Homeಮುಖಪುಟಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

- Advertisement -
- Advertisement -

ಡಿಸೆಂಬರ್ 31 ರೊಳಗೆ ಮುಸ್ಲಿಂ ಕುಟುಂಬಗಳನ್ನು ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸುವ ಆತಂಕಕಾರಿ ಬೆಳವಣಿಗೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ. ಇತ್ತಿಚೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು, ಕೆಲವು ದುಷ್ಕರ್ಮಿಗಳ ಗುಂಪುಗಳು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಗುರಿ ಮಾಡುವುದನ್ನು ಪ್ರಾರಂಭಿಸಿವೆ. ಉತ್ತರಾಖಂಡ

ಚಮೋಲಿಯ ಖಾನಸರ್ ಪಟ್ಟಣದಲ್ಲಿ ವರ್ತಕರ ಮಂಡಳಿಯು ಡಿಸೆಂಬರ್ 31 ರೊಳಗೆ 15 ಮುಸ್ಲಿಂ ಕುಟುಂಬಗಳನ್ನು ಪಟ್ಟಣವನ್ನು ಖಾಲಿ ಮಾಡುವಂತೆ ನಿರ್ಣಯವನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಕೋಮು ಸೌಹಾರ್ದತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಪ್ರದೇಶದಲ್ಲಿನ ಎಲ್ಲಾ “ಹೊರಗಿನವರನ್ನು” ಪರಿಶೀಲಿಸುವಂತೆ ಗುಂಪುಗಳು ಒತ್ತಾಯಿಸಿದೆ.

ದುಷ್ಕರ್ಮಿಗಳ ಈ ನಿರ್ಧಾರದಿಂದ ಪಟ್ಟಣದಲ್ಲಿ ದೀರ್ಘಕಾಲದಿಂದಲೂ ವಾಸಿಸುತ್ತಿರುವ ಮುಸ್ಲಿಂ ನಿವಾಸಿಗಳನ್ನು ಕೂಡಾ ಆಘಾತ ಮತ್ತು ದಿಗ್ಭ್ರಮೆಗೊಳಿಸಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಇತ್ತಿಚಿನ ವಿಡಿಯೊದಲ್ಲಿ ವ್ಯಾಪಾರಿಗಳ ರ‍್ಯಾಲಿಯ ವೇಳೆ ಮೆರವಣಿಗೆಯಲ್ಲಿ ಹೆಚ್ಚಾಗಿ ಸ್ಥಳೀಯ ಉದ್ಯಮಿಗಳು ಭಾಗವಹಿಸಿದ್ದರು. ಇದರಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಿರುವುದು ದಾಖಲಾಗಿದೆ. ಎತ್ತುತ್ತಿರುವುದನ್ನು ತೋರಿಸುತ್ತದೆ. ಮುಸ್ಲಿಮರಿಗೆ ನಿಷೇಧ ಹೇರುವ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪವಾಗಿದ್ದು, ಈ ಕ್ರಮವನ್ನು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯದ ಘೋರ ಕೃತ್ಯ ಎಂದು ಬಣ್ಣಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಸ್ಥಳೀಯ ಹೋರಾಟಗಾರರೊಬ್ಬರು, “ಈ ನಿರ್ಧಾರವು ಸ್ವೀಕಾರಾರ್ಹವಲ್ಲ. ಇದು ಸಮಾನತೆ ಮತ್ತು ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ. ನಾವು ಈ ಪ್ರಸ್ತಾಪದ ವಿರುದ್ಧ ಹೋರಾಡುತ್ತೇವೆ ಮತ್ತು ಎಲ್ಲಾ ನಾಗರಿಕರ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಸ್ಥಳೀಯ ನಿವಾಸಿ, “ಇದು ಕೇವಲ 15 ಕುಟುಂಬಗಳ ವಿಚಾರವಲ್ಲ. ಇದು ನಮ್ಮ ಸಮಾಜದ ರಚನೆಗೆ ಸಂಬಂಧಿಸಿದ ವಿಚಾರವಾಗಿದೆ. ಇಂತಹ ವಿಭಜಕ ಕ್ರಮಗಳ ವಿರುದ್ಧ ನಾವು ಒಟ್ಟಾಗಿ ನಿಲ್ಲಬೇಕು.” ಎಂದು ಹೇಳಿದ್ದಾರೆ. ಅದಾಗ್ಯೂ, ಹತ್ತಾರು ವರ್ಷಗಳಿಂದ ಪಟ್ಟಣದಲ್ಲಿ ನೆಲೆಸಿರುವ ಸಂತ್ರಸ್ತ ಕುಟುಂಬಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ.

