Homeದಲಿತ್ ಫೈಲ್ಸ್ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ದಲಿತ ಮಹಿಳೆ ಎಂಬ ಕಾರಣಕ್ಕೆ ಅವರನ್ನು ಕೆಲಸದಿಂದ ವಜಾಗೊಳಿಸಿದ್ದು, ದೇಶದಾದ್ಯಂತ ತೀವ್ರ ಆಕ್ರೊಶ ಉಂಟು ಮಾಡಿತ್ತು

- Advertisement -
- Advertisement -
Caste didn't lead to sacking' — Uttarakhand Dalit midday meal cook likely  to get job back

ದಲಿತ ಮಹಿಳೆ ಎಂಬ ಕಾರಣಕ್ಕೆ ಕೆಲಸ ಕಳೆದುಕೊಂಡ ಉತ್ತರಾಖಂಡದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ಸುನಿತಾ ದೇವಿ ಅವರನ್ನು ಮತ್ತೇ ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಅವರು ಈ ಶಾಲೆಯಲ್ಲಿ ಏಳು ದಿನಗಳು ಸೇವೆ ಸಲ್ಲಿಸಿದ್ದರು. ಈ ವೇಳೆ ಶಾಲೆಯ ಮೇಲ್ಜಾತಿ ವಿದ್ಯಾರ್ಥಿಗಳು ಅವರು ತಯಾರಿಸಿದ್ದ ಮಧ್ಯಾಹ್ನದ ಬಿಸಿಯೂಟವನ್ನು ದಲಿತ ಮಹಿಳೆ ಎಂಬ ಕಾರಣಕ್ಕೆ ನಿರಾಕರಿಸಿದ್ದರು. ಇದರ ನಂತರ ಅವರನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

ಮೇಲ್ಜಾತಿ ಮಕ್ಕಳು ದಲಿತ ಮಹಿಳೆ ಸುನಿತಾ ದೇವಿ ತಯಾರಿಸಿದ್ದ ಊಟವನ್ನು ನಿರಾಕರಿಸಿದ ಕಾರಣಕ್ಕೆ ಅವರನ್ನು ‘ಬೋಜನ್‌ ಮಾತಾ’ ಹುದ್ದೆಯಿಂದ ತೆಗೆದುಹಾಕಲಾತ್ತು. ಅವರ ನೇಮಕಾತಿಯನ್ನು ವಿರೋಧಿಸಿ ಮೇಲ್ಜಾತಿಗೆ ಸೇರಿದ ಪೋಷಕರ ವಿಭಾಗವೊಂದು ಅವರ ಜಾತಿಯನ್ನು ಉಲ್ಲೇಖಿಸಿ ಪ್ರತಿಭಟನೆ ಕೂಡಾ ನಡೆಸಿತ್ತು.

ಇದನ್ನೂ ಓದಿ:‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಸುನೀತಾ ದೇವಿ ಅವರು ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಇದಾದ ನಂತರ, ಜಿಲ್ಲಾಡಳಿತವು ಶುಕ್ರವಾರ ಅವರನ್ನು ಮರುಸೇರ್ಪಡೆಗೊಳಿಸುವುದಾಗಿ ಘೋಷಿಸಿದೆ.

“ಸುನೀತಾ ಅವರನ್ನು ಈ ಹಿಂದೆ ಸರಿಯಾದ ಕಾರ್ಯವಿಧಾನದ ಅಡಿಯಲ್ಲಿ ನೇಮಿಸಲಾಗಿಲ್ಲ, ಆದರೆ ಈಗ ಅದು ಸರಿಯಾಗಿದೆ. ಜನವರಿ 16 ರಿಂದ ಶಾಲೆಯು ಪುನರಾರಂಭವಾದಾಗ ಅವರು ಸೇವೆಗೆ ಮರಳುತ್ತಾರೆ” ಎಂದು ಚಂಪಾವತ್ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌ಸಿ ಪುರೋಹಿತ್ ಹೇಳಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯ ಪ್ರೇಮ್ ಸಿಂಗ್ ಅವರ ಪ್ರಕಾರ, “ಸೇವೆಯಲ್ಲಿ ಇದ್ದ ಇಬ್ಬರು ಅಡುಗೆಯವರಲ್ಲಿ ಒಬ್ಬರ ಸ್ಥಾನ ಖಾಲಿಗಿತ್ತು. ಹೀಗಾಗಿ ಶಾಲಾ ವ್ಯವಸ್ಥಾಪಕ ಸಮಿತಿಯು ಆ ಸ್ಥಾನಕ್ಕೆ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ ನೀಡಿತ್ತು. ನಿಯಮಗಳ ಪ್ರಕಾರ ಹುದ್ದೆಗೆ ಅಭ್ಯರ್ಥಿಯ ನೇಮಕಾತಿಯೂ ಸಾಮಾನ್ಯೇತರ ವರ್ಗ ಮತ್ತು ಬಡತನ ರೇಖೆಗಿಂತ ಕೆಳಗಿರುವವರಾಗಬೇಕು.

