Homeಮುಖಪುಟಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

ಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

- Advertisement -
- Advertisement -

ಭಾರೀ  ಪ್ರವಾಹದಿಂದಾಗಿ ಉತ್ತರಖಾಂಡ್ ರಾಜ್ಯ ಉತ್ತರಿಸಿದೆ.  ಗುಡ್ಡಗಾಡು ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದಲೂ ಭಾರೀ ಮಳೆಯಾಗುತ್ತಿದೆ. 11 ಮಂದಿ ಸಾವನ್ನಪ್ಪಿದ್ದಾರೆ ಎಂದು ದಿ ಟ್ರಿಬ್ಯೂನ್‌‌ ವರದಿ ಮಾಡಿದೆ. 12 ಮಂದಿ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ರಸ್ತೆ ಮತ್ತು ಕಟ್ಟಡಗಳು ಹಾಳಾಗಿವೆ. ಸಂಪರ್ಕ ರಹಿತ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರು, ಸ್ಥಳೀಯರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ.

ನೇಪಾಳದಿಂದ ಬಂದಿದ್ದ ಮೂವರು ಕಾರ್ಮಿಕರು ಸೇರಿದಂತೆ ಐವರು ದುರ್ಮರಣ ಹೊಂದಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ತಿಳಿಸಿದೆ. ಪೌರಿ ಜಿಲ್ಲೆಯ ಲ್ಯಾನ್ಸ್‌ಡೌನ್‌ ಬಳಿ ಕಾರ್ಮಿಕರು ಉಳಿದುಕೊಂಡಿದ್ದು, ಪ್ರವಾಹದಿಂದಾಗಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಜಯ್ ಕುಮಾರ್ ಜೋಗ್ದಾಂಡೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಛಂಪಾವತ್‌ ಜಿಲ್ಲೆಯಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡವು ನೀರಿನ ಏರಿಕೆಯಿಂದಾಗಿ ಕುಸಿದುಬಿದ್ದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರೊಂದಿಗೆ ಪರಿಸ್ಥಿತಿಯ ಅವಲೋಕನಕ್ಕಾಗಿ ಇಂದು ಮಾತನಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಾಯವನ್ನು ನೀಡುವುದಾಗಿ ತಿಳಿಸಿದ್ದಾರೆ.

ಪ್ರವಾಹದ ಭೀಕರತೆಯನ್ನು ತೋರುವ ಚಿತ್ರಗಳು ಹಾಗೂ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ಉತ್ತರಖಾಂಡ್‌ನ ಐಕಾನಿಕ್‌ ನೈನಿತಾಲ್‌ ಸರೋವರ ತುಂಬಿ ಹರಿದಿದ್ದು, ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿರುವ ವಿಡಿಯೊವನ್ನು ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ. ನೀರು ಮೊಣಕಾಲಿನಷ್ಟು ಆಳವಾಗಿದೆ ಮತ್ತು ಹೆಚ್ಚಿನ ವೇಗದಲ್ಲಿ ಹರಿಯುತ್ತದೆ; ಇಬ್ಬರು ಪುರುಷರು ರಸ್ತೆ ದಾಟಲು ಹೆಣಗಾಡುತ್ತಿರುವುದನ್ನು ಕಾಣಬಹುದು.

ಹಾಲ್ಡ್‌ವಾನಿ ಜಿಲ್ಲೆಯಲ್ಲಿ ಗೌಲ ನದಿ ತುಂಬಿ ಹರಿಯುತ್ತಿದ್ದು, ಸೇತುವೆ ಕುಸಿಯಲು ಆರಂಭಿಸಿತ್ತು. ಸೇತುವೆ ಮೇಲೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಮತ್ತೊಂದು ತುದಿಯಲ್ಲಿ ನಿಂತ ಸ್ಥಳೀಯರು ಎಚ್ಚರಿಸುತ್ತಿರುವ ದೃಶ್ಯವನ್ನು ಎಎನ್‌ಐ ಸಂಸ್ಥೆ ಹಂಚಿಕೊಂಡಿದೆ. ಕೆಲವೇ ಸೆಕೆಂಡ್‌ಗಳಲ್ಲಿ ಸೇತುವೆಯ ಕುಸಿತ ಆರಂಭವಾಗುವುದನ್ನು ಇದೇ ವಿಡಿಯೋದಲ್ಲಿ ಕಾಣಬಹುದು.

ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್ ಬಳಿಯ ಐಷಾರಾಮಿ ಲೆಮನ್ ಟ್ರೀ ಹೋಟೆಲ್‌ನ ಛಾವಣಿಯ ಮೇಲೆ ಅತಿಥಿಗಳು ಸಿಕ್ಕಿಬಿದ್ದಿರುವುದನ್ನು ಸ್ವತಂತ್ರ ಫೋಟೋಗ್ರಾಫರ್‌ ಮುಸ್ತಫಾ ಕುರೈಶಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೀರಿನ ಮಟ್ಟ ಹೆಚ್ಚುತ್ತಿರುವುದನ್ನು ಅತಿಥಿಗಳು ನೋಡುತ್ತಿದ್ದಾರೆ.

 

View this post on Instagram

 

A post shared by Mustafa Quraishi (@mustafaquraishi)

 

 

View this post on Instagram

 

A post shared by Mustafa Quraishi (@mustafaquraishi)

ರಾಷ್ಟ್ರೀಯ ಉದ್ಯಾನದ ಬಳಿ ರಾಮಗಂಗಾ ನದಿ ತುಂಬಿ ಹರಿಯುತ್ತಿದ್ದು, ಕಾರುಗಳು ಮುಳುಗಡೆಯಾಗಿವೆ.

 

View this post on Instagram

 

A post shared by Mustafa Quraishi (@mustafaquraishi)

ಧುಮ್ಮಿಕ್ಕುತ್ತಿರುವ ನೀರಿನಲ್ಲಿ ಸಿಲುಕಿರುವ ಕಾರನ್ನು ಮೇಲೆತ್ತಲು ಯತ್ನಿಸುತ್ತಿರುವ ಸಂಬಂಧ ಎಎನ್‌ಐ ಸಂಸ್ಥೆ ವಿಡಿಯೋ ಹಂಚಿಕೊಂಡಿದೆ. ಬಾರ್ಡರ್‌ ರೋಡ್ ಸಂಘಟನೆಯಿಂದ ಕಾರನ್ನು ರಕ್ಷಿಸಲಾಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಆರಂಭಿಸಿದೆ. ಎನ್‌ಡಿಆರ್‌ಎಫ್‌ ಮುಖ್ಯಸ್ಥ ಸತ್ಯ ಪ್ರಧಾನ್‌ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಜ್ಯದ ವಿಪತ್ತು ನಿರ್ವಹಣಾ ತಂಡಗಳು ಕೂಡ ಕಾರ್ಯಪ್ರವೃತ್ತವಾಗಿವೆ. ಮಂಗಳವಾರ ಬೆಳಿಗ್ಗೆ ಕೇದಾರನಾಥ ದೇವಸ್ಥಾನದಿಂದ ಹಿಂತಿರುಗುವಾಗ ಸಿಲುಕಿದ್ದ 22 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ.

“ಹಿಮಾಲಯನ್ ದೇವಸ್ಥಾನಗಳಿಗೆ ವಾಹನಗಳ ತೆರಳದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಂದ್ರಭಾಗ ನದಿಯ ಮೇಲಿನ ಸೇತುವೆಯನ್ನು ವಾಹನಗಳುದಾಟುವಂತಿಲ್ಲ ಎಂದು ಎಚ್ಚರಿಸಲಾಗಿದೆ. ತಪೋವನ್, ಲಕ್ಷ್ಮಣ ಜೂಲ ಮತ್ತು ಮುನಿ-ಕಿ-ರೆತಿ ಭದ್ರಕಾಳಿ ತಡೆಗೋಡೆಗಳನ್ನು ದಾಟುವಂತಿಲ್ಲ” ಎಂದು ಸರ್ಕಾರ ಸೂಚಿಸಿದೆ.

ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಬದರಿನಾಥ ದೇವಸ್ಥಾನಕ್ಕೆ ಹೋಗುವ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಹವಾಮಾನ ಯಥಾಸ್ಥಿತಿಗೆ ಮರಳುವ ತನಕ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಮುಖ್ಯಮಂತ್ರಿಯವರು ಯಾತ್ರಾರ್ಥಿಗಳಿಗೆ ಮನವಿ ಮಾಡಿದ್ದಾರೆ.


ಇದನ್ನು ಓದಿರಿ: ಕೇರಳ: ಭಾರಿ ಮಳೆಗೆ 18 ಮಂದಿ ಸಾವು, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...