Homeಮುಖಪುಟವಿದ್ಯುತ್ ಕಡಿತವಿಲ್ಲ, 300 ಯುನಿಟ್ ಉಚಿತ ವಿದ್ಯುತ್- ಉತ್ತರಾಖಂಡ ಚುನಾವಣೆಗೆ ಕೇಜ್ರಿವಾಲ್ ಘೋಷಣೆ

ವಿದ್ಯುತ್ ಕಡಿತವಿಲ್ಲ, 300 ಯುನಿಟ್ ಉಚಿತ ವಿದ್ಯುತ್- ಉತ್ತರಾಖಂಡ ಚುನಾವಣೆಗೆ ಕೇಜ್ರಿವಾಲ್ ಘೋಷಣೆ

- Advertisement -
- Advertisement -

ಮುಂಬರುವ ಉತ್ತರಾಖಂಡ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹಲವು ಪ್ರಮುಖ ಚುನಾವಣಾ ಘೋಷಣೆಗಳನ್ನು ಮಾಡಿದ್ದಾರೆ. ದಿನವಿಡೀ ವಿದ್ಯುತ್ ಕಡಿತವಿರುವುದಿಲ್ಲ. ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್ ಸೇರಿದಂತೆ ಅನೇಕ ಭರವಸೆ ನೀಡಿದ್ದಾರೆ.

ಉತ್ತರಾಖಂಡದ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾನುವಾರ ರಾಜ್ಯ ಪ್ರವಾಸ ನಡೆಸಿದ್ದಾರೆ. ಫೆಬ್ರವರಿ 2022 ರಲ್ಲಿ ನಡೆಯಲಿರುವ ಉತ್ತರಾಖಂಡ ಚುನಾವಣೆಗೆ ತಯಾರಾಗುತ್ತಿರುವ ಆಮ್ ಆದ್ಮಿ ಪಾರ್ಟಿಯಿಂದ ಕೆಲವು ಪ್ರಮುಖ ಚುನಾವಣಾ ಭರವಸೆಗಳನ್ನು ಘೋಷಿಸಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಈ ಹಿಂದೆ ಘೋಷಿಸಿದೆ.

ದೆಹಲಿಯ ವಿದ್ಯುತ್‌ ಯೋಜನೆಯಲ್ಲಿ ಪ್ರಶಂಸೆಗೆ ಪಾತ್ರವಾಗಿರುವ ಕೇಜ್ರಿವಾಲ್ ಸರ್ಕಾರ, ಇದನ್ನೇ ಉತ್ತರಾಖಂಡದಲ್ಲೂ ಪ್ರಯೋಗಿಸಲು ಸಜ್ಜಾಗಿದೆ. ವಿದ್ಯುತ್ ಕಡಿತವಿಲ್ಲದಿರುವುದು. ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್, ಹಿಂದಿನ ಬಿಲ್‌ಗಳನ್ನು ಮನ್ನಾ ಮಾಡುವುದು ಮತ್ತು ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದು ಈ ಘೋಷಣೆಗಳಲ್ಲಿ ಪ್ರಮುಖವಾಗಿವೆ.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪ್ರತಿಸ್ಪರ್ಧಿಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿವೆ. ಇದರಿಂದ ರಾಜ್ಯವನ್ನು ತಪ್ಪಿಸಬೇಕಾಗಿದೆ, ಎರಡು ಪಕ್ಷಗಳು ಅಧಿಕಾರದ ಹಿಂದೆ ಬಿದ್ದಿವೆ, ಅಭಿವೃದ್ಧಿ ಹಿಂದೆಯಲ್ಲ ಎಂದು ಹೇಳಿದ್ದಾರೆ.

ಉತ್ತರಾಖಂಡದಲ್ಲಿ ಕರೆಂಟ್ ಉತ್ಪಾದಿಸಿ, ಬೇರೆ ರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿದೆ. ಹಾಗಿದ್ದರೂ ರಾಜ್ಯದಲ್ಲಿ ವಿದ್ಯುತ್‌ ದರ ಬಹಳ ದುಬಾರಿಯಾಗಿದೆ. ರಾಜ್ಯದ ಜನರಿಗೆ ಉಚಿತ ವಿದ್ಯುತ್ ಒದಗಿಸುವುದನ್ನು ಯಾವುದಾದರೂ ಪಕ್ಷ ಪರಿಗಣಿಸಿದೆಯೇ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

“ಉತ್ತರಾಖಂಡದ ಜನರು ಕಳೆದ 20 ವರ್ಷಗಳಿಂದ ಈ ಎರಡು ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಿಕ್ಕು ಒದ್ದಾಡುತ್ತಿದ್ದಾರೆ. ಎರಡು ಪಕ್ಷಗಳು ಕುರ್ಚಿಗಾಗಿ ಮಾತ್ರ ಹೋರಾಡುತ್ತಿವೆ. ಉತ್ತರಾಖಂಡದ ಜನರ ಅಭಿವೃದ್ಧಿಯ ಬಗ್ಗೆ ಯಾರು ಯೋಚಿಸುತ್ತಾರೆ?” ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

“ರಾಜ್ಯದಲ್ಲಿ ಎಎಪಿ ಸರ್ಕಾರ ರಚನೆಯಾದರೆ, ಐದು ವರ್ಷಗಳವರೆಗೆ ಯಾವುದೇ ತೆರಿಗೆಯನ್ನು ಹೆಚ್ಚಿಸಲಾಗುವುದಿಲ್ಲ. ರಾಜ್ಯವು ಯಾವುದೇ ಸಾಲವನ್ನು ಪಡೆಯುವುದಿಲ್ಲ. ಇಂತಹ ಯೋಜನೆಗಳನ್ನು ನಾವು ದೆಹಲಿಯಲ್ಲಿ ಮಾಡಿದ್ದೇನೆ. ಅದನ್ನು ಉತ್ತರಾಖಂಡದಲ್ಲೂ ಮಾಡುತ್ತೇವೆ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

2022 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಆಮ್ ಆದ್ಮಿ ಪಕ್ಷವು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಅರವಿಂದ್ ಕೇಜ್ರಿವಾಲ್ ಈ ಹಿಂದೆ ಹೇಳಿದ್ದಾರೆ.


ಇದನ್ನೂ ಓದಿ: ಗುಜರಾತ್ ಪರಿಸ್ಥಿತಿ ಈಗ ಬದಲಾಗಲಿದೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...