Homeಮುಖಪುಟಕೆಲವೇ ತಿಂಗಳಲ್ಲಿ ಉತ್ತರಾಖಂಡ ಚುನಾವಣೆ: ಶಂಕರಾಚಾರ್ಯ ಪ್ರತಿಮೆ ಉದ್ಘಾಟಿಸಿ ರಾಮಮಂದಿರದ ಬಗ್ಗೆ ಉಲ್ಲೇಖಿಸಿದ ಮೋದಿ

ಕೆಲವೇ ತಿಂಗಳಲ್ಲಿ ಉತ್ತರಾಖಂಡ ಚುನಾವಣೆ: ಶಂಕರಾಚಾರ್ಯ ಪ್ರತಿಮೆ ಉದ್ಘಾಟಿಸಿ ರಾಮಮಂದಿರದ ಬಗ್ಗೆ ಉಲ್ಲೇಖಿಸಿದ ಮೋದಿ

- Advertisement -
- Advertisement -

ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ಪುನರ್ ನಿರ್ಮಿಸಿದ ಸಮಾಧಿಯನ್ನು ಉದ್ಘಾಟಿಸಿದ್ದಾರೆ. ಸುಮಾರು 35 ಟನ್ ತೂಕದ 12 ಅಡಿಯ ಶಂಕರಾಚಾರ್ಯರ ಪ್ರತಿಮೆ ನಿರ್ಮಾಣದ ಕೆಲಸವು 2019 ರಲ್ಲಿ ಪ್ರಾರಂಭವಾಗಿತ್ತು.

ಇದರ ಜೊತೆಗೆ ಪ್ರಧಾನಿ ಕೇದಾರನಾಥದಲ್ಲಿ 400 ಕೋಟಿ ರೂಪಾಯಿಗಳ ಪುನರ್ನಿರ್ಮಾಣ ಯೋಜನೆಗಳ ಉದ್ಘಾಟನೆ ಹಾಗೂ ಅಡಿಪಾಯ ಹಾಕಿದರು.

ಅಲ್ಲಿನ ಪುರೋಹಿತರು ಮತ್ತು ಭಕ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಶ್ರಧ್ದಾ ಕೇಂದ್ರಗಳ ಪುನರಾಭಿವೃದ್ಧಿಯು ಶಂಕರಾಚಾರ್ಯ ಮತ್ತು ಸ್ವಾಮಿ ವಿವೇಕಾನಂದರಂತಹ ಪ್ರಾಚೀನ ಸಂತರು ಮತ್ತು ದಾರ್ಶನಿಕರ ಬಗ್ಗೆಗಿನ ಹೆಮ್ಮೆ ಬಳೆಯುತ್ತಿರುವುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ಅಯೋಧ್ಯೆಯಲ್ಲಿ ಶತಮಾನಗಳ ನಂತರ ಅದರ ವೈಭವವನ್ನು ಮರುಸ್ಥಾಪಿಸಲು ಭವ್ಯವಾದ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಕಾಶಿಯಲ್ಲಿ ವಿಶ್ವನಾಥ ಧಾಮ ಯೋಜನೆಯ ಕಾಮಗಾರಿಯು ಪೂರ್ಣಗೊಳ್ಳುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಚಾರ್ಧಾಮ್ ಸರ್ವಋತು ರಸ್ತೆ ಮತ್ತು ಋಷಿಕೇಶ-ಕರ್ಣಪ್ರಯಾಗ ರೈಲು ಸಂಪರ್ಕ ಯೋಜನೆಗಳನ್ನು ಪ್ರಸ್ತಾಪಿಸಿದ ಅವರು, ಉತ್ತರಾಖಂಡದಲ್ಲಿ ಮೂಲಸೌಕರ್ಯ ಯೋಜನೆಗಳನ್ನು ಕೈಗೊಳ್ಳುತ್ತಿರುವ ವೇಗದಿಂದಾಗಿ ಕಳೆದ 100 ವರ್ಷಗಳಲ್ಲೇ ಹೆಚ್ಚು ಯಾತ್ರಿಕರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಕೇದಾರನಾಥಕ್ಕೆ ಭೇಟಿ ಪ್ರಾರಂಭಿಸಿದ ಮೋದಿ, ಈ ಸ್ಥಳಕ್ಕೆ ಭೇಟಿ ನೀಡುವುದು ಯಾವಾಗಲೂ ನನಗೆ ಅಗಾಧವಾದ ಅನುಭವ ನೀಡುತ್ತದೆ ಎಂದು ಹೇಳಿದ್ದಾರೆ.

ಬೆಳಗ್ಗೆ ಡೆಹ್ರಾಡೂನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ಉತ್ತರಾಖಂಡ ಗವರ್ನರ್ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ (ನಿವೃತ್ತ), ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳಾದ ಸುಬೋಧ್ ಉನಿಯಾಲ್ ಮತ್ತು ಗಣೇಶ್ ಜೋಶಿ, ಉತ್ತರಾಖಂಡ ವಿಧಾನಸಭೆ ಸ್ಪೀಕರ್ ಪ್ರೇಮಚಂದ್ ಅಗರ್ವಾಲ್ ಅವರು ಬರಮಾಡಿಕೊಂಡರು.

ಇದನ್ನೂ ಓದಿ: ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...