Homeದಲಿತ್ ಫೈಲ್ಸ್ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ಉತ್ತರಾಖಂಡ ದಲಿತ ಮಹಿಳೆ ಬಿಸಿಯೂಟ ತಯಾರಿಸುವ ಕೆಲಸಕ್ಕೆ ಮರುನೇಮಕ

ದಲಿತ ಮಹಿಳೆ ಎಂಬ ಕಾರಣಕ್ಕೆ ಅವರನ್ನು ಕೆಲಸದಿಂದ ವಜಾಗೊಳಿಸಿದ್ದು, ದೇಶದಾದ್ಯಂತ ತೀವ್ರ ಆಕ್ರೊಶ ಉಂಟು ಮಾಡಿತ್ತು

- Advertisement -
- Advertisement -
Caste didn't lead to sacking' — Uttarakhand Dalit midday meal cook likely  to get job back

ದಲಿತ ಮಹಿಳೆ ಎಂಬ ಕಾರಣಕ್ಕೆ ಕೆಲಸ ಕಳೆದುಕೊಂಡ ಉತ್ತರಾಖಂಡದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ಸುನಿತಾ ದೇವಿ ಅವರನ್ನು ಮತ್ತೇ ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಅವರು ಈ ಶಾಲೆಯಲ್ಲಿ ಏಳು ದಿನಗಳು ಸೇವೆ ಸಲ್ಲಿಸಿದ್ದರು. ಈ ವೇಳೆ ಶಾಲೆಯ ಮೇಲ್ಜಾತಿ ವಿದ್ಯಾರ್ಥಿಗಳು ಅವರು ತಯಾರಿಸಿದ್ದ ಮಧ್ಯಾಹ್ನದ ಬಿಸಿಯೂಟವನ್ನು ದಲಿತ ಮಹಿಳೆ ಎಂಬ ಕಾರಣಕ್ಕೆ ನಿರಾಕರಿಸಿದ್ದರು. ಇದರ ನಂತರ ಅವರನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

ಮೇಲ್ಜಾತಿ ಮಕ್ಕಳು ದಲಿತ ಮಹಿಳೆ ಸುನಿತಾ ದೇವಿ ತಯಾರಿಸಿದ್ದ ಊಟವನ್ನು ನಿರಾಕರಿಸಿದ ಕಾರಣಕ್ಕೆ ಅವರನ್ನು ‘ಬೋಜನ್‌ ಮಾತಾ’ ಹುದ್ದೆಯಿಂದ ತೆಗೆದುಹಾಕಲಾತ್ತು. ಅವರ ನೇಮಕಾತಿಯನ್ನು ವಿರೋಧಿಸಿ ಮೇಲ್ಜಾತಿಗೆ ಸೇರಿದ ಪೋಷಕರ ವಿಭಾಗವೊಂದು ಅವರ ಜಾತಿಯನ್ನು ಉಲ್ಲೇಖಿಸಿ ಪ್ರತಿಭಟನೆ ಕೂಡಾ ನಡೆಸಿತ್ತು.

ಇದನ್ನೂ ಓದಿ:‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಸುನೀತಾ ದೇವಿ ಅವರು ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಇದಾದ ನಂತರ, ಜಿಲ್ಲಾಡಳಿತವು ಶುಕ್ರವಾರ ಅವರನ್ನು ಮರುಸೇರ್ಪಡೆಗೊಳಿಸುವುದಾಗಿ ಘೋಷಿಸಿದೆ.

