Homeಮುಖಪುಟವಿದ್ಯುತ್ ಕಡಿತವಿಲ್ಲ, 300 ಯುನಿಟ್ ಉಚಿತ ವಿದ್ಯುತ್- ಉತ್ತರಾಖಂಡ ಚುನಾವಣೆಗೆ ಕೇಜ್ರಿವಾಲ್ ಘೋಷಣೆ

ವಿದ್ಯುತ್ ಕಡಿತವಿಲ್ಲ, 300 ಯುನಿಟ್ ಉಚಿತ ವಿದ್ಯುತ್- ಉತ್ತರಾಖಂಡ ಚುನಾವಣೆಗೆ ಕೇಜ್ರಿವಾಲ್ ಘೋಷಣೆ

- Advertisement -
- Advertisement -

ಮುಂಬರುವ ಉತ್ತರಾಖಂಡ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹಲವು ಪ್ರಮುಖ ಚುನಾವಣಾ ಘೋಷಣೆಗಳನ್ನು ಮಾಡಿದ್ದಾರೆ. ದಿನವಿಡೀ ವಿದ್ಯುತ್ ಕಡಿತವಿರುವುದಿಲ್ಲ. ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್ ಸೇರಿದಂತೆ ಅನೇಕ ಭರವಸೆ ನೀಡಿದ್ದಾರೆ.

ಉತ್ತರಾಖಂಡದ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾನುವಾರ ರಾಜ್ಯ ಪ್ರವಾಸ ನಡೆಸಿದ್ದಾರೆ. ಫೆಬ್ರವರಿ 2022 ರಲ್ಲಿ ನಡೆಯಲಿರುವ ಉತ್ತರಾಖಂಡ ಚುನಾವಣೆಗೆ ತಯಾರಾಗುತ್ತಿರುವ ಆಮ್ ಆದ್ಮಿ ಪಾರ್ಟಿಯಿಂದ ಕೆಲವು ಪ್ರಮುಖ ಚುನಾವಣಾ ಭರವಸೆಗಳನ್ನು ಘೋಷಿಸಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಈ ಹಿಂದೆ ಘೋಷಿಸಿದೆ.

ದೆಹಲಿಯ ವಿದ್ಯುತ್‌ ಯೋಜನೆಯಲ್ಲಿ ಪ್ರಶಂಸೆಗೆ ಪಾತ್ರವಾಗಿರುವ ಕೇಜ್ರಿವಾಲ್ ಸರ್ಕಾರ, ಇದನ್ನೇ ಉತ್ತರಾಖಂಡದಲ್ಲೂ ಪ್ರಯೋಗಿಸಲು ಸಜ್ಜಾಗಿದೆ. ವಿದ್ಯುತ್ ಕಡಿತವಿಲ್ಲದಿರುವುದು. ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್, ಹಿಂದಿನ ಬಿಲ್‌ಗಳನ್ನು ಮನ್ನಾ ಮಾಡುವುದು ಮತ್ತು ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದು ಈ ಘೋಷಣೆಗಳಲ್ಲಿ ಪ್ರಮುಖವಾಗಿವೆ.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪ್ರತಿಸ್ಪರ್ಧಿಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿವೆ. ಇದರಿಂದ ರಾಜ್ಯವನ್ನು ತಪ್ಪಿಸಬೇಕಾಗಿದೆ, ಎರಡು ಪಕ್ಷಗಳು ಅಧಿಕಾರದ ಹಿಂದೆ ಬಿದ್ದಿವೆ, ಅಭಿವೃದ್ಧಿ ಹಿಂದೆಯಲ್ಲ ಎಂದು ಹೇಳಿದ್ದಾರೆ.

ಉತ್ತರಾಖಂಡದಲ್ಲಿ ಕರೆಂಟ್ ಉತ್ಪಾದಿಸಿ, ಬೇರೆ ರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿದೆ. ಹಾಗಿದ್ದರೂ ರಾಜ್ಯದಲ್ಲಿ ವಿದ್ಯುತ್‌ ದರ ಬಹಳ ದುಬಾರಿಯಾಗಿದೆ. ರಾಜ್ಯದ ಜನರಿಗೆ ಉಚಿತ ವಿದ್ಯುತ್ ಒದಗಿಸುವುದನ್ನು ಯಾವುದಾದರೂ ಪಕ್ಷ ಪರಿಗಣಿಸಿದೆಯೇ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

“ಉತ್ತರಾಖಂಡದ ಜನರು ಕಳೆದ 20 ವರ್ಷಗಳಿಂದ ಈ ಎರಡು ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಿಕ್ಕು ಒದ್ದಾಡುತ್ತಿದ್ದಾರೆ. ಎರಡು ಪಕ್ಷಗಳು ಕುರ್ಚಿಗಾಗಿ ಮಾತ್ರ ಹೋರಾಡುತ್ತಿವೆ. ಉತ್ತರಾಖಂಡದ ಜನರ ಅಭಿವೃದ್ಧಿಯ ಬಗ್ಗೆ ಯಾರು ಯೋಚಿಸುತ್ತಾರೆ?” ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

“ರಾಜ್ಯದಲ್ಲಿ ಎಎಪಿ ಸರ್ಕಾರ ರಚನೆಯಾದರೆ, ಐದು ವರ್ಷಗಳವರೆಗೆ ಯಾವುದೇ ತೆರಿಗೆಯನ್ನು ಹೆಚ್ಚಿಸಲಾಗುವುದಿಲ್ಲ. ರಾಜ್ಯವು ಯಾವುದೇ ಸಾಲವನ್ನು ಪಡೆಯುವುದಿಲ್ಲ. ಇಂತಹ ಯೋಜನೆಗಳನ್ನು ನಾವು ದೆಹಲಿಯಲ್ಲಿ ಮಾಡಿದ್ದೇನೆ. ಅದನ್ನು ಉತ್ತರಾಖಂಡದಲ್ಲೂ ಮಾಡುತ್ತೇವೆ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

2022 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಆಮ್ ಆದ್ಮಿ ಪಕ್ಷವು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಅರವಿಂದ್ ಕೇಜ್ರಿವಾಲ್ ಈ ಹಿಂದೆ ಹೇಳಿದ್ದಾರೆ.


ಇದನ್ನೂ ಓದಿ: ಗುಜರಾತ್ ಪರಿಸ್ಥಿತಿ ಈಗ ಬದಲಾಗಲಿದೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...