Homeಮುಖಪುಟಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

- Advertisement -
- Advertisement -

ಡಿಸೆಂಬರ್ 31 ರೊಳಗೆ ಮುಸ್ಲಿಂ ಕುಟುಂಬಗಳನ್ನು ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸುವ ಆತಂಕಕಾರಿ ಬೆಳವಣಿಗೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ. ಇತ್ತಿಚೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು, ಕೆಲವು ದುಷ್ಕರ್ಮಿಗಳ ಗುಂಪುಗಳು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಗುರಿ ಮಾಡುವುದನ್ನು ಪ್ರಾರಂಭಿಸಿವೆ. ಉತ್ತರಾಖಂಡ

ಚಮೋಲಿಯ ಖಾನಸರ್ ಪಟ್ಟಣದಲ್ಲಿ ವರ್ತಕರ ಮಂಡಳಿಯು ಡಿಸೆಂಬರ್ 31 ರೊಳಗೆ 15 ಮುಸ್ಲಿಂ ಕುಟುಂಬಗಳನ್ನು ಪಟ್ಟಣವನ್ನು ಖಾಲಿ ಮಾಡುವಂತೆ ನಿರ್ಣಯವನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಕೋಮು ಸೌಹಾರ್ದತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಪ್ರದೇಶದಲ್ಲಿನ ಎಲ್ಲಾ “ಹೊರಗಿನವರನ್ನು” ಪರಿಶೀಲಿಸುವಂತೆ ಗುಂಪುಗಳು ಒತ್ತಾಯಿಸಿದೆ.

ದುಷ್ಕರ್ಮಿಗಳ ಈ ನಿರ್ಧಾರದಿಂದ ಪಟ್ಟಣದಲ್ಲಿ ದೀರ್ಘಕಾಲದಿಂದಲೂ ವಾಸಿಸುತ್ತಿರುವ ಮುಸ್ಲಿಂ ನಿವಾಸಿಗಳನ್ನು ಕೂಡಾ ಆಘಾತ ಮತ್ತು ದಿಗ್ಭ್ರಮೆಗೊಳಿಸಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಇತ್ತಿಚಿನ ವಿಡಿಯೊದಲ್ಲಿ ವ್ಯಾಪಾರಿಗಳ ರ‍್ಯಾಲಿಯ ವೇಳೆ ಮೆರವಣಿಗೆಯಲ್ಲಿ ಹೆಚ್ಚಾಗಿ ಸ್ಥಳೀಯ ಉದ್ಯಮಿಗಳು ಭಾಗವಹಿಸಿದ್ದರು. ಇದರಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಿರುವುದು ದಾಖಲಾಗಿದೆ. ಎತ್ತುತ್ತಿರುವುದನ್ನು ತೋರಿಸುತ್ತದೆ. ಮುಸ್ಲಿಮರಿಗೆ ನಿಷೇಧ ಹೇರುವ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪವಾಗಿದ್ದು, ಈ ಕ್ರಮವನ್ನು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯದ ಘೋರ ಕೃತ್ಯ ಎಂದು ಬಣ್ಣಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಸ್ಥಳೀಯ ಹೋರಾಟಗಾರರೊಬ್ಬರು, “ಈ ನಿರ್ಧಾರವು ಸ್ವೀಕಾರಾರ್ಹವಲ್ಲ. ಇದು ಸಮಾನತೆ ಮತ್ತು ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ. ನಾವು ಈ ಪ್ರಸ್ತಾಪದ ವಿರುದ್ಧ ಹೋರಾಡುತ್ತೇವೆ ಮತ್ತು ಎಲ್ಲಾ ನಾಗರಿಕರ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಸ್ಥಳೀಯ ನಿವಾಸಿ, “ಇದು ಕೇವಲ 15 ಕುಟುಂಬಗಳ ವಿಚಾರವಲ್ಲ. ಇದು ನಮ್ಮ ಸಮಾಜದ ರಚನೆಗೆ ಸಂಬಂಧಿಸಿದ ವಿಚಾರವಾಗಿದೆ. ಇಂತಹ ವಿಭಜಕ ಕ್ರಮಗಳ ವಿರುದ್ಧ ನಾವು ಒಟ್ಟಾಗಿ ನಿಲ್ಲಬೇಕು.” ಎಂದು ಹೇಳಿದ್ದಾರೆ. ಅದಾಗ್ಯೂ, ಹತ್ತಾರು ವರ್ಷಗಳಿಂದ ಪಟ್ಟಣದಲ್ಲಿ ನೆಲೆಸಿರುವ ಸಂತ್ರಸ್ತ ಕುಟುಂಬಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ.

