Homeಮುಖಪುಟ50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ತೀರ್ಮಾನ

50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ತೀರ್ಮಾನ

- Advertisement -
- Advertisement -

ಡೆಹ್ರಾಡೂನ್:  ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತ ವಿರೋಧಿ ಘಟನೆಗಳ ನಡುವೆ 50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ಭಾನುವಾರದಂದು ತೀರ್ಮಾನಿಸಿದೆ.

ಸುಮಾರು ಅರ್ಧ ಶತಮಾನದಷ್ಟು ಹಳೆಯದಾದ ಮಸೀದಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಿವಿಧ ಹಿಂದೂ ಬಲಪಂಥೀಯ ಸಂಘಟನೆಗಳು ‘ಮಹಾಪಂಚಾಯತ್’ ಆಯೋಜಿಸಿದ ನಂತರ ಉತ್ತರಕಾಶಿಯು ಉದ್ವಿಗ್ನಗೊಂಡಿದೆ. ಈ ಮಸೀದಿ ನಿರ್ಮಾಣವು ಅಕ್ರಮವೆಂದು ಪಂಚಾಯತ್ ಹೇಳಿದೆ.

ಉತ್ತರಕಾಶಿಯ ರಾಮಲೀಲಾ ಮೈದಾನದಲ್ಲಿ ಬಿಗಿ ಭದ್ರತೆಯ ನಡುವೆ “ದೇವಭೂಮಿ ವಿಚಾರ ಮಂಚ್” ಬ್ಯಾನರ್ ಅಡಿಯಲ್ಲಿ ನಡೆದ ಮಹಾಪಂಚಾಯತ್ ಅನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೆಲವು ಶಾಸಕರು ಉದ್ದೇಶಿಸಿ ಮಾತನಾಡಿದರು. ಆದಾಗ್ಯೂ, ಈ ಪಂಚಾಯತ್ ನಲ್ಲಿ ಸುಮಾರು 500 ಜನರು ಮಾತ್ರ ಭಾಗವಹಿಸಿದ್ದರು. ಒಂದು ತಿಂಗಳ ಅವಧಿಯಲ್ಲಿ ಮತ್ತೊಂದು ಮಹಾಪಂಚಾಯತ್ ಅನ್ನು ನಡೆಸಲು ತೀರ್ಮಾನಿಸಲಾಗಿದೆ.

ಜನಸಮೂಹವನ್ನುದ್ದೇಶಿಸಿ ಮಾತನಾಡಿದ ವಿವಾದಿತ ಬಿಜೆಪಿ ನಾಯಕ ಮತ್ತು ತೆಲಂಗಾಣ ಶಾಸಕ ಟಿ ರಾಜಾ ಸಿಂಗ್, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ “ಭೂ ಜಿಹಾದಿಗಳ” ವಿರುದ್ಧ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು ಕಲಿಯಬೇಕಿದೆ ಹಾಗೆಯೇ ಅವರ “ ಬುಲ್ಡೋಜರ್‌ ಸಂಸ್ಕೃತಿ’ಯಿಂದ ಸ್ಫೂರ್ತಿ ಪಡೆಯಬೇಕಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ‘ಚಾಯ್ ಪೇ ಚರ್ಚಾ’ ಮಾಡಬೇಕು. ಯುಪಿಯಲ್ಲಿ ಜಿಹಾದಿಗಳಿಗೆ ಅವರು ಪಾಠ ಕಲಿಸುವ ರೀತಿಯಲ್ಲಿ ತಾವು ಮುಂದುವರಿಯಬೇಕು ಎಂದು ಸಿಂಗ್ ಅವರಿಗೆ ಪ್ರಚೋದಿಸಿದರು.

ಉತ್ತರಾಖಂಡದಲ್ಲಿ ‘ಭೂಮಿ ಜಿಹಾದ್’ ಮಾಡಲು ನಾವು ಜಿಹಾದಿಗಳಿಗೆ ಅವಕಾಶ ನೀಡುವುದಿಲ್ಲ. ಭೂಮಿ ಜಿಹಾದ್’ ಗಳಿಗೆ ಹೇಗೆ ಪಾಠ ಕಲಿಸಬೇಕೆಂದು ಉತ್ತರಾಖಂಡದ ಜನರಿಂದ ದೇಶದ ಹಿಂದೂಗಳು ಸ್ಫೂರ್ತಿ ಪಡೆಯುತ್ತಿದ್ದಾರೆ. ಇದು ಕೇವಲ ಉತ್ತರಕಾಶಿಯ ಸಮಸ್ಯೆಯಲ್ಲ. ದೇಶಾದ್ಯಂತ ಭೂ ಜಿಹಾದ್ ಮತ್ತು ಲವ್ ಜಿಹಾದ್ ನಿರ್ಮೂಲನೆಗೆ ನಾವು ಒಗ್ಗೂಡಬೇಕಾಗಿದೆ ಎಂದು ಶಾಸಕ ಸಿಂಗ್ ಪ್ರತಿಪಾದಿಸಿದರು.

“ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ಅನ್ನು ಹಿಂದೂ ಬಲಪಂಥೀಯ ಸಂಘಟನೆಗಳು ಬಳಸುವ ಪದಗಳಾಗಿವೆ ಮತ್ತು ಇದನ್ನು ಸಾಮಾನ್ಯವಾಗಿ “ಮುಸ್ಲಿಂ-ವಿರೋಧಿ” ವಾಕ್ಚಾತುರ್ಯವಾಗಿ ನೋಡಲಾಗುತ್ತದೆ.

ಉತ್ತರಾಖಂಡದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತ ವಿರೋಧಿ ಘಟನೆಗಳ ಮಧ್ಯೆ ಮಹಾಪಂಚಾಯತ್  ನಡೆಸಿದೆ. ಇದು ಮುಸ್ಲಿಮರ ವಿರುದ್ಧ ಸಾಮಾಜಿಕ ಬಹಿಷ್ಕಾರದ ಕರೆಗಳಿಗೆ ಹೆಚ್ಚಿನ ನಿದರ್ಶನಗಳಿಗೆ ಒಂದು ಉದಾಹರಣೆಯಾಗಿದೆ.

ಮತ್ತೊಬ್ಬ ಬಿಜೆಪಿ ನಾಯಕ ಮತ್ತು ಗಂಗೋತ್ರಿ ಶಾಸಕ ಸುರೇಶ್ ಸಿಂಗ್ ಚೌಹಾಣ್ ಅವರು, ಉತ್ತರಕಾಶಿಯ ಧಾರ್ಮಿಕ ಪಟ್ಟಣದ ಚಿತ್ರಣವನ್ನು ಕಳೆದುಕೊಳ್ಳಲು ನಾವು ಬಿಡುವುದಿಲ್ಲ ಮತ್ತು ಮಾಂಸ ಮತ್ತು ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ನಿಷೇಧಿಸಬೇಕು ಎಂದರು.

ನಾವು ಭಯದ ವಾತಾವರಣವನ್ನು ಸೃಷ್ಟಿಸುತ್ತಿಲ್ಲ, ಆದರೆ ಇದು ಧಾರ್ಮಿಕ ಕ್ಷೇತ್ರದ ಪಟ್ಟಣವಾಗಿದೆ. ಆದಾಗ್ಯೂ, ರೋಹಿಂಗ್ಯಾ ಮುಸ್ಲಿಮರು ಮಾರಾಟಗಾರರಂತೆ ನಟಿಸುತ್ತಿದ್ದಾರೆ, ಉತ್ತರಕಾಶಿಯನ್ನು ಕಲುಷಿತಗೊಳಿಸುತ್ತಿದ್ದಾರೆ. ಇದನ್ನು ಸ್ಥಳೀಯರು ಸಹಿಸುವುದಿಲ್ಲ. ಕೆಲವರು ಇಲ್ಲಿಯ ವಾತಾವರಣವನ್ನು ಕದಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾವು ಅವರನ್ನು ಯಶಸ್ವಿಯಾಗಲು ಬಿಡುವುದಿಲ್ಲ. ಹಾಗಾಗಿ ಹಿಂದೂ ಸಮುದಾಯ ಒಗ್ಗೂಡಬೇಕು ಎಂದು ಅವರು ಕರೆ ನೀಡಿದರು.

ಪಟ್ಟಣದಲ್ಲಿ ದೀರ್ಘಕಾಲ ವಾಸಿಸುವವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಮುಖ್ಯಮಂತ್ರಿಯವರು ಮಸೀದಿಯ ವಿಷಯದ ಬಗ್ಗೆ ಗಮನಹರಿಸಿದ್ದಾರೆ. ಇದು ತನಿಖೆಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಒಂದು ತಿಂಗಳ ನಂತರ ರಾಮಲೀಲಾ ಮೈದಾನದಲ್ಲಿ ಮತ್ತೊಂದು ಮಹಾಪಂಚಾಯತ್ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯಾಧ್ಯಕ್ಷ ಅನುಜ್ ವಾಲಿಯಾ ಘೋಷಿಸಿದರು.

ನಾವು ಮಸೀದಿಯ ವಿರುದ್ಧ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ಆಯೋಜಿಸುತ್ತೇವೆ. ಇದು ನಮ್ಮ ಹೋರಾಟದ ಆರಂಭವಾಗಿದೆ ಎಂದು ಅವರು ಹೇಳಿದರು.

ಮಹಾಪಂಚಾಯತ್‌ಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದ ಕೆಲವೇ ದಿನಗಳಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಅನುಮತಿ ನೀಡಲಾಗಿದೆ. ಸ್ಥಳೀಯ ಆಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿತು.

ಇದನ್ನೂ ಓದಿ…‘ದೆಹಲಿ ಚಲೋ’ ರೈತರ ಮೆರವಣಿಗೆ: ರಾಜಧಾನಿ-ನೋಯ್ಡಾ ಗಡಿಯಲ್ಲಿ ಬೃಹತ್ ಟ್ರಾಫಿಕ್ ಜಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...