Homeದಲಿತ್ ಫೈಲ್ಸ್ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ದಲಿತ ಮಹಿಳೆ ಎಂಬ ಕಾರಣಕ್ಕೆ ಅವರನ್ನು ಕೆಲಸದಿಂದ ವಜಾಗೊಳಿಸಿದ್ದು, ದೇಶದಾದ್ಯಂತ ತೀವ್ರ ಆಕ್ರೊಶ ಉಂಟು ಮಾಡಿತ್ತು

- Advertisement -
- Advertisement -
Caste didn't lead to sacking' — Uttarakhand Dalit midday meal cook likely  to get job back

ದಲಿತ ಮಹಿಳೆ ಎಂಬ ಕಾರಣಕ್ಕೆ ಕೆಲಸ ಕಳೆದುಕೊಂಡ ಉತ್ತರಾಖಂಡದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ಸುನಿತಾ ದೇವಿ ಅವರನ್ನು ಮತ್ತೇ ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಅವರು ಈ ಶಾಲೆಯಲ್ಲಿ ಏಳು ದಿನಗಳು ಸೇವೆ ಸಲ್ಲಿಸಿದ್ದರು. ಈ ವೇಳೆ ಶಾಲೆಯ ಮೇಲ್ಜಾತಿ ವಿದ್ಯಾರ್ಥಿಗಳು ಅವರು ತಯಾರಿಸಿದ್ದ ಮಧ್ಯಾಹ್ನದ ಬಿಸಿಯೂಟವನ್ನು ದಲಿತ ಮಹಿಳೆ ಎಂಬ ಕಾರಣಕ್ಕೆ ನಿರಾಕರಿಸಿದ್ದರು. ಇದರ ನಂತರ ಅವರನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

ಮೇಲ್ಜಾತಿ ಮಕ್ಕಳು ದಲಿತ ಮಹಿಳೆ ಸುನಿತಾ ದೇವಿ ತಯಾರಿಸಿದ್ದ ಊಟವನ್ನು ನಿರಾಕರಿಸಿದ ಕಾರಣಕ್ಕೆ ಅವರನ್ನು ‘ಬೋಜನ್‌ ಮಾತಾ’ ಹುದ್ದೆಯಿಂದ ತೆಗೆದುಹಾಕಲಾತ್ತು. ಅವರ ನೇಮಕಾತಿಯನ್ನು ವಿರೋಧಿಸಿ ಮೇಲ್ಜಾತಿಗೆ ಸೇರಿದ ಪೋಷಕರ ವಿಭಾಗವೊಂದು ಅವರ ಜಾತಿಯನ್ನು ಉಲ್ಲೇಖಿಸಿ ಪ್ರತಿಭಟನೆ ಕೂಡಾ ನಡೆಸಿತ್ತು.

ಇದನ್ನೂ ಓದಿ:‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಸುನೀತಾ ದೇವಿ ಅವರು ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಇದಾದ ನಂತರ, ಜಿಲ್ಲಾಡಳಿತವು ಶುಕ್ರವಾರ ಅವರನ್ನು ಮರುಸೇರ್ಪಡೆಗೊಳಿಸುವುದಾಗಿ ಘೋಷಿಸಿದೆ.

“ಸುನೀತಾ ಅವರನ್ನು ಈ ಹಿಂದೆ ಸರಿಯಾದ ಕಾರ್ಯವಿಧಾನದ ಅಡಿಯಲ್ಲಿ ನೇಮಿಸಲಾಗಿಲ್ಲ, ಆದರೆ ಈಗ ಅದು ಸರಿಯಾಗಿದೆ. ಜನವರಿ 16 ರಿಂದ ಶಾಲೆಯು ಪುನರಾರಂಭವಾದಾಗ ಅವರು ಸೇವೆಗೆ ಮರಳುತ್ತಾರೆ” ಎಂದು ಚಂಪಾವತ್ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌ಸಿ ಪುರೋಹಿತ್ ಹೇಳಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯ ಪ್ರೇಮ್ ಸಿಂಗ್ ಅವರ ಪ್ರಕಾರ, “ಸೇವೆಯಲ್ಲಿ ಇದ್ದ ಇಬ್ಬರು ಅಡುಗೆಯವರಲ್ಲಿ ಒಬ್ಬರ ಸ್ಥಾನ ಖಾಲಿಗಿತ್ತು. ಹೀಗಾಗಿ ಶಾಲಾ ವ್ಯವಸ್ಥಾಪಕ ಸಮಿತಿಯು ಆ ಸ್ಥಾನಕ್ಕೆ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ ನೀಡಿತ್ತು. ನಿಯಮಗಳ ಪ್ರಕಾರ ಹುದ್ದೆಗೆ ಅಭ್ಯರ್ಥಿಯ ನೇಮಕಾತಿಯೂ ಸಾಮಾನ್ಯೇತರ ವರ್ಗ ಮತ್ತು ಬಡತನ ರೇಖೆಗಿಂತ ಕೆಳಗಿರುವವರಾಗಬೇಕು.

