Homeಮುಖಪುಟಉತ್ತರಾಖಂಡ: ಮದರಸಾದಲ್ಲಿ ಮಕ್ಕಳಿಗೆ ಸಂಸ್ಕೃತ ಬೋಧನೆ

ಉತ್ತರಾಖಂಡ: ಮದರಸಾದಲ್ಲಿ ಮಕ್ಕಳಿಗೆ ಸಂಸ್ಕೃತ ಬೋಧನೆ

- Advertisement -
- Advertisement -

ಉತ್ತರಾಖಂಡದ  ಮದರಸಾದಲ್ಲಿ ಮಕ್ಕಳಿಗೆ ಸಂಸ್ಕೃತವನ್ನು ಬೋಧಿಸಲು ಕ್ರಮಕೈಗೊಳ್ಳಲಾಗುವುದು ಎಂದು ವಕ್ಫ್ ಮಂಡಳಿಯ ಅಧ್ಯಕ್ಷ  ಶಾದಾಬ್ ಶಾಮ್ಸ್  ಹೇಳಿದ್ದಾರೆ.

ಉತ್ತರಾಖಂಡದ  ವಕ್ಫ್ ಮಂಡಳಿಯ ಅಧ್ಯಕ್ಷ  ಶಾದಾಬ್ ಶಾಮ್ಸ್ ಈ ಕುರಿತು ಮಾತನಾಡಿ, ಸಾಂಪ್ರದಾಯಿಕ ಮದರಸಾ ಶಿಕ್ಷಣದ ಮಿತಿಯಿಂದ ಹೊರ ಬಂದು ಮಕ್ಕಳ ಭವಿಷ್ಯಕ್ಕಾಗಿ ಸಮಕಾಲೀನ ಪ್ರಪಂಚದ ಸವಾಲುಗಳನ್ನು ಎದುರಿಸಲು ಇದು ಒಳ್ಳೆಯದು ಎಂದು ಹೇಳಿದ್ದಾರೆ.

ಎಪಿಜೆ ಅಬ್ದುಲ್ ಕಲಾಂ ಅವರಂತಹ ಸ್ಪೂರ್ತಿದಾಯಕ ವ್ಯಕ್ತಿಗಳ ಹಾದಿಯಲ್ಲಿ ಮಕ್ಕಳು ನಡೆಯಲು ಈ ಕ್ರಮವು ಅನುವು ಮಾಡಿಕೊಡುತ್ತದೆ. ಈ ಕುರಿತು ಮಕ್ಕಳಿಗೆ ಶಿಕ್ಷಣ ನೀಡಲು ಅಗತ್ಯ ಕ್ರಮ ತೆಗೆದುಕೊಳ್ಳುವ ಬಗ್ಗೆ  ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭರವಸೆ ನೀಡಿದ್ದಾರೆ ಎಂದು ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

ಉತ್ತರಾಖಂಡದ ದೇವಭೂಮಿಯಲ್ಲಿ ಸಂಸ್ಕೃತವನ್ನು ಕಲಿಸದಿದ್ದರೆ, ಅದನ್ನು ಎಲ್ಲಿ ಕಲಿಸಲಾಗುತ್ತದೆ? ವಿದ್ಯಾರ್ಥಿಗಳು ಪ್ರತಿಯೊಂದು ಭಾಷೆ ಮತ್ತು ಸಂಸ್ಕೃತಿಯ ಜ್ಞಾನವನ್ನು ಹೊಂದಿರಬೇಕು. ಮದರಸಾಗಳಲ್ಲಿ ಶಿಕ್ಷಣವು ಸೀಮಿತವಾಗಿರಬಾರದು. ಮುಸ್ಲಿಂ ಮಕ್ಕಳಿಗೆ ಎಲ್ಲವನ್ನೂ ಅಧ್ಯಯನ ಮಾಡುವ ಹಕ್ಕಿದೆ ಎಂದು ಅವರು ಹೇಳಿದರು.

ಮದರಸಾಗಳ ಶಿಕ್ಷಣ ವ್ಯವಸ್ಥೆಯ ಆಧುನೀಕರಣದ ಕುರಿತು ಮಾತನಾಡಿದ ಶಾಮ್ಸ್, ಪಠ್ಯಕ್ರಮವು ವೈಜ್ಞಾನಿಕ ಕಲಿಕೆ ಮತ್ತು ಇಸ್ಲಾಮಿಕ್ ಅಧ್ಯಯನಗಳ ಸಮ್ಮಿಲನವಾಗಿದೆ ಎಂದು  ಹೇಳಿದರು.

ಉತ್ತರಾಖಂಡದ ವಕ್ಫ್ ಮಂಡಳಿಯು ರಾಜ್ಯದ 117 ವಕ್ಫ್ ಬೋರ್ಡ್ ಮದರಸಾದಲ್ಲಿ NCERT ಪಠ್ಯಕ್ರಮವನ್ನು ಜಾರಿಗೆ ತರಲು ನಿರ್ಧರಿಸಿದೆ. NCERT ಪಠ್ಯಕ್ರಮವು ಸಂಸ್ಕೃತವನ್ನೂ ಒಳಗೊಂಡಿದೆ. ನಮ್ಮ ಮಕ್ಕಳು ಹಿಂದಿ, ಇಂಗ್ಲಿಷ್, ಗಣಿತ, ವಿಜ್ಞಾನ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಅರೇಬಿಕ್ ಕಲಿಯಲು ಸಾಧ್ಯವಾದರೆ ಅವರು ಸಂಸ್ಕೃತವನ್ನೂ ಕಲಿಯಬಹುದು ಎಂದು ಶಮ್ಸ್ ಹೇಳಿದರು.

ಇದಲ್ಲದೆ 40-50 ಮದರಸಾಗಳು ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲು ಆಗ್ರಹಿಸಿ ನಮ್ಮನ್ನು ಸಂಪರ್ಕಿಸಿವೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷರು ಇದೇ ವೇಳೆ ಹೇಳಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಸೆಕ್ಯೂರಿಟಿ ಗಾರ್ಡ್‌ ಮೇಲೆ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...