Homeಮುಖಪುಟಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

ಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

- Advertisement -
- Advertisement -

ಭಾರೀ  ಪ್ರವಾಹದಿಂದಾಗಿ ಉತ್ತರಖಾಂಡ್ ರಾಜ್ಯ ಉತ್ತರಿಸಿದೆ.  ಗುಡ್ಡಗಾಡು ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದಲೂ ಭಾರೀ ಮಳೆಯಾಗುತ್ತಿದೆ. 11 ಮಂದಿ ಸಾವನ್ನಪ್ಪಿದ್ದಾರೆ ಎಂದು ದಿ ಟ್ರಿಬ್ಯೂನ್‌‌ ವರದಿ ಮಾಡಿದೆ. 12 ಮಂದಿ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ರಸ್ತೆ ಮತ್ತು ಕಟ್ಟಡಗಳು ಹಾಳಾಗಿವೆ. ಸಂಪರ್ಕ ರಹಿತ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರು, ಸ್ಥಳೀಯರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ.

ನೇಪಾಳದಿಂದ ಬಂದಿದ್ದ ಮೂವರು ಕಾರ್ಮಿಕರು ಸೇರಿದಂತೆ ಐವರು ದುರ್ಮರಣ ಹೊಂದಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ತಿಳಿಸಿದೆ. ಪೌರಿ ಜಿಲ್ಲೆಯ ಲ್ಯಾನ್ಸ್‌ಡೌನ್‌ ಬಳಿ ಕಾರ್ಮಿಕರು ಉಳಿದುಕೊಂಡಿದ್ದು, ಪ್ರವಾಹದಿಂದಾಗಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಜಯ್ ಕುಮಾರ್ ಜೋಗ್ದಾಂಡೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಛಂಪಾವತ್‌ ಜಿಲ್ಲೆಯಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡವು ನೀರಿನ ಏರಿಕೆಯಿಂದಾಗಿ ಕುಸಿದುಬಿದ್ದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರೊಂದಿಗೆ ಪರಿಸ್ಥಿತಿಯ ಅವಲೋಕನಕ್ಕಾಗಿ ಇಂದು ಮಾತನಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಾಯವನ್ನು ನೀಡುವುದಾಗಿ ತಿಳಿಸಿದ್ದಾರೆ.

ಪ್ರವಾಹದ ಭೀಕರತೆಯನ್ನು ತೋರುವ ಚಿತ್ರಗಳು ಹಾಗೂ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ಉತ್ತರಖಾಂಡ್‌ನ ಐಕಾನಿಕ್‌ ನೈನಿತಾಲ್‌ ಸರೋವರ ತುಂಬಿ ಹರಿದಿದ್ದು, ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿರುವ ವಿಡಿಯೊವನ್ನು ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ. ನೀರು ಮೊಣಕಾಲಿನಷ್ಟು ಆಳವಾಗಿದೆ ಮತ್ತು ಹೆಚ್ಚಿನ ವೇಗದಲ್ಲಿ ಹರಿಯುತ್ತದೆ; ಇಬ್ಬರು ಪುರುಷರು ರಸ್ತೆ ದಾಟಲು ಹೆಣಗಾಡುತ್ತಿರುವುದನ್ನು ಕಾಣಬಹುದು.

ಹಾಲ್ಡ್‌ವಾನಿ ಜಿಲ್ಲೆಯಲ್ಲಿ ಗೌಲ ನದಿ ತುಂಬಿ ಹರಿಯುತ್ತಿದ್ದು, ಸೇತುವೆ ಕುಸಿಯಲು ಆರಂಭಿಸಿತ್ತು. ಸೇತುವೆ ಮೇಲೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಮತ್ತೊಂದು ತುದಿಯಲ್ಲಿ ನಿಂತ ಸ್ಥಳೀಯರು ಎಚ್ಚರಿಸುತ್ತಿರುವ ದೃಶ್ಯವನ್ನು ಎಎನ್‌ಐ ಸಂಸ್ಥೆ ಹಂಚಿಕೊಂಡಿದೆ. ಕೆಲವೇ ಸೆಕೆಂಡ್‌ಗಳಲ್ಲಿ ಸೇತುವೆಯ ಕುಸಿತ ಆರಂಭವಾಗುವುದನ್ನು ಇದೇ ವಿಡಿಯೋದಲ್ಲಿ ಕಾಣಬಹುದು.

ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್ ಬಳಿಯ ಐಷಾರಾಮಿ ಲೆಮನ್ ಟ್ರೀ ಹೋಟೆಲ್‌ನ ಛಾವಣಿಯ ಮೇಲೆ ಅತಿಥಿಗಳು ಸಿಕ್ಕಿಬಿದ್ದಿರುವುದನ್ನು ಸ್ವತಂತ್ರ ಫೋಟೋಗ್ರಾಫರ್‌ ಮುಸ್ತಫಾ ಕುರೈಶಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೀರಿನ ಮಟ್ಟ ಹೆಚ್ಚುತ್ತಿರುವುದನ್ನು ಅತಿಥಿಗಳು ನೋಡುತ್ತಿದ್ದಾರೆ.

 

View this post on Instagram

 

A post shared by Mustafa Quraishi (@mustafaquraishi)

 

 

View this post on Instagram

 

A post shared by Mustafa Quraishi (@mustafaquraishi)

ರಾಷ್ಟ್ರೀಯ ಉದ್ಯಾನದ ಬಳಿ ರಾಮಗಂಗಾ ನದಿ ತುಂಬಿ ಹರಿಯುತ್ತಿದ್ದು, ಕಾರುಗಳು ಮುಳುಗಡೆಯಾಗಿವೆ.

 

View this post on Instagram

 

A post shared by Mustafa Quraishi (@mustafaquraishi)

ಧುಮ್ಮಿಕ್ಕುತ್ತಿರುವ ನೀರಿನಲ್ಲಿ ಸಿಲುಕಿರುವ ಕಾರನ್ನು ಮೇಲೆತ್ತಲು ಯತ್ನಿಸುತ್ತಿರುವ ಸಂಬಂಧ ಎಎನ್‌ಐ ಸಂಸ್ಥೆ ವಿಡಿಯೋ ಹಂಚಿಕೊಂಡಿದೆ. ಬಾರ್ಡರ್‌ ರೋಡ್ ಸಂಘಟನೆಯಿಂದ ಕಾರನ್ನು ರಕ್ಷಿಸಲಾಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಆರಂಭಿಸಿದೆ. ಎನ್‌ಡಿಆರ್‌ಎಫ್‌ ಮುಖ್ಯಸ್ಥ ಸತ್ಯ ಪ್ರಧಾನ್‌ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಜ್ಯದ ವಿಪತ್ತು ನಿರ್ವಹಣಾ ತಂಡಗಳು ಕೂಡ ಕಾರ್ಯಪ್ರವೃತ್ತವಾಗಿವೆ. ಮಂಗಳವಾರ ಬೆಳಿಗ್ಗೆ ಕೇದಾರನಾಥ ದೇವಸ್ಥಾನದಿಂದ ಹಿಂತಿರುಗುವಾಗ ಸಿಲುಕಿದ್ದ 22 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ.

“ಹಿಮಾಲಯನ್ ದೇವಸ್ಥಾನಗಳಿಗೆ ವಾಹನಗಳ ತೆರಳದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಂದ್ರಭಾಗ ನದಿಯ ಮೇಲಿನ ಸೇತುವೆಯನ್ನು ವಾಹನಗಳುದಾಟುವಂತಿಲ್ಲ ಎಂದು ಎಚ್ಚರಿಸಲಾಗಿದೆ. ತಪೋವನ್, ಲಕ್ಷ್ಮಣ ಜೂಲ ಮತ್ತು ಮುನಿ-ಕಿ-ರೆತಿ ಭದ್ರಕಾಳಿ ತಡೆಗೋಡೆಗಳನ್ನು ದಾಟುವಂತಿಲ್ಲ” ಎಂದು ಸರ್ಕಾರ ಸೂಚಿಸಿದೆ.

ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಬದರಿನಾಥ ದೇವಸ್ಥಾನಕ್ಕೆ ಹೋಗುವ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಹವಾಮಾನ ಯಥಾಸ್ಥಿತಿಗೆ ಮರಳುವ ತನಕ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಮುಖ್ಯಮಂತ್ರಿಯವರು ಯಾತ್ರಾರ್ಥಿಗಳಿಗೆ ಮನವಿ ಮಾಡಿದ್ದಾರೆ.


ಇದನ್ನು ಓದಿರಿ: ಕೇರಳ: ಭಾರಿ ಮಳೆಗೆ 18 ಮಂದಿ ಸಾವು, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...