Homeಮುಖಪುಟಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

- Advertisement -
- Advertisement -

ಡಿಸೆಂಬರ್ 31 ರೊಳಗೆ ಮುಸ್ಲಿಂ ಕುಟುಂಬಗಳನ್ನು ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸುವ ಆತಂಕಕಾರಿ ಬೆಳವಣಿಗೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ. ಇತ್ತಿಚೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು, ಕೆಲವು ದುಷ್ಕರ್ಮಿಗಳ ಗುಂಪುಗಳು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಗುರಿ ಮಾಡುವುದನ್ನು ಪ್ರಾರಂಭಿಸಿವೆ. ಉತ್ತರಾಖಂಡ

ಚಮೋಲಿಯ ಖಾನಸರ್ ಪಟ್ಟಣದಲ್ಲಿ ವರ್ತಕರ ಮಂಡಳಿಯು ಡಿಸೆಂಬರ್ 31 ರೊಳಗೆ 15 ಮುಸ್ಲಿಂ ಕುಟುಂಬಗಳನ್ನು ಪಟ್ಟಣವನ್ನು ಖಾಲಿ ಮಾಡುವಂತೆ ನಿರ್ಣಯವನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಕೋಮು ಸೌಹಾರ್ದತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಪ್ರದೇಶದಲ್ಲಿನ ಎಲ್ಲಾ “ಹೊರಗಿನವರನ್ನು” ಪರಿಶೀಲಿಸುವಂತೆ ಗುಂಪುಗಳು ಒತ್ತಾಯಿಸಿದೆ.

ದುಷ್ಕರ್ಮಿಗಳ ಈ ನಿರ್ಧಾರದಿಂದ ಪಟ್ಟಣದಲ್ಲಿ ದೀರ್ಘಕಾಲದಿಂದಲೂ ವಾಸಿಸುತ್ತಿರುವ ಮುಸ್ಲಿಂ ನಿವಾಸಿಗಳನ್ನು ಕೂಡಾ ಆಘಾತ ಮತ್ತು ದಿಗ್ಭ್ರಮೆಗೊಳಿಸಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಇತ್ತಿಚಿನ ವಿಡಿಯೊದಲ್ಲಿ ವ್ಯಾಪಾರಿಗಳ ರ‍್ಯಾಲಿಯ ವೇಳೆ ಮೆರವಣಿಗೆಯಲ್ಲಿ ಹೆಚ್ಚಾಗಿ ಸ್ಥಳೀಯ ಉದ್ಯಮಿಗಳು ಭಾಗವಹಿಸಿದ್ದರು. ಇದರಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಿರುವುದು ದಾಖಲಾಗಿದೆ. ಎತ್ತುತ್ತಿರುವುದನ್ನು ತೋರಿಸುತ್ತದೆ. ಮುಸ್ಲಿಮರಿಗೆ ನಿಷೇಧ ಹೇರುವ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪವಾಗಿದ್ದು, ಈ ಕ್ರಮವನ್ನು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯದ ಘೋರ ಕೃತ್ಯ ಎಂದು ಬಣ್ಣಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಸ್ಥಳೀಯ ಹೋರಾಟಗಾರರೊಬ್ಬರು, “ಈ ನಿರ್ಧಾರವು ಸ್ವೀಕಾರಾರ್ಹವಲ್ಲ. ಇದು ಸಮಾನತೆ ಮತ್ತು ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ. ನಾವು ಈ ಪ್ರಸ್ತಾಪದ ವಿರುದ್ಧ ಹೋರಾಡುತ್ತೇವೆ ಮತ್ತು ಎಲ್ಲಾ ನಾಗರಿಕರ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಸ್ಥಳೀಯ ನಿವಾಸಿ, “ಇದು ಕೇವಲ 15 ಕುಟುಂಬಗಳ ವಿಚಾರವಲ್ಲ. ಇದು ನಮ್ಮ ಸಮಾಜದ ರಚನೆಗೆ ಸಂಬಂಧಿಸಿದ ವಿಚಾರವಾಗಿದೆ. ಇಂತಹ ವಿಭಜಕ ಕ್ರಮಗಳ ವಿರುದ್ಧ ನಾವು ಒಟ್ಟಾಗಿ ನಿಲ್ಲಬೇಕು.” ಎಂದು ಹೇಳಿದ್ದಾರೆ. ಅದಾಗ್ಯೂ, ಹತ್ತಾರು ವರ್ಷಗಳಿಂದ ಪಟ್ಟಣದಲ್ಲಿ ನೆಲೆಸಿರುವ ಸಂತ್ರಸ್ತ ಕುಟುಂಬಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ.

