Homeಮುಖಪುಟಉತ್ತರಾಖಂಡ ಪ್ರವಾಹ; ಹವಾಮಾನ ವೈಪರೀತ್ಯದ ಬಗ್ಗೆ ವೈಜ್ಞಾನಿಕ ಆಲೋಚನೆ ಬೇಕಿದೆ

ಉತ್ತರಾಖಂಡ ಪ್ರವಾಹ; ಹವಾಮಾನ ವೈಪರೀತ್ಯದ ಬಗ್ಗೆ ವೈಜ್ಞಾನಿಕ ಆಲೋಚನೆ ಬೇಕಿದೆ

- Advertisement -
- Advertisement -

ಫೆಬ್ರವರಿ 7, 2021ರಂದು ಕೇಂದ್ರ ಸರ್ಕಾರದ ನೀತಿ ಆಯೋಗ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿತು. ಪರಿಸರ ಪರವಾದ ತೀರ್ಪುಗಳಿಂದ ಭಾರತದ ಆರ್ಥಿಕ ಅಭಿವೃದ್ಧಿಯ ಮೇಲೆ ಉಂಟಾದ ಪರಿಣಾಮಗಳ ಕುರಿತು ಅಧ್ಯಯನ ನಡೆಸುವ ಕುರಿತ ಪ್ರಕಟಣೆ ಅದಾಗಿತ್ತು. ಈ ಅಂಗವಾಗಿ ಪರಮೋಚ್ಚ ನ್ಯಾಯಾಲಯ, ಉಚ್ಚ ನ್ಯಾಯಾಲಯ ಮತ್ತು ರಾಷ್ಟ್ರೀಯ ಹಸಿರು ಪೀಠಗಳು ನೀಡಿದ 5 ತೀರ್ಪುಗಳ ಅಧ್ಯಯನ ನಡೆಸಿ, ಅದರಿಂದ ಹೇಗೆ ಆರ್ಥಿಕ ಪ್ರಗತಿಯ ಮೇಲೆ ಪರಿಣಾಮವಾಗಿದೆ ಎಂಬುದರ ಕುರಿತು ನ್ಯಾಯಮೂರ್ತಿಗಳಿಗೆ “ಅರಿವು” ಮೂಡಿಸುವ ಯೋಜನೆಯನ್ನೂ ಹಾಕಿಕೊಂಡಿತ್ತು.

ಈ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಉತ್ತರಾಖಂಡದ ಚಮೋಲಿ ಜಿಲ್ಲೆಯ ಖುಷಿ ಗಂಗಾ, ಧೌಲಿ ಗಂಗಾ ನದಿಗಳಲ್ಲಿ ಭಾರೀ ಪ್ರಮಾಣದಲ್ಲಿ ಕ್ಷಿಪ್ರ ಪ್ರವಾಹ ಬಂದು ಅಪಾರ ಸಾವುನೋವು ಉಂಟಾದ ಸುದ್ದಿ ಬರಹತ್ತಿತು. ಪ್ರವಾಹದ ತೀವ್ರತೆ ಎಷ್ಟಿತ್ತೆಂದರೆ ಋಷಿಗಂಗಾ ಜಲವಿದ್ಯುತ್ ಯೋಜನೆಯು ಕೊಚ್ಚಿಕೊಂಡುಹೋಗಿತ್ತು. ಧೌಲಿ ಗಂಗಾ ಅಣೆಕಟ್ಟೆಯೇ ಒಡೆದುಹೋಗಿತ್ತು ಮತ್ತು ನದಿ ಪಾತ್ರದ 13 ಹಳ್ಳಿಗಳು ಕೊಚ್ಚಿಕೊಂಡು ಹೋಗಿದ್ದವು. “ನಿಮ್ಮ ಅತಿ ಬುದ್ಧಿವಂತಿಕೆ ನನ್ನ ಮುಂದೆ ನಡೆಯುವುದಿಲ್ಲ” ಎಂದು ಪ್ರಕೃತಿಯು ನೀತಿ ಆಯೋಗಕ್ಕೆ ನೀತಿ ಪಾಠ ಹೇಳಬಯಸಿತ್ತೋ ಏನೋ?

