Homeಮುಖಪುಟಕನಿಷ್ಠ 170 ಮದರಸಾಗಳನ್ನು ಮುಚ್ಚಿದ ಉತ್ತರಾಖಂಡ ಸರ್ಕಾರ

ಕನಿಷ್ಠ 170 ಮದರಸಾಗಳನ್ನು ಮುಚ್ಚಿದ ಉತ್ತರಾಖಂಡ ಸರ್ಕಾರ

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಉತ್ತರಾಖಂಡದಾದ್ಯಂತ ಕನಿಷ್ಠ 170 ಮದರಸಾಗಳನ್ನು ಮುಚ್ಚಲಾಗಿದೆ ಎಂದು ವರದಿಯಗಳಿಂದ ತಿಳಿದುಬಂದಿದೆ. ಮದರಸಾ ಮಂಡಳಿ ಅಥವಾ ಶಿಕ್ಷಣ ಇಲಾಖೆಯಲ್ಲಿ ನೋಂದಣಿ ಕೊರತೆಯೇ ಈ ಕ್ರಮಕ್ಕೆ ಕಾರಣವೆಂದು ರಾಜ್ಯ ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

ಹಲ್ದ್ವಾನಿಯ ಮುಸ್ಲಿಂ ಬಹುಸಂಖ್ಯಾತ ಬನ್ಭುಲ್ಪುರ ಪ್ರದೇಶದಲ್ಲಿ, ಜಿಲ್ಲಾಡಳಿತ, ಪುರಸಭೆ ಮತ್ತು ಸ್ಥಳೀಯ ಪೊಲೀಸರ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡವು ಏಪ್ರಿಲ್ 13 ರ ಭಾನುವಾರ ವಿಶೇಷ ತಪಾಸಣೆ ನಡೆಸಿತು. ಕಾರ್ಯಾಚರಣೆಯ ಸಮಯದಲ್ಲಿ, ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಆರೋಪದ ಮೇಲೆ ಏಳು ಮದರಸಾಗಳನ್ನು ಸೀಲ್ ಮಾಡಲಾಗಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಸರ್ಕಾರ ನೇಮಿಸಿದ ವಿಶೇಷ ತಂಡಗಳು ನಡೆಸಿದ ವಿವರವಾದ ಸಮೀಕ್ಷೆಗಳ ವರದಿಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಧಾಮಿ ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಶಿಕ್ಷಣದ ಹೆಸರಿನಲ್ಲಿ ಮಕ್ಕಳನ್ನು ತೀವ್ರಗಾಮಿತ್ವದತ್ತ ಕರೆದೊಯ್ಯುವ ಸಂಸ್ಥೆಗಳನ್ನು ಯಾವುದೇ ಸಂದರ್ಭದಲ್ಲೂ ಸಹಿಸಲಾಗುವುದಿಲ್ಲ. ಮದರಸಾಗಳ ಮುಚ್ಚುವ ಕ್ರಮವನ್ನು ಐತಿಹಾಸಿಕ ಹೆಜ್ಜೆ” ಎಂದು ಅವರು ಬಣ್ಣಿಸಿದರು.

ಇದು ಕೇವಲ ಆರಂಭವಾಗಿರಬಹುದು ಎಂದು ಅಧಿಕಾರಿಗಳು ಸುಳಿವು ನೀಡಿದ್ದಾರೆ. ಸುಮಾರು 500 ಮದರಸಾಗಳು ಪ್ರಸ್ತುತ ಪರಿಶೀಲನೆಯಲ್ಲಿದ್ದು ಮುಚ್ಚುವ ಸಾಧ್ಯತೆಯನ್ನು ಎದುರಿಸುತ್ತಿವೆ. ಮುಚ್ಚಲಾದ ಹಲವು ಮದರಸಾಗಳು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದವು.

ಇದಕ್ಕೆ ಪ್ರತಿಕ್ರಿಯೆಯಾಗಿ, ನಾಗರಿಕ ಹಕ್ಕುಗಳ ಕಾರ್ಯಕರ್ತರು ಮತ್ತು ಮುಸ್ಲಿಂ ಧರ್ಮಗುರುಗಳು ಈ ಕ್ರಮವನ್ನು ನ್ಯಾಯಯುತ ಮತ್ತು ಪುರಾವೆ ಆಧಾರಿತ ಪರಿಶೀಲನೆಯನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯವನ್ನು ಒತ್ತಾಯಿಸಿದ್ದಾರೆ. ಪಾರದರ್ಶಕತೆ ಇಲ್ಲದೆ ವ್ಯಾಪಕ ಕ್ರಮಗಳು ಅಪನಂಬಿಕೆಯನ್ನು ಬೆಳೆಸಬಹುದು, ಈಗಾಗಲೇ ಗುರಿಯಾಗಿಸಿಕೊಂಡಿರುವ ದುರ್ಬಲ ಸಮುದಾಯಗಳನ್ನು ಮತ್ತಷ್ಟು ಅಂಚಿನಲ್ಲಿಡಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಛತ್ತೀಸ್‌ಗಢ| ಪ್ರಬಲ ಜಾತಿ ಬಾಲಕಿಯೊಂದಿಗೆ ಮಾತನಾಡಿದ್ದಕ್ಕೆ ದಲಿತ ಯುವಕನಿಗೆ ಚಿತ್ರಹಿಂಸೆ; ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...