Homeಮುಖಪುಟ50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ತೀರ್ಮಾನ

50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ತೀರ್ಮಾನ

- Advertisement -
- Advertisement -

ಡೆಹ್ರಾಡೂನ್:  ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತ ವಿರೋಧಿ ಘಟನೆಗಳ ನಡುವೆ 50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ಭಾನುವಾರದಂದು ತೀರ್ಮಾನಿಸಿದೆ.

ಸುಮಾರು ಅರ್ಧ ಶತಮಾನದಷ್ಟು ಹಳೆಯದಾದ ಮಸೀದಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಿವಿಧ ಹಿಂದೂ ಬಲಪಂಥೀಯ ಸಂಘಟನೆಗಳು ‘ಮಹಾಪಂಚಾಯತ್’ ಆಯೋಜಿಸಿದ ನಂತರ ಉತ್ತರಕಾಶಿಯು ಉದ್ವಿಗ್ನಗೊಂಡಿದೆ. ಈ ಮಸೀದಿ ನಿರ್ಮಾಣವು ಅಕ್ರಮವೆಂದು ಪಂಚಾಯತ್ ಹೇಳಿದೆ.

ಉತ್ತರಕಾಶಿಯ ರಾಮಲೀಲಾ ಮೈದಾನದಲ್ಲಿ ಬಿಗಿ ಭದ್ರತೆಯ ನಡುವೆ “ದೇವಭೂಮಿ ವಿಚಾರ ಮಂಚ್” ಬ್ಯಾನರ್ ಅಡಿಯಲ್ಲಿ ನಡೆದ ಮಹಾಪಂಚಾಯತ್ ಅನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೆಲವು ಶಾಸಕರು ಉದ್ದೇಶಿಸಿ ಮಾತನಾಡಿದರು. ಆದಾಗ್ಯೂ, ಈ ಪಂಚಾಯತ್ ನಲ್ಲಿ ಸುಮಾರು 500 ಜನರು ಮಾತ್ರ ಭಾಗವಹಿಸಿದ್ದರು. ಒಂದು ತಿಂಗಳ ಅವಧಿಯಲ್ಲಿ ಮತ್ತೊಂದು ಮಹಾಪಂಚಾಯತ್ ಅನ್ನು ನಡೆಸಲು ತೀರ್ಮಾನಿಸಲಾಗಿದೆ.

ಜನಸಮೂಹವನ್ನುದ್ದೇಶಿಸಿ ಮಾತನಾಡಿದ ವಿವಾದಿತ ಬಿಜೆಪಿ ನಾಯಕ ಮತ್ತು ತೆಲಂಗಾಣ ಶಾಸಕ ಟಿ ರಾಜಾ ಸಿಂಗ್, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ “ಭೂ ಜಿಹಾದಿಗಳ” ವಿರುದ್ಧ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು ಕಲಿಯಬೇಕಿದೆ ಹಾಗೆಯೇ ಅವರ “ ಬುಲ್ಡೋಜರ್‌ ಸಂಸ್ಕೃತಿ’ಯಿಂದ ಸ್ಫೂರ್ತಿ ಪಡೆಯಬೇಕಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ‘ಚಾಯ್ ಪೇ ಚರ್ಚಾ’ ಮಾಡಬೇಕು. ಯುಪಿಯಲ್ಲಿ ಜಿಹಾದಿಗಳಿಗೆ ಅವರು ಪಾಠ ಕಲಿಸುವ ರೀತಿಯಲ್ಲಿ ತಾವು ಮುಂದುವರಿಯಬೇಕು ಎಂದು ಸಿಂಗ್ ಅವರಿಗೆ ಪ್ರಚೋದಿಸಿದರು.

ಉತ್ತರಾಖಂಡದಲ್ಲಿ ‘ಭೂಮಿ ಜಿಹಾದ್’ ಮಾಡಲು ನಾವು ಜಿಹಾದಿಗಳಿಗೆ ಅವಕಾಶ ನೀಡುವುದಿಲ್ಲ. ಭೂಮಿ ಜಿಹಾದ್’ ಗಳಿಗೆ ಹೇಗೆ ಪಾಠ ಕಲಿಸಬೇಕೆಂದು ಉತ್ತರಾಖಂಡದ ಜನರಿಂದ ದೇಶದ ಹಿಂದೂಗಳು ಸ್ಫೂರ್ತಿ ಪಡೆಯುತ್ತಿದ್ದಾರೆ. ಇದು ಕೇವಲ ಉತ್ತರಕಾಶಿಯ ಸಮಸ್ಯೆಯಲ್ಲ. ದೇಶಾದ್ಯಂತ ಭೂ ಜಿಹಾದ್ ಮತ್ತು ಲವ್ ಜಿಹಾದ್ ನಿರ್ಮೂಲನೆಗೆ ನಾವು ಒಗ್ಗೂಡಬೇಕಾಗಿದೆ ಎಂದು ಶಾಸಕ ಸಿಂಗ್ ಪ್ರತಿಪಾದಿಸಿದರು.

“ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ಅನ್ನು ಹಿಂದೂ ಬಲಪಂಥೀಯ ಸಂಘಟನೆಗಳು ಬಳಸುವ ಪದಗಳಾಗಿವೆ ಮತ್ತು ಇದನ್ನು ಸಾಮಾನ್ಯವಾಗಿ “ಮುಸ್ಲಿಂ-ವಿರೋಧಿ” ವಾಕ್ಚಾತುರ್ಯವಾಗಿ ನೋಡಲಾಗುತ್ತದೆ.

ಉತ್ತರಾಖಂಡದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತ ವಿರೋಧಿ ಘಟನೆಗಳ ಮಧ್ಯೆ ಮಹಾಪಂಚಾಯತ್  ನಡೆಸಿದೆ. ಇದು ಮುಸ್ಲಿಮರ ವಿರುದ್ಧ ಸಾಮಾಜಿಕ ಬಹಿಷ್ಕಾರದ ಕರೆಗಳಿಗೆ ಹೆಚ್ಚಿನ ನಿದರ್ಶನಗಳಿಗೆ ಒಂದು ಉದಾಹರಣೆಯಾಗಿದೆ.

ಮತ್ತೊಬ್ಬ ಬಿಜೆಪಿ ನಾಯಕ ಮತ್ತು ಗಂಗೋತ್ರಿ ಶಾಸಕ ಸುರೇಶ್ ಸಿಂಗ್ ಚೌಹಾಣ್ ಅವರು, ಉತ್ತರಕಾಶಿಯ ಧಾರ್ಮಿಕ ಪಟ್ಟಣದ ಚಿತ್ರಣವನ್ನು ಕಳೆದುಕೊಳ್ಳಲು ನಾವು ಬಿಡುವುದಿಲ್ಲ ಮತ್ತು ಮಾಂಸ ಮತ್ತು ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ನಿಷೇಧಿಸಬೇಕು ಎಂದರು.

ನಾವು ಭಯದ ವಾತಾವರಣವನ್ನು ಸೃಷ್ಟಿಸುತ್ತಿಲ್ಲ, ಆದರೆ ಇದು ಧಾರ್ಮಿಕ ಕ್ಷೇತ್ರದ ಪಟ್ಟಣವಾಗಿದೆ. ಆದಾಗ್ಯೂ, ರೋಹಿಂಗ್ಯಾ ಮುಸ್ಲಿಮರು ಮಾರಾಟಗಾರರಂತೆ ನಟಿಸುತ್ತಿದ್ದಾರೆ, ಉತ್ತರಕಾಶಿಯನ್ನು ಕಲುಷಿತಗೊಳಿಸುತ್ತಿದ್ದಾರೆ. ಇದನ್ನು ಸ್ಥಳೀಯರು ಸಹಿಸುವುದಿಲ್ಲ. ಕೆಲವರು ಇಲ್ಲಿಯ ವಾತಾವರಣವನ್ನು ಕದಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾವು ಅವರನ್ನು ಯಶಸ್ವಿಯಾಗಲು ಬಿಡುವುದಿಲ್ಲ. ಹಾಗಾಗಿ ಹಿಂದೂ ಸಮುದಾಯ ಒಗ್ಗೂಡಬೇಕು ಎಂದು ಅವರು ಕರೆ ನೀಡಿದರು.

ಪಟ್ಟಣದಲ್ಲಿ ದೀರ್ಘಕಾಲ ವಾಸಿಸುವವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಮುಖ್ಯಮಂತ್ರಿಯವರು ಮಸೀದಿಯ ವಿಷಯದ ಬಗ್ಗೆ ಗಮನಹರಿಸಿದ್ದಾರೆ. ಇದು ತನಿಖೆಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಒಂದು ತಿಂಗಳ ನಂತರ ರಾಮಲೀಲಾ ಮೈದಾನದಲ್ಲಿ ಮತ್ತೊಂದು ಮಹಾಪಂಚಾಯತ್ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯಾಧ್ಯಕ್ಷ ಅನುಜ್ ವಾಲಿಯಾ ಘೋಷಿಸಿದರು.

ನಾವು ಮಸೀದಿಯ ವಿರುದ್ಧ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ಆಯೋಜಿಸುತ್ತೇವೆ. ಇದು ನಮ್ಮ ಹೋರಾಟದ ಆರಂಭವಾಗಿದೆ ಎಂದು ಅವರು ಹೇಳಿದರು.

ಮಹಾಪಂಚಾಯತ್‌ಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದ ಕೆಲವೇ ದಿನಗಳಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಅನುಮತಿ ನೀಡಲಾಗಿದೆ. ಸ್ಥಳೀಯ ಆಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿತು.

ಇದನ್ನೂ ಓದಿ…‘ದೆಹಲಿ ಚಲೋ’ ರೈತರ ಮೆರವಣಿಗೆ: ರಾಜಧಾನಿ-ನೋಯ್ಡಾ ಗಡಿಯಲ್ಲಿ ಬೃಹತ್ ಟ್ರಾಫಿಕ್ ಜಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...