Homeಮುಖಪುಟದ್ವೇಷ ಭಾಷಣ ಕೇಸ್: ’ನೀವೆಲ್ಲರೂ ಸಾಯುತ್ತೀರಿ’ ಎಂದು ಪೊಲೀಸರಿಗೆ ಯತಿ ನರಸಿಂಗಾನಂದ ಬೆದರಿಕೆ

ದ್ವೇಷ ಭಾಷಣ ಕೇಸ್: ’ನೀವೆಲ್ಲರೂ ಸಾಯುತ್ತೀರಿ’ ಎಂದು ಪೊಲೀಸರಿಗೆ ಯತಿ ನರಸಿಂಗಾನಂದ ಬೆದರಿಕೆ

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ದ್ವೇಷ ಭಾಷಣ ಮಾಡಿದ್ದ ಪ್ರಕರಣದ ಆರೋಪಿಯನ್ನು ಬಂಧಿಸುವಾಗ ’ನೀವೆಲ್ಲರೂ ಸಾಯುತ್ತೀರಿ’ (ತುಮ್ ಸಬ್ ಮಾರೋಗೆ) ಎಂದು ಪೊಲೀಸರಿಗೆ ವಿವಾದಿತ ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಬೆದರಿಕೆ ಹಾಕಿದ್ದಾರೆ.

ಹರಿದ್ವಾರ ದ್ವೇಷ ಭಾಷಣ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರ್ಮಿಕ ಮುಖಂಡರಲ್ಲಿ ಒಬ್ಬರಾದ ಯತಿ ನರಸಿಂಗಾನಂದ, ನಿನ್ನೆ ಪ್ರಕರಣದ ಸಹ ಆರೋಪಿ ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿಯನ್ನು ಬಂಧಿಸಿದಾಗ ಪೊಲೀಸ್ ಅಧಿಕಾರಿಗಳಿಗೆ ಅಡ್ಡಿಪಡಿಸಿ ಹೀಗೆ ಬೆದರಿಕೆ ಹಾಕಿದ್ದಾರೆ.

ಜಿತೇಂದ್ರ ತ್ಯಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವ ಮೊದಲು ವಸೀಂ ರಿಜ್ವಿ ಆಗಿದ್ದರು. “ಧರ್ಮ ಸಂಸದ್” ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ, ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದ ದ್ವೇಷ ಭಾಷಣ ಪ್ರಕರಣದಲ್ಲಿ ಬಂಧಿತರಾದ ಮೊದಲ ಆರೋಪಿಯಾಗಿದ್ದಾರೆ. ಉತ್ತರಾಖಂಡ ಪೊಲೀಸರು ಯತಿ ನರಸಿಂಗಾನಂದ್ ಮತ್ತು ಇನ್ನೋರ್ವ ಆರೋಪಿ ಸಾಧ್ವಿ ಅನ್ನಪೂರ್ಣಗೂ ಸಮನ್ಸ್ ನೀಡಿದ್ದಾರೆ.

ಇದನ್ನೂ ಓದಿ: ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ಪೊಲೀಸ್ ಅಧಿಕಾರಿಗಳು ಗುರುವಾರ ಆರೋಪಿ ಜಿತೇಂದ್ರ ತ್ಯಾಗಿಯನ್ನು ಕಸ್ಟಡಿಗೆ ತೆಗೆದುಕೊಳ್ಳುವಾಗ ನರಸಿಂಗಾನಂದರಿಗೆ ಸಹಕರಿಸುವಂತೆ ವಿನಂತಿಸುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ನೋಡಬಹುದು.

ಕಾರಿನಲ್ಲಿ ಕುಳಿತ ನರಸಿಂಗಾನಂದ, ’ತ್ಯಾಗಿಯನ್ನು ಏಕೆ ಬಂಧಿಸಿದ್ದೀರಿ? ಮೂರು ಪ್ರಕರಣಗಳಲ್ಲಿ ನಾನು ಅವರೊಂದಿಗೆ ಸಹ ಆರೋಪಿ, ಅವರು ಒಬ್ಬನೇ ಎಲ್ಲವನ್ನೂ ಮಾಡಿದ್ದಾನೆಯೇ?’ ಎಂದು ಪ್ರಶ್ನಿಸಿದ್ದಾರೆ. ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರೂ ಕೂಡ ಒಪ್ಪದೆ ಕಾರಿನಲ್ಲಿಯೇ ಕುಳಿತುಕೊಳ್ಳುತ್ತಾರೆ.

“ತ್ಯಾಗಿ ಅವರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ” ಎಂದು ಅಧಿಕಾರಿಗಳು ಹೇಳುತ್ತಿದ್ದಂತೆ, ನರಸಿಂಹಾನಂದ, “ಆದರೆ ನಾನು ಮಾಡುತ್ತಿಲ್ಲ. ನಮ್ಮ ಬೆಂಬಲದ ಮೇಲೆ ಅವರು ಹಿಂದೂ ಆಗಿದ್ದಾರೆ” ಎಂದು ಪೊಲೀಸರಿಗೆ ಉತ್ತರಿಸುತ್ತಾರೆ. ಅಧಿಕಾರಿಗಳ ಒತ್ತಡ ಹೆಚ್ಚಾದಂತೆ, “ನೀವೆಲ್ಲರೂ ಸಾಯುತ್ತೀರಿ, ನಿಮ್ಮ ಮಕ್ಕಳೂ ಸಹ…”(ತುಮ್ ಸಬ್ ಮಾರೋಗೇ, ಅಪ್ನೆ ಬಚ್ಚೋ ಕೋ ಭೀ..) ಎಂದು ನರಿಂಸಿಂಗಾನಂದ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

ಆರೋಪಿ ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿರನ್ನು ರೂರ್ಕಿಯಲ್ಲಿ ಬಂಧಿಸಲಾಗಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ರಾವತ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷ ವಸೀಮ್ ರಿಜ್ವಿ ಕಳೆದ ತಿಂಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಜಿತೇಂದ್ರ ಸಿಂಗ್ ನಾರಾಯಣ್ ತ್ಯಾಗಿ ಎಂಬ ಹೆಸರನ್ನು ಪಡೆದಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾಗಿರುವ ಗಾಜಿಯಾಬಾದ್‌ನ ದಸ್ನಾದೇವಿ ದೇವಸ್ಥಾನದ ಪ್ರಧಾನ ಅರ್ಚಕ ನರಸಿಂಹಾನಂದ ಧರ್ಮ ಸಂಸದ್ ಸಮಾರಂಭವನ್ನು ಆಯೋಜಿಸಿದ್ದರು.

ಮುಸ್ಲಿಮರ ಹತ್ಯಾಕಾಂಡ ಮತ್ತು ಅವರ ವಿರುದ್ಧ ಶಸ್ತ್ರಾಸ್ತ್ರಗಳ ಬಳಕೆಗೆ ಕರೆ ನೀಡಿದ್ದ ಯತಿ ನರಸಿಂಗಾನಂದ, ಜಿತೇಂದ್ರ ಸಿಂಗ್ ನಾರಾಯಣ್ ತ್ಯಾಗಿ ಮತ್ತು ಅನ್ನಪೂರ್ಣ ಸೇರಿದಂತೆ 10 ಕ್ಕೂ ಹೆಚ್ಚು ಜನರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳ ಕುರಿತು 10 ದಿನಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದ ನಂತರ ಪ್ರಕರಣದಲ್ಲಿ ಮೊದಲ ಬಂಧನವಾಗಿದೆ.


ಇದನ್ನೂ ಓದಿ: ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...