Homeಮುಖಪುಟಅಧಿಕಾರ ವಹಿಸಿದ ಕೆಲವೇ ತಿಂಗಳಲ್ಲಿ ರಾಜೀನಾಮೆಗೆ ಮುಂದಾದ ಉತ್ತರಾಖಂಡ ಸಿಎಂ!

ಅಧಿಕಾರ ವಹಿಸಿದ ಕೆಲವೇ ತಿಂಗಳಲ್ಲಿ ರಾಜೀನಾಮೆಗೆ ಮುಂದಾದ ಉತ್ತರಾಖಂಡ ಸಿಎಂ!

- Advertisement -
- Advertisement -

ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್ ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆರು ತಿಂಗಳೊಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇಂದು ಸಂಜೆ ಅವರು ರಾಜ್ಯದ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ್ದಾರೆ.

ತಿರಥ್‌‌ ರಾವತ್ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿದ್ದು, ಬಿಜೆಪಿ ನಾಯಕರೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದಾರೆ. ಇಂದು ಮಧ್ಯಾಹ್ನ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಭೇಟಿಯ ನಂತರ ಅವರು ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರೊಂದಿಗೆ ಭೇಟಿಗೆ ಸಮಯ ಕೇಳಿದ್ದಾರೆ.

ಈ ಹಿಂದಿನ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ಅವರ ತೀವ್ರ ಭಿನ್ನಾಭಿಪ್ರಾಯದ ನಡುವೆಯೆ ತಿರಥ್‌‌ ಸಿಂಗ್‌ ರಾವತ್ ಉತ್ತರಾಖಂಡ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್ ರಾವತ್

ಪ್ರಸ್ತುತ ಲೋಕಸಭಾ ಸದಸ್ಯರಾಗಿರುವ ತಿರಥ್‌ ಅವರು ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಬೇಕಾದರೆ, ಸೆಪ್ಟೆಂಬರ್ 10 ರೊಳಗೆ ವಿಧಾನಸಭಾ ಸ್ಥಾನವನ್ನು ಗೆದ್ದು ಉತ್ತರಾಖಂಡದ ಶಾಸಕರಾಗಬೇಕಿದೆ.

ಎರಡನೆ ಅಲೆಯ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಐದು ರಾಜ್ಯಗಳ ಚುನಾವಣೆ ನಡೆಸಿದ್ದ ಚುನಾವಣಾ ಆಯೋಗದ ವಿರುದ್ದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಆದ್ದರಿಂದ, ಇದೀಗ ಉಪ ಚುನಾವಣೆಗಳನ್ನು ಘೋಷಿಸಲು ಚುನಾವಣಾ ಆಯೋಗವು ನಿರಾಸಕ್ತಿ ತೋರುತ್ತಿದೆ ಎನ್ನಲಾಗಿದೆ.

ಚುನಾವಣಾ ಆಯೋಗವು ಚುನಾವಣೆಯ ಕುರಿತು ವಿವಿಧ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ಚುನಾವಣಾ ಆಯೋಗದ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. “ಕೊರೊನಾ ಪರಿಸ್ಥಿತಿಯು ಒಂದು ಪ್ರಮುಖವಾದ ಪರಿಗಣನೆಯಾಗಿದ್ದು, ಅನೇಕ ಉಪಚುನಾವಣೆಗಳು ಬಾಕಿ ಉಳಿದಿವೆ” ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

ತಿರಥ್‌‌ ರಾವತ್ ಅವರ ಪತ್ರಿಕಾ ಹೇಳಿಕೆಗಳು ಸದಾ ವಿವಾದಗಳಿಂದ ಕೂಡಿದ್ದು, ಬಿಜೆಪಿಯ ಉತ್ತರಾಖಂಡದ ನಾಯಕರು ದೆಹಲಿ ನಾಯಕತ್ವಕ್ಕೆ ಅವರ ಕೆಲವು ಹೇಳಿಕೆಗಳ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿರುವ ಬಗ್ಗೆ ದೂರು ನೀಡಿದ್ದರು.

ಅವರು ತಮ್ಮದೆ ಪಕ್ಷದ ಆಡಳಿತವು ತೆಗೆದುಕೊಂಡಿದ್ದ ನೀತಿ ನಿರ್ಧಾರಗಳನ್ನು ಟೀಕಿಸುವ ಮೂಲಕ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದ್ದರು.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ, ತಿರಥ್‌‌ ಸೀಳಿರುವ ಜೀನ್ಸ್ ಧರಿಸಿದ ಮಹಿಳೆಯರ ಬಗ್ಗೆ ಅವಮಾನಕರವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದರು. ಜೊತೆಗೆ 200 ವರ್ಷಗಳ ಕಾಲ ಭಾರತವನ್ನು ಆಳಿದ್ದು ಬ್ರಿಟನ್ ಅಲ್ಲ, ಅಮೆರಿಕ ಎಂದೂ ಹೇಳಿಕೆ ನೀಡಿದ್ದರು.

ಕೊರೊನಾ ಬಿಕ್ಕಟ್ಟು ಉತ್ತುಂಗದಲ್ಲಿದ್ದಾಗ ಕುಂಭಮೇಳವನ್ನು ಅವರು ನಿಭಾಯಿಸಿದ್ದು ಮತ್ತು ಕೊರೊನಾಗೆ ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿಲ್ಲ ಎಂಬ ಅವರ ಅಭಿಪ್ರಾಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ತಬ್ಲಿಗಿ ಮರ್ಕಜ್ ಮತ್ತು ಕುಂಭಮೇಳಕ್ಕೂ ಹೋಲಿಕೆ ಸರಿಯಲ್ಲ: ಉತ್ತರಖಂಡ ಸಿಎಂ

ಇದನ್ನೂ ಓದಿ: 1.84 ಲಕ್ಷ ಕೋವಿಡ್ ಪ್ರಕರಣಗಳು ವರದಿ: ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...