Homeಮುಖಪುಟಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

- Advertisement -
- Advertisement -

ಡಿಸೆಂಬರ್ 31 ರೊಳಗೆ ಮುಸ್ಲಿಂ ಕುಟುಂಬಗಳನ್ನು ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸುವ ಆತಂಕಕಾರಿ ಬೆಳವಣಿಗೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ. ಇತ್ತಿಚೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು, ಕೆಲವು ದುಷ್ಕರ್ಮಿಗಳ ಗುಂಪುಗಳು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಗುರಿ ಮಾಡುವುದನ್ನು ಪ್ರಾರಂಭಿಸಿವೆ. ಉತ್ತರಾಖಂಡ

ಚಮೋಲಿಯ ಖಾನಸರ್ ಪಟ್ಟಣದಲ್ಲಿ ವರ್ತಕರ ಮಂಡಳಿಯು ಡಿಸೆಂಬರ್ 31 ರೊಳಗೆ 15 ಮುಸ್ಲಿಂ ಕುಟುಂಬಗಳನ್ನು ಪಟ್ಟಣವನ್ನು ಖಾಲಿ ಮಾಡುವಂತೆ ನಿರ್ಣಯವನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಕೋಮು ಸೌಹಾರ್ದತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಪ್ರದೇಶದಲ್ಲಿನ ಎಲ್ಲಾ “ಹೊರಗಿನವರನ್ನು” ಪರಿಶೀಲಿಸುವಂತೆ ಗುಂಪುಗಳು ಒತ್ತಾಯಿಸಿದೆ.

ದುಷ್ಕರ್ಮಿಗಳ ಈ ನಿರ್ಧಾರದಿಂದ ಪಟ್ಟಣದಲ್ಲಿ ದೀರ್ಘಕಾಲದಿಂದಲೂ ವಾಸಿಸುತ್ತಿರುವ ಮುಸ್ಲಿಂ ನಿವಾಸಿಗಳನ್ನು ಕೂಡಾ ಆಘಾತ ಮತ್ತು ದಿಗ್ಭ್ರಮೆಗೊಳಿಸಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಇತ್ತಿಚಿನ ವಿಡಿಯೊದಲ್ಲಿ ವ್ಯಾಪಾರಿಗಳ ರ‍್ಯಾಲಿಯ ವೇಳೆ ಮೆರವಣಿಗೆಯಲ್ಲಿ ಹೆಚ್ಚಾಗಿ ಸ್ಥಳೀಯ ಉದ್ಯಮಿಗಳು ಭಾಗವಹಿಸಿದ್ದರು. ಇದರಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಿರುವುದು ದಾಖಲಾಗಿದೆ. ಎತ್ತುತ್ತಿರುವುದನ್ನು ತೋರಿಸುತ್ತದೆ. ಮುಸ್ಲಿಮರಿಗೆ ನಿಷೇಧ ಹೇರುವ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪವಾಗಿದ್ದು, ಈ ಕ್ರಮವನ್ನು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯದ ಘೋರ ಕೃತ್ಯ ಎಂದು ಬಣ್ಣಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಸ್ಥಳೀಯ ಹೋರಾಟಗಾರರೊಬ್ಬರು, “ಈ ನಿರ್ಧಾರವು ಸ್ವೀಕಾರಾರ್ಹವಲ್ಲ. ಇದು ಸಮಾನತೆ ಮತ್ತು ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ. ನಾವು ಈ ಪ್ರಸ್ತಾಪದ ವಿರುದ್ಧ ಹೋರಾಡುತ್ತೇವೆ ಮತ್ತು ಎಲ್ಲಾ ನಾಗರಿಕರ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಸ್ಥಳೀಯ ನಿವಾಸಿ, “ಇದು ಕೇವಲ 15 ಕುಟುಂಬಗಳ ವಿಚಾರವಲ್ಲ. ಇದು ನಮ್ಮ ಸಮಾಜದ ರಚನೆಗೆ ಸಂಬಂಧಿಸಿದ ವಿಚಾರವಾಗಿದೆ. ಇಂತಹ ವಿಭಜಕ ಕ್ರಮಗಳ ವಿರುದ್ಧ ನಾವು ಒಟ್ಟಾಗಿ ನಿಲ್ಲಬೇಕು.” ಎಂದು ಹೇಳಿದ್ದಾರೆ. ಅದಾಗ್ಯೂ, ಹತ್ತಾರು ವರ್ಷಗಳಿಂದ ಪಟ್ಟಣದಲ್ಲಿ ನೆಲೆಸಿರುವ ಸಂತ್ರಸ್ತ ಕುಟುಂಬಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ.