“ವರ್ತಕರ ಸಂಘದ ಈ ಹಠಾತ್ ನಿರ್ಧಾರದಿಂದ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ನಾವು ದಶಕಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ ಮತ್ತು ನಮ್ಮ ಕುಟುಂಬಗಳು ಈ ಸಮುದಾಯದ ಅವಿಭಾಜ್ಯ ಅಂಗವಾಗಿದೆ. ನಮ್ಮನ್ನು ಏಕೆ ಇಲ್ಲಿಂದ ಹೊರಹೋಗುವಂತೆ ಒತ್ತಾಯಿಸುತ್ತಿದ್ದಾರೆ?” ಎಂದು ಹೆಸರು ಹೇಳಲು ಇಚ್ಛಿಸದ ಪಟ್ಟಣದಲ್ಲೆ ಉಳಿಯಲು ಬಯಸುವ ಸ್ಥಳೀಯ ಮುಸ್ಲಿಂ ನಿವಾಸಿಯೊಬ್ಬರು ಹೇಳಿದ್ದಾರೆ.

ಹಿಂದೂ ಮಹಿಳೆಯರು ಮತ್ತು ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ನಡುವೆ ನಡೆಯುವ ಅಪರಾಧ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾನ ಕೈಗೊಳ್ಳಲಾಗಿದೆ ಎಂದು ಮೈಥಾನ್ ಸೇವಾ ಸಮಿತಿಯ ಅಧ್ಯಕ್ಷ ವೀರೇಂದ್ರ ಸಿಂಗ್ ಹೇಳಿದ್ದಾರೆ. ಮೈಥಾನ್ ಮಾರುಕಟ್ಟೆಯಲ್ಲಿ ನಡೆದ ‘ಜಾಗೃತ’ ರ‍್ಯಾಲಿಯ ನಂತರ ವರ್ತಕರ ಸಂಘದ ಸಭೆಯಲ್ಲಿ ಈ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಈ ಸಭೆಯಲ್ಲಿ ಖಾನ್ಸರ್ ಕಣಿವೆಯ ಗ್ರಾಮದ ಪ್ರದೇಶಗಳಿಗೆ ಎಲ್ಲಾ ಮಾರಾಟಗಾರರನ್ನು ಪ್ರವೇಶಿಸುವುದನ್ನು ನಿಷೇಧಿಸಲು ನಿರ್ಧರಿಸಲಾಯಿತು ಎಂದು ಸಿಂಗ್ ಹೇಳಿದ್ದಾರೆ. ಒಂದು ವೇಳೆ ವ್ಯಾಪಾರಿಗಳು ಸಿಕ್ಕಿಬಿದ್ದರೆ ಅವರು 10,000 ರೂಪಾಯಿ ದಂಡ ಮತ್ತು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಖಾನ್ಸರ್ ಪಟ್ಟಣದಲ್ಲಿರುವ ಮೈಥಾನ್ ಮಾರುಕಟ್ಟೆ ಗೈರ್‌ಸೈನ್‌ನ ಪ್ರಮುಖ ಭಾಗವಾಗಿದ್ದು, 21 ಗ್ರಾಮ ಪಂಚಾಯತ್‌ಗಳೊಂದಿಗೆ ಸುಮಾರು 40,000 ಜನಸಂಖ್ಯೆಯನ್ನು ಹೊಂದಿದೆ. ಮೈಥಾನ್ ಟ್ರೇಡ್ ಅಸೋಸಿಯೇಷನ್ ​​ಅಧ್ಯಕ್ಷ ಬಲದೇವ್ ಸಿಂಗ್ ನೇಗಿ ಮಾತನಾಡಿ, “ನಾವು ಯಾವುದೇ ಸಂದರ್ಭದಲ್ಲೂ ದೇವಭೂಮಿಯ ವಾತಾವರಣವನ್ನು ಹದಗೆಡಲು ಬಿಡುವುದಿಲ್ಲ. ಅನುಮಾನಾಸ್ಪದ ವ್ಯಕ್ತಿಗಳು ಈ ಪ್ರದೇಶದಲ್ಲಿ ವ್ಯಾಪಾರ ಮಾಡಲು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಮೋಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್, “ನಾವು ಶನಿವಾರ ವರ್ತಕರ ಸಂಘದ ಸದಸ್ಯರು ಮತ್ತು ಸ್ಥಳೀಯ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಈ ಸಭೆಯಲ್ಲಿ ಪ್ರದೇಶದಲ್ಲಿ ವ್ಯಾಪಾರ ಮಾಡುವ ಹೊರಗಿನವರ ಪರಿಶೀಲನೆ ಮತ್ತು ಕಣ್ಗಾವಲು ನಿರ್ಣಾಯಕವಾಗಿದೆ ಎಂದು ನಾವು ತೀರ್ಮಾನಕ್ಕೆ ಬಂದಿದ್ದೇವೆ. ತನಿಖೆಯು ನಿರ್ಣಾಯಕವಾಗಿದ್ದು ಪ್ರಸ್ತುತ ನಡೆಯುತ್ತಿದೆ.” ಎಂದು ಹೇಳಿದ್ದಾರೆ.

ಗೈರ್‌ಸೈನ್ ಎಸ್‌ಎಚ್‌ಒ ಜೈಪಾಲ್ ಸಿಂಗ್ ನೇಗಿ ಮಾತನಾಡಿ, “ಪೊಲೀಸರು ಸ್ಥಳೀಯ ಗುಪ್ತಚರ ಘಟಕದ ಸಹಾಯದಿಂದ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...