ಹಿಮಾಲಯದ ಮಡಿಲಲ್ಲಿ ಇರುವ ಪುಟ್ಟ ರಾಜ್ಯ ಉತ್ತರಾಖಂಡಕ್ಕೆ ಇದೇನೂ ಮೊದಲನೇ ಪ್ರವಾಹವೂ ಅಲ್ಲ ಮತ್ತು ಕೊನೆಯದೂ ಆಗಿರುವುದಿಲ್ಲ. ಆದರೆ ಇದಕ್ಕೂ ಮುಂಚೆ ಉಂಟಾದ ತೊಂದರೆಗಳಿಂದ ನಾವು ಪಾಠ ಕಲಿತಿದ್ದರೆ ಅದು ಜಾಣತನದ ಲಕ್ಷಣವಾಗಿರುತ್ತಿತ್ತು. ಆದರೆ ಪಾಠ ಕಲಿಯುವುದು ಒತ್ತಟ್ಟಿಗಿರಲಿ ಈ ಮುಂಚೆಯಿದ್ದ ಎಲ್ಲ ನಿಯಮಗಳನ್ನು ಮತ್ತು ಅಪಾಯದ ಮುನ್ಸೂಚನೆಗಳನ್ನು ಗಾಳಿಗೆ ತೂರಿ ಇನ್ನೂ ಹೆಚ್ಚಿನ ವಿನಾಶಕ್ಕೆ ನಾವೇ ಮುನ್ನುಡಿ ಬರೆಯುತ್ತಿದ್ದೇವೆ. ಇದಕ್ಕೂ ಮುಂಚೆ 2013ರಲ್ಲಿ ಇನ್ನೂ ದೊಡ್ಡ ಮಟ್ಟದ ಪ್ರವಾಹವನ್ನು ಉತ್ತರಾಖಂಡವು ನೋಡಿತ್ತು. ಮೇಘ ಸ್ಫೋಟದಿಂದಾಗಿ ನದಿಗಳೆಲ್ಲ ಉಕ್ಕಿ ಹರಿದು ಸುಮಾರು 5 ಸಾವಿರ ಜನರು ಪ್ರಾಣವನ್ನು ಕಳೆದುಕೊಂಡಿದ್ದರು.

ಆಗಿನ ಕೇಂದ್ರ ಸರ್ಕಾರವು ಇದರ ಕುರಿತು ವರದಿಯನ್ನು ಸಲ್ಲಿಸಲು ತಜ್ಞರನ್ನು ಒಳಗೊಂಡ ಉನ್ನತಮಟ್ಟದ ಸಮಿತಿಯನ್ನು ರಚಿಸಿತ್ತು. ಅವರ ವರದಿಯ ಪ್ರಕಾರ ಪ್ರವಾಹದಿಂದ ಉಂಟಾದ ನಷ್ಟಕ್ಕೆ ಅತಿಯಾದ ಮಾನವ ಹಸ್ತಕ್ಷೇಪವೇ ಕಾರಣ ಎಂದು ದಾಖಲಿಸಿದ್ದಲ್ಲದೆ ಇನ್ನು ಮುಂದೆ ಹಿಮನದಿಗಳು ಇರುವ ಪ್ರದೇಶದಲ್ಲಿ ಮತ್ತು ಅಸ್ಥಿರವಾಗಿರುವ ಬೆಟ್ಟ ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆಗಳನ್ನು ನಿಷೇಧಿಸುವಂತೆ ಆ ಸಮಿತಿಯು ಹೇಳಿತ್ತು. ಆದರೆ 2016ರಲ್ಲಿ ಹೊಸ ಸರ್ಕಾರವು, ಈ ಮುಂಚೆ ಈ ವರದಿಯನ್ನು ಅನುಮೋದಿಸಿದ ಅಧಿಕಾರಿಯನ್ನು ವರ್ಗಾವಣೆ ಮಾಡಿ ಈ ಶಿಫಾರಸ್ಸುಗಳನ್ನು ಕಡೆಗಣಿಸಿತು. ಈಗ ಉತ್ತರಾಖಂಡದ ಹಿಮನದಿಗಳಿರುವ ಸೂಕ್ಷ್ಮ ಪ್ರದೇಶದಲ್ಲಿ ಸುಮಾರು 76 ಜಲವಿದ್ಯುತ್ ಯೋಜನೆಗಳಿವೆ ಮತ್ತು ತಜ್ಞರೇ ಹೇಳುವಂತೆ ಅವೆಲ್ಲ ಸಿಡಿಯಲು ಸಿದ್ದವಾಗಿರುವ ಟೈಮ್‌ಬಾಂಬಿನಂತೆ ಕುಳಿತಿವೆ.

