Homeಮುಖಪುಟಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

- Advertisement -
- Advertisement -

ಉತ್ತರಖಂಡದ ಹಲ್ದ್ವಾನಿ ಪುರಸಭೆಯು ಅತಿಕ್ರಮಣ ವಿರೋಧಿ ಅಭಿಯಾನ ಎಂದು ಪಟ್ಟಣದ ಬನ್‌ಭೂಲ್‌ಪುರ ಪ್ರದೇಶದಲ್ಲಿ ಮದ್ರಸಾ ಮತ್ತು ಮಸೀದಿಯನ್ನು ಕೆಡವಿದೆ. ಪುರಸಭೆಯ ಈ ಕೃತ್ಯವು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಘರ್ಷಣೆಗೆ ಕಾರಣವಾಗಿ ಐವರ ಸಾವಿಗೆ ಕಾರಣವಾಗಿದ್ದು, 100 ಪೊಲೀಸ್‌ ಸಿಬ್ಬಂದಿಗಳಿಗೆ ಗಾಯವಾಗಿದೆ.

ಘರ್ಷಣೆಯ ನಂತರ ಕರ್ಫ್ಯೂ ಮತ್ತು ‘ಕಂಡಲ್ಲಿ ಗುಂಡು ಆದೇಶಗಳನ್ನು’ ನೀಡಲಾಗಿತ್ತು. ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಭಿನವ್ ಕುಮಾರ್ ಈ ಕುರಿತು ಮಾತನಾಡಿದ್ದು,  ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದಾರೆ. ಧ್ವಂಸ ಕಾರ್ಯಾಚರಣೆಯಲ್ಲಿ 100 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಮಸೀದಿಯ ಧ್ವಂಸದ ಬಳಿಕ ಕೋಮು ಉದ್ವಿಗ್ನತೆ ಮತ್ತು ಹಿಂಸಾಚಾರದ ಹಿನ್ನೆಲೆ ಅರೆಸೇನಾ ಪಡೆಯ ನಾಲ್ಕು ತುಕಡಿಗಳನ್ನು ನಿಯೋಜಿಸಿ ಅಧಿಕಾರಿಗಳು ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಪ್ರಸ್ತುತ ಹಲ್ದ್ವಾನಿಯಲ್ಲಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಿದ್ದು, ಕಂಡಲ್ಲಿ ಗುಂಡು ಆದೇಶ ಹೊರಡಿಸಿದೆ. ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಇಂದು ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬಂಭೂಲ್ಪುರದಲ್ಲಿ ಹಿಂಸಾಚಾರದ ನಡೆದಿದ್ದರೂ, ಉತ್ತರಾಖಂಡ ಸರ್ಕಾರ ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ್ ಮೀನಾ, ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮದ್ರಸಾಕ್ಕೆ ಈ ಹಿಂದೆಯೇ ನೋಟಿಸ್ ನೀಡಲಾಗಿತ್ತು ಎಂದಿದ್ದಾರೆ. ನೈನಿತಾಲ್ ಜಿಲ್ಲಾಧಿಕಾರಿ ವಂದನಾ ಅವರು ಮಾತನಾಡಿ, ಬಂಭೂಲ್ಪುರ ಪೊಲೀಸ್ ಠಾಣೆಯ ಹೊರಗೆ ನಡೆದ ಹಿಂಸಾಚಾರದಲ್ಲಿ ಕೆಲವರು ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ, ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಅವರು ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆಯೇ ಅಥವಾ ಅವರ ನಡುವಿನ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆಯೇ ಎಂದು ತಿಳಿದು ಬರಬೇಕಿದೆ ಎಂದು ಹೇಳಿದ್ದರು.

ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯಾ ಮದರಸಾವನ್ನು 2002ರಲ್ಲಿ ಬಂಬೂಲ್ಪುರದ ಕಂಪನಿ ಬಾಗ್ ಪ್ರದೇಶದಲ್ಲಿ ನಿರ್ಮಿಸಲಾಗಿದೆ. ಅದನ್ನು ಅಬ್ದುಲ್ ಮಲಿಕ್ ಮತ್ತು ಅವರ ಪತ್ನಿ ಸಫಿಯಾ ಮಲಿಕ್ ನೋಡಿಕೊಳ್ಳುತ್ತಿದ್ದರು.

ಹಲ್ದ್ವಾನಿಯ ಮುನ್ಸಿಪಲ್ ಕಮಿಷನರ್ ಪಂಕಜ್ ಉಪಾಧ್ಯಾಯ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಮಸೀದಿಯನ್ನು ಸರಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದೆ. ಜನವರಿ 30ರಂದು ಅಬ್ದುಲ್ ಮಲಿಕ್ ಅವರಿಗೆ ಮಸೀದಿ ಮತ್ತು ಮದರಸಾವನ್ನು ಕೆಡವಲು ಪಾಲಿಕೆ ನೋಟಿಸ್ ನೀಡಿತ್ತು ಎಂದು ಹೇಳಿದ್ದಾರೆ.

