Homeಮುಖಪುಟಉತ್ತರಾಖಂಡ: ಪ್ರಶ್ನೆ ಪತ್ರಿಕೆ ಸೋರಿಕೆ 'ನಕಲ್ ಜಿಹಾದ್' ಎಂದ ಸಿಎಂ ಧಾಮಿ

ಉತ್ತರಾಖಂಡ: ಪ್ರಶ್ನೆ ಪತ್ರಿಕೆ ಸೋರಿಕೆ ‘ನಕಲ್ ಜಿಹಾದ್’ ಎಂದ ಸಿಎಂ ಧಾಮಿ

- Advertisement -
- Advertisement -

ಉತ್ತರಾಖಂಡದಲ್ಲಿ ಸರ್ಕಾರ ಉದ್ಯೋಗ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ಬುಧವಾರ (ಸೆ.24) ಬೃಹತ್ ಪ್ರತಿಭಟನೆ ನಡೆದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಪ್ರಶ್ನೆ ಪತ್ರಿಕೆ ಸೋರಿಕೆ ಒಂದು ‘ನಕಲ್ ಜಿಹಾದ್’ ಅಥವಾ ‘ವಂಚನೆ ಜಿಹಾದ್’ ಕೃತ್ಯ ಎಂದು ಹೇಳಿದ್ದಾರೆ.

‘ಉತ್ತರಾಖಂಡ ಅಧೀನ ಸೇವಾ ಆಯ್ಕೆ ಆಯೋಗ’ದ ಪರೀಕ್ಷೆಯು ಭಾನುವಾರ (ಸೆ.21) ನಡೆದಿದೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಮೂರು ಪುಟಗಳು ಆನ್‌ಲೈನ್‌ನಲ್ಲಿ ಹರಿದಾಡಿವೆ ಎಂದು ವರದಿಯಾಗಿದೆ. ಆ ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳು ಕೇಳಿಬಂದಿವೆ.

ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ನೂರಾರು ಮಂದಿ ಭಾನುವಾರದಿಂದಲೇ ಡೆಹ್ರಾಡೂನ್‌ನ ಪರೇಡ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲಿಗೆ ರಾಜ್ಯದ ಎಲ್ಲಾ ಭಾಗಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸುವಂತೆ ‘ಉತ್ತರಾಖಂಡ್ ಬೆರೋಝ್‌ಗರ್ ಸಂಘಟನ್’ ಮತ್ತು ಇತರ ಗುಂಪುಗಳು ಜನರಿಗೆ ಕರೆ ನೀಡಿದ್ದವು.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಲಿದ್ ಮಲಿಕ್ ಮತ್ತು ಆತನ ಸಹೋದರಿ ಸಬಿಯಾ ಎಂಬ ಇಬ್ಬರು ವ್ಯಕ್ತಿಗಳನ್ನು ಮಂಗಳವಾರ (ಸೆ.23) ಪೊಲೀಸರು ಬಂಧಿಸಿದ್ದಾರೆ. ಹರಿದ್ವಾರದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಮಲಿಕ್, ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಸಹೋದರಿ ಸಬಿಯಾ ಜೊತೆ ಹಂಚಿಕೊಂಡಿದ್ದ. ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯಲು ಸಬಿಯಾ ಅದನ್ನು ಮಲಿಕ್‌ನ ಸ್ನೇಹಿತ ಸುಮನ್‌ಗೆ ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.

“ಪ್ರಾಧ್ಯಾಪಕ ಸುಮನ್ ಅವರು ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಿದ್ದರು. ಆದರೆ, ಅದನ್ನು ಸಬಿಯಾಗೆ ವಾಪಸ್ ಕಳುಹಿಸಿರಲಿಲ್ಲ. ಬದಲಾಗಿ, ಸ್ಥಳೀಯ ರಾಜಕಾರಣಿ ಬಾಬಿ ಪನ್ವಾರ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಪನ್ವಾರ್ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ” ಎಂದು ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ಹೇಳಿದ್ದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಮಲಿಕ್ ಮತ್ತು ಸಬಿಯಾ ಮಾತ್ರ ಕಾರಣರಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆ ನಡೆದ ಕಾಲೇಜಿನ ಪ್ರಾಂಶುಪಾಲ ಧರ್ಮೇಂದ್ರ ಚೌಹಾನ್ ಆಡಳಿತಾರೂಢ ಬಿಜೆಪಿಯ ಹರಿದ್ವಾರ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದಾರೆ ಎಂದು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಚೌಹಾನ್ ಪ್ರಕಾರ, ಪರೀಕ್ಷೆಯ ಸಮಯದಲ್ಲಿ ಬಳಸಲಾದ 18 ಕೊಠಡಿಗಳಲ್ಲಿ ಕೇವಲ 15 ಕೊಠಡಿಗಳಲ್ಲಿ ಮಾತ್ರ ಮೊಬೈಲ್ ಸಿಗ್ನಲ್‌ಗಳನ್ನು ತಡೆಯಲು ಜಾಮರ್‌ಗಳನ್ನು ಅಳವಡಿಸಲಾಗಿತ್ತು. ಖಾಲಿದ್ ಜಾಮರ್ ಇಲ್ಲದ ಕೊಠಡಿಯಲ್ಲಿ ಇದ್ದರು.

