Homeಮುಖಪುಟಉತ್ತರಾಖಂಡ | ಕೋಮುಗಲಭೆಗೆ ತಿರುಗಿದ ಪಾರ್ಕಿಂಗ್ ಜಗಳ!

ಉತ್ತರಾಖಂಡ | ಕೋಮುಗಲಭೆಗೆ ತಿರುಗಿದ ಪಾರ್ಕಿಂಗ್ ಜಗಳ!

- Advertisement -
- Advertisement -

ಮಂಗಳವಾರ ಉತ್ತರಾಖಂಡದ ಚಮೋಲಿ ಜಿಲ್ಲೆಯ ಗೌಚಾರ್ ಮಾರುಕಟ್ಟೆಯಲ್ಲಿ ವಿವಿಧ ಸಮುದಾಯಗಳ ಇಬ್ಬರು ಯುವಕರ ನಡುವೆ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಪ್ರಾರಂಭವಾದ ವಾಗ್ವಾದವು ಕೋಮು ಹಿಂಸಾಚಾರಕ್ಕೆ ತಿರುಗಿದೆ. ಹಿಂಸಾಚಾರದಲ್ಲಿ ಅಂಗಡಿಗಳನ್ನು ಧ್ವಂಸಗೊಳಿಸಿ, ಸೂಚನಾ ಫಲಕಗಳನ್ನು ಹಾನಿಗೊಳಿಸಲಾಗಿದೆ ಎಂದು ವರದಿಯಾಗಿದೆ. ನಾಗರಿಕರಿಗೆ ಶಾಂತ ರೀತಿಯಲ್ಲಿ ವರ್ತಿಸುವಂತೆ ಪೊಲೀಸರು ಹೇಳಿಕೊಂಡಿದ್ದರೂ, ಆ ಪ್ರದೇಶದಲ್ಲಿ ನಿಯೋಜನೆಯನ್ನು ಹೆಚ್ಚಿಸಲಾಗಿದೆ ಎಂದು ವರದಿ ಹೇಳಿದೆ. ಉತ್ತರಾಖಂಡ

“ಕರ್ಣಪ್ರಯಾಗ ಪೊಲೀಸ್ ಠಾಣಾ ವ್ಯಾಪ್ತಿಯ ಗೌಚಾರ್‌ನಲ್ಲಿರುವ ಅಂಗಡಿಯೊಂದರ ಮುಂದೆ ಸ್ಕೂಟರ್ ನಿಲ್ಲಿಸುವ ವಿವಾದದ ನಂತರ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಚಿಕಿತ್ಸೆಗಾಗಿ ಎರಡೂ ಕಡೆಯವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸ್ಥಳೀಯ ಹಿಂದೂ ವ್ಯಕ್ತಿಯೊರೊಬ್ಬರು ಮುಸ್ಲಿಂ ಅಂಗಡಿ ಮಾಲೀಕರ ಮುಂದೆ ಸ್ಕೂಟರ್ ನಿಲ್ಲಿಸುತ್ತಿದ್ದಾಗ ಮಂಗಳವಾರ ಬೆಳಗ್ಗೆ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಂಗಡಿ ಮಾಲೀಕರು ವಾಹನವನ್ನು ನಿಲ್ಲಿಸದಂತೆ ವ್ಯಕ್ತಿಯನ್ನು ಕೇಳಿದಾಗ ವಾಗ್ವಾದ ಪ್ರಾರಂಭವಾಯಿತು. ಈ ವೇಳೆ ಹಿಂದೂ ವ್ಯಕ್ತಿಯನ್ನು ಥಳಿಸಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್ ಹೇಳಿದ್ದಾರೆ.

