Homeದಲಿತ್ ಫೈಲ್ಸ್ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ದಲಿತ ಮಹಿಳೆ ಎಂಬ ಕಾರಣಕ್ಕೆ ಅವರನ್ನು ಕೆಲಸದಿಂದ ವಜಾಗೊಳಿಸಿದ್ದು, ದೇಶದಾದ್ಯಂತ ತೀವ್ರ ಆಕ್ರೊಶ ಉಂಟು ಮಾಡಿತ್ತು

- Advertisement -
- Advertisement -
Caste didn't lead to sacking' — Uttarakhand Dalit midday meal cook likely  to get job back

ದಲಿತ ಮಹಿಳೆ ಎಂಬ ಕಾರಣಕ್ಕೆ ಕೆಲಸ ಕಳೆದುಕೊಂಡ ಉತ್ತರಾಖಂಡದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ಸುನಿತಾ ದೇವಿ ಅವರನ್ನು ಮತ್ತೇ ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಅವರು ಈ ಶಾಲೆಯಲ್ಲಿ ಏಳು ದಿನಗಳು ಸೇವೆ ಸಲ್ಲಿಸಿದ್ದರು. ಈ ವೇಳೆ ಶಾಲೆಯ ಮೇಲ್ಜಾತಿ ವಿದ್ಯಾರ್ಥಿಗಳು ಅವರು ತಯಾರಿಸಿದ್ದ ಮಧ್ಯಾಹ್ನದ ಬಿಸಿಯೂಟವನ್ನು ದಲಿತ ಮಹಿಳೆ ಎಂಬ ಕಾರಣಕ್ಕೆ ನಿರಾಕರಿಸಿದ್ದರು. ಇದರ ನಂತರ ಅವರನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

ಮೇಲ್ಜಾತಿ ಮಕ್ಕಳು ದಲಿತ ಮಹಿಳೆ ಸುನಿತಾ ದೇವಿ ತಯಾರಿಸಿದ್ದ ಊಟವನ್ನು ನಿರಾಕರಿಸಿದ ಕಾರಣಕ್ಕೆ ಅವರನ್ನು ‘ಬೋಜನ್‌ ಮಾತಾ’ ಹುದ್ದೆಯಿಂದ ತೆಗೆದುಹಾಕಲಾತ್ತು. ಅವರ ನೇಮಕಾತಿಯನ್ನು ವಿರೋಧಿಸಿ ಮೇಲ್ಜಾತಿಗೆ ಸೇರಿದ ಪೋಷಕರ ವಿಭಾಗವೊಂದು ಅವರ ಜಾತಿಯನ್ನು ಉಲ್ಲೇಖಿಸಿ ಪ್ರತಿಭಟನೆ ಕೂಡಾ ನಡೆಸಿತ್ತು.

ಇದನ್ನೂ ಓದಿ:‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಸುನೀತಾ ದೇವಿ ಅವರು ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಇದಾದ ನಂತರ, ಜಿಲ್ಲಾಡಳಿತವು ಶುಕ್ರವಾರ ಅವರನ್ನು ಮರುಸೇರ್ಪಡೆಗೊಳಿಸುವುದಾಗಿ ಘೋಷಿಸಿದೆ.

“ಸುನೀತಾ ಅವರನ್ನು ಈ ಹಿಂದೆ ಸರಿಯಾದ ಕಾರ್ಯವಿಧಾನದ ಅಡಿಯಲ್ಲಿ ನೇಮಿಸಲಾಗಿಲ್ಲ, ಆದರೆ ಈಗ ಅದು ಸರಿಯಾಗಿದೆ. ಜನವರಿ 16 ರಿಂದ ಶಾಲೆಯು ಪುನರಾರಂಭವಾದಾಗ ಅವರು ಸೇವೆಗೆ ಮರಳುತ್ತಾರೆ” ಎಂದು ಚಂಪಾವತ್ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌ಸಿ ಪುರೋಹಿತ್ ಹೇಳಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯ ಪ್ರೇಮ್ ಸಿಂಗ್ ಅವರ ಪ್ರಕಾರ, “ಸೇವೆಯಲ್ಲಿ ಇದ್ದ ಇಬ್ಬರು ಅಡುಗೆಯವರಲ್ಲಿ ಒಬ್ಬರ ಸ್ಥಾನ ಖಾಲಿಗಿತ್ತು. ಹೀಗಾಗಿ ಶಾಲಾ ವ್ಯವಸ್ಥಾಪಕ ಸಮಿತಿಯು ಆ ಸ್ಥಾನಕ್ಕೆ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ ನೀಡಿತ್ತು. ನಿಯಮಗಳ ಪ್ರಕಾರ ಹುದ್ದೆಗೆ ಅಭ್ಯರ್ಥಿಯ ನೇಮಕಾತಿಯೂ ಸಾಮಾನ್ಯೇತರ ವರ್ಗ ಮತ್ತು ಬಡತನ ರೇಖೆಗಿಂತ ಕೆಳಗಿರುವವರಾಗಬೇಕು.