ಇದನ್ನೂ ಓದಿ:ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ತಾನು ಶಾಲೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ ಹತ್ತು ವರ್ಷಗಳಲ್ಲಿ ಇಲ್ಲಿ ದಲಿತ ಅಡುಗೆಯವರು ಇರಲಿಲ್ಲ ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ. ನಾಲ್ಕು ಸದಸ್ಯರ ಸಮಿತಿಯು ಎಲ್ಲಾ ಅವಶ್ಯಕತೆಗಳನ್ನು ಪೂರೈಸಿ, ನಂತರ ಅರ್ಜಿದಾರರಲ್ಲಿ ಸುನೀತಾ ದೇವಿ ಅವರನ್ನು ಆಯ್ಕೆ ಮಾಡಿದೆ. ಆದರೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ನೇಮಕಾತಿಗೆ ಸಹಿ ಹಾಕಲು ನಿರಾಕರಿಸಿದ್ದರು ಮತ್ತು ಕೆಲವು ಪೋಷಕರು ಅವರನ್ನು ಬೆಂಬಲಿಸಿದ್ದರು. ನಿಯಮದ ಪ್ರಕಾರ, ಹುದ್ದೆಗೆ ದಲಿತರನ್ನು ಆಯ್ಕೆ ಮಾಡದಿದ್ದರೆ, ಎಲ್ಲಾ ಇತರ ಅರ್ಜಿದಾರರಿಂದ NOC ಪಡೆಯಬೇಕಾಗಿದೆ.

ಕೊನೆಗೆ ಸುನಿತಾ ಅವರ ಹೆಸರನ್ನು ಬ್ಲಾಕ್ ಎಜುಕೇಶನ್ ಆಫ್ ಆಫೀಸರ್‌ಗೆ ಅನುಮೋದನೆಗಾಗಿ ಕಳುಹಿಸಲಾಗಿತ್ತು. ಎನ್‌ಒಸಿಗಾಗಿ ಕಾಯಲಾಗಿದ್ದರೂ, ತಕ್ಷಣ ಅಡುಗೆಯವರ ಅಗತ್ಯವಿದ್ದ ಕಾರಣ ಸುನೀತಾ ಅವರನ್ನು ನೇಮಿಸಲಾಯಿತು. ಹೀಗಾಗಿ, ಸುನಿತಾ ಅವರು ಡಿಸೆಂಬರ್ 13 ರಂದು ಸೇವೆಗೆ ಸೇರಿದ್ದರು, ಆದರೆ ಎರಡು-ಮೂರು ದಿನಗಳ ನಂತರ, ಹಲವಾರು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಲು ಪ್ರಾರಂಭಿಸಿದರು. ಸಮಸ್ಯೆ ಮುಂದುವರಿದ ಕಾರಣ, ಡಿಸೆಂಬರ್ 20 ರಿಂದ ಸೇವೆಯನ್ನು ಕೊನೆಗೊಳಿಸುವಂತೆ ಸುನೀತಾ ಅವರನ್ನು ಕೇಳಲಾಯಿತು ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಮಾತನಾಡಿ, “ಈ ಪ್ರದೇಶದಲ್ಲಿ ಮೂರನೇ ಎರಡರಷ್ಟು ಬ್ರಾಹ್ಮಣರಿದ್ದಾರೆ. ಮತ್ತೋರ್ವ ಅಭ್ಯರ್ಥಿ ಪುಷ್ಪಾ ಭಟ್ ಅವರನ್ನು ಪಾಲಕರು ಒಪ್ಪಿಗೆ ಸೂಚಿಸಿದರೂ ಪ್ರಾಂಶುಪಾಲರು ಸುನೀತಾ ಅವರನ್ನು ನೇಮಿಸಿದರು. ಪುಷ್ಪಾ ಅವರು ಬಿಪಿಎಲ್ ಮತ್ತು ಒಂಟಿ ಮಹಿಳೆಯಾಗಿರುವುದರಿಂದ ಈ ಹುದ್ದೆಗೆ ಹೆಚ್ಚಿನ ಹಕ್ಕು ಹೊಂದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಈ ನಡುವೆ ಪ್ರತಿಭಟನಾಕಾರರ ಒತ್ತಡಕ್ಕೆ ಜಿಲ್ಲಾಡಳಿತ ಮಣಿದಿದೆ ಎಂದು ಸುನೀತಾ ದೇವಿ ಆರೋಪಿಸಿದ್ದರು. ಅವರು ಶಾಲೆಯಲ್ಲಿ ಸೇವೆ ನೀಡಬಾರದು ಎಂದು ಪ್ರತಿಪಾದಿಸಿ ಪಾಲಕರು ಸೇರಿದಂತೆ ಸ್ಥಳೀಯರು ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸುನಿತಾ ಅವರು ತಮ್ಮ ಮಕ್ಕಳಿಗೆ ಅಡುಗೆ ಮಾಡುವುದು ತಮಗೆ ಅಗೌರವ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ ಎಂದು ಸುನಿತಾ ಆರೋಪಿಸಿದ್ದಾರೆ. ಹಲವಾರು ಮೇಲ್ಜಾತಿಯ ಮಕ್ಕಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿ, ಇತರರು ಬಹಿಷ್ಕರಿಸುವಂತೆ ಮಾಡಿದ್ದರು ಎಂದು ಸುನಿತಾ ಹೇಳಿದ್ದಾರೆ.

ಈ ನಡುವೆ ಸುನಿತಾ ಅವರನ್ನು ವಜಾಗೊಳಿಸಿದ್ದರಿಂದ ಮೇಲ್ಜಾತಿಯ ಮಹಿಳೆ ಬಿಸಿಯೂಟ ತಯಾರಿಸಲು ಶಾಲೆಗೆ ನೇಮಕಗೊಂಡಿದ್ದರು. ಆದರೆ ಶಾಲೆಯ ದಲಿತ ಮಕ್ಕಳು ಅವರು ತಯಾರಿಸಿದ ಊಟವನ್ನು ಸೇವಿಸದೆ ಪ್ರತಿಭಟಿಸಿದ್ದರು.

ಸುನಿತಾ ಅವರ ದೂರಿನಂತೆ 30 ಮಂದಿಯನ್ನು ಹೆಸರಿಸಿ ಪ್ರಕರಣ ದಾಖಲಿಸಲಾಗಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...