“ಹಲ್ಲೆಗೊಳಗಾದ ವ್ಯಕ್ತಿ ಪೊಲೀಸರ ಮೊರೆ ಹೋಗಿದ್ದು, ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಆದಾಗ್ಯೂ, ಕೆಲವು ಸಂಘಟನೆಗಳ ಸದಸ್ಯರು ಜಮಾಯಿಸಿ ಪ್ರತಿಭಟನೆ ನಡೆಸಿದರು” ಎಂದು ಪೊಲೀಸ್  ಅಧಿಕಾರಿ ಹೇಳಿದ್ದಾರೆ. ಈ ವೇಳೆ ಗುಂಪು ಗದ್ದಲವನ್ನು ಸೃಷ್ಟಿಸಿದ್ದು, ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಿ ಸೂಚನಾ ಫಲಕಗಳನ್ನು ಹಾನಿಗೊಳಿಸಿದೆ. ಮಧ್ಯಾಹ್ನ 2 ಗಂಟೆಯವರೆಗೂ ಗಲಾಟೆ ನಡೆದಿದ್ದು, ಗಾಯಗೊಂಡ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

“ಜಗಳದ ನಂತರ, ಗೌಚಾರ್ ಔಟ್‌ಪೋಸ್ಟ್‌ನಲ್ಲಿ ಎರಡು ಸಮುದಾಯಗಳ ದೊಡ್ಡ ಗುಂಪು ಜಮಾಯಿಸಿದ್ದು, ಪ್ರದೇಶದಲ್ಲಿ ಉದ್ವಿಗ್ನತೆಗೆ ಸೃಷ್ಟಿಯಾಗಿತ್ತು. ಪೊಲೀಸರು ಎರಡೂ ಗುಂಪುಗಳನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ ಪೊಲೀಸರು ಆರೋಪಿಗಳಾದ ರಿಜ್ವಾನ್, ಸಲ್ಮಾನ್, ಆಸಿಫ್ ಮತ್ತು 70-80 ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 115 (2), 191 (2), ಮತ್ತು 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ” ಎಂದು ಚಮೋಲಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುವ್ಯವಸ್ಥೆ ಕಾಪಾಡಲು ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಕೋಮು ಸೌಹಾರ್ದತೆಯನ್ನು ಎತ್ತಿಹಿಡಿಯಬೇಕು, ಸಂಯಮದಿಂದ ವರ್ತಿಸಬೇಕು ಮತ್ತು ಸಹೋದರತ್ವವನ್ನು ಉತ್ತೇಜಿಸಬೇಕು ಎಂದು ಎಸ್ಪಿ ಪನ್ವಾರ್ ನಾಗರಿಕರನ್ನು ಒತ್ತಾಯಿಸಿದ್ದಾರೆ. ಹೆಚ್ಚುವರಿಯಾಗಿ, ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ಅನ್ನು ಗೌಚಾರ್‌ನಾದ್ಯಂತ ವಿಧಿಸಲಾಗಿದ್ದು, ಇದು ಶಾಂತಿಯನ್ನು ಕಾಪಾಡುವುದು ಮತ್ತು ಕಾನೂನುಬಾಹಿರ ಸಭೆಗಳನ್ನು ತಡೆಯುತ್ತದೆ.

ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದು, ವದಂತಿಗಳನ್ನು ಹಬ್ಬಿಸದಂತೆ ಅಥವಾ ಅಶಾಂತಿಯನ್ನು ಹುಟ್ಟುಹಾಕಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಪ್ರಸ್ತುತ, ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ, ಅಶಾಂತಿಯನ್ನು ಪ್ರಚೋದಿಸುವ ಮತ್ತು ಕೆಲವು ಸಮುದಾಯಗಳ ನಂಬಿಕೆಗಳ ಮೇಲೆ ದಾಳಿ ಮಾಡುವ ಉದ್ದೇಶದಿಂದ ಸಂದೇಶಗಳನ್ನು ಹರಡುತ್ತಿದ್ದಾರೆ. ಇದರಿಂದ ಜನ ಸಾಮಾನ್ಯರಲ್ಲಿ ಅಭದ್ರತೆ, ಭಯದ ವಾತಾವರಣ ಬೆಳೆಯುತ್ತಿದೆ. ಸಮಾಜದೊಳಗೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ತಮ್ಮ ಅಮೂಲ್ಯವಾದ ಬೆಂಬಲವನ್ನು ನೀಡುವಂತೆ ಚಮೋಲಿ ಪೊಲೀಸರು ಎಲ್ಲಾ ನಾಗರಿಕರನ್ನು ಕೋರುತ್ತಾರೆ ” ಎಂದು ಚಮೋಲಿ ಪೊಲೀಸರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಉತ್ತರಾಖಂಡ

ಇದನ್ನೂ ಓದಿ: ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...