ಇದನ್ನೂ ಓದಿ:ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ತಾನು ಶಾಲೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ ಹತ್ತು ವರ್ಷಗಳಲ್ಲಿ ಇಲ್ಲಿ ದಲಿತ ಅಡುಗೆಯವರು ಇರಲಿಲ್ಲ ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ. ನಾಲ್ಕು ಸದಸ್ಯರ ಸಮಿತಿಯು ಎಲ್ಲಾ ಅವಶ್ಯಕತೆಗಳನ್ನು ಪೂರೈಸಿ, ನಂತರ ಅರ್ಜಿದಾರರಲ್ಲಿ ಸುನೀತಾ ದೇವಿ ಅವರನ್ನು ಆಯ್ಕೆ ಮಾಡಿದೆ. ಆದರೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ನೇಮಕಾತಿಗೆ ಸಹಿ ಹಾಕಲು ನಿರಾಕರಿಸಿದ್ದರು ಮತ್ತು ಕೆಲವು ಪೋಷಕರು ಅವರನ್ನು ಬೆಂಬಲಿಸಿದ್ದರು. ನಿಯಮದ ಪ್ರಕಾರ, ಹುದ್ದೆಗೆ ದಲಿತರನ್ನು ಆಯ್ಕೆ ಮಾಡದಿದ್ದರೆ, ಎಲ್ಲಾ ಇತರ ಅರ್ಜಿದಾರರಿಂದ NOC ಪಡೆಯಬೇಕಾಗಿದೆ.

ಕೊನೆಗೆ ಸುನಿತಾ ಅವರ ಹೆಸರನ್ನು ಬ್ಲಾಕ್ ಎಜುಕೇಶನ್ ಆಫ್ ಆಫೀಸರ್‌ಗೆ ಅನುಮೋದನೆಗಾಗಿ ಕಳುಹಿಸಲಾಗಿತ್ತು. ಎನ್‌ಒಸಿಗಾಗಿ ಕಾಯಲಾಗಿದ್ದರೂ, ತಕ್ಷಣ ಅಡುಗೆಯವರ ಅಗತ್ಯವಿದ್ದ ಕಾರಣ ಸುನೀತಾ ಅವರನ್ನು ನೇಮಿಸಲಾಯಿತು. ಹೀಗಾಗಿ, ಸುನಿತಾ ಅವರು ಡಿಸೆಂಬರ್ 13 ರಂದು ಸೇವೆಗೆ ಸೇರಿದ್ದರು, ಆದರೆ ಎರಡು-ಮೂರು ದಿನಗಳ ನಂತರ, ಹಲವಾರು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಲು ಪ್ರಾರಂಭಿಸಿದರು. ಸಮಸ್ಯೆ ಮುಂದುವರಿದ ಕಾರಣ, ಡಿಸೆಂಬರ್ 20 ರಿಂದ ಸೇವೆಯನ್ನು ಕೊನೆಗೊಳಿಸುವಂತೆ ಸುನೀತಾ ಅವರನ್ನು ಕೇಳಲಾಯಿತು ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಮಾತನಾಡಿ, “ಈ ಪ್ರದೇಶದಲ್ಲಿ ಮೂರನೇ ಎರಡರಷ್ಟು ಬ್ರಾಹ್ಮಣರಿದ್ದಾರೆ. ಮತ್ತೋರ್ವ ಅಭ್ಯರ್ಥಿ ಪುಷ್ಪಾ ಭಟ್ ಅವರನ್ನು ಪಾಲಕರು ಒಪ್ಪಿಗೆ ಸೂಚಿಸಿದರೂ ಪ್ರಾಂಶುಪಾಲರು ಸುನೀತಾ ಅವರನ್ನು ನೇಮಿಸಿದರು. ಪುಷ್ಪಾ ಅವರು ಬಿಪಿಎಲ್ ಮತ್ತು ಒಂಟಿ ಮಹಿಳೆಯಾಗಿರುವುದರಿಂದ ಈ ಹುದ್ದೆಗೆ ಹೆಚ್ಚಿನ ಹಕ್ಕು ಹೊಂದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಈ ನಡುವೆ ಪ್ರತಿಭಟನಾಕಾರರ ಒತ್ತಡಕ್ಕೆ ಜಿಲ್ಲಾಡಳಿತ ಮಣಿದಿದೆ ಎಂದು ಸುನೀತಾ ದೇವಿ ಆರೋಪಿಸಿದ್ದರು. ಅವರು ಶಾಲೆಯಲ್ಲಿ ಸೇವೆ ನೀಡಬಾರದು ಎಂದು ಪ್ರತಿಪಾದಿಸಿ ಪಾಲಕರು ಸೇರಿದಂತೆ ಸ್ಥಳೀಯರು ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸುನಿತಾ ಅವರು ತಮ್ಮ ಮಕ್ಕಳಿಗೆ ಅಡುಗೆ ಮಾಡುವುದು ತಮಗೆ ಅಗೌರವ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ ಎಂದು ಸುನಿತಾ ಆರೋಪಿಸಿದ್ದಾರೆ. ಹಲವಾರು ಮೇಲ್ಜಾತಿಯ ಮಕ್ಕಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿ, ಇತರರು ಬಹಿಷ್ಕರಿಸುವಂತೆ ಮಾಡಿದ್ದರು ಎಂದು ಸುನಿತಾ ಹೇಳಿದ್ದಾರೆ.

ಈ ನಡುವೆ ಸುನಿತಾ ಅವರನ್ನು ವಜಾಗೊಳಿಸಿದ್ದರಿಂದ ಮೇಲ್ಜಾತಿಯ ಮಹಿಳೆ ಬಿಸಿಯೂಟ ತಯಾರಿಸಲು ಶಾಲೆಗೆ ನೇಮಕಗೊಂಡಿದ್ದರು. ಆದರೆ ಶಾಲೆಯ ದಲಿತ ಮಕ್ಕಳು ಅವರು ತಯಾರಿಸಿದ ಊಟವನ್ನು ಸೇವಿಸದೆ ಪ್ರತಿಭಟಿಸಿದ್ದರು.

ಸುನಿತಾ ಅವರ ದೂರಿನಂತೆ 30 ಮಂದಿಯನ್ನು ಹೆಸರಿಸಿ ಪ್ರಕರಣ ದಾಖಲಿಸಲಾಗಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...