Homeಮುಖಪುಟದ್ವೇಷ ಭಾಷಣ ಕೇಸ್: ’ನೀವೆಲ್ಲರೂ ಸಾಯುತ್ತೀರಿ’ ಎಂದು ಪೊಲೀಸರಿಗೆ ಯತಿ ನರಸಿಂಗಾನಂದ ಬೆದರಿಕೆ

ದ್ವೇಷ ಭಾಷಣ ಕೇಸ್: ’ನೀವೆಲ್ಲರೂ ಸಾಯುತ್ತೀರಿ’ ಎಂದು ಪೊಲೀಸರಿಗೆ ಯತಿ ನರಸಿಂಗಾನಂದ ಬೆದರಿಕೆ

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ದ್ವೇಷ ಭಾಷಣ ಮಾಡಿದ್ದ ಪ್ರಕರಣದ ಆರೋಪಿಯನ್ನು ಬಂಧಿಸುವಾಗ ’ನೀವೆಲ್ಲರೂ ಸಾಯುತ್ತೀರಿ’ (ತುಮ್ ಸಬ್ ಮಾರೋಗೆ) ಎಂದು ಪೊಲೀಸರಿಗೆ ವಿವಾದಿತ ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಬೆದರಿಕೆ ಹಾಕಿದ್ದಾರೆ.

ಹರಿದ್ವಾರ ದ್ವೇಷ ಭಾಷಣ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರ್ಮಿಕ ಮುಖಂಡರಲ್ಲಿ ಒಬ್ಬರಾದ ಯತಿ ನರಸಿಂಗಾನಂದ, ನಿನ್ನೆ ಪ್ರಕರಣದ ಸಹ ಆರೋಪಿ ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿಯನ್ನು ಬಂಧಿಸಿದಾಗ ಪೊಲೀಸ್ ಅಧಿಕಾರಿಗಳಿಗೆ ಅಡ್ಡಿಪಡಿಸಿ ಹೀಗೆ ಬೆದರಿಕೆ ಹಾಕಿದ್ದಾರೆ.

ಜಿತೇಂದ್ರ ತ್ಯಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವ ಮೊದಲು ವಸೀಂ ರಿಜ್ವಿ ಆಗಿದ್ದರು. “ಧರ್ಮ ಸಂಸದ್” ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ, ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದ ದ್ವೇಷ ಭಾಷಣ ಪ್ರಕರಣದಲ್ಲಿ ಬಂಧಿತರಾದ ಮೊದಲ ಆರೋಪಿಯಾಗಿದ್ದಾರೆ. ಉತ್ತರಾಖಂಡ ಪೊಲೀಸರು ಯತಿ ನರಸಿಂಗಾನಂದ್ ಮತ್ತು ಇನ್ನೋರ್ವ ಆರೋಪಿ ಸಾಧ್ವಿ ಅನ್ನಪೂರ್ಣಗೂ ಸಮನ್ಸ್ ನೀಡಿದ್ದಾರೆ.

ಇದನ್ನೂ ಓದಿ: ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ಪೊಲೀಸ್ ಅಧಿಕಾರಿಗಳು ಗುರುವಾರ ಆರೋಪಿ ಜಿತೇಂದ್ರ ತ್ಯಾಗಿಯನ್ನು ಕಸ್ಟಡಿಗೆ ತೆಗೆದುಕೊಳ್ಳುವಾಗ ನರಸಿಂಗಾನಂದರಿಗೆ ಸಹಕರಿಸುವಂತೆ ವಿನಂತಿಸುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ನೋಡಬಹುದು.

ಕಾರಿನಲ್ಲಿ ಕುಳಿತ ನರಸಿಂಗಾನಂದ, ’ತ್ಯಾಗಿಯನ್ನು ಏಕೆ ಬಂಧಿಸಿದ್ದೀರಿ? ಮೂರು ಪ್ರಕರಣಗಳಲ್ಲಿ ನಾನು ಅವರೊಂದಿಗೆ ಸಹ ಆರೋಪಿ, ಅವರು ಒಬ್ಬನೇ ಎಲ್ಲವನ್ನೂ ಮಾಡಿದ್ದಾನೆಯೇ?’ ಎಂದು ಪ್ರಶ್ನಿಸಿದ್ದಾರೆ. ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರೂ ಕೂಡ ಒಪ್ಪದೆ ಕಾರಿನಲ್ಲಿಯೇ ಕುಳಿತುಕೊಳ್ಳುತ್ತಾರೆ.

“ತ್ಯಾಗಿ ಅವರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ” ಎಂದು ಅಧಿಕಾರಿಗಳು ಹೇಳುತ್ತಿದ್ದಂತೆ, ನರಸಿಂಹಾನಂದ, “ಆದರೆ ನಾನು ಮಾಡುತ್ತಿಲ್ಲ. ನಮ್ಮ ಬೆಂಬಲದ ಮೇಲೆ ಅವರು ಹಿಂದೂ ಆಗಿದ್ದಾರೆ” ಎಂದು ಪೊಲೀಸರಿಗೆ ಉತ್ತರಿಸುತ್ತಾರೆ. ಅಧಿಕಾರಿಗಳ ಒತ್ತಡ ಹೆಚ್ಚಾದಂತೆ, “ನೀವೆಲ್ಲರೂ ಸಾಯುತ್ತೀರಿ, ನಿಮ್ಮ ಮಕ್ಕಳೂ ಸಹ…”(ತುಮ್ ಸಬ್ ಮಾರೋಗೇ, ಅಪ್ನೆ ಬಚ್ಚೋ ಕೋ ಭೀ..) ಎಂದು ನರಿಂಸಿಂಗಾನಂದ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

ಆರೋಪಿ ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿರನ್ನು ರೂರ್ಕಿಯಲ್ಲಿ ಬಂಧಿಸಲಾಗಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ರಾವತ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷ ವಸೀಮ್ ರಿಜ್ವಿ ಕಳೆದ ತಿಂಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಜಿತೇಂದ್ರ ಸಿಂಗ್ ನಾರಾಯಣ್ ತ್ಯಾಗಿ ಎಂಬ ಹೆಸರನ್ನು ಪಡೆದಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾಗಿರುವ ಗಾಜಿಯಾಬಾದ್‌ನ ದಸ್ನಾದೇವಿ ದೇವಸ್ಥಾನದ ಪ್ರಧಾನ ಅರ್ಚಕ ನರಸಿಂಹಾನಂದ ಧರ್ಮ ಸಂಸದ್ ಸಮಾರಂಭವನ್ನು ಆಯೋಜಿಸಿದ್ದರು.

ಮುಸ್ಲಿಮರ ಹತ್ಯಾಕಾಂಡ ಮತ್ತು ಅವರ ವಿರುದ್ಧ ಶಸ್ತ್ರಾಸ್ತ್ರಗಳ ಬಳಕೆಗೆ ಕರೆ ನೀಡಿದ್ದ ಯತಿ ನರಸಿಂಗಾನಂದ, ಜಿತೇಂದ್ರ ಸಿಂಗ್ ನಾರಾಯಣ್ ತ್ಯಾಗಿ ಮತ್ತು ಅನ್ನಪೂರ್ಣ ಸೇರಿದಂತೆ 10 ಕ್ಕೂ ಹೆಚ್ಚು ಜನರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳ ಕುರಿತು 10 ದಿನಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದ ನಂತರ ಪ್ರಕರಣದಲ್ಲಿ ಮೊದಲ ಬಂಧನವಾಗಿದೆ.


ಇದನ್ನೂ ಓದಿ: ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...