Homeಮುಖಪುಟಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

- Advertisement -
- Advertisement -

ಡಿಸೆಂಬರ್ 31 ರೊಳಗೆ ಮುಸ್ಲಿಂ ಕುಟುಂಬಗಳನ್ನು ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸುವ ಆತಂಕಕಾರಿ ಬೆಳವಣಿಗೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ. ಇತ್ತಿಚೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು, ಕೆಲವು ದುಷ್ಕರ್ಮಿಗಳ ಗುಂಪುಗಳು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಗುರಿ ಮಾಡುವುದನ್ನು ಪ್ರಾರಂಭಿಸಿವೆ. ಉತ್ತರಾಖಂಡ

ಚಮೋಲಿಯ ಖಾನಸರ್ ಪಟ್ಟಣದಲ್ಲಿ ವರ್ತಕರ ಮಂಡಳಿಯು ಡಿಸೆಂಬರ್ 31 ರೊಳಗೆ 15 ಮುಸ್ಲಿಂ ಕುಟುಂಬಗಳನ್ನು ಪಟ್ಟಣವನ್ನು ಖಾಲಿ ಮಾಡುವಂತೆ ನಿರ್ಣಯವನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಕೋಮು ಸೌಹಾರ್ದತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಪ್ರದೇಶದಲ್ಲಿನ ಎಲ್ಲಾ “ಹೊರಗಿನವರನ್ನು” ಪರಿಶೀಲಿಸುವಂತೆ ಗುಂಪುಗಳು ಒತ್ತಾಯಿಸಿದೆ.

ದುಷ್ಕರ್ಮಿಗಳ ಈ ನಿರ್ಧಾರದಿಂದ ಪಟ್ಟಣದಲ್ಲಿ ದೀರ್ಘಕಾಲದಿಂದಲೂ ವಾಸಿಸುತ್ತಿರುವ ಮುಸ್ಲಿಂ ನಿವಾಸಿಗಳನ್ನು ಕೂಡಾ ಆಘಾತ ಮತ್ತು ದಿಗ್ಭ್ರಮೆಗೊಳಿಸಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಇತ್ತಿಚಿನ ವಿಡಿಯೊದಲ್ಲಿ ವ್ಯಾಪಾರಿಗಳ ರ‍್ಯಾಲಿಯ ವೇಳೆ ಮೆರವಣಿಗೆಯಲ್ಲಿ ಹೆಚ್ಚಾಗಿ ಸ್ಥಳೀಯ ಉದ್ಯಮಿಗಳು ಭಾಗವಹಿಸಿದ್ದರು. ಇದರಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಿರುವುದು ದಾಖಲಾಗಿದೆ. ಎತ್ತುತ್ತಿರುವುದನ್ನು ತೋರಿಸುತ್ತದೆ. ಮುಸ್ಲಿಮರಿಗೆ ನಿಷೇಧ ಹೇರುವ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪವಾಗಿದ್ದು, ಈ ಕ್ರಮವನ್ನು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯದ ಘೋರ ಕೃತ್ಯ ಎಂದು ಬಣ್ಣಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಸ್ಥಳೀಯ ಹೋರಾಟಗಾರರೊಬ್ಬರು, “ಈ ನಿರ್ಧಾರವು ಸ್ವೀಕಾರಾರ್ಹವಲ್ಲ. ಇದು ಸಮಾನತೆ ಮತ್ತು ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ. ನಾವು ಈ ಪ್ರಸ್ತಾಪದ ವಿರುದ್ಧ ಹೋರಾಡುತ್ತೇವೆ ಮತ್ತು ಎಲ್ಲಾ ನಾಗರಿಕರ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಸ್ಥಳೀಯ ನಿವಾಸಿ, “ಇದು ಕೇವಲ 15 ಕುಟುಂಬಗಳ ವಿಚಾರವಲ್ಲ. ಇದು ನಮ್ಮ ಸಮಾಜದ ರಚನೆಗೆ ಸಂಬಂಧಿಸಿದ ವಿಚಾರವಾಗಿದೆ. ಇಂತಹ ವಿಭಜಕ ಕ್ರಮಗಳ ವಿರುದ್ಧ ನಾವು ಒಟ್ಟಾಗಿ ನಿಲ್ಲಬೇಕು.” ಎಂದು ಹೇಳಿದ್ದಾರೆ. ಅದಾಗ್ಯೂ, ಹತ್ತಾರು ವರ್ಷಗಳಿಂದ ಪಟ್ಟಣದಲ್ಲಿ ನೆಲೆಸಿರುವ ಸಂತ್ರಸ್ತ ಕುಟುಂಬಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ.

