Homeದಲಿತ್ ಫೈಲ್ಸ್ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

- Advertisement -
- Advertisement -

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ ‘ಸೈನಾ’ (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಈ ಕ್ರಮವು ದಲಿತರನ್ನು ಗ್ರಾಮ ನಾಯಕತ್ವದಿಂದ ದೂರವಿಟ್ಟ ದೀರ್ಘಕಾಲದ ಸಾಮಾಜಿಕ ಕಟ್ಟುಪಾಡುಗಳನ್ನು ಮುರಿದಿದೆ.

ತಲೆಮಾರುಗಳಿಂದ, ಈ ಪ್ರದೇಶದ ಹಳ್ಳಿಗಳು ಪ್ರಬಲ ಮತ್ತು ಶ್ರೀಮಂತ ರಜಪೂತ ಕುಟುಂಬಗಳಿಂದ ಮಾತ್ರ ನಾಯಕರು ಆಯ್ಕೆಯಾಗಿದ್ದರು. ಗ್ರಾಮದ ಸಮಸ್ಯೆಗಳು ಮತ್ತು ವಿವಾದಗಳನ್ನು ಮಧ್ಯಸ್ಥಿಕೆ ವಹಿಸುವಲ್ಲಿ ‘ಸೈನಾ’ ಪ್ರಮುಖ ಪಾತ್ರ ವಹಿಸುತ್ತಿದ್ದರೂ, ದಲಿತರನ್ನು ಎಂದಿಗೂ ಈ ಸ್ಥಾನಕ್ಕೆ ಪರಿಗಣಿಸಲಾಗುತ್ತಿರಲಿಲ್ಲ. ಜಾತಿ ಶ್ರೇಣಿಯಲ್ಲಿ ಬೇರೂರಿರುವ ಈ ವ್ಯವಸ್ಥೆಯು ಬ್ರಿಟಿಷ್ ಯುಗದಿಂದ ಇಂದಿನವರೆಗೂ ಮುಂದುವರೆಯಿತು.

“ಈ ಹಿಂದೆ, ಇಡೀ ಗ್ರಾಮಕ್ಕೆ ಏಕೈಕ ಸೈನಾ ಇತ್ತು. ಈಗ, ನಮಗೆ ಎರಡು ಇರುತ್ತದೆ” ಎಂದು ಚುನಾವಣೆಯಲ್ಲಿ ಭಾಗವಹಿಸಿದ ನಿವಾಸಿಯೊಬ್ಬರು ತಿಳಿಸಿದ್ದಾರೆ ಎಂದು ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ. ಹೊಸದಾಗಿ ಆಯ್ಕೆಯಾದ ದಲಿತ ಸೈನಾವನ್ನು ಮರದ ಆನೆಯ ಮೇಲೆ ಸಾಂಪ್ರದಾಯಿಕ ಮೆರವಣಿಗೆಯೊಂದಿಗೆ ಸಂಭ್ರಮಿಸಲಾಯಿತು.

ಈ ನಿರ್ಧಾರವು ಆಳವಾಗಿ ಬೇರೂರಿದ್ದ ಸಾಮಾಜಿಕ ವ್ಯವಸ್ಥೆಯನ್ನು ಪ್ರಶ್ನಿಸಿದ್ದರಿಂದ, ಪ್ರಬಲ ಗುಂಪುಗಳ ಪ್ರತಿರೋಧವಿಲ್ಲದೆ ಶಾಂತಿಯುತವಾಗಿ ಪರಿವರ್ತನೆ ಆಗುವುದನ್ನು ಖಚಿತಪಡಿಸಿಕೊಳ್ಳಲು 35 ದಲಿತ ಕುಟುಂಬಗಳಿಗೆ ಸ್ಥಳೀಯ ಪೊಲೀಸರು ಬೆಂಬಲ ನೀಡಿದರು.

ಹತ್ತಿರದ ಪಂಚಾಯತ್‌ನ ಮಾಜಿ ಪ್ರಧಾನ್ ಮತ್ತು ಸಾಮಾಜಿಕ ಕಾರ್ಯಕರ್ತ ಭರತ್ ಸಿಂಗ್ ರಾಣಾ, ಸಮುದಾಯದ ನಿರ್ಧಾರವು ಕನಿಷ್ಠ 150 ರಿಂದ 200 ವರ್ಷಗಳಿಂದ ಅಸ್ತಿತ್ವದಲ್ಲಿದ್ದ ವ್ಯವಸ್ಥೆಯನ್ನು ರದ್ದುಗೊಳಿಸುತ್ತದೆ ಎಂದು ಹೇಳಿದರು.

“ದಲಿತರನ್ನು ಯಾವಾಗ ಹೊರಗಿಡಲಾಯಿತು ಎಂದು ನಿಖರವಾಗಿ ಹೇಳುವುದು ಕಷ್ಟ. ಏಕೆಂದರೆ, ಅದು ಲಿಖಿತ ಕಾನೂನಿನಲ್ಲ, ಪದ್ಧತಿ ಮತ್ತು ಶ್ರೇಣಿಯನ್ನು ಆಧರಿಸಿದೆ. ನಾವು ಬ್ರಿಟಿಷ್ ಅವಧಿಯನ್ನು ಆರಂಭಿಕ ಹಂತವೆಂದು ಪರಿಗಣಿಸಿದರೆ, ಈ ಹೆಜ್ಜೆ ತಲೆಮಾರುಗಳಿಂದ ಜಾರಿಯಲ್ಲಿರುವ ರಚನೆಯನ್ನು ಪ್ರಶ್ನಿಸುತ್ತದೆ” ಎಂದರು.

ಆಧುನಿಕ ಭಾರತದ ಸಂದರ್ಭದಲ್ಲಿ ಈ ಕ್ರಮವು ಇನ್ನೂ ಹೆಚ್ಚಿನ ಅರ್ಥವನ್ನು ಹೊಂದಿದೆ ಎಂದು ರಾಣಾ ಹೇಳಿದರು. “ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ದೇಶದಲ್ಲಿ, ಈ ನಿರ್ಧಾರವು ಸ್ವಾತಂತ್ರ್ಯದ ನಂತರವೂ ಮುಂದುವರಿದ 75 ವರ್ಷಗಳಷ್ಟು ಹಳೆಯದಾದ ಅಸಮಾನತೆಯನ್ನು ಮುರಿಯುವ ಪ್ರಮುಖ ಪ್ರಯತ್ನವಾಗಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...