HomeUncategorizedಉತ್ತರಾಖಂಡ: ರಾಮನಗರದಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿದ್ದ ದಶಕಗಳ ಹಳೆಯ ಸಮಾಧಿ ನೆಲಸಮ

ಉತ್ತರಾಖಂಡ: ರಾಮನಗರದಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿದ್ದ ದಶಕಗಳ ಹಳೆಯ ಸಮಾಧಿ ನೆಲಸಮ

- Advertisement -
- Advertisement -

ರಾಮನಗರ, ಉತ್ತರಾಖಂಡ: ಉತ್ತರಾಖಂಡ ಸರ್ಕಾರವು ತನ್ನ ‘ಅಕ್ರಮ ಒತ್ತುವರಿ ತೆರವು’ ಅಭಿಯಾನವನ್ನು ಮುಂದುವರಿಸಿದ್ದು, ರಾಮನಗರದ ಧೇಲಾದಲ್ಲಿರುವ ಸರ್ಕಾರಿ ಇಂಟರ್ ಕಾಲೇಜಿನ ಆವರಣದಲ್ಲಿ ದಶಕಗಳಿಂದ ಇದ್ದ ಮಜಾರ್ (ಸಮಾಧಿ) ಅನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಸರ್ಕಾರದ ಈ ಕ್ರಮವು ಸ್ಥಳೀಯ ಮುಸ್ಲಿಂ ಸಮುದಾಯದ ಆತಂಕಕ್ಕೆ ಕಾರಣವಾಗಿದೆ.

ಹಿಂದೂ ಸಂಘಟನೆಗಳಿಂದ ಬಂದ ದೂರುಗಳನ್ನು ಆಧರಿಸಿ, ಸಮಾಧಿಯನ್ನು “ಅಕ್ರಮ” ಮತ್ತು ಶಾಲೆಯ ಪರಿಸರಕ್ಕೆ “ಭಂಗ” ತರುತ್ತಿದೆ ಎಂದು ಆಡಳಿತ ಘೋಷಿಸಿತ್ತು. ಈ ನೆಲಸಮ ಕಾರ್ಯವನ್ನು ಶಾಂತಿಯುತವಾಗಿ ನಡೆಸಲಾಗಿದೆ ಎಂದು ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಮೋದ್ ಕುಮಾರ್ ಹೇಳಿದ್ದಾರೆ. “ಧೇಲಾ ವಿದ್ಯಾಲಯದ ಆವರಣದಲ್ಲಿ ಇದ್ದ ಸಮಾಧಿಯನ್ನು ತೆರವುಗೊಳಿಸಲಾಗಿದೆ. ಅಕ್ರಮ ಒತ್ತುವರಿಯನ್ನು ತಡೆಯುವ ಅಭಿಯಾನ ಮುಂದುವರಿಯಲಿದೆ” ಎಂದು ಅವರು ತಿಳಿಸಿದ್ದಾರೆ. ರಾಮನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈವರೆಗೆ 20ಕ್ಕೂ ಹೆಚ್ಚು ಮಜಾರ್‌ಗಳನ್ನು ನೆಲಸಮಗೊಳಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಆದರೆ, ಮುಸ್ಲಿಂ ನಿವಾಸಿಗಳು ಈ ಕ್ರಮವನ್ನು ವಿರೋಧಿಸಿದ್ದಾರೆ. ಇದು ಮುಸ್ಲಿಂ ಧಾರ್ಮಿಕ ಸ್ಥಳಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವ ಅಭಿಯಾನದ ಭಾಗ ಎಂದು ಅವರು ಹೇಳಿದ್ದಾರೆ. “ಈ ಮಜಾರ್ ದಶಕಗಳಿಂದಲೂ ಇಲ್ಲಿತ್ತು. ಕೆಲವು ಹಿಂದೂ ಗುಂಪುಗಳು ಒತ್ತಡ ಹೇರಿದ ನಂತರವೇ ಇದನ್ನು ಅಕ್ರಮ ಎಂದು ಕರೆಯಲಾಗಿದೆ. ಇದು ಸ್ಪಷ್ಟವಾಗಿ ಮುಸ್ಲಿಂ-ವಿರೋಧಿ ಪಕ್ಷಪಾತ” ಎಂದು ಸ್ಥಳೀಯ ನಿವಾಸಿ ಅಬ್ದುಲ್ ರೆಹಮಾನ್ ಆರೋಪಿಸಿದ್ದಾರೆ. “ನಮ್ಮ ಹಿರಿಯರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಇದು ನಮ್ಮ ಇತಿಹಾಸ ಮತ್ತು ನಂಬಿಕೆಯ ಭಾಗವಾಗಿತ್ತು” ಎಂದು ಶಬಾನಾ ಬೇಗಂ ನೋವಿನಿಂದ ಹೇಳಿದ್ದಾರೆ.