“ವರ್ತಕರ ಸಂಘದ ಈ ಹಠಾತ್ ನಿರ್ಧಾರದಿಂದ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ನಾವು ದಶಕಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ ಮತ್ತು ನಮ್ಮ ಕುಟುಂಬಗಳು ಈ ಸಮುದಾಯದ ಅವಿಭಾಜ್ಯ ಅಂಗವಾಗಿದೆ. ನಮ್ಮನ್ನು ಏಕೆ ಇಲ್ಲಿಂದ ಹೊರಹೋಗುವಂತೆ ಒತ್ತಾಯಿಸುತ್ತಿದ್ದಾರೆ?” ಎಂದು ಹೆಸರು ಹೇಳಲು ಇಚ್ಛಿಸದ ಪಟ್ಟಣದಲ್ಲೆ ಉಳಿಯಲು ಬಯಸುವ ಸ್ಥಳೀಯ ಮುಸ್ಲಿಂ ನಿವಾಸಿಯೊಬ್ಬರು ಹೇಳಿದ್ದಾರೆ.

ಹಿಂದೂ ಮಹಿಳೆಯರು ಮತ್ತು ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ನಡುವೆ ನಡೆಯುವ ಅಪರಾಧ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾನ ಕೈಗೊಳ್ಳಲಾಗಿದೆ ಎಂದು ಮೈಥಾನ್ ಸೇವಾ ಸಮಿತಿಯ ಅಧ್ಯಕ್ಷ ವೀರೇಂದ್ರ ಸಿಂಗ್ ಹೇಳಿದ್ದಾರೆ. ಮೈಥಾನ್ ಮಾರುಕಟ್ಟೆಯಲ್ಲಿ ನಡೆದ ‘ಜಾಗೃತ’ ರ‍್ಯಾಲಿಯ ನಂತರ ವರ್ತಕರ ಸಂಘದ ಸಭೆಯಲ್ಲಿ ಈ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಈ ಸಭೆಯಲ್ಲಿ ಖಾನ್ಸರ್ ಕಣಿವೆಯ ಗ್ರಾಮದ ಪ್ರದೇಶಗಳಿಗೆ ಎಲ್ಲಾ ಮಾರಾಟಗಾರರನ್ನು ಪ್ರವೇಶಿಸುವುದನ್ನು ನಿಷೇಧಿಸಲು ನಿರ್ಧರಿಸಲಾಯಿತು ಎಂದು ಸಿಂಗ್ ಹೇಳಿದ್ದಾರೆ. ಒಂದು ವೇಳೆ ವ್ಯಾಪಾರಿಗಳು ಸಿಕ್ಕಿಬಿದ್ದರೆ ಅವರು 10,000 ರೂಪಾಯಿ ದಂಡ ಮತ್ತು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಖಾನ್ಸರ್ ಪಟ್ಟಣದಲ್ಲಿರುವ ಮೈಥಾನ್ ಮಾರುಕಟ್ಟೆ ಗೈರ್‌ಸೈನ್‌ನ ಪ್ರಮುಖ ಭಾಗವಾಗಿದ್ದು, 21 ಗ್ರಾಮ ಪಂಚಾಯತ್‌ಗಳೊಂದಿಗೆ ಸುಮಾರು 40,000 ಜನಸಂಖ್ಯೆಯನ್ನು ಹೊಂದಿದೆ. ಮೈಥಾನ್ ಟ್ರೇಡ್ ಅಸೋಸಿಯೇಷನ್ ​​ಅಧ್ಯಕ್ಷ ಬಲದೇವ್ ಸಿಂಗ್ ನೇಗಿ ಮಾತನಾಡಿ, “ನಾವು ಯಾವುದೇ ಸಂದರ್ಭದಲ್ಲೂ ದೇವಭೂಮಿಯ ವಾತಾವರಣವನ್ನು ಹದಗೆಡಲು ಬಿಡುವುದಿಲ್ಲ. ಅನುಮಾನಾಸ್ಪದ ವ್ಯಕ್ತಿಗಳು ಈ ಪ್ರದೇಶದಲ್ಲಿ ವ್ಯಾಪಾರ ಮಾಡಲು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಮೋಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್, “ನಾವು ಶನಿವಾರ ವರ್ತಕರ ಸಂಘದ ಸದಸ್ಯರು ಮತ್ತು ಸ್ಥಳೀಯ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಈ ಸಭೆಯಲ್ಲಿ ಪ್ರದೇಶದಲ್ಲಿ ವ್ಯಾಪಾರ ಮಾಡುವ ಹೊರಗಿನವರ ಪರಿಶೀಲನೆ ಮತ್ತು ಕಣ್ಗಾವಲು ನಿರ್ಣಾಯಕವಾಗಿದೆ ಎಂದು ನಾವು ತೀರ್ಮಾನಕ್ಕೆ ಬಂದಿದ್ದೇವೆ. ತನಿಖೆಯು ನಿರ್ಣಾಯಕವಾಗಿದ್ದು ಪ್ರಸ್ತುತ ನಡೆಯುತ್ತಿದೆ.” ಎಂದು ಹೇಳಿದ್ದಾರೆ.

ಗೈರ್‌ಸೈನ್ ಎಸ್‌ಎಚ್‌ಒ ಜೈಪಾಲ್ ಸಿಂಗ್ ನೇಗಿ ಮಾತನಾಡಿ, “ಪೊಲೀಸರು ಸ್ಥಳೀಯ ಗುಪ್ತಚರ ಘಟಕದ ಸಹಾಯದಿಂದ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...