Homeಮುಖಪುಟಉತ್ತರಾಖಂಡ| ಅಂತರ್ಧರ್ಮೀಯ ದಂಪತಿಗಳ ವೈಯಕ್ತಿಕ ವಿವರಗಳು ಸೋರಿಕೆ

ಉತ್ತರಾಖಂಡ| ಅಂತರ್ಧರ್ಮೀಯ ದಂಪತಿಗಳ ವೈಯಕ್ತಿಕ ವಿವರಗಳು ಸೋರಿಕೆ

- Advertisement -
- Advertisement -

ವಿಶೇಷ ವಿವಾಹ ಕಾಯ್ದೆ (ಎಸ್‌ಎಂಎ) ಅಡಿಯಲ್ಲಿ ವಿವಾಹ ನೋಟಿಸ್ ಸೇರಿದಂತೆ ಅವರ ವೈಯಕ್ತಿಕ ವಿವರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ ಉತ್ತರಾಖಂಡದದ ಅಂತರ್ಧರ್ಮೀಯ ದಂಪತಿಗಳು ಜೀವ ಭಯದಲ್ಲಿದ್ದಾರೆ. ಅವರು ತಮ್ಮ ವಿವಾಹ ಪ್ರಮಾಣಪತ್ರಕ್ಕಾಗಿ ಕಾಯುತ್ತಿದ್ದಾರೆ.

ಕೆಲವು ರಾಜಕೀಯ ಪಕ್ಷಗಳು ಮತ್ತು ಧಾರ್ಮಿಕ ಸಂಘಟನೆಗಳು ತಮ್ಮ ಮದುವೆ ವಿರೋಧಿಸಿದ ನಂತರ, ಕಳೆದ ವರ್ಷ ಡಿಸೆಂಬರ್‌ನಲ್ಲಿ ದಂಪತಿಗಳಾದ ಮೊಹಮ್ಮದ್ ಶಾನು ಮತ್ತು ಆಕಾಂಕ್ಷಾ ಕಂಧಾರಿ ಪೊಲೀಸ್ ರಕ್ಷಣೆ ಪಡೆದಿದ್ದರು.

ವರದಿಗಳ ಪ್ರಕಾರ, ದಂಪತಿಗಳು ಜನವರಿ 7 ರಂದು ಬಾಜ್‌ಪುರ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ತಮ್ಮ ವಿವಾಹ ನೋಟಿಸ್ ಸಲ್ಲಿಸಿದರು.

ನೋಟಿಸ್ ಮತ್ತು ಇತರ ವೈಯಕ್ತಿಕ ವಿವರಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ ಒಂದು ದುಃಸ್ವಪ್ನ ಅವರನ್ನು ಹಿಂಬಾಲಿಸಿತು. ಇದು ಅವರ ಸುರಕ್ಷತೆಯ ಬಗ್ಗೆ ಕಳವಳವನ್ನು ಮೂಡಿಸಿತು. “ನಮ್ಮ ವಿವಾಹ ನೋಟಿಸ್ ವೈರಲ್ ಆದ ನಂತರ, ನಮ್ಮ ಪರಿಸ್ಥಿತಿ ಭಯಾನಕವಾಗಿದ್ದು, ಜೀವ ಭಯವಿದೆ” ಎಂದು ಅವರು ತಿಳಿಸಿದರು.

ತಮ್ಮ ತಾಯಿ ಮೊದಲಿನಿಂದಲೂ ತಮ್ಮ ಸಂಬಂಧವನ್ನು ವಿರೋಧಿಸುತ್ತಿದ್ದರು. ಆದರೆ, ಈಗ ಕೆಲವು ರಾಜಕೀಯ ಮತ್ತು ಧಾರ್ಮಿಕ ಗುಂಪುಗಳಿಂದ ನಮ್ಮ ವಿರುದ್ಧ ಆಕ್ಷೇಪಣೆ ಸಲ್ಲಿಸುವಂತೆ ಒತ್ತಡ ಹೇರಲಾಗಿದೆ ಎಂದು ಮಹಿಳೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಈ ಜೋಡಿ 2018 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾಗಿ 2022 ರಲ್ಲಿ ಡೇಟಿಂಗ್ ಆರಂಭಿಸಿದರು. ಆ ವ್ಯಕ್ತಿ ಉತ್ತರಾಖಂಡದ ಉಧಮ್ ಸಿಂಗ್ ನಗರ ಪ್ರದೇಶದಲ್ಲಿ ಸಲೂನ್ ನಡೆಸುತ್ತಿದ್ದರೂ, ಮಹಿಳೆ ಓದುತ್ತಿದ್ದಾಳೆ. ಒಂದು ವರ್ಷದ ನಂತರ ಅವರು ಮದುವೆಯಾಗಲು ನಿರ್ಧರಿಸಿದರು. ಆದರೆ, ಮಹಿಳೆಯ ತಾಯಿ ಅವರ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸಾಕಷ್ಟು ಮನವೊಲಿಕೆಯ ನಂತರ, ತಮ್ಮ ಮಗಳೊಂದಿಗಿನ ಎಲ್ಲ ಸಂಬಂಧಗಳನ್ನು ಕಡಿದುಕೊಳ್ಳಬೇಕೆಂಬ ಷರತ್ತಿನೊಂದಿಗೆ ಮಹಿಳೆಯ ತಾಯಿ ಮದುವೆಗೆ ಒಪ್ಪಿಕೊಂಡರು ಎಂದು ವರದಿಯಾಗಿದೆ. ಇದರ ಹೊರತಾಗಿಯೂ, ದಂಪತಿಗಳು ಪರಸ್ಪರ ವಿವಾಹವಾದರು.

ಬಜರಂಗದಳ ಸೇರಿದಂತೆ ಹಲವಾರು ರಾಜಕೀಯ ಸಂಘಟನೆಗಳು ಅವರ ಮದುವೆಯನ್ನು ವಿರೋಧಿಸಲು ಪ್ರಾರಂಭಿಸಿದವು ಎಂದು ವರದಿಯಾಗಿದೆ.

ನಂತರ ದಂಪತಿಗಳು ಡಿಸೆಂಬರ್‌ನಲ್ಲಿ ಪೊಲೀಸ್ ರಕ್ಷಣೆ ಕೋರಿ ಉತ್ತರಾಖಂಡ ಹೈಕೋರ್ಟ್ ಅನ್ನು ಸಂಪರ್ಕಿಸಿದರು. ತಕ್ಷಣ, ನ್ಯಾಯಾಲಯವು ದಂಪತಿಗೆ ಆರು ತಿಂಗಳ ಕಾಲ ರಕ್ಷಣೆ ನೀಡುವಂತೆ ಪೊಲೀಸರಿಗೆ ನಿರ್ದೇಶನ ನೀಡಿತು. ಆರು ತಿಂಗಳ ನಂತರ ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿತು.

ಇದನ್ನೂ ಓದಿ; ಬಂಧನ ವಾರಂಟ್ ಹಿಂಪಡೆಯುವಂತೆ ಕೇರಳ ನ್ಯಾಯಾಲಯಕ್ಕೆ ಬಾಬಾ ರಾಮದೇವ್ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...