ಆದರೆ ಫೆಬ್ರುವರಿ 6ರಂದು ಸಫಿಯಾ ಮಲಿಕ್ ಅವರು ಉತ್ತರಾಖಂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮಸೀದಿ ಮತ್ತು ಮದರಸಾವನ್ನು ನಿರ್ಮಿಸಿದ ಭೂಮಿಯನ್ನು 1937ರಲ್ಲಿ ಗುತ್ತಿಗೆಗೆ ನೀಡಲಾಗಿದೆ ಮತ್ತು 1994ರಲ್ಲಿ ತನ್ನ ಕುಟುಂಬಕ್ಕೆ ಮಾರಾಟ ಮಾಡಲಾಗಿದೆ ಎಂದು ಮಲಿಕ್ ಮಸೀದಿ ತೆರವು ವಿರುದ್ಧ ಮಧ್ಯಂತರ ಪರಿಹಾರವನ್ನು ಕೋರಿದ್ದರು. ವಿಶೇಷವಾಗಿ ಬಡ ಮಕ್ಕಳಿಗಾಗಿ ನಡೆಸಲ್ಪಡುವ ಮದ್ರಸಾ ಎಂಬುವುದನ್ನು ಉಲ್ಲೇಖಿಸಿ ಪ್ರಕರಣವನ್ನು ಕೋರ್ಟ್‌ ಮುಂದಿಟ್ಟಿದ್ದರು. ಫೆಬ್ರುವರಿ 14ರಂದು ನ್ಯಾಯಾಲಯ ಈ ಪ್ರಕರಣದ ವಿಚಾರಣೆಗೆ ಪಟ್ಟಿ ಮಾಡಿತ್ತು. ಆದರೆ ಕೋರ್ಟ್‌ ಪಟ್ಟಿ ಮಾಡಿದ ಮುಂದಿನ ವಿಚಾರಣೆಗೆ ಮೊದಲೇ ಪಾಲಿಕೆ ಮಸೀದಿಯನ್ನು ನೆಲಸಮ ಮಾಡಿದ್ದಾರೆ.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಅತಿಕ್ರಮಣ ತಡೆ ಅಭಿಯಾನಕ್ಕೆ ಅನುಮತಿ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೂಡ ಇದನ್ನೇ ಹೇಳಿದ್ದಾರೆ.

ಮಲಿಕ್ ಅವರ ವಕೀಲರಾದ ಅಹ್ರಾರ್ ಬೇಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಸೀದಿಯನ್ನು ಕೆಡವುವ ವೇಳೆ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿಲ್ಲ, ನಮಗೆ ನೋಟಿಸ್ ನೀಡಲಾಗಿಲ್ಲ ಅಥವಾ ಪ್ರಕರಣವನ್ನು ಮುಂದುವರಿಸಲು ಸಮಯವನ್ನು ನೀಡಲಾಗಿಲ್ಲ ಎಂದು ಹೇಳಿದ್ದಾರೆ.

ಉತ್ತರಾಖಂಡ ಹೈಕೋರ್ಟ್‌ನಲ್ಲಿ ಮಲಿಕ್ ಸಲ್ಲಿಸಿರುವ ಅರ್ಜಿ ಮತ್ತು ಅದರೊಂದಿಗೆ ಲಗತ್ತಿಸಲಾದ ದಾಖಲೆಗಳು ಮಲಿಕ್ ಕುಟುಂಬ ಆಸ್ತಿಯ ಕುರಿತು ಸಲ್ಲಿಸಿದ ದಾಖಲೆಗಳನ್ನು ಒಳಗೊಂಡಿದೆ. ಹಲ್ದ್ವಾನಿಯಲ್ಲಿನ ಮಸೀದಿಯ ಧ್ವಂಸವು ಬಿಜೆಪಿ ನೇತೃತ್ವದ ಉತ್ತರಾಖಂಡ ಸರ್ಕಾರವು “ಕಾನೂನುಬಾಹಿರ” ಎಂದು ಪರಿಗಣಿಸಿ ಇಸ್ಲಾಮಿಕ್ ರಚನೆಗಳನ್ನು ನೆಲಸಮಗೊಳಿಸುವ ದೊಡ್ಡ ನೀತಿಯ ಒಂದು ಭಾಗವಾಗಿದೆ ಎಂದು ಹೇಳಲಾಗಿದೆ.

ಹಲ್ದ್ವಾನಿ ಮದರಸಾ ಪ್ರಕರಣದಲ್ಲಿ, ಬಿಜೆಪಿಯ ಅಲ್ಪಸಂಖ್ಯಾತ ಘಟಕದ ನಾಯಕರು ಮುಖ್ಯಮಂತ್ರಿಗೆ ಪತ್ರ ಬರೆದು ಬಡ ಮಕ್ಕಳಿಗೆ ಶಿಕ್ಷಣ ನೀಡಲು ಬಳಸುತ್ತಿದ್ದ ಕಟ್ಟಡವನ್ನು ಕೆಡವಿದರೆ, ಅಲ್ಪಸಂಖ್ಯಾತರಿಗೆ ಉತ್ತಮ ಸಂದೇಶ ರವಾನೆಯಾಗುವುದಿಲ್ಲ ಎಂದು ಎಚ್ಚರಿಸಿದ್ದರು ಎನ್ನವುದು ಕೂಡ ಗಮನಾರ್ಹ.

ಇದನ್ನು ಓದಿ: ಆಪರೇಷನ್ ಥಿಯೇಟರ್‌ನಲ್ಲಿ ಫ್ರಿ ವೆಡ್ಡಿಂಗ್ ಶೂಟ್: ಸರಕಾರಿ ವೈದ್ಯ ಸೇವೆಯಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...