“ಸುನೀತಾ ಅವರನ್ನು ಈ ಹಿಂದೆ ಸರಿಯಾದ ಕಾರ್ಯವಿಧಾನದ ಅಡಿಯಲ್ಲಿ ನೇಮಿಸಲಾಗಿಲ್ಲ, ಆದರೆ ಈಗ ಅದು ಸರಿಯಾಗಿದೆ. ಜನವರಿ 16 ರಿಂದ ಶಾಲೆಯು ಪುನರಾರಂಭವಾದಾಗ ಅವರು ಸೇವೆಗೆ ಮರಳುತ್ತಾರೆ” ಎಂದು ಚಂಪಾವತ್ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಆರ್‌ಸಿ ಪುರೋಹಿತ್ ಹೇಳಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯ ಪ್ರೇಮ್ ಸಿಂಗ್ ಅವರ ಪ್ರಕಾರ, “ಸೇವೆಯಲ್ಲಿ ಇದ್ದ ಇಬ್ಬರು ಅಡುಗೆಯವರಲ್ಲಿ ಒಬ್ಬರ ಸ್ಥಾನ ಖಾಲಿಗಿತ್ತು. ಹೀಗಾಗಿ ಶಾಲಾ ವ್ಯವಸ್ಥಾಪಕ ಸಮಿತಿಯು ಆ ಸ್ಥಾನಕ್ಕೆ ನೇಮಕಾತಿ ಮಾಡುವ ಬಗ್ಗೆ ಪ್ರಕಟಣೆ ನೀಡಿತ್ತು. ನಿಯಮಗಳ ಪ್ರಕಾರ ಹುದ್ದೆಗೆ ಅಭ್ಯರ್ಥಿಯ ನೇಮಕಾತಿಯೂ ಸಾಮಾನ್ಯೇತರ ವರ್ಗ ಮತ್ತು ಬಡತನ ರೇಖೆಗಿಂತ ಕೆಳಗಿರುವವರಾಗಬೇಕು.

ಇದನ್ನೂ ಓದಿ:ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ತಾನು ಶಾಲೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ ಹತ್ತು ವರ್ಷಗಳಲ್ಲಿ ಇಲ್ಲಿ ದಲಿತ ಅಡುಗೆಯವರು ಇರಲಿಲ್ಲ ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ. ನಾಲ್ಕು ಸದಸ್ಯರ ಸಮಿತಿಯು ಎಲ್ಲಾ ಅವಶ್ಯಕತೆಗಳನ್ನು ಪೂರೈಸಿ, ನಂತರ ಅರ್ಜಿದಾರರಲ್ಲಿ ಸುನೀತಾ ದೇವಿ ಅವರನ್ನು ಆಯ್ಕೆ ಮಾಡಿದೆ. ಆದರೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ನೇಮಕಾತಿಗೆ ಸಹಿ ಹಾಕಲು ನಿರಾಕರಿಸಿದ್ದರು ಮತ್ತು ಕೆಲವು ಪೋಷಕರು ಅವರನ್ನು ಬೆಂಬಲಿಸಿದ್ದರು. ನಿಯಮದ ಪ್ರಕಾರ, ಹುದ್ದೆಗೆ ದಲಿತರನ್ನು ಆಯ್ಕೆ ಮಾಡದಿದ್ದರೆ, ಎಲ್ಲಾ ಇತರ ಅರ್ಜಿದಾರರಿಂದ NOC ಪಡೆಯಬೇಕಾಗಿದೆ.

