Homeಮುಖಪುಟಉತ್ತರಾಖಂಡ: ಮದರಸಾದಲ್ಲಿ ಮಕ್ಕಳಿಗೆ ಸಂಸ್ಕೃತ ಬೋಧನೆ

ಉತ್ತರಾಖಂಡ: ಮದರಸಾದಲ್ಲಿ ಮಕ್ಕಳಿಗೆ ಸಂಸ್ಕೃತ ಬೋಧನೆ

- Advertisement -
- Advertisement -

ಉತ್ತರಾಖಂಡದ  ಮದರಸಾದಲ್ಲಿ ಮಕ್ಕಳಿಗೆ ಸಂಸ್ಕೃತವನ್ನು ಬೋಧಿಸಲು ಕ್ರಮಕೈಗೊಳ್ಳಲಾಗುವುದು ಎಂದು ವಕ್ಫ್ ಮಂಡಳಿಯ ಅಧ್ಯಕ್ಷ  ಶಾದಾಬ್ ಶಾಮ್ಸ್  ಹೇಳಿದ್ದಾರೆ.

ಉತ್ತರಾಖಂಡದ  ವಕ್ಫ್ ಮಂಡಳಿಯ ಅಧ್ಯಕ್ಷ  ಶಾದಾಬ್ ಶಾಮ್ಸ್ ಈ ಕುರಿತು ಮಾತನಾಡಿ, ಸಾಂಪ್ರದಾಯಿಕ ಮದರಸಾ ಶಿಕ್ಷಣದ ಮಿತಿಯಿಂದ ಹೊರ ಬಂದು ಮಕ್ಕಳ ಭವಿಷ್ಯಕ್ಕಾಗಿ ಸಮಕಾಲೀನ ಪ್ರಪಂಚದ ಸವಾಲುಗಳನ್ನು ಎದುರಿಸಲು ಇದು ಒಳ್ಳೆಯದು ಎಂದು ಹೇಳಿದ್ದಾರೆ.

ಎಪಿಜೆ ಅಬ್ದುಲ್ ಕಲಾಂ ಅವರಂತಹ ಸ್ಪೂರ್ತಿದಾಯಕ ವ್ಯಕ್ತಿಗಳ ಹಾದಿಯಲ್ಲಿ ಮಕ್ಕಳು ನಡೆಯಲು ಈ ಕ್ರಮವು ಅನುವು ಮಾಡಿಕೊಡುತ್ತದೆ. ಈ ಕುರಿತು ಮಕ್ಕಳಿಗೆ ಶಿಕ್ಷಣ ನೀಡಲು ಅಗತ್ಯ ಕ್ರಮ ತೆಗೆದುಕೊಳ್ಳುವ ಬಗ್ಗೆ  ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭರವಸೆ ನೀಡಿದ್ದಾರೆ ಎಂದು ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

ಉತ್ತರಾಖಂಡದ ದೇವಭೂಮಿಯಲ್ಲಿ ಸಂಸ್ಕೃತವನ್ನು ಕಲಿಸದಿದ್ದರೆ, ಅದನ್ನು ಎಲ್ಲಿ ಕಲಿಸಲಾಗುತ್ತದೆ? ವಿದ್ಯಾರ್ಥಿಗಳು ಪ್ರತಿಯೊಂದು ಭಾಷೆ ಮತ್ತು ಸಂಸ್ಕೃತಿಯ ಜ್ಞಾನವನ್ನು ಹೊಂದಿರಬೇಕು. ಮದರಸಾಗಳಲ್ಲಿ ಶಿಕ್ಷಣವು ಸೀಮಿತವಾಗಿರಬಾರದು. ಮುಸ್ಲಿಂ ಮಕ್ಕಳಿಗೆ ಎಲ್ಲವನ್ನೂ ಅಧ್ಯಯನ ಮಾಡುವ ಹಕ್ಕಿದೆ ಎಂದು ಅವರು ಹೇಳಿದರು.

ಮದರಸಾಗಳ ಶಿಕ್ಷಣ ವ್ಯವಸ್ಥೆಯ ಆಧುನೀಕರಣದ ಕುರಿತು ಮಾತನಾಡಿದ ಶಾಮ್ಸ್, ಪಠ್ಯಕ್ರಮವು ವೈಜ್ಞಾನಿಕ ಕಲಿಕೆ ಮತ್ತು ಇಸ್ಲಾಮಿಕ್ ಅಧ್ಯಯನಗಳ ಸಮ್ಮಿಲನವಾಗಿದೆ ಎಂದು  ಹೇಳಿದರು.

ಉತ್ತರಾಖಂಡದ ವಕ್ಫ್ ಮಂಡಳಿಯು ರಾಜ್ಯದ 117 ವಕ್ಫ್ ಬೋರ್ಡ್ ಮದರಸಾದಲ್ಲಿ NCERT ಪಠ್ಯಕ್ರಮವನ್ನು ಜಾರಿಗೆ ತರಲು ನಿರ್ಧರಿಸಿದೆ. NCERT ಪಠ್ಯಕ್ರಮವು ಸಂಸ್ಕೃತವನ್ನೂ ಒಳಗೊಂಡಿದೆ. ನಮ್ಮ ಮಕ್ಕಳು ಹಿಂದಿ, ಇಂಗ್ಲಿಷ್, ಗಣಿತ, ವಿಜ್ಞಾನ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಅರೇಬಿಕ್ ಕಲಿಯಲು ಸಾಧ್ಯವಾದರೆ ಅವರು ಸಂಸ್ಕೃತವನ್ನೂ ಕಲಿಯಬಹುದು ಎಂದು ಶಮ್ಸ್ ಹೇಳಿದರು.

ಇದಲ್ಲದೆ 40-50 ಮದರಸಾಗಳು ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲು ಆಗ್ರಹಿಸಿ ನಮ್ಮನ್ನು ಸಂಪರ್ಕಿಸಿವೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷರು ಇದೇ ವೇಳೆ ಹೇಳಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಸೆಕ್ಯೂರಿಟಿ ಗಾರ್ಡ್‌ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...