ಈ ಪ್ರವಾಹಕ್ಕೆ ನಿಖರ ಕಾರಣವನ್ನು ಇನ್ನೂ ಕಂಡುಹಿಡಿಯಬೇಕಾಗಿದ್ದರೂ ಹಿಮನದಿಗಳು ಕರಗುವಿಕೆಯೇ ಈ ಪ್ರವಾಹಕ್ಕೆ ಕಾರಣವಿರಬಹುದು ಎಂಬುದು ತಜ್ಞರ ಅನಿಸಿಕೆ. ತಾಪಮಾನವು ಹೆಚ್ಚಿದಂತೆ ಹಿಮನದಿಗಳು ಹೆಚ್ಚಿನ ಪ್ರಮಾಣದಲ್ಲಿ ಕರಗಿ ಎತ್ತರದ ಪ್ರದೇಶದಲ್ಲಿ ನೀರಿನ ಸರೋವರಗಳು ಉಂಟಾಗುತ್ತವೆ. ಇವುಗಳಲ್ಲಿ ನೀರು ಹೆಚ್ಚಿದಂತೆ ಅತಿಯಾದ ಒತ್ತಡ ಉಂಟಾಗಿ ಸರೋವರದ ಒಡ್ಡುಗಳು ಕುಸಿಯತೊಡಗುತ್ತವೆ, ಇದರಿಂದಾಗಿ ಅಪಾರ ಪ್ರಮಾಣದ ನೀರು ಕಲ್ಲು ಬಂಡೆಗಳನ್ನು ಒಳಗೊಂಡು ಇಳಿಜಾರಿನಲ್ಲಿ ರಭಸವಾಗಿ ಹರಿಯತೊಡಗುತ್ತದೆ. ಕಡಿದಾದ ಬೆಟ್ಟಗಳಿಂದ ಹರಿಯುವ ಈ ನೀರಿಗೆ ಎಷ್ಟು ರಭಸವಿರುತ್ತದೆ ಎಂದರೆ ಇದು ಅಣೆಕಟ್ಟೆಯನ್ನೇ ಒಡೆದು ಮುನ್ನುಗ್ಗಬಹುದು.

ಒಂದು ಅಧ್ಯಯನದ ಪ್ರಕಾರ ಹಿಮಾಲಯದಲ್ಲಿದ್ದ ದೊಡ್ಡ ಹಿಮನದಿಗಳು ಸುಮಾರು 20%ರಷ್ಟು ಹಿಂದಕ್ಕೆ ಸರಿದಿವೆ ಮತ್ತು ಪ್ರತಿವರ್ಷ ಸುಮಾರು ಮೀಟರುಗಳಷ್ಟು ಹಿಮವು ಕರಗಿ ಹಿಮನದಿಗಳ ತಳವೂ ಗೋಚರಿಸುತ್ತಿದೆ. ಹಿಮನದಿಗಳು ಒಂದು ರೀತಿಯಲ್ಲಿ ನೀರಿನ ಠೇವಣಿಯಿದ್ದಂತೆ. ಹಿಮವು ನಿಧಾನವಾಗಿ ಕರಗಿ ವರ್ಷವಿಡೀ ನೀರನ್ನು ಉಣಿಸುತ್ತಲೇ ಇರುತ್ತವೆ. ಒಂದು ರೀತಿಯಲ್ಲಿ ನಮ್ಮ ಪಶ್ಚಿಮಘಟ್ಟದ ಶೋಲಾ ಅರಣ್ಯಗಳು ಹೇಗೆ ಸ್ಪಂಜಿನಂತೆ ನೀರನ್ನು ಹಿಡಿದುಕೊಂಡ ವರ್ಷಪೂರ್ತಿ ನದಿಹಳ್ಳಗಳಲ್ಲಿ ನೀರಿನ ಹರಿವು ಇರುವಂತೆ ನೋಡಿಕೊಳ್ಳುತ್ತವೆಯೋ ಹಾಗೆ. ಶೋಲಾ ಅರಣ್ಯದ ನಾಶದಿಂದ ಪಶ್ಚಿಮಘಟ್ಟದ ನದಿಗಳು ಹೇಗೆ ಬತ್ತುತ್ತವೆಯೋ ಹಾಗೆಯೇ ಹಿಮನದಿಗಳು ಕರಗಿ ಹೋಗುವುದರಿಂದ ಉತ್ತರ ಭಾರತದ ಬಹುತೇಕ ನದಿಗಳು ಗಂಭೀರವಾದ ನೀರಿನ ಕೊರತೆಯನ್ನು ಅನುಭವಿಸಲಿವೆ. ನಾವು ಇಂಗಾಲದ ಹೊರಸೂಸುವಿಕೆಯನ್ನು ತಡೆದು ಜಾಗತಿಕ ತಾಪಮಾನವನ್ನು ಹದ್ದುಬಸ್ತಿನಲ್ಲಿ ಇಟ್ಟರೂ ಶತಮಾನದ ಅಂಚಿಗೆ ನಮ್ಮಲ್ಲಿದ್ದ ಒಟ್ಟಾರೆ 33% ಹಿಮನದಿಗಳು ಸಂಪೂರ್ಣವಾಗಿ ಕರಗಿ ಹೋಗಲಿವೆ. ನಾವು ಯಾವ ನಿಯಂತ್ರಣವನ್ನು ಹೇರದೆ ಯಥಾಸ್ಥಿತಿಯನ್ನು ಮುಂದುವರಿಸಿದರೆ ಸುಮಾರು 66% ಹಿಮನದಿಗಳು ಶಾಶ್ವತವಾಗಿ ಕರಗಿಹೋಗಲಿವೆ.

