Homeಮುಖಪುಟಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

ಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

- Advertisement -
- Advertisement -

ಭಾರೀ  ಪ್ರವಾಹದಿಂದಾಗಿ ಉತ್ತರಖಾಂಡ್ ರಾಜ್ಯ ಉತ್ತರಿಸಿದೆ.  ಗುಡ್ಡಗಾಡು ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದಲೂ ಭಾರೀ ಮಳೆಯಾಗುತ್ತಿದೆ. 11 ಮಂದಿ ಸಾವನ್ನಪ್ಪಿದ್ದಾರೆ ಎಂದು ದಿ ಟ್ರಿಬ್ಯೂನ್‌‌ ವರದಿ ಮಾಡಿದೆ. 12 ಮಂದಿ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ರಸ್ತೆ ಮತ್ತು ಕಟ್ಟಡಗಳು ಹಾಳಾಗಿವೆ. ಸಂಪರ್ಕ ರಹಿತ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರು, ಸ್ಥಳೀಯರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ.

ನೇಪಾಳದಿಂದ ಬಂದಿದ್ದ ಮೂವರು ಕಾರ್ಮಿಕರು ಸೇರಿದಂತೆ ಐವರು ದುರ್ಮರಣ ಹೊಂದಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ತಿಳಿಸಿದೆ. ಪೌರಿ ಜಿಲ್ಲೆಯ ಲ್ಯಾನ್ಸ್‌ಡೌನ್‌ ಬಳಿ ಕಾರ್ಮಿಕರು ಉಳಿದುಕೊಂಡಿದ್ದು, ಪ್ರವಾಹದಿಂದಾಗಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಜಯ್ ಕುಮಾರ್ ಜೋಗ್ದಾಂಡೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಛಂಪಾವತ್‌ ಜಿಲ್ಲೆಯಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡವು ನೀರಿನ ಏರಿಕೆಯಿಂದಾಗಿ ಕುಸಿದುಬಿದ್ದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರೊಂದಿಗೆ ಪರಿಸ್ಥಿತಿಯ ಅವಲೋಕನಕ್ಕಾಗಿ ಇಂದು ಮಾತನಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಾಯವನ್ನು ನೀಡುವುದಾಗಿ ತಿಳಿಸಿದ್ದಾರೆ.

ಪ್ರವಾಹದ ಭೀಕರತೆಯನ್ನು ತೋರುವ ಚಿತ್ರಗಳು ಹಾಗೂ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ಉತ್ತರಖಾಂಡ್‌ನ ಐಕಾನಿಕ್‌ ನೈನಿತಾಲ್‌ ಸರೋವರ ತುಂಬಿ ಹರಿದಿದ್ದು, ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿರುವ ವಿಡಿಯೊವನ್ನು ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ. ನೀರು ಮೊಣಕಾಲಿನಷ್ಟು ಆಳವಾಗಿದೆ ಮತ್ತು ಹೆಚ್ಚಿನ ವೇಗದಲ್ಲಿ ಹರಿಯುತ್ತದೆ; ಇಬ್ಬರು ಪುರುಷರು ರಸ್ತೆ ದಾಟಲು ಹೆಣಗಾಡುತ್ತಿರುವುದನ್ನು ಕಾಣಬಹುದು.

ಹಾಲ್ಡ್‌ವಾನಿ ಜಿಲ್ಲೆಯಲ್ಲಿ ಗೌಲ ನದಿ ತುಂಬಿ ಹರಿಯುತ್ತಿದ್ದು, ಸೇತುವೆ ಕುಸಿಯಲು ಆರಂಭಿಸಿತ್ತು. ಸೇತುವೆ ಮೇಲೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಮತ್ತೊಂದು ತುದಿಯಲ್ಲಿ ನಿಂತ ಸ್ಥಳೀಯರು ಎಚ್ಚರಿಸುತ್ತಿರುವ ದೃಶ್ಯವನ್ನು ಎಎನ್‌ಐ ಸಂಸ್ಥೆ ಹಂಚಿಕೊಂಡಿದೆ. ಕೆಲವೇ ಸೆಕೆಂಡ್‌ಗಳಲ್ಲಿ ಸೇತುವೆಯ ಕುಸಿತ ಆರಂಭವಾಗುವುದನ್ನು ಇದೇ ವಿಡಿಯೋದಲ್ಲಿ ಕಾಣಬಹುದು.

ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್ ಬಳಿಯ ಐಷಾರಾಮಿ ಲೆಮನ್ ಟ್ರೀ ಹೋಟೆಲ್‌ನ ಛಾವಣಿಯ ಮೇಲೆ ಅತಿಥಿಗಳು ಸಿಕ್ಕಿಬಿದ್ದಿರುವುದನ್ನು ಸ್ವತಂತ್ರ ಫೋಟೋಗ್ರಾಫರ್‌ ಮುಸ್ತಫಾ ಕುರೈಶಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೀರಿನ ಮಟ್ಟ ಹೆಚ್ಚುತ್ತಿರುವುದನ್ನು ಅತಿಥಿಗಳು ನೋಡುತ್ತಿದ್ದಾರೆ.

 

View this post on Instagram

 

A post shared by Mustafa Quraishi (@mustafaquraishi)

 

 

View this post on Instagram

 

A post shared by Mustafa Quraishi (@mustafaquraishi)

ರಾಷ್ಟ್ರೀಯ ಉದ್ಯಾನದ ಬಳಿ ರಾಮಗಂಗಾ ನದಿ ತುಂಬಿ ಹರಿಯುತ್ತಿದ್ದು, ಕಾರುಗಳು ಮುಳುಗಡೆಯಾಗಿವೆ.

 

View this post on Instagram

 

A post shared by Mustafa Quraishi (@mustafaquraishi)

ಧುಮ್ಮಿಕ್ಕುತ್ತಿರುವ ನೀರಿನಲ್ಲಿ ಸಿಲುಕಿರುವ ಕಾರನ್ನು ಮೇಲೆತ್ತಲು ಯತ್ನಿಸುತ್ತಿರುವ ಸಂಬಂಧ ಎಎನ್‌ಐ ಸಂಸ್ಥೆ ವಿಡಿಯೋ ಹಂಚಿಕೊಂಡಿದೆ. ಬಾರ್ಡರ್‌ ರೋಡ್ ಸಂಘಟನೆಯಿಂದ ಕಾರನ್ನು ರಕ್ಷಿಸಲಾಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಆರಂಭಿಸಿದೆ. ಎನ್‌ಡಿಆರ್‌ಎಫ್‌ ಮುಖ್ಯಸ್ಥ ಸತ್ಯ ಪ್ರಧಾನ್‌ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಜ್ಯದ ವಿಪತ್ತು ನಿರ್ವಹಣಾ ತಂಡಗಳು ಕೂಡ ಕಾರ್ಯಪ್ರವೃತ್ತವಾಗಿವೆ. ಮಂಗಳವಾರ ಬೆಳಿಗ್ಗೆ ಕೇದಾರನಾಥ ದೇವಸ್ಥಾನದಿಂದ ಹಿಂತಿರುಗುವಾಗ ಸಿಲುಕಿದ್ದ 22 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ.

“ಹಿಮಾಲಯನ್ ದೇವಸ್ಥಾನಗಳಿಗೆ ವಾಹನಗಳ ತೆರಳದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಂದ್ರಭಾಗ ನದಿಯ ಮೇಲಿನ ಸೇತುವೆಯನ್ನು ವಾಹನಗಳುದಾಟುವಂತಿಲ್ಲ ಎಂದು ಎಚ್ಚರಿಸಲಾಗಿದೆ. ತಪೋವನ್, ಲಕ್ಷ್ಮಣ ಜೂಲ ಮತ್ತು ಮುನಿ-ಕಿ-ರೆತಿ ಭದ್ರಕಾಳಿ ತಡೆಗೋಡೆಗಳನ್ನು ದಾಟುವಂತಿಲ್ಲ” ಎಂದು ಸರ್ಕಾರ ಸೂಚಿಸಿದೆ.

ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಬದರಿನಾಥ ದೇವಸ್ಥಾನಕ್ಕೆ ಹೋಗುವ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಹವಾಮಾನ ಯಥಾಸ್ಥಿತಿಗೆ ಮರಳುವ ತನಕ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಮುಖ್ಯಮಂತ್ರಿಯವರು ಯಾತ್ರಾರ್ಥಿಗಳಿಗೆ ಮನವಿ ಮಾಡಿದ್ದಾರೆ.


ಇದನ್ನು ಓದಿರಿ: ಕೇರಳ: ಭಾರಿ ಮಳೆಗೆ 18 ಮಂದಿ ಸಾವು, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...