Homeದಲಿತ್ ಫೈಲ್ಸ್ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

- Advertisement -
- Advertisement -

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು ಆರೋಪಿಸಿದ್ದಾರೆ. ಆದರೆ, ಪೊಲೀಸ್ ಅಧಿಕಾರಿಗಳು ಈ ಪತ್ರಕರ್ತನ ವಾದವನ್ನು ಬಲವಾಗಿ ನಿರಾಕರಿಸಿದ್ದಾರೆ.

ಕೇಶೋವಾಲಾ ಗ್ರಾಮದ ನಿವಾಸಿ ಗೋಲ್ಡಿ ನಿರ್ಭಿಕ್ ಎಂದೂ ಕರೆಯಲ್ಪಡುವ ವಿಮಲ್ ಭಾರ್ತಿ ಅವರು 13 ವರ್ಷಗಳಿಗೂ ಹೆಚ್ಚು ಕಾಲ ಸ್ವತಂತ್ರ ಪತ್ರಕರ್ತರಾಗಿ ಕೆಲಸ ಮಾಡಿದ್ದೇರೆ. ಆಪಾದಿತ ಆಡಳಿತಾತ್ಮಕ ಅಕ್ರಮಗಳ ಬಗ್ಗೆ ಹಲವು ವರದಿ ಮಾಡಿದ್ದೇನೆ ಎಂದು ಹೇಳಿದರು. ಬಾಜ್‌ಪುರ ಪೊಲೀಸ್ ಠಾಣೆಯಲ್ಲಿ ಕೆಲವು ಪೊಲೀಸ್ ಅಧಿಕಾರಿಗಳ ಪುನರಾವರ್ತಿತ ಪೋಸ್ಟ್‌ಗಳನ್ನು ಪ್ರಶ್ನಿಸಿ ನವೆಂಬರ್ 11 ರಂದು ವರದಿ ಪ್ರಕಟಿಸಿದ ನಂತರ ತೊಂದರೆ ಪ್ರಾರಂಭವಾಯಿತು ಎಂದು ಅವರು ವರದಿಗಾರರಿಗೆ ತಿಳಿಸಿದರು.

“ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಬಹುದೆಂಬ ಭಯದಿಂದ ನಾನು ನವೆಂಬರ್ 12 ರಂದು ಭಾರತದ ರಾಷ್ಟ್ರಪತಿ, ಕೇಂದ್ರ ಗೃಹ ಸಚಿವಾಲಯ, ಉತ್ತರಾಖಂಡ ಸಿಎಂ, ರಾಜ್ಯಪಾಲರು ಮತ್ತು ಡಿಜಿಪಿಗೆ ಪತ್ರ ಬರೆದಿದ್ದೆ” ಎಂದು ಹೇಳಿದರು.

ಮರುದಿನವೇ, ಪಿಡಬ್ಲ್ಯೂಡಿ ಸಹಾಯಕ ಎಂಜಿನಿಯರ್ ನೇಹಾ ಶರ್ಮಾ ಮತ್ತು ಜೆಸಿಬಿ ಯಂತ್ರದೊಂದಿಗೆ ಪೊಲೀಸ್ ತಂಡವು ಮನೆಗೆ ಬಂದು ಅತಿಕ್ರಮಣ ಆಗಿದೆ ಎಂದು ಆರೋಪಿಸಿ ಕಟ್ಟಡ ಕೆಡವಿದರು ಎಂದು ಅವರು ಆರೋಪಿಸಿದರು. “ನಾನು ಸಮಯಾವಕಾಶ ಕೇಳಿದೆ, ಆದರೆ ಅವರು ನಿರಾಕರಿಸಿದರು. ನಾನು ನನ್ನ ಫೋನ್‌ನಲ್ಲಿ ಧ್ವಂಸ ಮಾಡುತ್ತಿದ್ದನ್ನು ರೆಕಾರ್ಡ್ ಮಾಡಿದಾಗ, ಪೊಲೀಸರು ಫೋನ್ ಕಸಿದುಕೊಂಡು ಭಯೋತ್ಪಾದಕನಂತೆ ನನ್ನನ್ನು ವಶಕ್ಕೆ ಪಡೆದರು” ಎಂದು ಅವರು ಹೇಳಿಕೊಂಡರು.

