Homeಮುಖಪುಟಉತ್ತರಾಖಂಡ: 'ಲವ್ ಜಿಹಾದ್' ಆರೋಪದ ಮೇಲೆ ಬಲವಂತವಾಗಿ ಸಲೂನ್ ಮುಚ್ಚಿಸಿದ ಹಿಂದುತ್ವ ಗುಂಪು

ಉತ್ತರಾಖಂಡ: ‘ಲವ್ ಜಿಹಾದ್’ ಆರೋಪದ ಮೇಲೆ ಬಲವಂತವಾಗಿ ಸಲೂನ್ ಮುಚ್ಚಿಸಿದ ಹಿಂದುತ್ವ ಗುಂಪು

- Advertisement -
- Advertisement -

ಉತ್ತರಾಖಂಡದ ಋಷಿಕೇಶದಲ್ಲಿ ಮುಸ್ಲಿಂ ಒಡೆತನದ ಯೂನಿಸೆಕ್ಸ್ ಸಲೂನ್ ಅನ್ನು ‘ಅನೈತಿಕ ಚಟುವಟಿಕೆಯ ಕೇಂದ್ರ’ ಎಂದು ಹಿಂದುತ್ವ ಸಂಘಟನೆ ಗುಂಪೊಂದು ಆರೋಪಿಸಿದ ನಂತರ ಅದನ್ನು ಬಲವಂತವಾಗಿ ಮುಚ್ಚಲಾಯಿತು.

ಸೆಪ್ಟೆಂಬರ್ 30 ರ ಗುರುವಾರ ತಿಲಕ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಬಲಪಂಥೀಯ ಸದಸ್ಯರು ಕೋಮು ಘೋಷಣೆಗಳನ್ನು ಕೂಗಿ, ರಾಜ್ಯಾದ್ಯಂತ ಎಲ್ಲ ಯೂನಿಸೆಕ್ಸ್ ಸಲೂನ್‌ಗಳನ್ನು ಮುಚ್ಚಬೇಕೆಂದು ಒತ್ತಾಯಿಸಿದರು.

ಅದರ ಅಧ್ಯಕ್ಷ ರಾಘವೇಂದ್ರ ಭಟನಾಗರ್, ಮುಸ್ಲಿಂ ಕ್ಷೌರಿಕರು ‘ಲವ್ ಜಿಹಾದ್’ ಮಾಡುತ್ತಿದ್ದಾರೆ. ಅವರು ಹಿಂದೂ ಮಹಿಳೆಯರನ್ನು ಆಮಿಷವೊಡ್ಡುತ್ತಾರೆ, ಅವರನ್ನು ಇಸ್ಲಾಂಗೆ ಮತಾಂತರಗೊಳಿಸುತ್ತಾರೆ” ಎಂದು ಆರೋಪಿ.

“ಒಂದು ನಿರ್ದಿಷ್ಟ ಸಮುದಾಯದ ಹುಡುಗರು ಈ ಸಲೂನ್‌ಗಳ ಹಿಂದೂ ಗ್ರಾಹಕರ ಫೋನ್ ಸಂಖ್ಯೆಗಳನ್ನು ತೆಗೆದುಕೊಳ್ಳುತ್ತಾರೆ. ಅವರು ಅವರನ್ನು ಬ್ರೈನ್ ವಾಶ್ ಮಾಡುತ್ತಾರೆ, ಜಿಹಾದಿ ಮಾತಿನಿಂದ ಬಲೆಗೆ ಬೀಳಿಸುತ್ತಾರೆ. ಅವರೊಂದಿಗೆ ಓಡಿಹೋಗುತ್ತಾರೆ. ಇದು ನಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರಿಗೆ ಅಪಾಯಕಾರಿ” ಎಂದು ಅವರು ಹೇಳಿದರು.

“ಲವ್ ಜಿಹಾದ್ ಎಂಬುದು ಒಂದು ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಇಸ್ಲಾಮೀಕರಣ ಯೋಜನೆಯ ಭಾಗವಾಗಿ ಮುಸ್ಲಿಮೇತರ ಮಹಿಳೆಯರನ್ನು ಮದುವೆಯಾಗಲು, ಮತಾಂತರಿಸಲು ಉದ್ದೇಶಪೂರ್ವಕವಾಗಿ ಮತ್ತು ಕಾರ್ಯತಂತ್ರದಿಂದ ಆಕರ್ಷಿಸುತ್ತಿದ್ದಾರೆ” ಎಂದು ಆರೋಪಿಸುತ್ತಾರೆ.

