Homeಮುಖಪುಟಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

- Advertisement -
- Advertisement -

ಡಿಸೆಂಬರ್ 31 ರೊಳಗೆ ಮುಸ್ಲಿಂ ಕುಟುಂಬಗಳನ್ನು ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸುವ ಆತಂಕಕಾರಿ ಬೆಳವಣಿಗೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ. ಇತ್ತಿಚೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು, ಕೆಲವು ದುಷ್ಕರ್ಮಿಗಳ ಗುಂಪುಗಳು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಗುರಿ ಮಾಡುವುದನ್ನು ಪ್ರಾರಂಭಿಸಿವೆ. ಉತ್ತರಾಖಂಡ

ಚಮೋಲಿಯ ಖಾನಸರ್ ಪಟ್ಟಣದಲ್ಲಿ ವರ್ತಕರ ಮಂಡಳಿಯು ಡಿಸೆಂಬರ್ 31 ರೊಳಗೆ 15 ಮುಸ್ಲಿಂ ಕುಟುಂಬಗಳನ್ನು ಪಟ್ಟಣವನ್ನು ಖಾಲಿ ಮಾಡುವಂತೆ ನಿರ್ಣಯವನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಕೋಮು ಸೌಹಾರ್ದತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಪ್ರದೇಶದಲ್ಲಿನ ಎಲ್ಲಾ “ಹೊರಗಿನವರನ್ನು” ಪರಿಶೀಲಿಸುವಂತೆ ಗುಂಪುಗಳು ಒತ್ತಾಯಿಸಿದೆ.

ದುಷ್ಕರ್ಮಿಗಳ ಈ ನಿರ್ಧಾರದಿಂದ ಪಟ್ಟಣದಲ್ಲಿ ದೀರ್ಘಕಾಲದಿಂದಲೂ ವಾಸಿಸುತ್ತಿರುವ ಮುಸ್ಲಿಂ ನಿವಾಸಿಗಳನ್ನು ಕೂಡಾ ಆಘಾತ ಮತ್ತು ದಿಗ್ಭ್ರಮೆಗೊಳಿಸಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಇತ್ತಿಚಿನ ವಿಡಿಯೊದಲ್ಲಿ ವ್ಯಾಪಾರಿಗಳ ರ‍್ಯಾಲಿಯ ವೇಳೆ ಮೆರವಣಿಗೆಯಲ್ಲಿ ಹೆಚ್ಚಾಗಿ ಸ್ಥಳೀಯ ಉದ್ಯಮಿಗಳು ಭಾಗವಹಿಸಿದ್ದರು. ಇದರಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಿರುವುದು ದಾಖಲಾಗಿದೆ. ಎತ್ತುತ್ತಿರುವುದನ್ನು ತೋರಿಸುತ್ತದೆ. ಮುಸ್ಲಿಮರಿಗೆ ನಿಷೇಧ ಹೇರುವ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪವಾಗಿದ್ದು, ಈ ಕ್ರಮವನ್ನು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯದ ಘೋರ ಕೃತ್ಯ ಎಂದು ಬಣ್ಣಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಸ್ಥಳೀಯ ಹೋರಾಟಗಾರರೊಬ್ಬರು, “ಈ ನಿರ್ಧಾರವು ಸ್ವೀಕಾರಾರ್ಹವಲ್ಲ. ಇದು ಸಮಾನತೆ ಮತ್ತು ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ. ನಾವು ಈ ಪ್ರಸ್ತಾಪದ ವಿರುದ್ಧ ಹೋರಾಡುತ್ತೇವೆ ಮತ್ತು ಎಲ್ಲಾ ನಾಗರಿಕರ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಸ್ಥಳೀಯ ನಿವಾಸಿ, “ಇದು ಕೇವಲ 15 ಕುಟುಂಬಗಳ ವಿಚಾರವಲ್ಲ. ಇದು ನಮ್ಮ ಸಮಾಜದ ರಚನೆಗೆ ಸಂಬಂಧಿಸಿದ ವಿಚಾರವಾಗಿದೆ. ಇಂತಹ ವಿಭಜಕ ಕ್ರಮಗಳ ವಿರುದ್ಧ ನಾವು ಒಟ್ಟಾಗಿ ನಿಲ್ಲಬೇಕು.” ಎಂದು ಹೇಳಿದ್ದಾರೆ. ಅದಾಗ್ಯೂ, ಹತ್ತಾರು ವರ್ಷಗಳಿಂದ ಪಟ್ಟಣದಲ್ಲಿ ನೆಲೆಸಿರುವ ಸಂತ್ರಸ್ತ ಕುಟುಂಬಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ.

