Homeಮುಖಪುಟಉತ್ತರಾಖಂಡ | ಕೋಮುಗಲಭೆಗೆ ತಿರುಗಿದ ಪಾರ್ಕಿಂಗ್ ಜಗಳ!

ಉತ್ತರಾಖಂಡ | ಕೋಮುಗಲಭೆಗೆ ತಿರುಗಿದ ಪಾರ್ಕಿಂಗ್ ಜಗಳ!

- Advertisement -
- Advertisement -

ಮಂಗಳವಾರ ಉತ್ತರಾಖಂಡದ ಚಮೋಲಿ ಜಿಲ್ಲೆಯ ಗೌಚಾರ್ ಮಾರುಕಟ್ಟೆಯಲ್ಲಿ ವಿವಿಧ ಸಮುದಾಯಗಳ ಇಬ್ಬರು ಯುವಕರ ನಡುವೆ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಪ್ರಾರಂಭವಾದ ವಾಗ್ವಾದವು ಕೋಮು ಹಿಂಸಾಚಾರಕ್ಕೆ ತಿರುಗಿದೆ. ಹಿಂಸಾಚಾರದಲ್ಲಿ ಅಂಗಡಿಗಳನ್ನು ಧ್ವಂಸಗೊಳಿಸಿ, ಸೂಚನಾ ಫಲಕಗಳನ್ನು ಹಾನಿಗೊಳಿಸಲಾಗಿದೆ ಎಂದು ವರದಿಯಾಗಿದೆ. ನಾಗರಿಕರಿಗೆ ಶಾಂತ ರೀತಿಯಲ್ಲಿ ವರ್ತಿಸುವಂತೆ ಪೊಲೀಸರು ಹೇಳಿಕೊಂಡಿದ್ದರೂ, ಆ ಪ್ರದೇಶದಲ್ಲಿ ನಿಯೋಜನೆಯನ್ನು ಹೆಚ್ಚಿಸಲಾಗಿದೆ ಎಂದು ವರದಿ ಹೇಳಿದೆ. ಉತ್ತರಾಖಂಡ

“ಕರ್ಣಪ್ರಯಾಗ ಪೊಲೀಸ್ ಠಾಣಾ ವ್ಯಾಪ್ತಿಯ ಗೌಚಾರ್‌ನಲ್ಲಿರುವ ಅಂಗಡಿಯೊಂದರ ಮುಂದೆ ಸ್ಕೂಟರ್ ನಿಲ್ಲಿಸುವ ವಿವಾದದ ನಂತರ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಚಿಕಿತ್ಸೆಗಾಗಿ ಎರಡೂ ಕಡೆಯವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸ್ಥಳೀಯ ಹಿಂದೂ ವ್ಯಕ್ತಿಯೊರೊಬ್ಬರು ಮುಸ್ಲಿಂ ಅಂಗಡಿ ಮಾಲೀಕರ ಮುಂದೆ ಸ್ಕೂಟರ್ ನಿಲ್ಲಿಸುತ್ತಿದ್ದಾಗ ಮಂಗಳವಾರ ಬೆಳಗ್ಗೆ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಂಗಡಿ ಮಾಲೀಕರು ವಾಹನವನ್ನು ನಿಲ್ಲಿಸದಂತೆ ವ್ಯಕ್ತಿಯನ್ನು ಕೇಳಿದಾಗ ವಾಗ್ವಾದ ಪ್ರಾರಂಭವಾಯಿತು. ಈ ವೇಳೆ ಹಿಂದೂ ವ್ಯಕ್ತಿಯನ್ನು ಥಳಿಸಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್ ಹೇಳಿದ್ದಾರೆ.