ಸರಿ ಇನ್ನೂ ಒಂದು ಶತಮಾನ ತಾನೇ, ಈಗ ನಾವು ಆರಾಮವಾಗಿ ಇರಬಹುದಲ್ಲ ಎಂದು ನಾವೇನೂ ಯೋಚಿಸುವಂತಿಲ್ಲ. ಈ ಎಲ್ಲ ಬದಲಾವಣೆಗಳು ಒಂದೇ ಸಾರಿ ಆಗಿಬಿಡುವುದಿಲ್ಲ. ಸಾಮಾನ್ಯವಾಗಿ ಕಳೆದೆರಡು ದಶಕಗಳಲ್ಲಿ ಹೇಗೆ ಹವಾಮಾನದ ವೈಪರೀತ್ಯ ಉಂಟಾಗುತ್ತಿದೆ ಎಂಬುದು ನಮ್ಮ ಗಮನಕ್ಕೆ ಬಂದಿರುತ್ತದೆ. ಒಂದು ತಿಂಗಳಿನಲ್ಲಿ ಆಗಬೇಕಾದ ಮಳೆ ಒಂದೇ ವಾರದಲ್ಲಿ ಆಗುವುದು, ಬಿತ್ತಿದ ಫಸಲನ್ನು ಇನ್ನೇನು ಕಟಾವು ಮಾಡಬೇಕು ಎನ್ನುವಷ್ಟರಲ್ಲಿಯೇ ಏಕಾಏಕಿ ಮಳೆಯಾಗಿ ಆ ವರ್ಷದ ಶ್ರಮ ಮತ್ತು ಬಂಡವಾಳವನ್ನು ಹಾಳು ಮಾಡಿಬಿಡುವುದು, ಇವೆಲ್ಲ ವಿದ್ಯಮಾನಗಳು ಸಹಜವೇನೋ ಅನ್ನುವಂತಾಗಿವೆ. ಕೊಡಗಿನಲ್ಲಿ, ಕೇರಳದಲ್ಲಿ ಕಂಡುಕೇಳರಿಯದಂತಹ ಭೂಕುಸಿತ ಉಂಟಾಗಿದೆ.

ಹೀಗೆ ವರ್ಷದಿಂದ ವರ್ಷಕ್ಕೆ ಹೊಸ ಹೊಸ ಅನಾಹುತಗಳು ಉಂಟಾಗುತ್ತಲೇ ಇರುತ್ತವೆ. ಎರಡು ವರ್ಷದ ಹಿಂದೆ ನಾನು ಸಿಕ್ಕಿಂಗೆ ಹೋದ ಸಂದರ್ಭದಲ್ಲಿ ಸ್ಥಳೀಯರನ್ನು ಮಾತಿಗೆಳೆದಾಗ ಅವರೂ ಇದೇ ಮಾತನ್ನು ಪುನರುಚ್ಚರಿಸಿದರು. ಮುಂಚೆ ಹಿಮಪಾತವಾಗುತ್ತಿದ್ದ ಸ್ಥಳಗಳಲ್ಲಿ ಈಗ ಹಿಮಪಾತವೇ ಆಗುತ್ತಿಲ್ಲ, ಎಲ್ಲೋ ಮಂಜಿನಂತೆ ಸ್ವಲ್ಪ ಹಿಮ ಬಿದ್ದು ಹೋಗುತ್ತದಷ್ಟೇ. ಅವರು ಕೃಷಿ ಚಟುವಟಿಕೆಗಳಿಗಾಗಿ ಸಾಂಪ್ರದಾಯಿಕವಾಗಿ ಪಾಲಿಸುತ್ತಿದ್ದ ಪಂಚಾಂಗ, ತಿಥಿ ಮತ್ತು ನಕ್ಷತ್ರಗಳ ಲೆಕ್ಕಾಚಾರಗಳೆಲ್ಲ ಈಗ ಅವರ ಉಪಯೋಗಕ್ಕೆ ಬರುತ್ತಲೇ ಇಲ್ಲ. ಕಾರಣ ಮಳೆ ಮತ್ತು ಹಿಮಪಾತ ಆಗುತ್ತಿದ್ದ ವೇಳಾಪಟ್ಟಿಯೇ ಬುಡಮೇಲಾಗಿದೆ.