ಇದನ್ನೂ ಓದಿ:ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ತಾನು ಶಾಲೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ ಹತ್ತು ವರ್ಷಗಳಲ್ಲಿ ಇಲ್ಲಿ ದಲಿತ ಅಡುಗೆಯವರು ಇರಲಿಲ್ಲ ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ. ನಾಲ್ಕು ಸದಸ್ಯರ ಸಮಿತಿಯು ಎಲ್ಲಾ ಅವಶ್ಯಕತೆಗಳನ್ನು ಪೂರೈಸಿ, ನಂತರ ಅರ್ಜಿದಾರರಲ್ಲಿ ಸುನೀತಾ ದೇವಿ ಅವರನ್ನು ಆಯ್ಕೆ ಮಾಡಿದೆ. ಆದರೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ನೇಮಕಾತಿಗೆ ಸಹಿ ಹಾಕಲು ನಿರಾಕರಿಸಿದ್ದರು ಮತ್ತು ಕೆಲವು ಪೋಷಕರು ಅವರನ್ನು ಬೆಂಬಲಿಸಿದ್ದರು. ನಿಯಮದ ಪ್ರಕಾರ, ಹುದ್ದೆಗೆ ದಲಿತರನ್ನು ಆಯ್ಕೆ ಮಾಡದಿದ್ದರೆ, ಎಲ್ಲಾ ಇತರ ಅರ್ಜಿದಾರರಿಂದ NOC ಪಡೆಯಬೇಕಾಗಿದೆ.

ಕೊನೆಗೆ ಸುನಿತಾ ಅವರ ಹೆಸರನ್ನು ಬ್ಲಾಕ್ ಎಜುಕೇಶನ್ ಆಫ್ ಆಫೀಸರ್‌ಗೆ ಅನುಮೋದನೆಗಾಗಿ ಕಳುಹಿಸಲಾಗಿತ್ತು. ಎನ್‌ಒಸಿಗಾಗಿ ಕಾಯಲಾಗಿದ್ದರೂ, ತಕ್ಷಣ ಅಡುಗೆಯವರ ಅಗತ್ಯವಿದ್ದ ಕಾರಣ ಸುನೀತಾ ಅವರನ್ನು ನೇಮಿಸಲಾಯಿತು. ಹೀಗಾಗಿ, ಸುನಿತಾ ಅವರು ಡಿಸೆಂಬರ್ 13 ರಂದು ಸೇವೆಗೆ ಸೇರಿದ್ದರು, ಆದರೆ ಎರಡು-ಮೂರು ದಿನಗಳ ನಂತರ, ಹಲವಾರು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಲು ಪ್ರಾರಂಭಿಸಿದರು. ಸಮಸ್ಯೆ ಮುಂದುವರಿದ ಕಾರಣ, ಡಿಸೆಂಬರ್ 20 ರಿಂದ ಸೇವೆಯನ್ನು ಕೊನೆಗೊಳಿಸುವಂತೆ ಸುನೀತಾ ಅವರನ್ನು ಕೇಳಲಾಯಿತು ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಮಾತನಾಡಿ, “ಈ ಪ್ರದೇಶದಲ್ಲಿ ಮೂರನೇ ಎರಡರಷ್ಟು ಬ್ರಾಹ್ಮಣರಿದ್ದಾರೆ. ಮತ್ತೋರ್ವ ಅಭ್ಯರ್ಥಿ ಪುಷ್ಪಾ ಭಟ್ ಅವರನ್ನು ಪಾಲಕರು ಒಪ್ಪಿಗೆ ಸೂಚಿಸಿದರೂ ಪ್ರಾಂಶುಪಾಲರು ಸುನೀತಾ ಅವರನ್ನು ನೇಮಿಸಿದರು. ಪುಷ್ಪಾ ಅವರು ಬಿಪಿಎಲ್ ಮತ್ತು ಒಂಟಿ ಮಹಿಳೆಯಾಗಿರುವುದರಿಂದ ಈ ಹುದ್ದೆಗೆ ಹೆಚ್ಚಿನ ಹಕ್ಕು ಹೊಂದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಈ ನಡುವೆ ಪ್ರತಿಭಟನಾಕಾರರ ಒತ್ತಡಕ್ಕೆ ಜಿಲ್ಲಾಡಳಿತ ಮಣಿದಿದೆ ಎಂದು ಸುನೀತಾ ದೇವಿ ಆರೋಪಿಸಿದ್ದರು. ಅವರು ಶಾಲೆಯಲ್ಲಿ ಸೇವೆ ನೀಡಬಾರದು ಎಂದು ಪ್ರತಿಪಾದಿಸಿ ಪಾಲಕರು ಸೇರಿದಂತೆ ಸ್ಥಳೀಯರು ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸುನಿತಾ ಅವರು ತಮ್ಮ ಮಕ್ಕಳಿಗೆ ಅಡುಗೆ ಮಾಡುವುದು ತಮಗೆ ಅಗೌರವ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ ಎಂದು ಸುನಿತಾ ಆರೋಪಿಸಿದ್ದಾರೆ. ಹಲವಾರು ಮೇಲ್ಜಾತಿಯ ಮಕ್ಕಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿ, ಇತರರು ಬಹಿಷ್ಕರಿಸುವಂತೆ ಮಾಡಿದ್ದರು ಎಂದು ಸುನಿತಾ ಹೇಳಿದ್ದಾರೆ.

ಈ ನಡುವೆ ಸುನಿತಾ ಅವರನ್ನು ವಜಾಗೊಳಿಸಿದ್ದರಿಂದ ಮೇಲ್ಜಾತಿಯ ಮಹಿಳೆ ಬಿಸಿಯೂಟ ತಯಾರಿಸಲು ಶಾಲೆಗೆ ನೇಮಕಗೊಂಡಿದ್ದರು. ಆದರೆ ಶಾಲೆಯ ದಲಿತ ಮಕ್ಕಳು ಅವರು ತಯಾರಿಸಿದ ಊಟವನ್ನು ಸೇವಿಸದೆ ಪ್ರತಿಭಟಿಸಿದ್ದರು.

ಸುನಿತಾ ಅವರ ದೂರಿನಂತೆ 30 ಮಂದಿಯನ್ನು ಹೆಸರಿಸಿ ಪ್ರಕರಣ ದಾಖಲಿಸಲಾಗಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...