“ವರ್ತಕರ ಸಂಘದ ಈ ಹಠಾತ್ ನಿರ್ಧಾರದಿಂದ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ನಾವು ದಶಕಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ ಮತ್ತು ನಮ್ಮ ಕುಟುಂಬಗಳು ಈ ಸಮುದಾಯದ ಅವಿಭಾಜ್ಯ ಅಂಗವಾಗಿದೆ. ನಮ್ಮನ್ನು ಏಕೆ ಇಲ್ಲಿಂದ ಹೊರಹೋಗುವಂತೆ ಒತ್ತಾಯಿಸುತ್ತಿದ್ದಾರೆ?” ಎಂದು ಹೆಸರು ಹೇಳಲು ಇಚ್ಛಿಸದ ಪಟ್ಟಣದಲ್ಲೆ ಉಳಿಯಲು ಬಯಸುವ ಸ್ಥಳೀಯ ಮುಸ್ಲಿಂ ನಿವಾಸಿಯೊಬ್ಬರು ಹೇಳಿದ್ದಾರೆ.

ಹಿಂದೂ ಮಹಿಳೆಯರು ಮತ್ತು ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ನಡುವೆ ನಡೆಯುವ ಅಪರಾಧ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾನ ಕೈಗೊಳ್ಳಲಾಗಿದೆ ಎಂದು ಮೈಥಾನ್ ಸೇವಾ ಸಮಿತಿಯ ಅಧ್ಯಕ್ಷ ವೀರೇಂದ್ರ ಸಿಂಗ್ ಹೇಳಿದ್ದಾರೆ. ಮೈಥಾನ್ ಮಾರುಕಟ್ಟೆಯಲ್ಲಿ ನಡೆದ ‘ಜಾಗೃತ’ ರ‍್ಯಾಲಿಯ ನಂತರ ವರ್ತಕರ ಸಂಘದ ಸಭೆಯಲ್ಲಿ ಈ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಈ ಸಭೆಯಲ್ಲಿ ಖಾನ್ಸರ್ ಕಣಿವೆಯ ಗ್ರಾಮದ ಪ್ರದೇಶಗಳಿಗೆ ಎಲ್ಲಾ ಮಾರಾಟಗಾರರನ್ನು ಪ್ರವೇಶಿಸುವುದನ್ನು ನಿಷೇಧಿಸಲು ನಿರ್ಧರಿಸಲಾಯಿತು ಎಂದು ಸಿಂಗ್ ಹೇಳಿದ್ದಾರೆ. ಒಂದು ವೇಳೆ ವ್ಯಾಪಾರಿಗಳು ಸಿಕ್ಕಿಬಿದ್ದರೆ ಅವರು 10,000 ರೂಪಾಯಿ ದಂಡ ಮತ್ತು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಖಾನ್ಸರ್ ಪಟ್ಟಣದಲ್ಲಿರುವ ಮೈಥಾನ್ ಮಾರುಕಟ್ಟೆ ಗೈರ್‌ಸೈನ್‌ನ ಪ್ರಮುಖ ಭಾಗವಾಗಿದ್ದು, 21 ಗ್ರಾಮ ಪಂಚಾಯತ್‌ಗಳೊಂದಿಗೆ ಸುಮಾರು 40,000 ಜನಸಂಖ್ಯೆಯನ್ನು ಹೊಂದಿದೆ. ಮೈಥಾನ್ ಟ್ರೇಡ್ ಅಸೋಸಿಯೇಷನ್ ​​ಅಧ್ಯಕ್ಷ ಬಲದೇವ್ ಸಿಂಗ್ ನೇಗಿ ಮಾತನಾಡಿ, “ನಾವು ಯಾವುದೇ ಸಂದರ್ಭದಲ್ಲೂ ದೇವಭೂಮಿಯ ವಾತಾವರಣವನ್ನು ಹದಗೆಡಲು ಬಿಡುವುದಿಲ್ಲ. ಅನುಮಾನಾಸ್ಪದ ವ್ಯಕ್ತಿಗಳು ಈ ಪ್ರದೇಶದಲ್ಲಿ ವ್ಯಾಪಾರ ಮಾಡಲು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಮೋಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್, “ನಾವು ಶನಿವಾರ ವರ್ತಕರ ಸಂಘದ ಸದಸ್ಯರು ಮತ್ತು ಸ್ಥಳೀಯ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಈ ಸಭೆಯಲ್ಲಿ ಪ್ರದೇಶದಲ್ಲಿ ವ್ಯಾಪಾರ ಮಾಡುವ ಹೊರಗಿನವರ ಪರಿಶೀಲನೆ ಮತ್ತು ಕಣ್ಗಾವಲು ನಿರ್ಣಾಯಕವಾಗಿದೆ ಎಂದು ನಾವು ತೀರ್ಮಾನಕ್ಕೆ ಬಂದಿದ್ದೇವೆ. ತನಿಖೆಯು ನಿರ್ಣಾಯಕವಾಗಿದ್ದು ಪ್ರಸ್ತುತ ನಡೆಯುತ್ತಿದೆ.” ಎಂದು ಹೇಳಿದ್ದಾರೆ.

ಗೈರ್‌ಸೈನ್ ಎಸ್‌ಎಚ್‌ಒ ಜೈಪಾಲ್ ಸಿಂಗ್ ನೇಗಿ ಮಾತನಾಡಿ, “ಪೊಲೀಸರು ಸ್ಥಳೀಯ ಗುಪ್ತಚರ ಘಟಕದ ಸಹಾಯದಿಂದ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...