“ವರ್ತಕರ ಸಂಘದ ಈ ಹಠಾತ್ ನಿರ್ಧಾರದಿಂದ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ನಾವು ದಶಕಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ ಮತ್ತು ನಮ್ಮ ಕುಟುಂಬಗಳು ಈ ಸಮುದಾಯದ ಅವಿಭಾಜ್ಯ ಅಂಗವಾಗಿದೆ. ನಮ್ಮನ್ನು ಏಕೆ ಇಲ್ಲಿಂದ ಹೊರಹೋಗುವಂತೆ ಒತ್ತಾಯಿಸುತ್ತಿದ್ದಾರೆ?” ಎಂದು ಹೆಸರು ಹೇಳಲು ಇಚ್ಛಿಸದ ಪಟ್ಟಣದಲ್ಲೆ ಉಳಿಯಲು ಬಯಸುವ ಸ್ಥಳೀಯ ಮುಸ್ಲಿಂ ನಿವಾಸಿಯೊಬ್ಬರು ಹೇಳಿದ್ದಾರೆ.

ಹಿಂದೂ ಮಹಿಳೆಯರು ಮತ್ತು ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ನಡುವೆ ನಡೆಯುವ ಅಪರಾಧ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾನ ಕೈಗೊಳ್ಳಲಾಗಿದೆ ಎಂದು ಮೈಥಾನ್ ಸೇವಾ ಸಮಿತಿಯ ಅಧ್ಯಕ್ಷ ವೀರೇಂದ್ರ ಸಿಂಗ್ ಹೇಳಿದ್ದಾರೆ. ಮೈಥಾನ್ ಮಾರುಕಟ್ಟೆಯಲ್ಲಿ ನಡೆದ ‘ಜಾಗೃತ’ ರ‍್ಯಾಲಿಯ ನಂತರ ವರ್ತಕರ ಸಂಘದ ಸಭೆಯಲ್ಲಿ ಈ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಈ ಸಭೆಯಲ್ಲಿ ಖಾನ್ಸರ್ ಕಣಿವೆಯ ಗ್ರಾಮದ ಪ್ರದೇಶಗಳಿಗೆ ಎಲ್ಲಾ ಮಾರಾಟಗಾರರನ್ನು ಪ್ರವೇಶಿಸುವುದನ್ನು ನಿಷೇಧಿಸಲು ನಿರ್ಧರಿಸಲಾಯಿತು ಎಂದು ಸಿಂಗ್ ಹೇಳಿದ್ದಾರೆ. ಒಂದು ವೇಳೆ ವ್ಯಾಪಾರಿಗಳು ಸಿಕ್ಕಿಬಿದ್ದರೆ ಅವರು 10,000 ರೂಪಾಯಿ ದಂಡ ಮತ್ತು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಖಾನ್ಸರ್ ಪಟ್ಟಣದಲ್ಲಿರುವ ಮೈಥಾನ್ ಮಾರುಕಟ್ಟೆ ಗೈರ್‌ಸೈನ್‌ನ ಪ್ರಮುಖ ಭಾಗವಾಗಿದ್ದು, 21 ಗ್ರಾಮ ಪಂಚಾಯತ್‌ಗಳೊಂದಿಗೆ ಸುಮಾರು 40,000 ಜನಸಂಖ್ಯೆಯನ್ನು ಹೊಂದಿದೆ. ಮೈಥಾನ್ ಟ್ರೇಡ್ ಅಸೋಸಿಯೇಷನ್ ​​ಅಧ್ಯಕ್ಷ ಬಲದೇವ್ ಸಿಂಗ್ ನೇಗಿ ಮಾತನಾಡಿ, “ನಾವು ಯಾವುದೇ ಸಂದರ್ಭದಲ್ಲೂ ದೇವಭೂಮಿಯ ವಾತಾವರಣವನ್ನು ಹದಗೆಡಲು ಬಿಡುವುದಿಲ್ಲ. ಅನುಮಾನಾಸ್ಪದ ವ್ಯಕ್ತಿಗಳು ಈ ಪ್ರದೇಶದಲ್ಲಿ ವ್ಯಾಪಾರ ಮಾಡಲು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಮೋಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್, “ನಾವು ಶನಿವಾರ ವರ್ತಕರ ಸಂಘದ ಸದಸ್ಯರು ಮತ್ತು ಸ್ಥಳೀಯ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಈ ಸಭೆಯಲ್ಲಿ ಪ್ರದೇಶದಲ್ಲಿ ವ್ಯಾಪಾರ ಮಾಡುವ ಹೊರಗಿನವರ ಪರಿಶೀಲನೆ ಮತ್ತು ಕಣ್ಗಾವಲು ನಿರ್ಣಾಯಕವಾಗಿದೆ ಎಂದು ನಾವು ತೀರ್ಮಾನಕ್ಕೆ ಬಂದಿದ್ದೇವೆ. ತನಿಖೆಯು ನಿರ್ಣಾಯಕವಾಗಿದ್ದು ಪ್ರಸ್ತುತ ನಡೆಯುತ್ತಿದೆ.” ಎಂದು ಹೇಳಿದ್ದಾರೆ.

ಗೈರ್‌ಸೈನ್ ಎಸ್‌ಎಚ್‌ಒ ಜೈಪಾಲ್ ಸಿಂಗ್ ನೇಗಿ ಮಾತನಾಡಿ, “ಪೊಲೀಸರು ಸ್ಥಳೀಯ ಗುಪ್ತಚರ ಘಟಕದ ಸಹಾಯದಿಂದ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...