ಧರ್ಮೇಂದ್ರ ಚೌಹಾನ್ ಹೇಳಿಕೆಯ ಪ್ರಕಾರ, ಉತ್ತರಾಖಂಡ ನೇಮಕಾತಿ ಆಯೋಗವು ಪರೀಕ್ಷೆಯ ಸಮಯದಲ್ಲಿ ಕೊಠಡಿಗಳ ಒಳಗಿನ ಸಿಸಿಟಿವಿ ಕ್ಯಾಮರಾಗಳನ್ನು ಆಫ್ ಮಾಡಲು ಸೂಚಿಸಿತ್ತು ಮತ್ತು ಕೇವಲ ಕಾಲೇಜಿನ ಮುಖ್ಯದ್ವಾರ ಹಾಗೂ ನಿಯಂತ್ರಣ ಕೊಠಡಿಯಲ್ಲಿ ಮಾತ್ರ ಕ್ಯಾಮರಾಗಳನ್ನು ಇರಿಸಲಾಗಿತ್ತು. ಇದರಿಂದ ಪರೀಕ್ಷಾ ಕೊಠಡಿಗಳ ಒಳಗಿನ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿರಲಿಲ್ಲ.

ಬುಧವಾರ ಬಿಜೆಪಿಯ ಹೊಸ ಕಾರ್ಯಕರ್ತರೊಂದಿಗೆ ಮಾತನಾಡಿದ ಸಿಎಂ ಧಾಮಿ, “ಕೆಲವು ವ್ಯಕ್ತಿಗಳು ಒಗ್ಗಟ್ಟಾಗಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಷಡ್ಯಂತ್ರ ರೂಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕೋಚಿಂಗ್ ಮತ್ತು ವಂಚನೆ ಮಾಫಿಯಾದಲ್ಲಿ ತೊಡಗಿರುವ ಗುಂಪುಗಳು ಒಟ್ಟಾಗಿ ರಾಜ್ಯದಲ್ಲಿ ‘ನಕಲ್ ಜಿಹಾದ್’ ನಡೆಸುತ್ತಿವೆ. ಈ ಕೃತ್ಯಗಳ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮಾಫಿಯಾಗಳು ಮತ್ತು ತಪ್ಪಿತಸ್ಥರನ್ನು ಸಂಪೂರ್ಣವಾಗಿ ನಾಶಮಾಡುವವರೆಗೆ ತಾವು ವಿಶ್ರಮಿಸುವುದಿಲ್ಲ ಎಂದು ಧಾಮಿ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಸೂರ್ಯಕಾಂತ್ ಧಸಾಮಾ ಅವರು ಸಿಎಂ ಧಾಮಿ ಹೇಳಿಕೆಯನ್ನು ಖಂಡಿಸಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಬಿಜೆಪಿ ಕೋಮುವಾದವನ್ನು ಒಂದು ಸುಲಭ ಮಾರ್ಗವಾಗಿ ಬಳಸುತ್ತಿದೆ ಎಂದಿದ್ದಾರೆ.

ಪರೀಕ್ಷೆಗೆ ಒಂದು ದಿನ ಮೊದಲು ವಂಚಕ ಎನ್ನಲಾದ ಹಕಮ್ ಸಿಂಗ್‌ನನ್ನು ಬೇರೊಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವಾರು ಹೆಸರುಗಳು ಬಹಿರಂಗವಾಗಿವೆ. ಆದರೆ, ಸಿಎಂ ಧಾಮಿ ಇಬ್ಬರು ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಉಲ್ಲೇಖಿಸಿ ಪ್ರಕರಣವನ್ನು ‘ಜಿಹಾದ್’ ಎಂದು ಕರೆದಿದ್ದಾರೆ ಎಂದು ಧಸಾಮಾ ಕಿಡಿಕಾರಿದ್ದಾರೆ.

ಪರೀಕ್ಷೆಯಲ್ಲಿ ಪಾಸ್ ಮಾಡಿಸುವ ಭರವಸೆ ನೀಡಿ ಆರು ಅಭ್ಯರ್ಥಿಗಳಿಂದ 12 ಲಕ್ಷದಿಂದ 15 ಲಕ್ಷ ರೂಪಾಯಿಗಳವರೆಗೆ ಹಣ ವಸೂಲಿ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಪೊಲೀಸರು ಹಕಮ್ ಸಿಂಗ್ ಮತ್ತು ಪಂಕಜ್ ಗೌರ್‌ ಎಂಬವರನ್ನು ಬಂಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

‘ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ’: ಚುನಾವಣಾ ಆಯೋಗದ ಹೊಸ ‘ಇ-ಸೈನ್’ ವೈಶಿಷ್ಟ್ಯ’ಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...