Homeಮುಖಪುಟಉತ್ತರಾಖಂಡ: ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕನ ಬಂಧನ

ಉತ್ತರಾಖಂಡ: ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕನ ಬಂಧನ

- Advertisement -
- Advertisement -

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉಚ್ಚಾಟಿತ ಬಿಜೆಪಿ ನಾಯಕ ಕಮಲ್ ರಾವತ್ ಅವರನ್ನು ಭಾನುವಾರ ಸಂಜೆ ಚಂಪಾವತ್‌ನಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಬಿಜೆಪಿ ನಾಯಕ ರಾವತ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೋ) ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯನ್ನು ಶನಿವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈವರೆಗೆ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ದಾಖಲಿಸಲು ಸಾಧ್ಯವಾಗಿಲ್ಲ.

ಚಂಪಾವತ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕನ ಮೇಲೆ ಉತ್ತರಾಖಂಡ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದರು. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ರಾವತ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿಯ ಚಂಪಾವತ್ ಜಿಲ್ಲಾಧ್ಯಕ್ಷ ನಿರ್ಮಲ್ ಮೆಹ್ರಾ ಹೇಳಿದ್ದಾರೆ.

‘ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಆತ ಪರಾರಿಯಾಗಿದ್ದು, ನಾವು ಅವನನ್ನು ಹುಡುಕುತ್ತಿದ್ದೇವೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು’ ಎಂದು ಚಂಪಾವತ್ ಪೊಲೀಸ್ ಠಾಣೆಯ ಉಸ್ತುವಾರಿ ಯೋಗೇಶ್ ಉಪಾಧ್ಯಾಯ ಶನಿವಾರ ಮಾಧ್ಯಮಗಳಿಗೆ ತಿಳಿಸಿದ್ದರು.

‘ಈಗಾಗಲೇ ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಈ ವಿಷಯವನ್ನು ಮಹಿಳಾ ಸಬ್ ಇನ್ಸ್ಪೆಕ್ಟರ್ ಪಿಂಕಿ ಧಾಮಿ ಅವರು ತನಿಖೆ ನಡೆಸುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿ ಉಪಾಧ್ಯಾಯ ಹೇಳಿದ್ದರು.

ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ರಾವತ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಆತನ ವಿರುದ್ಧ ಸೆಕ್ಷನ್ 363 (ಅಪಹರಣ), 354 (ಮಹಿಳೆಯರ ಮೇಲೆ ದೌರ್ಜನ್ಯ ಎಸಗುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ), 376 (ಅತ್ಯಾಚಾರ) ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

‘ರಾವತ್ ತನ್ನ 16 ವರ್ಷದ ಮಗಳನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಾನೆ ಮತ್ತು ತನ್ನ ಅಪರಾಧವನ್ನು ಬಹಿರಂಗಪಡಿಸಿದಂತೆ ಆಕೆಗೆ ಜೀವ ಬೆದರಿಕೆ ಹಾಕಿದ್ದಾನೆ’ ಎಂದು ಆಕೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.

ಉತ್ತರಾಖಂಡದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಅಪರಾಧ ಪ್ರಕರಣಗಳಲ್ಲಿ ಹಲವು ಬಿಜೆಪಿ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಘಟಕ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದೆ.

‘ಮೊದಲು, ರಿಷಿಕೇಶದಲ್ಲಿ ಮಹಿಳಾ ಸ್ವಾಗತಕಾರಿಣಿಯನ್ನು ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಮಗ ಪುಲ್ಕಿತ್ ಆರ್ಯ ಕೊಲೆ ಮಾಡಿದ್ದಾನೆ, ಈಗ ಚಂಪಾವತ್‌ನ ಬಿಜೆಪಿ ಮಂಡಲ ಅಧ್ಯಕ್ಷ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿದ್ದಾನೆ’ ಎಂದು ಉತ್ತರಾಖಂಡ ಕಾಂಗ್ರೆಸ್ ವಕ್ತಾರ ಗರಿಮಾ ಮೆಹ್ರಾ ದಸೌನಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ರಾವತ್ ವಿರುದ್ಧ ದೂರು ದಾಖಲಾದ ಗಂಟೆಗಳ ನಂತರ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಪ್ರಕರಣವನ್ನು ದಾಖಲಿಸಲು ಹಿಂದೇಟು ಹಾಕಿದರು. ಎಂಟು ಗಂಟೆಗಳ ವಿಳಂಬದ ನಂತರ ಎಫ್ಐಆರ್ ದಾಖಲಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ರಾಜ್ಯ ಪೊಲೀಸರು ಆಡಳಿತ ಪಕ್ಷದ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ದಸೌನಿ ಆರೋಪಿಸಿದ್ದಾರೆ.

ಮಹಿಳೆಯರ ಘನತೆಯ ಜೊತೆ ಆಟವಾಡುವ ಕಾರ್ಯಕರ್ತರನ್ನು ಪಕ್ಷ ಸಹಿಸುವುದಿಲ್ಲ ಮತ್ತು ತಪ್ಪಿತಸ್ಥರೆಂದು ಕಂಡುಬಂದರೆ ಆರೋಪಿ ಬಿಜೆಪಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಬಿಜೆಪಿ ಘಟಕ ಹೇಳಿದೆ.

‘ಪೊಲೀಸ್ ತನಿಖೆಯಲ್ಲಿ ಅವರು ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ (ಆರೋಪಿ ಬಿಜೆಪಿ ನಾಯಕ) ಕ್ರಮ ಕೈಗೊಳ್ಳಲಾಗುವುದು. ಮಹಿಳೆಯರ ಘನತೆಯೊಂದಿಗೆ ಆಟವಾಡುವ ಯಾವುದೇ ಕಾರ್ಯಕರ್ತರನ್ನು ನಮ್ಮ ಪಕ್ಷ ಸಹಿಸುವುದಿಲ್ಲ’ ಎಂದು ಬಿಜೆಪಿಯ ಚಂಪಾವತ್ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಖೇಶ್ ಕಲ್ಖುರಿಯಾ ಹೇಳಿದರು.

ಇದನ್ನೂ ಓದಿ; ಬಿಹಾರ: ದಲಿತ ಮಹಿಳೆಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸ್ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...