ಸಲೂನ್ ಕೆಲಸಗಾರರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರೆ, ಹಿಂದೂ ಮಹಿಳೆಯರನ್ನು ಸಹಾಯಕರಾಗಿ ಏಕೆ ನೇಮಿಸಲಾಗಿತ್ತು ಎಂದು ಅವರು ಪ್ರಶ್ನಿಸಿದರು. “ಅವರು ತಮ್ಮ ಸ್ವಂತ ಕುಟುಂಬಗಳ ಮಹಿಳೆಯರನ್ನು ಏಕೆ ನೇಮಿಸಿಕೊಳ್ಳುವುದಿಲ್ಲ? ನಮ್ಮ ಹೆಣ್ಣುಮಕ್ಕಳನ್ನು ಮಾತ್ರ ಇದರಲ್ಲಿ ಏಕೆ ಎಳೆಯಲಾಗುತ್ತಿದೆ” ಎಂದು ಅವರು ಪ್ರಶ್ನಿಸಿದರು, ಸಲೂನ್‌ಗಳು ತಮ್ಮ ವ್ಯವಹಾರವನ್ನು ಮುಂದುವರಿಸಿದರೆ ಬೀದಿಗಳಲ್ಲಿ ದೊಡ್ಡ ಚಳುವಳಿ ನಡೆಯುವ ಬಗ್ಗೆ ಎಚ್ಚರಿಸಿದರು.

ಸ್ಥಳೀಯ ಕ್ಷೌರಿಕರ ಸಂಘವು ಹಿಂದೂ ಶಕ್ತಿ ಸಂಘಟನೆಯ ಬೇಡಿಕೆಗಳಿಗೆ ಬೆಂಬಲ ನೀಡಿದ್ದು, ಯುನಿಸೆಕ್ಸ್ ಸಲೂನ್‌ಗಳು ಅಸ್ತಿತ್ವದಲ್ಲಿರಬಾರದು ಎಂದು ಹೇಳಿದೆ.

ಘಟನೆ ಬಗ್ಗೆ ಮುಸ್ಲಿಮರು ಭಯ ಮತ್ತು ಕೋಪ ವ್ಯಕ್ತಪಡಿಸಿದ್ದು, ಒಂದು ದಿನ ಚಹಾ ಮಾರಾಟ ಮಾಡುವುದನ್ನು ಸಹ ‘ಲವ್ ಜಿಹಾದ್’ ಎಂದು ಕರೆಯಲಾಗುತ್ತದೆ ಎಂದು ಒಬ್ಬರು ಹೇಳಿದ್ದಾರೆ.

“ಇದು ಮುಸ್ಲಿಂ ಅಸ್ತಿತ್ವದ ಮೇಲೆ ಯೋಜಿತ ದಾಳಿ. ಮುಸ್ಲಿಮರ ಜೀವನ ನಿರ್ವಹಣೆಯ ಪ್ರತಿಯೊಂದು ಮಾರ್ಗವನ್ನು ಹತ್ತಿಕ್ಕಲು ಬಯಸುತ್ತಾರೆ, ಇದರಿಂದ ನಾವು ಗುಲಾಮರಂತೆ ಆಗುತ್ತೇವೆ ಅಥವಾ ಬದುಕುತ್ತೇವೆ. ಸರ್ಕಾರವು ಈ ದ್ವೇಷವನ್ನು ಸಕ್ರಿಯವಾಗಿ ಪ್ರೋತ್ಸಾಹಿಸುತ್ತಿಲ್ಲವಾದರೂ ಮೌನವಾಗಿ ನೋಡುತ್ತಿದೆ” ಎಂದು ಡೆಹ್ರಾಡೂನ್ ಮೂಲದ ಮುಸ್ಲಿಂ ಹಕ್ಕುಗಳ ಕಾರ್ಯಕರ್ತ ಹೇಳಿದರು.

ಇದು ಮೊದಲ ನಿದರ್ಶನವಲ್ಲ, ಇತ್ತೀಚೆಗೆ, ಉತ್ತರಾಖಂಡದಾದ್ಯಂತ ಯುನಿಸೆಕ್ಸ್ ಸಲೂನ್‌ಗಳನ್ನು ಹೊಂದಿರುವ ಅನೇಕ ಮುಸ್ಲಿಂ ಕ್ಷೌರಿಕರು ಬಲಪಂಥೀಯ ಸಂಘಟನೆಗಳ ದಾಳಿಗೆ ಗುರಿಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...