Homeಮುಖಪುಟ50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ತೀರ್ಮಾನ

50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ತೀರ್ಮಾನ

- Advertisement -
- Advertisement -

ಡೆಹ್ರಾಡೂನ್:  ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತ ವಿರೋಧಿ ಘಟನೆಗಳ ನಡುವೆ 50 ವರ್ಷ ಹಳೆಯ ಮಸೀದಿ ತೆರವುಗೊಳಿಸಲು ಉತ್ತರಾಖಂಡದ ಮಹಾಪಂಚಾಯತ್ ಭಾನುವಾರದಂದು ತೀರ್ಮಾನಿಸಿದೆ.

ಸುಮಾರು ಅರ್ಧ ಶತಮಾನದಷ್ಟು ಹಳೆಯದಾದ ಮಸೀದಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ವಿವಿಧ ಹಿಂದೂ ಬಲಪಂಥೀಯ ಸಂಘಟನೆಗಳು ‘ಮಹಾಪಂಚಾಯತ್’ ಆಯೋಜಿಸಿದ ನಂತರ ಉತ್ತರಕಾಶಿಯು ಉದ್ವಿಗ್ನಗೊಂಡಿದೆ. ಈ ಮಸೀದಿ ನಿರ್ಮಾಣವು ಅಕ್ರಮವೆಂದು ಪಂಚಾಯತ್ ಹೇಳಿದೆ.

ಉತ್ತರಕಾಶಿಯ ರಾಮಲೀಲಾ ಮೈದಾನದಲ್ಲಿ ಬಿಗಿ ಭದ್ರತೆಯ ನಡುವೆ “ದೇವಭೂಮಿ ವಿಚಾರ ಮಂಚ್” ಬ್ಯಾನರ್ ಅಡಿಯಲ್ಲಿ ನಡೆದ ಮಹಾಪಂಚಾಯತ್ ಅನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೆಲವು ಶಾಸಕರು ಉದ್ದೇಶಿಸಿ ಮಾತನಾಡಿದರು. ಆದಾಗ್ಯೂ, ಈ ಪಂಚಾಯತ್ ನಲ್ಲಿ ಸುಮಾರು 500 ಜನರು ಮಾತ್ರ ಭಾಗವಹಿಸಿದ್ದರು. ಒಂದು ತಿಂಗಳ ಅವಧಿಯಲ್ಲಿ ಮತ್ತೊಂದು ಮಹಾಪಂಚಾಯತ್ ಅನ್ನು ನಡೆಸಲು ತೀರ್ಮಾನಿಸಲಾಗಿದೆ.

ಜನಸಮೂಹವನ್ನುದ್ದೇಶಿಸಿ ಮಾತನಾಡಿದ ವಿವಾದಿತ ಬಿಜೆಪಿ ನಾಯಕ ಮತ್ತು ತೆಲಂಗಾಣ ಶಾಸಕ ಟಿ ರಾಜಾ ಸಿಂಗ್, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ “ಭೂ ಜಿಹಾದಿಗಳ” ವಿರುದ್ಧ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು ಕಲಿಯಬೇಕಿದೆ ಹಾಗೆಯೇ ಅವರ “ ಬುಲ್ಡೋಜರ್‌ ಸಂಸ್ಕೃತಿ’ಯಿಂದ ಸ್ಫೂರ್ತಿ ಪಡೆಯಬೇಕಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ‘ಚಾಯ್ ಪೇ ಚರ್ಚಾ’ ಮಾಡಬೇಕು. ಯುಪಿಯಲ್ಲಿ ಜಿಹಾದಿಗಳಿಗೆ ಅವರು ಪಾಠ ಕಲಿಸುವ ರೀತಿಯಲ್ಲಿ ತಾವು ಮುಂದುವರಿಯಬೇಕು ಎಂದು ಸಿಂಗ್ ಅವರಿಗೆ ಪ್ರಚೋದಿಸಿದರು.

ಉತ್ತರಾಖಂಡದಲ್ಲಿ ‘ಭೂಮಿ ಜಿಹಾದ್’ ಮಾಡಲು ನಾವು ಜಿಹಾದಿಗಳಿಗೆ ಅವಕಾಶ ನೀಡುವುದಿಲ್ಲ. ಭೂಮಿ ಜಿಹಾದ್’ ಗಳಿಗೆ ಹೇಗೆ ಪಾಠ ಕಲಿಸಬೇಕೆಂದು ಉತ್ತರಾಖಂಡದ ಜನರಿಂದ ದೇಶದ ಹಿಂದೂಗಳು ಸ್ಫೂರ್ತಿ ಪಡೆಯುತ್ತಿದ್ದಾರೆ. ಇದು ಕೇವಲ ಉತ್ತರಕಾಶಿಯ ಸಮಸ್ಯೆಯಲ್ಲ. ದೇಶಾದ್ಯಂತ ಭೂ ಜಿಹಾದ್ ಮತ್ತು ಲವ್ ಜಿಹಾದ್ ನಿರ್ಮೂಲನೆಗೆ ನಾವು ಒಗ್ಗೂಡಬೇಕಾಗಿದೆ ಎಂದು ಶಾಸಕ ಸಿಂಗ್ ಪ್ರತಿಪಾದಿಸಿದರು.

“ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ಅನ್ನು ಹಿಂದೂ ಬಲಪಂಥೀಯ ಸಂಘಟನೆಗಳು ಬಳಸುವ ಪದಗಳಾಗಿವೆ ಮತ್ತು ಇದನ್ನು ಸಾಮಾನ್ಯವಾಗಿ “ಮುಸ್ಲಿಂ-ವಿರೋಧಿ” ವಾಕ್ಚಾತುರ್ಯವಾಗಿ ನೋಡಲಾಗುತ್ತದೆ.

ಉತ್ತರಾಖಂಡದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆ ಮತ್ತು ಅಲ್ಪಸಂಖ್ಯಾತ ವಿರೋಧಿ ಘಟನೆಗಳ ಮಧ್ಯೆ ಮಹಾಪಂಚಾಯತ್  ನಡೆಸಿದೆ. ಇದು ಮುಸ್ಲಿಮರ ವಿರುದ್ಧ ಸಾಮಾಜಿಕ ಬಹಿಷ್ಕಾರದ ಕರೆಗಳಿಗೆ ಹೆಚ್ಚಿನ ನಿದರ್ಶನಗಳಿಗೆ ಒಂದು ಉದಾಹರಣೆಯಾಗಿದೆ.

ಮತ್ತೊಬ್ಬ ಬಿಜೆಪಿ ನಾಯಕ ಮತ್ತು ಗಂಗೋತ್ರಿ ಶಾಸಕ ಸುರೇಶ್ ಸಿಂಗ್ ಚೌಹಾಣ್ ಅವರು, ಉತ್ತರಕಾಶಿಯ ಧಾರ್ಮಿಕ ಪಟ್ಟಣದ ಚಿತ್ರಣವನ್ನು ಕಳೆದುಕೊಳ್ಳಲು ನಾವು ಬಿಡುವುದಿಲ್ಲ ಮತ್ತು ಮಾಂಸ ಮತ್ತು ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ನಿಷೇಧಿಸಬೇಕು ಎಂದರು.

ನಾವು ಭಯದ ವಾತಾವರಣವನ್ನು ಸೃಷ್ಟಿಸುತ್ತಿಲ್ಲ, ಆದರೆ ಇದು ಧಾರ್ಮಿಕ ಕ್ಷೇತ್ರದ ಪಟ್ಟಣವಾಗಿದೆ. ಆದಾಗ್ಯೂ, ರೋಹಿಂಗ್ಯಾ ಮುಸ್ಲಿಮರು ಮಾರಾಟಗಾರರಂತೆ ನಟಿಸುತ್ತಿದ್ದಾರೆ, ಉತ್ತರಕಾಶಿಯನ್ನು ಕಲುಷಿತಗೊಳಿಸುತ್ತಿದ್ದಾರೆ. ಇದನ್ನು ಸ್ಥಳೀಯರು ಸಹಿಸುವುದಿಲ್ಲ. ಕೆಲವರು ಇಲ್ಲಿಯ ವಾತಾವರಣವನ್ನು ಕದಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾವು ಅವರನ್ನು ಯಶಸ್ವಿಯಾಗಲು ಬಿಡುವುದಿಲ್ಲ. ಹಾಗಾಗಿ ಹಿಂದೂ ಸಮುದಾಯ ಒಗ್ಗೂಡಬೇಕು ಎಂದು ಅವರು ಕರೆ ನೀಡಿದರು.

ಪಟ್ಟಣದಲ್ಲಿ ದೀರ್ಘಕಾಲ ವಾಸಿಸುವವರೊಂದಿಗೆ ನಮಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಮುಖ್ಯಮಂತ್ರಿಯವರು ಮಸೀದಿಯ ವಿಷಯದ ಬಗ್ಗೆ ಗಮನಹರಿಸಿದ್ದಾರೆ. ಇದು ತನಿಖೆಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಒಂದು ತಿಂಗಳ ನಂತರ ರಾಮಲೀಲಾ ಮೈದಾನದಲ್ಲಿ ಮತ್ತೊಂದು ಮಹಾಪಂಚಾಯತ್ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ರಾಜ್ಯಾಧ್ಯಕ್ಷ ಅನುಜ್ ವಾಲಿಯಾ ಘೋಷಿಸಿದರು.

ನಾವು ಮಸೀದಿಯ ವಿರುದ್ಧ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ಆಯೋಜಿಸುತ್ತೇವೆ. ಇದು ನಮ್ಮ ಹೋರಾಟದ ಆರಂಭವಾಗಿದೆ ಎಂದು ಅವರು ಹೇಳಿದರು.

ಮಹಾಪಂಚಾಯತ್‌ಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದ ಕೆಲವೇ ದಿನಗಳಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಅನುಮತಿ ನೀಡಲಾಗಿದೆ. ಸ್ಥಳೀಯ ಆಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿತು.

ಇದನ್ನೂ ಓದಿ…‘ದೆಹಲಿ ಚಲೋ’ ರೈತರ ಮೆರವಣಿಗೆ: ರಾಜಧಾನಿ-ನೋಯ್ಡಾ ಗಡಿಯಲ್ಲಿ ಬೃಹತ್ ಟ್ರಾಫಿಕ್ ಜಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...