“ಹಲ್ಲೆಗೊಳಗಾದ ವ್ಯಕ್ತಿ ಪೊಲೀಸರ ಮೊರೆ ಹೋಗಿದ್ದು, ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಆದಾಗ್ಯೂ, ಕೆಲವು ಸಂಘಟನೆಗಳ ಸದಸ್ಯರು ಜಮಾಯಿಸಿ ಪ್ರತಿಭಟನೆ ನಡೆಸಿದರು” ಎಂದು ಪೊಲೀಸ್  ಅಧಿಕಾರಿ ಹೇಳಿದ್ದಾರೆ. ಈ ವೇಳೆ ಗುಂಪು ಗದ್ದಲವನ್ನು ಸೃಷ್ಟಿಸಿದ್ದು, ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಿ ಸೂಚನಾ ಫಲಕಗಳನ್ನು ಹಾನಿಗೊಳಿಸಿದೆ. ಮಧ್ಯಾಹ್ನ 2 ಗಂಟೆಯವರೆಗೂ ಗಲಾಟೆ ನಡೆದಿದ್ದು, ಗಾಯಗೊಂಡ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

“ಜಗಳದ ನಂತರ, ಗೌಚಾರ್ ಔಟ್‌ಪೋಸ್ಟ್‌ನಲ್ಲಿ ಎರಡು ಸಮುದಾಯಗಳ ದೊಡ್ಡ ಗುಂಪು ಜಮಾಯಿಸಿದ್ದು, ಪ್ರದೇಶದಲ್ಲಿ ಉದ್ವಿಗ್ನತೆಗೆ ಸೃಷ್ಟಿಯಾಗಿತ್ತು. ಪೊಲೀಸರು ಎರಡೂ ಗುಂಪುಗಳನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ ಪೊಲೀಸರು ಆರೋಪಿಗಳಾದ ರಿಜ್ವಾನ್, ಸಲ್ಮಾನ್, ಆಸಿಫ್ ಮತ್ತು 70-80 ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 115 (2), 191 (2), ಮತ್ತು 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ” ಎಂದು ಚಮೋಲಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುವ್ಯವಸ್ಥೆ ಕಾಪಾಡಲು ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಕೋಮು ಸೌಹಾರ್ದತೆಯನ್ನು ಎತ್ತಿಹಿಡಿಯಬೇಕು, ಸಂಯಮದಿಂದ ವರ್ತಿಸಬೇಕು ಮತ್ತು ಸಹೋದರತ್ವವನ್ನು ಉತ್ತೇಜಿಸಬೇಕು ಎಂದು ಎಸ್ಪಿ ಪನ್ವಾರ್ ನಾಗರಿಕರನ್ನು ಒತ್ತಾಯಿಸಿದ್ದಾರೆ. ಹೆಚ್ಚುವರಿಯಾಗಿ, ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ಅನ್ನು ಗೌಚಾರ್‌ನಾದ್ಯಂತ ವಿಧಿಸಲಾಗಿದ್ದು, ಇದು ಶಾಂತಿಯನ್ನು ಕಾಪಾಡುವುದು ಮತ್ತು ಕಾನೂನುಬಾಹಿರ ಸಭೆಗಳನ್ನು ತಡೆಯುತ್ತದೆ.

ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದು, ವದಂತಿಗಳನ್ನು ಹಬ್ಬಿಸದಂತೆ ಅಥವಾ ಅಶಾಂತಿಯನ್ನು ಹುಟ್ಟುಹಾಕಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಪ್ರಸ್ತುತ, ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ, ಅಶಾಂತಿಯನ್ನು ಪ್ರಚೋದಿಸುವ ಮತ್ತು ಕೆಲವು ಸಮುದಾಯಗಳ ನಂಬಿಕೆಗಳ ಮೇಲೆ ದಾಳಿ ಮಾಡುವ ಉದ್ದೇಶದಿಂದ ಸಂದೇಶಗಳನ್ನು ಹರಡುತ್ತಿದ್ದಾರೆ. ಇದರಿಂದ ಜನ ಸಾಮಾನ್ಯರಲ್ಲಿ ಅಭದ್ರತೆ, ಭಯದ ವಾತಾವರಣ ಬೆಳೆಯುತ್ತಿದೆ. ಸಮಾಜದೊಳಗೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ತಮ್ಮ ಅಮೂಲ್ಯವಾದ ಬೆಂಬಲವನ್ನು ನೀಡುವಂತೆ ಚಮೋಲಿ ಪೊಲೀಸರು ಎಲ್ಲಾ ನಾಗರಿಕರನ್ನು ಕೋರುತ್ತಾರೆ ” ಎಂದು ಚಮೋಲಿ ಪೊಲೀಸರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಉತ್ತರಾಖಂಡ

ಇದನ್ನೂ ಓದಿ: ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...