“ವರ್ತಕರ ಸಂಘದ ಈ ಹಠಾತ್ ನಿರ್ಧಾರದಿಂದ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ನಾವು ದಶಕಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ ಮತ್ತು ನಮ್ಮ ಕುಟುಂಬಗಳು ಈ ಸಮುದಾಯದ ಅವಿಭಾಜ್ಯ ಅಂಗವಾಗಿದೆ. ನಮ್ಮನ್ನು ಏಕೆ ಇಲ್ಲಿಂದ ಹೊರಹೋಗುವಂತೆ ಒತ್ತಾಯಿಸುತ್ತಿದ್ದಾರೆ?” ಎಂದು ಹೆಸರು ಹೇಳಲು ಇಚ್ಛಿಸದ ಪಟ್ಟಣದಲ್ಲೆ ಉಳಿಯಲು ಬಯಸುವ ಸ್ಥಳೀಯ ಮುಸ್ಲಿಂ ನಿವಾಸಿಯೊಬ್ಬರು ಹೇಳಿದ್ದಾರೆ.

ಹಿಂದೂ ಮಹಿಳೆಯರು ಮತ್ತು ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ನಡುವೆ ನಡೆಯುವ ಅಪರಾಧ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾನ ಕೈಗೊಳ್ಳಲಾಗಿದೆ ಎಂದು ಮೈಥಾನ್ ಸೇವಾ ಸಮಿತಿಯ ಅಧ್ಯಕ್ಷ ವೀರೇಂದ್ರ ಸಿಂಗ್ ಹೇಳಿದ್ದಾರೆ. ಮೈಥಾನ್ ಮಾರುಕಟ್ಟೆಯಲ್ಲಿ ನಡೆದ ‘ಜಾಗೃತ’ ರ‍್ಯಾಲಿಯ ನಂತರ ವರ್ತಕರ ಸಂಘದ ಸಭೆಯಲ್ಲಿ ಈ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಈ ಸಭೆಯಲ್ಲಿ ಖಾನ್ಸರ್ ಕಣಿವೆಯ ಗ್ರಾಮದ ಪ್ರದೇಶಗಳಿಗೆ ಎಲ್ಲಾ ಮಾರಾಟಗಾರರನ್ನು ಪ್ರವೇಶಿಸುವುದನ್ನು ನಿಷೇಧಿಸಲು ನಿರ್ಧರಿಸಲಾಯಿತು ಎಂದು ಸಿಂಗ್ ಹೇಳಿದ್ದಾರೆ. ಒಂದು ವೇಳೆ ವ್ಯಾಪಾರಿಗಳು ಸಿಕ್ಕಿಬಿದ್ದರೆ ಅವರು 10,000 ರೂಪಾಯಿ ದಂಡ ಮತ್ತು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಖಾನ್ಸರ್ ಪಟ್ಟಣದಲ್ಲಿರುವ ಮೈಥಾನ್ ಮಾರುಕಟ್ಟೆ ಗೈರ್‌ಸೈನ್‌ನ ಪ್ರಮುಖ ಭಾಗವಾಗಿದ್ದು, 21 ಗ್ರಾಮ ಪಂಚಾಯತ್‌ಗಳೊಂದಿಗೆ ಸುಮಾರು 40,000 ಜನಸಂಖ್ಯೆಯನ್ನು ಹೊಂದಿದೆ. ಮೈಥಾನ್ ಟ್ರೇಡ್ ಅಸೋಸಿಯೇಷನ್ ​​ಅಧ್ಯಕ್ಷ ಬಲದೇವ್ ಸಿಂಗ್ ನೇಗಿ ಮಾತನಾಡಿ, “ನಾವು ಯಾವುದೇ ಸಂದರ್ಭದಲ್ಲೂ ದೇವಭೂಮಿಯ ವಾತಾವರಣವನ್ನು ಹದಗೆಡಲು ಬಿಡುವುದಿಲ್ಲ. ಅನುಮಾನಾಸ್ಪದ ವ್ಯಕ್ತಿಗಳು ಈ ಪ್ರದೇಶದಲ್ಲಿ ವ್ಯಾಪಾರ ಮಾಡಲು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಮೋಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್, “ನಾವು ಶನಿವಾರ ವರ್ತಕರ ಸಂಘದ ಸದಸ್ಯರು ಮತ್ತು ಸ್ಥಳೀಯ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಈ ಸಭೆಯಲ್ಲಿ ಪ್ರದೇಶದಲ್ಲಿ ವ್ಯಾಪಾರ ಮಾಡುವ ಹೊರಗಿನವರ ಪರಿಶೀಲನೆ ಮತ್ತು ಕಣ್ಗಾವಲು ನಿರ್ಣಾಯಕವಾಗಿದೆ ಎಂದು ನಾವು ತೀರ್ಮಾನಕ್ಕೆ ಬಂದಿದ್ದೇವೆ. ತನಿಖೆಯು ನಿರ್ಣಾಯಕವಾಗಿದ್ದು ಪ್ರಸ್ತುತ ನಡೆಯುತ್ತಿದೆ.” ಎಂದು ಹೇಳಿದ್ದಾರೆ.

ಗೈರ್‌ಸೈನ್ ಎಸ್‌ಎಚ್‌ಒ ಜೈಪಾಲ್ ಸಿಂಗ್ ನೇಗಿ ಮಾತನಾಡಿ, “ಪೊಲೀಸರು ಸ್ಥಳೀಯ ಗುಪ್ತಚರ ಘಟಕದ ಸಹಾಯದಿಂದ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...