವಾರ ಬಿಜೆಪಿಯ ಹೊಸ ಕಾರ್ಯಕರ್ತರೊಂದಿಗೆ ಮಾತನಾಡಿದ ಸಿಎಂ ಧಾಮಿ, “ಕೆಲವು ವ್ಯಕ್ತಿಗಳು ಒಗ್ಗಟ್ಟಾಗಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಷಡ್ಯಂತ್ರ ರೂಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕೋಚಿಂಗ್ ಮತ್ತು ವಂಚನೆ ಮಾಫಿಯಾದಲ್ಲಿ ತೊಡಗಿರುವ ಗುಂಪುಗಳು ಒಟ್ಟಾಗಿ ರಾಜ್ಯದಲ್ಲಿ ‘ನಕಲ್ ಜಿಹಾದ್’ ನಡೆಸುತ್ತಿವೆ. ಈ ಕೃತ್ಯಗಳ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮಾಫಿಯಾಗಳು ಮತ್ತು ತಪ್ಪಿತಸ್ಥರನ್ನು ಸಂಪೂರ್ಣವಾಗಿ ನಾಶಮಾಡುವವರೆಗೆ ತಾವು ವಿಶ್ರಮಿಸುವುದಿಲ್ಲ ಎಂದು ಧಾಮಿ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಸೂರ್ಯಕಾಂತ್ ಧಸಾಮಾ ಅವರು ಸಿಎಂ ಧಾಮಿ ಹೇಳಿಕೆಯನ್ನು ಖಂಡಿಸಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಬಿಜೆಪಿ ಕೋಮುವಾದವನ್ನು ಒಂದು ಸುಲಭ ಮಾರ್ಗವಾಗಿ ಬಳಸುತ್ತಿದೆ ಎಂದಿದ್ದಾರೆ.

ಪರೀಕ್ಷೆಗೆ ಒಂದು ದಿನ ಮೊದಲು ವಂಚಕ ಎನ್ನಲಾದ ಹಕಮ್ ಸಿಂಗ್‌ನನ್ನು ಬೇರೊಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವಾರು ಹೆಸರುಗಳು ಬಹಿರಂಗವಾಗಿವೆ. ಆದರೆ, ಸಿಎಂ ಧಾಮಿ ಇಬ್ಬರು ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಉಲ್ಲೇಖಿಸಿ ಪ್ರಕರಣವನ್ನು ‘ಜಿಹಾದ್’ ಎಂದು ಕರೆದಿದ್ದಾರೆ ಎಂದು ಧಸಾಮಾ ಕಿಡಿಕಾರಿದ್ದಾರೆ.

ಪರೀಕ್ಷೆಯಲ್ಲಿ ಪಾಸ್ ಮಾಡಿಸುವ ಭರವಸೆ ನೀಡಿ ಆರು ಅಭ್ಯರ್ಥಿಗಳಿಂದ 12 ಲಕ್ಷದಿಂದ 15 ಲಕ್ಷ ರೂಪಾಯಿಗಳವರೆಗೆ ಹಣ ವಸೂಲಿ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಪೊಲೀಸರು ಹಕಮ್ ಸಿಂಗ್ ಮತ್ತು ಪಂಕಜ್ ಗೌರ್‌ ಎಂಬವರನ್ನು ಬಂಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

‘ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ’: ಚುನಾವಣಾ ಆಯೋಗದ ಹೊಸ ‘ಇ-ಸೈನ್’ ವೈಶಿಷ್ಟ್ಯ’ಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...