Homeಮುಖಪುಟವಿದ್ಯುತ್ ಕಡಿತವಿಲ್ಲ, 300 ಯುನಿಟ್ ಉಚಿತ ವಿದ್ಯುತ್- ಉತ್ತರಾಖಂಡ ಚುನಾವಣೆಗೆ ಕೇಜ್ರಿವಾಲ್ ಘೋಷಣೆ

ವಿದ್ಯುತ್ ಕಡಿತವಿಲ್ಲ, 300 ಯುನಿಟ್ ಉಚಿತ ವಿದ್ಯುತ್- ಉತ್ತರಾಖಂಡ ಚುನಾವಣೆಗೆ ಕೇಜ್ರಿವಾಲ್ ಘೋಷಣೆ

- Advertisement -
- Advertisement -

ಮುಂಬರುವ ಉತ್ತರಾಖಂಡ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹಲವು ಪ್ರಮುಖ ಚುನಾವಣಾ ಘೋಷಣೆಗಳನ್ನು ಮಾಡಿದ್ದಾರೆ. ದಿನವಿಡೀ ವಿದ್ಯುತ್ ಕಡಿತವಿರುವುದಿಲ್ಲ. ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್ ಸೇರಿದಂತೆ ಅನೇಕ ಭರವಸೆ ನೀಡಿದ್ದಾರೆ.

ಉತ್ತರಾಖಂಡದ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾನುವಾರ ರಾಜ್ಯ ಪ್ರವಾಸ ನಡೆಸಿದ್ದಾರೆ. ಫೆಬ್ರವರಿ 2022 ರಲ್ಲಿ ನಡೆಯಲಿರುವ ಉತ್ತರಾಖಂಡ ಚುನಾವಣೆಗೆ ತಯಾರಾಗುತ್ತಿರುವ ಆಮ್ ಆದ್ಮಿ ಪಾರ್ಟಿಯಿಂದ ಕೆಲವು ಪ್ರಮುಖ ಚುನಾವಣಾ ಭರವಸೆಗಳನ್ನು ಘೋಷಿಸಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಈ ಹಿಂದೆ ಘೋಷಿಸಿದೆ.

ದೆಹಲಿಯ ವಿದ್ಯುತ್‌ ಯೋಜನೆಯಲ್ಲಿ ಪ್ರಶಂಸೆಗೆ ಪಾತ್ರವಾಗಿರುವ ಕೇಜ್ರಿವಾಲ್ ಸರ್ಕಾರ, ಇದನ್ನೇ ಉತ್ತರಾಖಂಡದಲ್ಲೂ ಪ್ರಯೋಗಿಸಲು ಸಜ್ಜಾಗಿದೆ. ವಿದ್ಯುತ್ ಕಡಿತವಿಲ್ಲದಿರುವುದು. ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್, ಹಿಂದಿನ ಬಿಲ್‌ಗಳನ್ನು ಮನ್ನಾ ಮಾಡುವುದು ಮತ್ತು ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದು ಈ ಘೋಷಣೆಗಳಲ್ಲಿ ಪ್ರಮುಖವಾಗಿವೆ.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪ್ರತಿಸ್ಪರ್ಧಿಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿವೆ. ಇದರಿಂದ ರಾಜ್ಯವನ್ನು ತಪ್ಪಿಸಬೇಕಾಗಿದೆ, ಎರಡು ಪಕ್ಷಗಳು ಅಧಿಕಾರದ ಹಿಂದೆ ಬಿದ್ದಿವೆ, ಅಭಿವೃದ್ಧಿ ಹಿಂದೆಯಲ್ಲ ಎಂದು ಹೇಳಿದ್ದಾರೆ.

ಉತ್ತರಾಖಂಡದಲ್ಲಿ ಕರೆಂಟ್ ಉತ್ಪಾದಿಸಿ, ಬೇರೆ ರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿದೆ. ಹಾಗಿದ್ದರೂ ರಾಜ್ಯದಲ್ಲಿ ವಿದ್ಯುತ್‌ ದರ ಬಹಳ ದುಬಾರಿಯಾಗಿದೆ. ರಾಜ್ಯದ ಜನರಿಗೆ ಉಚಿತ ವಿದ್ಯುತ್ ಒದಗಿಸುವುದನ್ನು ಯಾವುದಾದರೂ ಪಕ್ಷ ಪರಿಗಣಿಸಿದೆಯೇ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

“ಉತ್ತರಾಖಂಡದ ಜನರು ಕಳೆದ 20 ವರ್ಷಗಳಿಂದ ಈ ಎರಡು ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಿಕ್ಕು ಒದ್ದಾಡುತ್ತಿದ್ದಾರೆ. ಎರಡು ಪಕ್ಷಗಳು ಕುರ್ಚಿಗಾಗಿ ಮಾತ್ರ ಹೋರಾಡುತ್ತಿವೆ. ಉತ್ತರಾಖಂಡದ ಜನರ ಅಭಿವೃದ್ಧಿಯ ಬಗ್ಗೆ ಯಾರು ಯೋಚಿಸುತ್ತಾರೆ?” ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

“ರಾಜ್ಯದಲ್ಲಿ ಎಎಪಿ ಸರ್ಕಾರ ರಚನೆಯಾದರೆ, ಐದು ವರ್ಷಗಳವರೆಗೆ ಯಾವುದೇ ತೆರಿಗೆಯನ್ನು ಹೆಚ್ಚಿಸಲಾಗುವುದಿಲ್ಲ. ರಾಜ್ಯವು ಯಾವುದೇ ಸಾಲವನ್ನು ಪಡೆಯುವುದಿಲ್ಲ. ಇಂತಹ ಯೋಜನೆಗಳನ್ನು ನಾವು ದೆಹಲಿಯಲ್ಲಿ ಮಾಡಿದ್ದೇನೆ. ಅದನ್ನು ಉತ್ತರಾಖಂಡದಲ್ಲೂ ಮಾಡುತ್ತೇವೆ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

2022 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಆಮ್ ಆದ್ಮಿ ಪಕ್ಷವು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಅರವಿಂದ್ ಕೇಜ್ರಿವಾಲ್ ಈ ಹಿಂದೆ ಹೇಳಿದ್ದಾರೆ.


ಇದನ್ನೂ ಓದಿ: ಗುಜರಾತ್ ಪರಿಸ್ಥಿತಿ ಈಗ ಬದಲಾಗಲಿದೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...