ಕೊನೆಗೆ ಸುನಿತಾ ಅವರ ಹೆಸರನ್ನು ಬ್ಲಾಕ್ ಎಜುಕೇಶನ್ ಆಫ್ ಆಫೀಸರ್‌ಗೆ ಅನುಮೋದನೆಗಾಗಿ ಕಳುಹಿಸಲಾಗಿತ್ತು. ಎನ್‌ಒಸಿಗಾಗಿ ಕಾಯಲಾಗಿದ್ದರೂ, ತಕ್ಷಣ ಅಡುಗೆಯವರ ಅಗತ್ಯವಿದ್ದ ಕಾರಣ ಸುನೀತಾ ಅವರನ್ನು ನೇಮಿಸಲಾಯಿತು. ಹೀಗಾಗಿ, ಸುನಿತಾ ಅವರು ಡಿಸೆಂಬರ್ 13 ರಂದು ಸೇವೆಗೆ ಸೇರಿದ್ದರು, ಆದರೆ ಎರಡು-ಮೂರು ದಿನಗಳ ನಂತರ, ಹಲವಾರು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಲು ಪ್ರಾರಂಭಿಸಿದರು. ಸಮಸ್ಯೆ ಮುಂದುವರಿದ ಕಾರಣ, ಡಿಸೆಂಬರ್ 20 ರಿಂದ ಸೇವೆಯನ್ನು ಕೊನೆಗೊಳಿಸುವಂತೆ ಸುನೀತಾ ಅವರನ್ನು ಕೇಳಲಾಯಿತು ಎಂದು ಪ್ರೇಮ್‌ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ಪಿಟಿಎ ಅಧ್ಯಕ್ಷ ನರೇಂದ್ರ ಜೋಶಿ ಮಾತನಾಡಿ, “ಈ ಪ್ರದೇಶದಲ್ಲಿ ಮೂರನೇ ಎರಡರಷ್ಟು ಬ್ರಾಹ್ಮಣರಿದ್ದಾರೆ. ಮತ್ತೋರ್ವ ಅಭ್ಯರ್ಥಿ ಪುಷ್ಪಾ ಭಟ್ ಅವರನ್ನು ಪಾಲಕರು ಒಪ್ಪಿಗೆ ಸೂಚಿಸಿದರೂ ಪ್ರಾಂಶುಪಾಲರು ಸುನೀತಾ ಅವರನ್ನು ನೇಮಿಸಿದರು. ಪುಷ್ಪಾ ಅವರು ಬಿಪಿಎಲ್ ಮತ್ತು ಒಂಟಿ ಮಹಿಳೆಯಾಗಿರುವುದರಿಂದ ಈ ಹುದ್ದೆಗೆ ಹೆಚ್ಚಿನ ಹಕ್ಕು ಹೊಂದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

ಈ ನಡುವೆ ಪ್ರತಿಭಟನಾಕಾರರ ಒತ್ತಡಕ್ಕೆ ಜಿಲ್ಲಾಡಳಿತ ಮಣಿದಿದೆ ಎಂದು ಸುನೀತಾ ದೇವಿ ಆರೋಪಿಸಿದ್ದರು. ಅವರು ಶಾಲೆಯಲ್ಲಿ ಸೇವೆ ನೀಡಬಾರದು ಎಂದು ಪ್ರತಿಪಾದಿಸಿ ಪಾಲಕರು ಸೇರಿದಂತೆ ಸ್ಥಳೀಯರು ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸುನಿತಾ ಅವರು ತಮ್ಮ ಮಕ್ಕಳಿಗೆ ಅಡುಗೆ ಮಾಡುವುದು ತಮಗೆ ಅಗೌರವ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ ಎಂದು ಸುನಿತಾ ಆರೋಪಿಸಿದ್ದಾರೆ. ಹಲವಾರು ಮೇಲ್ಜಾತಿಯ ಮಕ್ಕಳು ಮಧ್ಯಾಹ್ನದ ಊಟವನ್ನು ಬಹಿಷ್ಕರಿಸಿ, ಇತರರು ಬಹಿಷ್ಕರಿಸುವಂತೆ ಮಾಡಿದ್ದರು ಎಂದು ಸುನಿತಾ ಹೇಳಿದ್ದಾರೆ.

ಈ ನಡುವೆ ಸುನಿತಾ ಅವರನ್ನು ವಜಾಗೊಳಿಸಿದ್ದರಿಂದ ಮೇಲ್ಜಾತಿಯ ಮಹಿಳೆ ಬಿಸಿಯೂಟ ತಯಾರಿಸಲು ಶಾಲೆಗೆ ನೇಮಕಗೊಂಡಿದ್ದರು. ಆದರೆ ಶಾಲೆಯ ದಲಿತ ಮಕ್ಕಳು ಅವರು ತಯಾರಿಸಿದ ಊಟವನ್ನು ಸೇವಿಸದೆ ಪ್ರತಿಭಟಿಸಿದ್ದರು.

ಸುನಿತಾ ಅವರ ದೂರಿನಂತೆ 30 ಮಂದಿಯನ್ನು ಹೆಸರಿಸಿ ಪ್ರಕರಣ ದಾಖಲಿಸಲಾಗಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...