ಪಿಡಬ್ಲ್ಯೂಡಿ ಅಧಿಕಾರಿಯ ದೂರಿನ ಆಧಾರದ ಮೇಲೆ ಪೊಲೀಸರು ತಮ್ಮ ವಿರುದ್ಧ ಬಿಎನ್‌ಎಸ್, 2023 ರ ಸೆಕ್ಷನ್ 132, 221 ಮತ್ತು 351(2) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಭಾರ್ತಿ ಹೇಳಿದರು. ಸೆಕ್ಷನ್ 41ಎ ಅಡಿಯಲ್ಲಿ ಯಾವುದೇ ಸೂಚನೆ ನೀಡದೆ ಬಂಧಿಸಿ ನಂತರ ಬನ್ನಖೇರಾ ಔಟ್‌ಪೋಸ್ಟ್ ಲಾಕ್-ಅಪ್‌ಗೆ ಕರೆದೊಯ್ಯಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಬಂಧನದಲ್ಲಿನ ತಮ್ಮ ಅನುಭವದ ಬಗ್ಗೆ ಮಾತನಾಡಿದ ಭಾರ್ತಿ, “ನನ್ನನ್ನು ಥಳಿಸಲಾಯಿತು, ವಿವಸ್ತ್ರಗೊಳಿಸಲಾಯಿತು, ಜಾತಿ ನಿಂದನೆ ಮಾಡಲಾಯಿತು. ಶೂನಿಂದ ನೀರು ಕುಡಿಯುವಂತೆ ಒತ್ತಾಯಿಸಲಾಯಿತು, ನನ್ನ ಮೊಬೈಲ್ ಮತ್ತು ಇಮೇಲ್ ಪಾಸ್‌ವರ್ಡ್‌ಗಳನ್ನು ನೀಡುವಂತೆ ಒತ್ತಾಯಿಸಲಾಯಿತು. ಅವರು ನನ್ನ ವೃತ್ತಿಪರ ಖಾತೆಗಳನ್ನು ಪ್ರವೇಶಿಸಿದರು, ನನ್ನ ಕೆಲಸವನ್ನು ಅಳಿಸಿದರು” ಎಂದು ಆರೋಪಿಸಿದ್ದಾರೆ.

“ಡಿಸೆಂಬರ್ 15 ರಂದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಹಿರಿಯ ರಾಜ್ಯ ಅಧಿಕಾರಿಗಳಿಗೆ ದೂರುಗಳನ್ನು ಸಲ್ಲಿಸಿದರು. ನಂತರ ಡಿಸೆಂಬರ್ 25 ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ” ಎಂದು ಅವರು ಹೇಳಿದರು.

ಜನವರಿ 2026 ರಲ್ಲಿ ನೋಟಿಸ್ ನೀಡಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಹೇಳುತ್ತಾರೆ.

ಆರೋಪಗಳನ್ನು ಬಾಜ್‌ಪುರ ವೃತ್ತ ಅಧಿಕಾರಿ ವಿಭವ್ ಸೈನಿ ಬಲವಾಗಿ ನಿರಾಕರಿಸಿದರು. “ಈ ಹೇಳಿಕೆಗಳು ಪೊಲೀಸರ ಮೇಲೆ ಒತ್ತಡ ಹೇರುವ ಪ್ರಯತ್ನವೆಂದು ತೋರುತ್ತದೆ. ಪಿಡಬ್ಲ್ಯೂಡಿ ಸಹಾಯಕ ಎಂಜಿನಿಯರ್ ಅವರ ಲಿಖಿತ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಅಧಿಕೃತ ಧ್ವಂಸ ಕಾರ್ಯಾಚರಣೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮಾತ್ರ ಪೊಲೀಸರು ಹಾಜರಿದ್ದರು. ಯಾವುದೇ ಹಂತದಲ್ಲೂ ಪೊಲೀಸರು ತಮ್ಮ ಕಾನೂನು ಅಧಿಕಾರವನ್ನು ಮೀರಲಿಲ್ಲ. ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ” ಎಂದು ಅವರು ಹೇಳಿದರು. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ತನಿಖೆಯನ್ನು ಈಗ ಬೇರೆ ಜಿಲ್ಲೆಯ ಅಧಿಕಾರಿಗಳಿಗೆ ವರ್ಗಾಯಿಸಲಾಗಿದೆ ಎಂದು ಸೈನಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...