ಮಜಾರ್ ಇದ್ದುದರಿಂದ ವಿದ್ಯಾರ್ಥಿಗಳ ಏಕಾಗ್ರತೆಗೆ ತೊಂದರೆಯಾಗುತ್ತಿತ್ತು ಎಂಬ ವಾದವನ್ನು ಕೆಲವು ಸ್ಥಳೀಯ ಹಿಂದೂಗಳು ಕೂಡ ಒಪ್ಪಿಲ್ಲ. “ವಿದ್ಯಾರ್ಥಿಗಳಿಗೆ ಅದರಿಂದ ಯಾವುದೇ ತೊಂದರೆ ಇರಲಿಲ್ಲ. ಇದು ಕೇವಲ ನೆಲಸಮಕ್ಕಾಗಿ ನೀಡಿದ ಒಂದು ಕಾರಣ” ಎಂದು ಶಾಲೆಯ ಬಳಿಯ ವ್ಯಾಪಾರಿ ರಾಜೇಶ್ ಕುಮಾರ್ ಹೇಳಿದ್ದಾರೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ವಕೀಲರು ಈ ಬುಲ್ಡೋಜರ್ ಕ್ರಮಗಳು ಕಾನೂನು ಪ್ರಕ್ರಿಯೆಗಳನ್ನು ಅನುಸರಿಸುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. “ಯಾವುದೇ ವಿಷಯವು ಅಕ್ರಮವಾಗಿದ್ದರೆ, ಅದನ್ನು ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ಧರಿಸಬೇಕು. ಆದರೆ ಇಲ್ಲಿ ಕೇವಲ ಮುಸ್ಲಿಂ ಸ್ಥಳಗಳನ್ನು ಮಾತ್ರ ನೆಲಸಮಗೊಳಿಸಲಾಗುತ್ತಿದೆ” ಎಂದು ವಕೀಲ ಫರ್ಹಾನ್ ಸಿದ್ದಿಕಿ ಹೇಳಿದ್ದಾರೆ. “ಈ ಕ್ರಮಗಳು ಮುಸ್ಲಿಂ ಸಮುದಾಯದಲ್ಲಿ ಭಯ ಮತ್ತು ಅಭದ್ರತೆಯನ್ನು ಸೃಷ್ಟಿಸುತ್ತವೆ” ಎಂದು ನಾಗರಿಕ ಹಕ್ಕುಗಳ ಸಂಸ್ಥೆಯೊಂದು ಹೇಳಿದೆ.

ಈ ಘಟನೆಯು ರಾಮನಗರದಲ್ಲಿ ಮುಸ್ಲಿಂ ಸಮುದಾಯದ ಧಾರ್ಮಿಕ ಮತ್ತು ಸಾಂಸ್ಕೃತಿಕ ಅಸ್ತಿತ್ವದ ಬಗ್ಗೆ ವ್ಯಾಪಕವಾದ ಚರ್ಚೆ ಮತ್ತು ಆತಂಕಕ್ಕೆ ಕಾರಣವಾಗಿದೆ.

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ ಸಂದೇಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...