ಭಾರತದ ಪರಿಸರ ಹೋರಾಟಗಳಲ್ಲಿ ಎದ್ದು ಕಾಣುವುದು ಇದೇ ಚಮೋಲಿ ಜಿಲ್ಲೆಯ ಸುಂದರಲಾಲ್ ಬಹುಗುಣ ಮತ್ತು ಇತರ ಮಹಿಳೆಯರ ನೇತೃತ್ವದಲ್ಲಿ ನಡೆದ ಚಿಪ್ಕೋ(ಅಪ್ಪಿಕೋ) ಚಳವಳಿ. ಕಾಕತಾಳೀಯವೆಂದರೆ ಚಳವಳಿ ಪ್ರಾರಂಭವಾದ ಇದೇ ರೇಣಿ ಗ್ರಾಮದ ಆನತಿ ದೂರದಲ್ಲಿಯೇ ಈ ಅನಾಹುತ ಸಂಭವಿಸಿದೆ. ಅರಣ್ಯ ನಾಶದಿಂದ ಏನೇನು ಪರಿಣಾಮಗಳು ಉಂಟಾಗಬಹುದೆಂದು ಆ ಗ್ರಾಮಸ್ಥರು ಹೋರಾಟಕ್ಕೆ ಇಳಿದಿದ್ದರೋ ಅವೆಲ್ಲವೂ ಒಂದೊಂದಾಗಿ ಅವರ ಕಣ್ಣಮುಂದೆಯೇ ಘಟಿಸುತ್ತಿವೆ. ಚಿಪ್ಕೋ ಚಳವಳಿ ಈಗ ನೇಪಥ್ಯಕ್ಕೆ ಸರಿದಿದೆ, ಈ ಅನಾಹುತಗಳ ಕುರಿತು ಎಚ್ಚರಿಸುವ ವಿಜ್ಞಾನಿಗಳ ಮಾತಿಗೆ ಬೆಲೆಯಿಲ್ಲ, ಇದ್ದಬದ್ದ ಪರಿಸರ ಕಾನೂನುಗಳನ್ನು ಗಾಳಿಗೆ ತೂರಿ ಎಲ್ಲೆಡೆ ಜೆಸಿಬಿ, ಬುಲ್ಡೋಜರ್‌ಗಳನ್ನು ನುಗ್ಗಿಸಲಾಗುತ್ತಿದೆ ಡೈನಮೇಟುಗಳನ್ನು ಸಿಡಿಸಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪರಿಸರದ ಮತ್ತು ಎಲ್ಲ ಜೀವಿಗಳ ಉಳಿವು ನಾವೆಲ್ಲರೂ ಈ ವಿಷಯಗಳನ್ನು ಎಷ್ಟು ವೈಜ್ಞಾನಿಕವಾಗಿ ಅರ್ಥಮಾಡಿಕೊಳ್ಳುತ್ತೇವೆ ಮತ್ತು ಈ ಕುರಿತು ಎಷ್ಟು ಗಟ್ಟಿಯಾಗಿ ದನಿ ಎತ್ತುತ್ತೇವೆ ಎಂಬುದರ ಮೇಲೆ ಆಧಾರಪಟ್ಟಿದೆ.

ಗುರುಪ್ರಸಾದ್ ತಿಮ್ಮಾಪುರ

ಗುರುಪ್ರಸಾದ್ ತಿಮ್ಮಾಪುರ
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಗುರು ಪರಿಸರ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪರಿಸರ ಕಾಳಜಿಗೆ ಸಂಬಂಧಿಸಿದಂತೆ ಹಲವು ಲೇಖನಗಳನ್ನು ಬರೆದಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....