“ವರ್ತಕರ ಸಂಘದ ಈ ಹಠಾತ್ ನಿರ್ಧಾರದಿಂದ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ನಾವು ದಶಕಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ ಮತ್ತು ನಮ್ಮ ಕುಟುಂಬಗಳು ಈ ಸಮುದಾಯದ ಅವಿಭಾಜ್ಯ ಅಂಗವಾಗಿದೆ. ನಮ್ಮನ್ನು ಏಕೆ ಇಲ್ಲಿಂದ ಹೊರಹೋಗುವಂತೆ ಒತ್ತಾಯಿಸುತ್ತಿದ್ದಾರೆ?” ಎಂದು ಹೆಸರು ಹೇಳಲು ಇಚ್ಛಿಸದ ಪಟ್ಟಣದಲ್ಲೆ ಉಳಿಯಲು ಬಯಸುವ ಸ್ಥಳೀಯ ಮುಸ್ಲಿಂ ನಿವಾಸಿಯೊಬ್ಬರು ಹೇಳಿದ್ದಾರೆ.

ಹಿಂದೂ ಮಹಿಳೆಯರು ಮತ್ತು ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ನಡುವೆ ನಡೆಯುವ ಅಪರಾಧ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾನ ಕೈಗೊಳ್ಳಲಾಗಿದೆ ಎಂದು ಮೈಥಾನ್ ಸೇವಾ ಸಮಿತಿಯ ಅಧ್ಯಕ್ಷ ವೀರೇಂದ್ರ ಸಿಂಗ್ ಹೇಳಿದ್ದಾರೆ. ಮೈಥಾನ್ ಮಾರುಕಟ್ಟೆಯಲ್ಲಿ ನಡೆದ ‘ಜಾಗೃತ’ ರ‍್ಯಾಲಿಯ ನಂತರ ವರ್ತಕರ ಸಂಘದ ಸಭೆಯಲ್ಲಿ ಈ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಈ ಸಭೆಯಲ್ಲಿ ಖಾನ್ಸರ್ ಕಣಿವೆಯ ಗ್ರಾಮದ ಪ್ರದೇಶಗಳಿಗೆ ಎಲ್ಲಾ ಮಾರಾಟಗಾರರನ್ನು ಪ್ರವೇಶಿಸುವುದನ್ನು ನಿಷೇಧಿಸಲು ನಿರ್ಧರಿಸಲಾಯಿತು ಎಂದು ಸಿಂಗ್ ಹೇಳಿದ್ದಾರೆ. ಒಂದು ವೇಳೆ ವ್ಯಾಪಾರಿಗಳು ಸಿಕ್ಕಿಬಿದ್ದರೆ ಅವರು 10,000 ರೂಪಾಯಿ ದಂಡ ಮತ್ತು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಖಾನ್ಸರ್ ಪಟ್ಟಣದಲ್ಲಿರುವ ಮೈಥಾನ್ ಮಾರುಕಟ್ಟೆ ಗೈರ್‌ಸೈನ್‌ನ ಪ್ರಮುಖ ಭಾಗವಾಗಿದ್ದು, 21 ಗ್ರಾಮ ಪಂಚಾಯತ್‌ಗಳೊಂದಿಗೆ ಸುಮಾರು 40,000 ಜನಸಂಖ್ಯೆಯನ್ನು ಹೊಂದಿದೆ. ಮೈಥಾನ್ ಟ್ರೇಡ್ ಅಸೋಸಿಯೇಷನ್ ​​ಅಧ್ಯಕ್ಷ ಬಲದೇವ್ ಸಿಂಗ್ ನೇಗಿ ಮಾತನಾಡಿ, “ನಾವು ಯಾವುದೇ ಸಂದರ್ಭದಲ್ಲೂ ದೇವಭೂಮಿಯ ವಾತಾವರಣವನ್ನು ಹದಗೆಡಲು ಬಿಡುವುದಿಲ್ಲ. ಅನುಮಾನಾಸ್ಪದ ವ್ಯಕ್ತಿಗಳು ಈ ಪ್ರದೇಶದಲ್ಲಿ ವ್ಯಾಪಾರ ಮಾಡಲು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಮೋಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್, “ನಾವು ಶನಿವಾರ ವರ್ತಕರ ಸಂಘದ ಸದಸ್ಯರು ಮತ್ತು ಸ್ಥಳೀಯ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಈ ಸಭೆಯಲ್ಲಿ ಪ್ರದೇಶದಲ್ಲಿ ವ್ಯಾಪಾರ ಮಾಡುವ ಹೊರಗಿನವರ ಪರಿಶೀಲನೆ ಮತ್ತು ಕಣ್ಗಾವಲು ನಿರ್ಣಾಯಕವಾಗಿದೆ ಎಂದು ನಾವು ತೀರ್ಮಾನಕ್ಕೆ ಬಂದಿದ್ದೇವೆ. ತನಿಖೆಯು ನಿರ್ಣಾಯಕವಾಗಿದ್ದು ಪ್ರಸ್ತುತ ನಡೆಯುತ್ತಿದೆ.” ಎಂದು ಹೇಳಿದ್ದಾರೆ.

ಗೈರ್‌ಸೈನ್ ಎಸ್‌ಎಚ್‌ಒ ಜೈಪಾಲ್ ಸಿಂಗ್ ನೇಗಿ ಮಾತನಾಡಿ, “ಪೊಲೀಸರು ಸ್ಥಳೀಯ ಗುಪ್ತಚರ ಘಟಕದ ಸಹಾಯದಿಂದ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...