Homeಮುಖಪುಟಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

ಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

- Advertisement -
- Advertisement -

ಭಾರೀ  ಪ್ರವಾಹದಿಂದಾಗಿ ಉತ್ತರಖಾಂಡ್ ರಾಜ್ಯ ಉತ್ತರಿಸಿದೆ.  ಗುಡ್ಡಗಾಡು ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದಲೂ ಭಾರೀ ಮಳೆಯಾಗುತ್ತಿದೆ. 11 ಮಂದಿ ಸಾವನ್ನಪ್ಪಿದ್ದಾರೆ ಎಂದು ದಿ ಟ್ರಿಬ್ಯೂನ್‌‌ ವರದಿ ಮಾಡಿದೆ. 12 ಮಂದಿ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ರಸ್ತೆ ಮತ್ತು ಕಟ್ಟಡಗಳು ಹಾಳಾಗಿವೆ. ಸಂಪರ್ಕ ರಹಿತ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರು, ಸ್ಥಳೀಯರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ.

ನೇಪಾಳದಿಂದ ಬಂದಿದ್ದ ಮೂವರು ಕಾರ್ಮಿಕರು ಸೇರಿದಂತೆ ಐವರು ದುರ್ಮರಣ ಹೊಂದಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ತಿಳಿಸಿದೆ. ಪೌರಿ ಜಿಲ್ಲೆಯ ಲ್ಯಾನ್ಸ್‌ಡೌನ್‌ ಬಳಿ ಕಾರ್ಮಿಕರು ಉಳಿದುಕೊಂಡಿದ್ದು, ಪ್ರವಾಹದಿಂದಾಗಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಜಯ್ ಕುಮಾರ್ ಜೋಗ್ದಾಂಡೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಛಂಪಾವತ್‌ ಜಿಲ್ಲೆಯಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡವು ನೀರಿನ ಏರಿಕೆಯಿಂದಾಗಿ ಕುಸಿದುಬಿದ್ದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರೊಂದಿಗೆ ಪರಿಸ್ಥಿತಿಯ ಅವಲೋಕನಕ್ಕಾಗಿ ಇಂದು ಮಾತನಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಾಯವನ್ನು ನೀಡುವುದಾಗಿ ತಿಳಿಸಿದ್ದಾರೆ.

ಪ್ರವಾಹದ ಭೀಕರತೆಯನ್ನು ತೋರುವ ಚಿತ್ರಗಳು ಹಾಗೂ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ಉತ್ತರಖಾಂಡ್‌ನ ಐಕಾನಿಕ್‌ ನೈನಿತಾಲ್‌ ಸರೋವರ ತುಂಬಿ ಹರಿದಿದ್ದು, ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿರುವ ವಿಡಿಯೊವನ್ನು ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ. ನೀರು ಮೊಣಕಾಲಿನಷ್ಟು ಆಳವಾಗಿದೆ ಮತ್ತು ಹೆಚ್ಚಿನ ವೇಗದಲ್ಲಿ ಹರಿಯುತ್ತದೆ; ಇಬ್ಬರು ಪುರುಷರು ರಸ್ತೆ ದಾಟಲು ಹೆಣಗಾಡುತ್ತಿರುವುದನ್ನು ಕಾಣಬಹುದು.

ಹಾಲ್ಡ್‌ವಾನಿ ಜಿಲ್ಲೆಯಲ್ಲಿ ಗೌಲ ನದಿ ತುಂಬಿ ಹರಿಯುತ್ತಿದ್ದು, ಸೇತುವೆ ಕುಸಿಯಲು ಆರಂಭಿಸಿತ್ತು. ಸೇತುವೆ ಮೇಲೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಮತ್ತೊಂದು ತುದಿಯಲ್ಲಿ ನಿಂತ ಸ್ಥಳೀಯರು ಎಚ್ಚರಿಸುತ್ತಿರುವ ದೃಶ್ಯವನ್ನು ಎಎನ್‌ಐ ಸಂಸ್ಥೆ ಹಂಚಿಕೊಂಡಿದೆ. ಕೆಲವೇ ಸೆಕೆಂಡ್‌ಗಳಲ್ಲಿ ಸೇತುವೆಯ ಕುಸಿತ ಆರಂಭವಾಗುವುದನ್ನು ಇದೇ ವಿಡಿಯೋದಲ್ಲಿ ಕಾಣಬಹುದು.

ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್ ಬಳಿಯ ಐಷಾರಾಮಿ ಲೆಮನ್ ಟ್ರೀ ಹೋಟೆಲ್‌ನ ಛಾವಣಿಯ ಮೇಲೆ ಅತಿಥಿಗಳು ಸಿಕ್ಕಿಬಿದ್ದಿರುವುದನ್ನು ಸ್ವತಂತ್ರ ಫೋಟೋಗ್ರಾಫರ್‌ ಮುಸ್ತಫಾ ಕುರೈಶಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೀರಿನ ಮಟ್ಟ ಹೆಚ್ಚುತ್ತಿರುವುದನ್ನು ಅತಿಥಿಗಳು ನೋಡುತ್ತಿದ್ದಾರೆ.

 

View this post on Instagram

 

A post shared by Mustafa Quraishi (@mustafaquraishi)

 

 

View this post on Instagram

 

A post shared by Mustafa Quraishi (@mustafaquraishi)

ರಾಷ್ಟ್ರೀಯ ಉದ್ಯಾನದ ಬಳಿ ರಾಮಗಂಗಾ ನದಿ ತುಂಬಿ ಹರಿಯುತ್ತಿದ್ದು, ಕಾರುಗಳು ಮುಳುಗಡೆಯಾಗಿವೆ.

 

View this post on Instagram

 

A post shared by Mustafa Quraishi (@mustafaquraishi)

ಧುಮ್ಮಿಕ್ಕುತ್ತಿರುವ ನೀರಿನಲ್ಲಿ ಸಿಲುಕಿರುವ ಕಾರನ್ನು ಮೇಲೆತ್ತಲು ಯತ್ನಿಸುತ್ತಿರುವ ಸಂಬಂಧ ಎಎನ್‌ಐ ಸಂಸ್ಥೆ ವಿಡಿಯೋ ಹಂಚಿಕೊಂಡಿದೆ. ಬಾರ್ಡರ್‌ ರೋಡ್ ಸಂಘಟನೆಯಿಂದ ಕಾರನ್ನು ರಕ್ಷಿಸಲಾಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಆರಂಭಿಸಿದೆ. ಎನ್‌ಡಿಆರ್‌ಎಫ್‌ ಮುಖ್ಯಸ್ಥ ಸತ್ಯ ಪ್ರಧಾನ್‌ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಜ್ಯದ ವಿಪತ್ತು ನಿರ್ವಹಣಾ ತಂಡಗಳು ಕೂಡ ಕಾರ್ಯಪ್ರವೃತ್ತವಾಗಿವೆ. ಮಂಗಳವಾರ ಬೆಳಿಗ್ಗೆ ಕೇದಾರನಾಥ ದೇವಸ್ಥಾನದಿಂದ ಹಿಂತಿರುಗುವಾಗ ಸಿಲುಕಿದ್ದ 22 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ.

“ಹಿಮಾಲಯನ್ ದೇವಸ್ಥಾನಗಳಿಗೆ ವಾಹನಗಳ ತೆರಳದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಂದ್ರಭಾಗ ನದಿಯ ಮೇಲಿನ ಸೇತುವೆಯನ್ನು ವಾಹನಗಳುದಾಟುವಂತಿಲ್ಲ ಎಂದು ಎಚ್ಚರಿಸಲಾಗಿದೆ. ತಪೋವನ್, ಲಕ್ಷ್ಮಣ ಜೂಲ ಮತ್ತು ಮುನಿ-ಕಿ-ರೆತಿ ಭದ್ರಕಾಳಿ ತಡೆಗೋಡೆಗಳನ್ನು ದಾಟುವಂತಿಲ್ಲ” ಎಂದು ಸರ್ಕಾರ ಸೂಚಿಸಿದೆ.

ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಬದರಿನಾಥ ದೇವಸ್ಥಾನಕ್ಕೆ ಹೋಗುವ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಹವಾಮಾನ ಯಥಾಸ್ಥಿತಿಗೆ ಮರಳುವ ತನಕ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಮುಖ್ಯಮಂತ್ರಿಯವರು ಯಾತ್ರಾರ್ಥಿಗಳಿಗೆ ಮನವಿ ಮಾಡಿದ್ದಾರೆ.


ಇದನ್ನು ಓದಿರಿ: ಕೇರಳ: ಭಾರಿ ಮಳೆಗೆ 18 ಮಂದಿ ಸಾವು, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...